Homeಕರ್ನಾಟಕಕರ್ನಾಟಕದ ವಿಚಾರದಲ್ಲಿ ಪಿಣರಾಯಿ ವಿಜಯನ್ ಹಸ್ತಕ್ಷೇಪ ಮಾಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

ಕರ್ನಾಟಕದ ವಿಚಾರದಲ್ಲಿ ಪಿಣರಾಯಿ ವಿಜಯನ್ ಹಸ್ತಕ್ಷೇಪ ಮಾಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

- Advertisement -
- Advertisement -

“ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರಿನ ನಿವಾಸದ ಬಳಿ, ಕರ್ನಾಟಕದಲ್ಲಿ ಬುಲ್ಡೋಜರ್ ರಾಜ್ ನಡೆಯುತ್ತಿದೆ ಎಂಬ ಪಿಣರಾಯಿ ವಿಜಯನ್ ಅವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್, “ಪಿಣರಾಯಿ ವಿಜಯನ್ ರಂತಹ ಹಿರಿಯ ನಾಯಕರು ಸತ್ಯಾಸತ್ಯತೆ ಅರಿಯದೇ ಮಾತನಾಡಿರುವುದು ದುರಾದೃಷ್ಟಕರ. ಬೆಂಗಳೂರಿನ ವಿಚಾರ ಏನು ಎಂದು ಅವರು ತಿಳಿಯಬೇಕು. ಈ ಜಾಗ ಘನತ್ಯಾಜ್ಯ ವಿಲೇವಾರಿ ಮಾಡುವ ‘ಕ್ವಾರಿ ಪಿಟ್’ ಆಗಿದೆ. ಈ ಪ್ರದೇಶದಲ್ಲಿ ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳಿವೆ. ಕೆಲವರು ಕಾನೂನುಬಾಹಿರವಾಗಿ ಆ ಜಾಗವನ್ನು ಅತಿಕ್ರಮಣ ಮಾಡಿದ್ದಾರೆ. ನಮಗೂ ಮಾನವೀಯತೆ ಇದೆ; ಅವರಿಗೆ ಬೇರೆ ಜಾಗಗಳಿಗೆ ಹೋಗಲು ಸರ್ಕಾರ ಹಾಗೂ ಸ್ಥಳೀಯ ಶಾಸಕರು ಅವಕಾಶ ನೀಡಿದ್ದೆವು. ಅಲ್ಲಿದ್ದವರ ಪೈಕಿ ಕೆಲವರು ಮಾತ್ರ ಸ್ಥಳೀಯರಾಗಿದ್ದು ಉಳಿದವರು ಏಕಾಏಕಿ ಅತಿಕ್ರಮಣ ಮಾಡಿದ್ದಾರೆ. ಇದು ಘನತ್ಯಾಜ್ಯ ವಿಲೇವಾರಿ ಘಟಕವಾಗಿದ್ದು 9 ವರ್ಷಗಳ ಹಿಂದೆಯೇ ಅಧಿಸೂಚನೆ ಹೊರಡಿಸಲಾಗಿದೆ. ಪಿಣರಾಯಿ ಅವರಂತಹ ನಾಯಕರು ಇಂತಹ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು. ನಮಗೆ ಬೆಂಗಳೂರು ಬಗ್ಗೆ ಚೆನ್ನಾಗಿ ಗೊತ್ತಿದೆ. ಲ್ಯಾಂಡ್ ಮಾಫಿಯಾದವರು ಸ್ಲಂಗಳನ್ನು ನಿರ್ಮಿಸಲು ನಾವು ಬಿಡುವುದಿಲ್ಲ. ನಾವು ನಮ್ಮ ಭೂಮಿಯನ್ನು ರಕ್ಷಣೆ ಮಾಡಿಕೊಳ್ಳುತ್ತೇವೆ. ಅವರಲ್ಲಿ ಯಾರೆಲ್ಲಾ ಅರ್ಹರಿದ್ದಾರೆ, ಅವರಿಗೆ ರಾಜೀವ್ ಗಾಂಧಿ ಯೋಜನೆಯಲ್ಲಿ ಮನೆಗಳನ್ನು ನೀಡಲು ಬದ್ಧವಾಗಿದ್ದೇವೆ” ಎಂದು ತಿಳಿಸಿದರು.

