Homeಚಳವಳಿಕೇರಳ ವಿಧಾನಸಭೆಯಲ್ಲಿ ಸಿಎಎ ವಿರುದ್ಧ ನಿರ್ಣಯ ಮಂಡಿಸಿದ ಪಿಣರಾಯಿ ವಿಜಯನ್‌...

ಕೇರಳ ವಿಧಾನಸಭೆಯಲ್ಲಿ ಸಿಎಎ ವಿರುದ್ಧ ನಿರ್ಣಯ ಮಂಡಿಸಿದ ಪಿಣರಾಯಿ ವಿಜಯನ್‌…

- Advertisement -
- Advertisement -

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರದ್ದುಗೊಳಿಸುವಂತೆ ಒತ್ತಾಯಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು.

ಅಸೆಂಬ್ಲಿ ಮತ್ತು ಸಂಸತ್ತಿನಲ್ಲಿ ಎಸ್‌ಸಿ ಮತ್ತು ಎಸ್‌ಟಿಗಳಿಗೆ ಮೀಸಲಾತಿಯನ್ನು ಮತ್ತೊಂದು ದಶಕಗಳವರೆಗೆ ವಿಸ್ತರಿಸುವುದನ್ನು ಅಂಗೀಕರಿಸಲು ಒಂದು ದಿನದ ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಇದೇ ಸಂದರ್ಭದಲ್ಲಿ ಸಿಎಎ ವಿರುದ್ಧ ಸಾರ್ವಜನಿಕರಲ್ಲಿ ವ್ಯಾಪಕವಾದ ಭಿನ್ನಾಭಿಪ್ರಾಯಗಳು ಮೂಡಿಬಂದಿದ್ದನ್ನು ಗಮನದಲ್ಲಿಟ್ಟುಕೊಂಡು ಸಿಎಎ ವಿರುದ್ಧದ ನಿರ್ಣಯವನ್ನು ಸಹ ಕೈಗೊಳ್ಳಲಾಯಿತು ಎಂದು ಮೂಲಗಳು ತಿಳಿಸಿವೆ.

ನಿರ್ಣಯವನ್ನು ಮಂಡಿಸುವಾಗ, ಸಿಎಎ ದೇಶದ “ಜಾತ್ಯತೀತ” ದೃಷ್ಟಿಕೋನಕ್ಕೆ ವಿರುದ್ಧವಾಗಿದೆ ಮತ್ತು ಪೌರತ್ವ ನೀಡುವಲ್ಲಿ ಧರ್ಮ ಆಧಾರಿತ ತಾರತಮ್ಯಕ್ಕೆ ಕಾರಣವಾಗುತ್ತದೆ ಎಂದು ವಿಜಯನ್‌ ಹೇಳಿದರು. “ಈ ಕಾಯಿದೆಯು ಸಂವಿಧಾನದ ಮೂಲ ಮೌಲ್ಯಗಳು ಮತ್ತು ತತ್ವಗಳಿಗೆ ವಿರುದ್ಧವಾಗಿದೆ. ದೇಶದ ಜನರಲ್ಲಿನ ಆತಂಕವನ್ನು ಗಮನದಲ್ಲಿಟ್ಟುಕೊಂಡು, ಸಿಎಎಯನ್ನು ಕೈಬಿಡಲು ಮತ್ತು ಸಂವಿಧಾನದ ಜಾತ್ಯತೀತ ದೃಷ್ಟಿಕೋನವನ್ನು ಎತ್ತಿಹಿಡಿಯಲು ಕೇಂದ್ರವು ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಅವರು ಹೇಳಿದರು.

ಈ ಕಾಯ್ದೆಯು ಸಮಾಜದ ವಿವಿಧ ಸ್ತರಗಳಲ್ಲಿ ವ್ಯಾಪಕ ಪ್ರತಿಭಟನೆಯನ್ನು ಹುಟ್ಟುಹಾಕಿದೆ ಎಂದ ಅವರು ಇದು ಭಾರತವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟದಾಗಿ ಚಿತ್ರಿಸಿದೆ ಎಂದಿದ್ದಾರೆ. ಪಿಣರಾಯಿ ವಿಜಯನ್ ಅವರು ಕೇರಳ ರಾಜ್ಯದಲ್ಲಿ ಯಾವುದೇ ಬಂಧನ ಕೇಂದ್ರಗಳು ಇರುವುದಿಲ್ಲ ಎಂದು ವಿಧಾನಸಭೆಗೆ ತಿಳಿಸಿದ್ದಾರೆ. ಅಧಿವೇಶನ ಪ್ರಾರಂಭವಾದಾಗ, ವಿಧಾನಸಭೆಯ ಏಕೈಕ ಬಿಜೆಪಿ ಸದಸ್ಯ ಓ ರಾಜಗೋಪಾಲ್, ಸಂಸತ್ತಿನ ಉಭಯ ಸದನಗಳು ಸಿಎಎ ಕಾಯ್ದೆಯನ್ನು ಅಂಗೀಕರಿಸಿದ್ದರಿಂದ ಇದು “ಕಾನೂನುಬಾಹಿರ” ಎಂದು ಹೇಳುವ ಮೂಲಕ ನಿರ್ಣಯವನ್ನು ಆಕ್ಷೇಪಿಸಿದರು.

ಈ ವಿಷಯದ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಡಿಸೆಂಬರ್ 29 ರಂದು ಕರೆದ ಸರ್ವಪಕ್ಷ ಸಭೆಯಲ್ಲಿ ವಿಶೇಷ ಅಧಿವೇಶನ ನಡೆಸಿ ಸಿಎಎ ವಿರುದ್ಧ ನಿರ್ಣಯ ಮಂಡಿಸುವಂತೆ ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಎಡ ಸರ್ಕಾರಕ್ಕೆ ಒತ್ತಾಯಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...