Homeಮುಖಪುಟಕೇರಳ ಗಡಿ ಬಂದ್‌: ಕರ್ನಾಟಕದ ತೀರ್ಮಾನದ ವಿರುದ್ದ ಮೋದಿಗೆ ಪತ್ರ ಬರೆದ ಪಿಣರಾಯಿ ವಿಜಯನ್

ಕೇರಳ ಗಡಿ ಬಂದ್‌: ಕರ್ನಾಟಕದ ತೀರ್ಮಾನದ ವಿರುದ್ದ ಮೋದಿಗೆ ಪತ್ರ ಬರೆದ ಪಿಣರಾಯಿ ವಿಜಯನ್

- Advertisement -
- Advertisement -

ಕೊರೊನಾ ಪ್ರಕರಣ ಹೆಚ್ಚಳದ ಕಾರಣ ನೀಡಿ ದಕ್ಷಿಣ ಕನ್ನಡ ಮತ್ತು ಕೇರಳದ ಗಡಿಯನ್ನು ಬಂದ್ ಮಾಡುವ ರಾಜ್ಯದ ತೀರ್ಮಾನದ ವಿರುದ್ದ ಕೇರಳ ಸರ್ಕಾರ ಪ್ರಧಾನಿ ಮೋದಿಗೆ ಪತ್ರ ಬರೆದಿದೆ. ಯಾವುದೇ ರಾಜ್ಯಗಳು ಅಂತರರಾಜ್ಯ ಪ್ರಯಾಣವನ್ನು ತಡೆಯಬಾರದು ಎಂಬ ಕೇಂದ್ರ ಸರ್ಕಾರದ ಸೂಚನೆಗೆ ವಿರುದ್ಧವಾಗಿ ಈ ನಿರ್ಬಂಧಗಳನ್ನು ಕರ್ನಾಟಕ ಹೇರುತ್ತಿದೆ ಎಂದು ಆರೋಪಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, ತಮ್ಮ ನೆರೆಯ ರಾಜ್ಯವಾದ ಕರ್ನಾಟಕಕ್ಕೆ ಕೇರಳದ ಜನರು ಪ್ರಯಾಣಿಸುವಾಗ ಎದುರಿಸುತ್ತಿರುವ ಕಷ್ಟಗಳನ್ನು ಪರಿಹರಿಸಲು ತುರ್ತು ಹಸ್ತಕ್ಷೇಪ ಮಾಡುವಂತೆ ಕೋರಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದಲ್ಲಿ ತಿಳಿಸಿದ್ದಾರೆ.

ಅಗತ್ಯ ಸರಕುಗಳನ್ನು ಸಾಗಿಸುವ ಟ್ರಕ್‌ಗಳ ಜೊತೆಗೆ ವಿದ್ಯಾರ್ಥಿಗಳು, ವೈದ್ಯಕೀಯ ಚಿಕಿತ್ಸೆಗಾಗಿ ಹೋಗುವ ರೋಗಿಗಳು ಸೇರಿದಂತೆ ಅನೇಕ ಜನರು ರಾಜ್ಯದ ಗಡಿಯಲ್ಲಿ ಅನಗತ್ಯ ತೊಂದರೆಗಳಿಗೆ ಒಳಗಾಗುತ್ತಾರೆ ಎಂದು ಪಿಣರಾಯಿ ಉಲ್ಲೇಖಿಸಿದ್ದಾರೆ. ರಾಜ್ಯಗಳು ಅಂತರರಾಜ್ಯ ಸಂಚಾರಕ್ಕೆ ನಿರ್ಬಂಧ ಹೇರುವುದು ಭಾರತ ಸರ್ಕಾರದ ಸೂಚನೆಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ – ಈಗ ಚುನಾವಣೆ ನಡೆದರೂ ಕಮ್ಯುನಿಷ್ಟ್ ಸರ್ಕಾರ ಮತ್ತೆ ಅಧಿಕಾರಕ್ಕೆ!

ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತವು ಸೋಮವಾರದಿಂದ ನೆರೆಯ ರಾಜ್ಯವನ್ನು ಜಿಲ್ಲೆಯೊಂದಿಗೆ ಸಂಪರ್ಕಿಸುವ 9 ರಸ್ತೆಗಳನ್ನು ಮುಚ್ಚಲಿದೆ ಎಂದು ಹೇಳಿತ್ತು. ಪಾತೂರ್‌ ಮೂಲಕ ಮುಡಿಪು ಮತ್ತು ಸಾಲೆತ್ತೂರ್‌ ನಡುವೆ ಪ್ರಯಾಣಿಸುವ ಜನರು ಈಗ ಮಂಚಿ-ಇರಾ ಮೂಲಕ ಆರು ಕಿಲೋಮೀಟರ್ ದೂರ ಹೆಚ್ಚು ಪ್ರಯಾಣಿಸಬೇಕಾಗತ್ತದೆ. ಗಡಿ ಜಿಲ್ಲೆಗಳ ನಡುವೆ ಜನರ ಸಂಚಾರ ಬಹಳ ಹೆಚ್ಚಿರುವುದರಿಂದ ಕೇರಳದ ಹೆಚ್ಚಿನ ಗಡಿಗಳನ್ನು ಮುಚ್ಚುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಹೇಳಿಕೆಯನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್‌‌‌ಪ್ರೆಸ್ ವರದಿ ಮಾಡಿದೆ.

“ಇದು ಜನನಿಬಿಡ ಗಡಿಯಾಗಿದ್ದು, ಜಿಲ್ಲೆಗಳ ನಡುವೆ ಪ್ರತಿದಿನ 2 ಲಕ್ಷಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಾರೆ. ಕೊರೊನಾ ನೆಗೆಟಿವ್‌‌‌ ವರದಿಯನ್ನು ಹದಿನೈದು ದಿನಕ್ಕೊಮ್ಮೆ ದೈನಂದಿನ ಪ್ರಯಾಣಿಕರಿಗೆ ಕಡ್ಡಾಯಗೊಳಿಸಲಾಗಿದ್ದರೂ, ಪ್ರವೇಶ ಗಡಿಗಳಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ನೀಡಿದರೆ ಇದನ್ನು ಕಾರ್ಯಗತಗೊಳಿಸುವುದು ಸವಾಲಿನ ಕೆಲಸವಾಗಿದೆ. ಆದ್ದರಿಂದ, ಕೆಲವು ಗಡಿ ಕೇಂದ್ರಗಳನ್ನು ಮುಚ್ಚಲೇಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಈ ನಿರ್ಧಾರನ್ನು ವಿರೋಧಿಸಿ ಡಿವೈಎಫ್‌ಐ ಮತ್ತು ಎವೈಎಫ್‌ಐ ಸಂಘಟನೆಗಳು ಜಂಟಿಯಾಗಿ ಪ್ರತಿಭಟನೆ ಮಾಡಿದ್ದು, ಗಡಿಗಳನ್ನು ತೆರೆಯುವಂತೆ ಒತ್ತಾಯಿಸಿದೆ.

ಇದನ್ನೂ ಓದಿ: ಕೊರೊನಾ – ಕೇರಳ ಸಂಪರ್ಕಿಸುವ 9 ರಸ್ತೆಗಳನ್ನು ಮುಚ್ಚಲಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...