“ಪ್ರಕರಣದ ಸತ್ಯಾಸತ್ಯತೆ ತಿಳಿಯದೇ ಪಿಣರಾಯಿ ಅವರು ಈ ರೀತಿ ಮಾತನಾಡಬಾರದು ಎಂದು ಮನವಿ ಮಾಡುತ್ತೇನೆ. ಬುಲ್ಡೋಜರ್ ಸಂಸ್ಕೃತಿ ನಮ್ಮಲ್ಲಿ ಇಲ್ಲ. ನಗರದ ಹೃದಯ ಭಾಗದಲ್ಲಿರುವ ಸರ್ಕಾರಿ ಜಮೀನನ್ನು ರಕ್ಷಣೆ ಮಾಡಿಕೊಳ್ಳಲಾಗಿದೆ. ತ್ಯಾಜ್ಯ ವಿಲೇವಾರಿ ಘಟಕಕ್ಕೆ ನಿಗದಿಯಾಗಿರುವ ಜಾಗವನ್ನು ಒತ್ತುವರಿ ಮಾಡಿಕೊಳ್ಳಲು ಬಿಡುವುದಿಲ್ಲ. ಈ ಬಗ್ಗೆ ನಮ್ಮ ಪಕ್ಷ ಹಾಗೂ ಕೇರಳದ ನಾಯಕರಿಗೆ ವರದಿ ರವಾನೆ ಮಾಡುತ್ತೇನೆ” ಎಂದರು.

“ಬೆಂಗಳೂರು ಬೇರೆ ನಗರಗಳಂತೆ ಅಲ್ಲ. ನಮ್ಮಲ್ಲಿ ಹೆಚ್ಚು ಕೊಳಗೇರಿ ಪ್ರದೇಶಗಳಿಲ್ಲ. ಹೊಸದಾಗಿ ಕೊಳಗೇರಿ ಪ್ರದೇಶ ನಿರ್ಮಾಣ ಮಾಡಲು ಬಿಡುವುದಿಲ್ಲ. ಇದು ಸಚಿವ ಕೃಷ್ಣ ಭೈರೇಗೌಡ ಅವರ ಕ್ಷೇತ್ರವಾಗಿದ್ದು, ಅವರು ಬಹಳ ಹಿರಿಯ ನಾಯಕರಿದ್ದು, ಅವರು ಅಧಿಕಾರಿಗಳ ಜೊತೆ ಮಾತನಾಡಿದ್ದಾರೆ. ಜಾಗ ಖಾಲಿ ಇದೆ ಎಂದು ಏಕಾಏಕಿ ಗುಡಿಸಲು ಹಾಕಿಕೊಳ್ಳಲು ಆಗುವುದಿಲ್ಲ. ಇದು ಅಲ್ಪಸಂಖ್ಯಾತರು ಅಥವಾ ಬೇರೆ ವಿಚಾರವಲ್ಲ. ಯಾರಿಗಾದರೂ ಜಾಗ ಬೇಕಾಗಿದ್ದರೆ ಅವರು ಅರ್ಹರಾಗಿದ್ದರೆ ಅವರಿಗೆ ಸರ್ಕಾರ ವಸತಿ ನೀಡಲಿದೆ. ಬೇರೆ ಸರ್ಕಾರಗಳು ಜನರಿಗೆ ಮನೆ ಕಟ್ಟಿಕೊಡಲು ಸಾಧ್ಯವಾಗಿರಲಿಲ್ಲ. ಮುಖ್ಯಮಂತ್ರಿಗಳು, ವಸತಿ ಸಚಿವರಾದ ಜಮೀರ್ ಅಹ್ಮದ್ ಸೇರಿದಂತೆ ನಮ್ಮ ಸರ್ಕಾರ ಬಡವರಿಗೆ ಲಕ್ಷಾಂತರ ಮನೆ ನಿರ್ಮಾಣ ಮಾಡಿದೆ. ಅರ್ಹರಿಗೆ ನಾವು ಸೂಕ್ತ ರೀತಿಯಲ್ಲಿ ಪುನರ್ವಸತಿ ಕಲ್ಪಿಸುತ್ತೇವೆ” ಎಂದು ಸ್ಪಷ್ಟನೆ ನೀಡಿದರು.

ಪಿಣರಾಯಿ ಅವರ ಹೇಳಿಕೆ ಬೆನ್ನಲ್ಲೇ ಕೆಲವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಇದೆಲ್ಲವೂ ರಾಜಕೀಯ ಹೇಳಿಕೆ ಹಾಗೂ ರಾಜಕೀಯ ಪ್ರೇರಿತ ಪ್ರತಿಭಟನೆಗಳು. ಸತ್ಯಾಸತ್ಯತೆ ಅರಿಯದೇ ನಮ್ಮ ರಾಜ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು. ಚುನಾವಣೆ ಸಮಯದಲ್ಲಿ ಇಂತಹ ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ” ಎಂದರು.

“ಯಾರೆಲ್ಲಾ ಕರ್ನಾಟಕದಲ್ಲಿ ವಾಸವಿದ್ದು, ದಾಖಲೆ ಹೊಂದಿದ್ದಾರೋ ಅವರಿಗೆ ರಾಜ್ಯದ ಕಾನೂನಿನಂತೆ ಅಗತ್ಯ ನೆರವು ನೀಡಲಾಗುವುದು. ಈ ಕುರಿತು ಸ್ಪಷ್ಟ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...