Homeಮುಖಪುಟಕೇರಳ ಗಡಿ ಬಂದ್‌: ಕರ್ನಾಟಕದ ತೀರ್ಮಾನದ ವಿರುದ್ದ ಮೋದಿಗೆ ಪತ್ರ ಬರೆದ ಪಿಣರಾಯಿ ವಿಜಯನ್

ಕೇರಳ ಗಡಿ ಬಂದ್‌: ಕರ್ನಾಟಕದ ತೀರ್ಮಾನದ ವಿರುದ್ದ ಮೋದಿಗೆ ಪತ್ರ ಬರೆದ ಪಿಣರಾಯಿ ವಿಜಯನ್

- Advertisement -
- Advertisement -

ಕೊರೊನಾ ಪ್ರಕರಣ ಹೆಚ್ಚಳದ ಕಾರಣ ನೀಡಿ ದಕ್ಷಿಣ ಕನ್ನಡ ಮತ್ತು ಕೇರಳದ ಗಡಿಯನ್ನು ಬಂದ್ ಮಾಡುವ ರಾಜ್ಯದ ತೀರ್ಮಾನದ ವಿರುದ್ದ ಕೇರಳ ಸರ್ಕಾರ ಪ್ರಧಾನಿ ಮೋದಿಗೆ ಪತ್ರ ಬರೆದಿದೆ. ಯಾವುದೇ ರಾಜ್ಯಗಳು ಅಂತರರಾಜ್ಯ ಪ್ರಯಾಣವನ್ನು ತಡೆಯಬಾರದು ಎಂಬ ಕೇಂದ್ರ ಸರ್ಕಾರದ ಸೂಚನೆಗೆ ವಿರುದ್ಧವಾಗಿ ಈ ನಿರ್ಬಂಧಗಳನ್ನು ಕರ್ನಾಟಕ ಹೇರುತ್ತಿದೆ ಎಂದು ಆರೋಪಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, ತಮ್ಮ ನೆರೆಯ ರಾಜ್ಯವಾದ ಕರ್ನಾಟಕಕ್ಕೆ ಕೇರಳದ ಜನರು ಪ್ರಯಾಣಿಸುವಾಗ ಎದುರಿಸುತ್ತಿರುವ ಕಷ್ಟಗಳನ್ನು ಪರಿಹರಿಸಲು ತುರ್ತು ಹಸ್ತಕ್ಷೇಪ ಮಾಡುವಂತೆ ಕೋರಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದಲ್ಲಿ ತಿಳಿಸಿದ್ದಾರೆ.

ಅಗತ್ಯ ಸರಕುಗಳನ್ನು ಸಾಗಿಸುವ ಟ್ರಕ್‌ಗಳ ಜೊತೆಗೆ ವಿದ್ಯಾರ್ಥಿಗಳು, ವೈದ್ಯಕೀಯ ಚಿಕಿತ್ಸೆಗಾಗಿ ಹೋಗುವ ರೋಗಿಗಳು ಸೇರಿದಂತೆ ಅನೇಕ ಜನರು ರಾಜ್ಯದ ಗಡಿಯಲ್ಲಿ ಅನಗತ್ಯ ತೊಂದರೆಗಳಿಗೆ ಒಳಗಾಗುತ್ತಾರೆ ಎಂದು ಪಿಣರಾಯಿ ಉಲ್ಲೇಖಿಸಿದ್ದಾರೆ. ರಾಜ್ಯಗಳು ಅಂತರರಾಜ್ಯ ಸಂಚಾರಕ್ಕೆ ನಿರ್ಬಂಧ ಹೇರುವುದು ಭಾರತ ಸರ್ಕಾರದ ಸೂಚನೆಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ – ಈಗ ಚುನಾವಣೆ ನಡೆದರೂ ಕಮ್ಯುನಿಷ್ಟ್ ಸರ್ಕಾರ ಮತ್ತೆ ಅಧಿಕಾರಕ್ಕೆ!

ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತವು ಸೋಮವಾರದಿಂದ ನೆರೆಯ ರಾಜ್ಯವನ್ನು ಜಿಲ್ಲೆಯೊಂದಿಗೆ ಸಂಪರ್ಕಿಸುವ 9 ರಸ್ತೆಗಳನ್ನು ಮುಚ್ಚಲಿದೆ ಎಂದು ಹೇಳಿತ್ತು. ಪಾತೂರ್‌ ಮೂಲಕ ಮುಡಿಪು ಮತ್ತು ಸಾಲೆತ್ತೂರ್‌ ನಡುವೆ ಪ್ರಯಾಣಿಸುವ ಜನರು ಈಗ ಮಂಚಿ-ಇರಾ ಮೂಲಕ ಆರು ಕಿಲೋಮೀಟರ್ ದೂರ ಹೆಚ್ಚು ಪ್ರಯಾಣಿಸಬೇಕಾಗತ್ತದೆ. ಗಡಿ ಜಿಲ್ಲೆಗಳ ನಡುವೆ ಜನರ ಸಂಚಾರ ಬಹಳ ಹೆಚ್ಚಿರುವುದರಿಂದ ಕೇರಳದ ಹೆಚ್ಚಿನ ಗಡಿಗಳನ್ನು ಮುಚ್ಚುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಹೇಳಿಕೆಯನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್‌‌‌ಪ್ರೆಸ್ ವರದಿ ಮಾಡಿದೆ.

“ಇದು ಜನನಿಬಿಡ ಗಡಿಯಾಗಿದ್ದು, ಜಿಲ್ಲೆಗಳ ನಡುವೆ ಪ್ರತಿದಿನ 2 ಲಕ್ಷಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಾರೆ. ಕೊರೊನಾ ನೆಗೆಟಿವ್‌‌‌ ವರದಿಯನ್ನು ಹದಿನೈದು ದಿನಕ್ಕೊಮ್ಮೆ ದೈನಂದಿನ ಪ್ರಯಾಣಿಕರಿಗೆ ಕಡ್ಡಾಯಗೊಳಿಸಲಾಗಿದ್ದರೂ, ಪ್ರವೇಶ ಗಡಿಗಳಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ನೀಡಿದರೆ ಇದನ್ನು ಕಾರ್ಯಗತಗೊಳಿಸುವುದು ಸವಾಲಿನ ಕೆಲಸವಾಗಿದೆ. ಆದ್ದರಿಂದ, ಕೆಲವು ಗಡಿ ಕೇಂದ್ರಗಳನ್ನು ಮುಚ್ಚಲೇಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಈ ನಿರ್ಧಾರನ್ನು ವಿರೋಧಿಸಿ ಡಿವೈಎಫ್‌ಐ ಮತ್ತು ಎವೈಎಫ್‌ಐ ಸಂಘಟನೆಗಳು ಜಂಟಿಯಾಗಿ ಪ್ರತಿಭಟನೆ ಮಾಡಿದ್ದು, ಗಡಿಗಳನ್ನು ತೆರೆಯುವಂತೆ ಒತ್ತಾಯಿಸಿದೆ.

ಇದನ್ನೂ ಓದಿ: ಕೊರೊನಾ – ಕೇರಳ ಸಂಪರ್ಕಿಸುವ 9 ರಸ್ತೆಗಳನ್ನು ಮುಚ್ಚಲಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...