Homeಮುಖಪುಟಕೇರಳ ಗಡಿ ಬಂದ್‌: ಕರ್ನಾಟಕದ ತೀರ್ಮಾನದ ವಿರುದ್ದ ಮೋದಿಗೆ ಪತ್ರ ಬರೆದ ಪಿಣರಾಯಿ ವಿಜಯನ್

ಕೇರಳ ಗಡಿ ಬಂದ್‌: ಕರ್ನಾಟಕದ ತೀರ್ಮಾನದ ವಿರುದ್ದ ಮೋದಿಗೆ ಪತ್ರ ಬರೆದ ಪಿಣರಾಯಿ ವಿಜಯನ್

- Advertisement -
- Advertisement -

ಕೊರೊನಾ ಪ್ರಕರಣ ಹೆಚ್ಚಳದ ಕಾರಣ ನೀಡಿ ದಕ್ಷಿಣ ಕನ್ನಡ ಮತ್ತು ಕೇರಳದ ಗಡಿಯನ್ನು ಬಂದ್ ಮಾಡುವ ರಾಜ್ಯದ ತೀರ್ಮಾನದ ವಿರುದ್ದ ಕೇರಳ ಸರ್ಕಾರ ಪ್ರಧಾನಿ ಮೋದಿಗೆ ಪತ್ರ ಬರೆದಿದೆ. ಯಾವುದೇ ರಾಜ್ಯಗಳು ಅಂತರರಾಜ್ಯ ಪ್ರಯಾಣವನ್ನು ತಡೆಯಬಾರದು ಎಂಬ ಕೇಂದ್ರ ಸರ್ಕಾರದ ಸೂಚನೆಗೆ ವಿರುದ್ಧವಾಗಿ ಈ ನಿರ್ಬಂಧಗಳನ್ನು ಕರ್ನಾಟಕ ಹೇರುತ್ತಿದೆ ಎಂದು ಆರೋಪಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, ತಮ್ಮ ನೆರೆಯ ರಾಜ್ಯವಾದ ಕರ್ನಾಟಕಕ್ಕೆ ಕೇರಳದ ಜನರು ಪ್ರಯಾಣಿಸುವಾಗ ಎದುರಿಸುತ್ತಿರುವ ಕಷ್ಟಗಳನ್ನು ಪರಿಹರಿಸಲು ತುರ್ತು ಹಸ್ತಕ್ಷೇಪ ಮಾಡುವಂತೆ ಕೋರಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದಲ್ಲಿ ತಿಳಿಸಿದ್ದಾರೆ.

ಅಗತ್ಯ ಸರಕುಗಳನ್ನು ಸಾಗಿಸುವ ಟ್ರಕ್‌ಗಳ ಜೊತೆಗೆ ವಿದ್ಯಾರ್ಥಿಗಳು, ವೈದ್ಯಕೀಯ ಚಿಕಿತ್ಸೆಗಾಗಿ ಹೋಗುವ ರೋಗಿಗಳು ಸೇರಿದಂತೆ ಅನೇಕ ಜನರು ರಾಜ್ಯದ ಗಡಿಯಲ್ಲಿ ಅನಗತ್ಯ ತೊಂದರೆಗಳಿಗೆ ಒಳಗಾಗುತ್ತಾರೆ ಎಂದು ಪಿಣರಾಯಿ ಉಲ್ಲೇಖಿಸಿದ್ದಾರೆ. ರಾಜ್ಯಗಳು ಅಂತರರಾಜ್ಯ ಸಂಚಾರಕ್ಕೆ ನಿರ್ಬಂಧ ಹೇರುವುದು ಭಾರತ ಸರ್ಕಾರದ ಸೂಚನೆಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ – ಈಗ ಚುನಾವಣೆ ನಡೆದರೂ ಕಮ್ಯುನಿಷ್ಟ್ ಸರ್ಕಾರ ಮತ್ತೆ ಅಧಿಕಾರಕ್ಕೆ!

ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತವು ಸೋಮವಾರದಿಂದ ನೆರೆಯ ರಾಜ್ಯವನ್ನು ಜಿಲ್ಲೆಯೊಂದಿಗೆ ಸಂಪರ್ಕಿಸುವ 9 ರಸ್ತೆಗಳನ್ನು ಮುಚ್ಚಲಿದೆ ಎಂದು ಹೇಳಿತ್ತು. ಪಾತೂರ್‌ ಮೂಲಕ ಮುಡಿಪು ಮತ್ತು ಸಾಲೆತ್ತೂರ್‌ ನಡುವೆ ಪ್ರಯಾಣಿಸುವ ಜನರು ಈಗ ಮಂಚಿ-ಇರಾ ಮೂಲಕ ಆರು ಕಿಲೋಮೀಟರ್ ದೂರ ಹೆಚ್ಚು ಪ್ರಯಾಣಿಸಬೇಕಾಗತ್ತದೆ. ಗಡಿ ಜಿಲ್ಲೆಗಳ ನಡುವೆ ಜನರ ಸಂಚಾರ ಬಹಳ ಹೆಚ್ಚಿರುವುದರಿಂದ ಕೇರಳದ ಹೆಚ್ಚಿನ ಗಡಿಗಳನ್ನು ಮುಚ್ಚುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಹೇಳಿಕೆಯನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್‌‌‌ಪ್ರೆಸ್ ವರದಿ ಮಾಡಿದೆ.

“ಇದು ಜನನಿಬಿಡ ಗಡಿಯಾಗಿದ್ದು, ಜಿಲ್ಲೆಗಳ ನಡುವೆ ಪ್ರತಿದಿನ 2 ಲಕ್ಷಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಾರೆ. ಕೊರೊನಾ ನೆಗೆಟಿವ್‌‌‌ ವರದಿಯನ್ನು ಹದಿನೈದು ದಿನಕ್ಕೊಮ್ಮೆ ದೈನಂದಿನ ಪ್ರಯಾಣಿಕರಿಗೆ ಕಡ್ಡಾಯಗೊಳಿಸಲಾಗಿದ್ದರೂ, ಪ್ರವೇಶ ಗಡಿಗಳಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ನೀಡಿದರೆ ಇದನ್ನು ಕಾರ್ಯಗತಗೊಳಿಸುವುದು ಸವಾಲಿನ ಕೆಲಸವಾಗಿದೆ. ಆದ್ದರಿಂದ, ಕೆಲವು ಗಡಿ ಕೇಂದ್ರಗಳನ್ನು ಮುಚ್ಚಲೇಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಈ ನಿರ್ಧಾರನ್ನು ವಿರೋಧಿಸಿ ಡಿವೈಎಫ್‌ಐ ಮತ್ತು ಎವೈಎಫ್‌ಐ ಸಂಘಟನೆಗಳು ಜಂಟಿಯಾಗಿ ಪ್ರತಿಭಟನೆ ಮಾಡಿದ್ದು, ಗಡಿಗಳನ್ನು ತೆರೆಯುವಂತೆ ಒತ್ತಾಯಿಸಿದೆ.

ಇದನ್ನೂ ಓದಿ: ಕೊರೊನಾ – ಕೇರಳ ಸಂಪರ್ಕಿಸುವ 9 ರಸ್ತೆಗಳನ್ನು ಮುಚ್ಚಲಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

0
ಜಾತಿ ಗಣತಿ ನನ್ನ ಜೀವನದ ಪ್ರಮುಖ ಗುರಿಯಾಗಿದೆ. ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿಯನ್ನು ಮಾಡುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ...