Homeಚಳವಳಿಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ

ಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ

- Advertisement -
- Advertisement -

ಭೋಪಾಲ್‌ನ ನಿಷ್ಕ್ರಿಯಗೊಂಡ ಯೂನಿಯನ್ ಕಾರ್ಬೈಡ್ ಸ್ಥಾವರದ 40 ವರ್ಷಗಳಷ್ಟು ಹಳೆಯದಾದ 358 ಮೆಟ್ರಿಕ್ ಟನ್ ವಿಷಕಾರಿ ತ್ಯಾಜ್ಯವನ್ನು ದಹಿಸುವುದನ್ನು ವಿರೋಧಿಸಿ ಧಾರ್ ಜಿಲ್ಲೆಯ ಪಿತಾಂಪುರ್ ಕೈಗಾರಿಕಾ ಪಟ್ಟಣದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೆ, ಮಧ್ಯಪ್ರದೇಶ ಸರ್ಕಾರವು ಕೈಗಾರಿಕಾ ಪಟ್ಟಣದ ಆತಂಕಗಳು, ಕಳವಳಗಳು ಮತ್ತು ಭಾವನೆಗಳನ್ನು ನ್ಯಾಯಾಲಯಕ್ಕೆ ತಿಳಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಪಿತಾಂಪುರ್ ಪ್ರತಿಭಟನೆ

“ನಮ್ಮ ಸರ್ಕಾರವು ಸಾರ್ವಜನಿಕ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ. ಕಳೆದ ತಿಂಗಳ ಹೈಕೋರ್ಟ್ ಆದೇಶದ ಅನ್ವಯ ಯೂನಿಯನ್ ಕಾರ್ಬೈಡ್ ಘಟಕದ ವಿಷಕಾರಿ ತ್ಯಾಜ್ಯವನ್ನು ಪಿತಾಂಪುರದ ತ್ಯಾಜ್ಯ ವಿಲೇವಾರಿ ಕೇಂದ್ರಕ್ಕೆ ಸಾಗಿಸಲಾಗಿದೆ. ಜನವರಿ 6 ರಂದು ಮುಂದಿನ ವಿಚಾರಣೆಯ ದಿನಾಂಕದ ಮೊದಲು ನಾಲ್ಕು ವಾರಗಳಲ್ಲಿ ತ್ಯಾಜ್ಯವನ್ನು ಪಿತಾಂಪುರದಲ್ಲಿರುವ ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಸೌಲಭ್ಯಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸಲು ನಮಗೆ ನಿರ್ದೇಶಿಸಲಾಗಿದೆ” ಎಂದು ಮಧ್ಯಪ್ರದೇಶದ ಸಿಎಂ ಡಾ. ಮೋಹನ್ ಯಾದವ್ ಹೇಳಿದ್ದಾರೆ.

ಸಾರ್ವಜನಿಕರ ಕಾಳಜಿ ಮತ್ತು ಆತಂಕಗಳನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ನ್ಯಾಯಾಲಯದ ಆದೇಶದವರೆಗೆ ಈ ವಿಷಯದಲ್ಲಿ (ತ್ಯಾಜ್ಯವನ್ನು ಸುಡುವ ಬಗ್ಗೆ) ಯಾವುದೇ ಚಟುವಟಿಕೆ ಮಾಡದಿರಲು ನಾವು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದ್ದಾರೆ. ಪಿತಾಂಪುರ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸರ್ಕಾರವು ಯೋಜಿತ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಸ್ಥಳೀಯ ನಿವಾಸಿಗಳ ಸಂಪೂರ್ಣ ಕಾಳಜಿ, ಭಾವನೆಗಳು ಮತ್ತು ಆತಂಕಗಳನ್ನು ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸುತ್ತದೆ. ಮುಂದಿನ ಕ್ರಮಕ್ಕಾಗಿ ಮುಂದಿನ ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತದೆ ಎಂದು ಸಿಎಂ ಹೇಳಿದ್ದಾರೆ. ಶುಕ್ರವಾರ ತಡರಾತ್ರಿ ಭೋಪಾಲ್‌ನಲ್ಲಿ ಈ ವಿಷಯದ ಕುರಿತು ಸರ್ಕಾರದ ಉನ್ನತ ಅಧಿಕಾರಿಗಳ ಸುದೀರ್ಘ ತುರ್ತು ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಅವರು ಈ ಬಗ್ಗೆ ಹೇಳಿದ್ದಾರೆ.

2004 ರ ಡಿಸೆಂಬರ್ 3 ರಂದು ಭೋಪಾಲ್‌ನಿಂದ (ಯೋಜಿತ ವಿಲೇವಾರಿಗಾಗಿ) ವಿಷಕಾರಿ ತ್ಯಾಜ್ಯವನ್ನು ನಾಲ್ಕು ವಾರಗಳಲ್ಲಿ ಸ್ಥಳಾಂತರಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಿದ 2004 ರ ಅರ್ಜಿಯ ವಿಚಾರಣೆಯನ್ನು ಮಧ್ಯಪ್ರದೇಶ ಹೈಕೋರ್ಟ್ ಜನವರಿ 6 ರಂದು ನಡೆಸಲಿದೆ.

ಭೋಪಾಲ್‌ನಲ್ಲಿ ಶುಕ್ರವಾರ ತಡರಾತ್ರಿ ನಡೆದ ತುರ್ತು ಸಭೆಯ 11 ಗಂಟೆಗಳ ನಂತರ, 358 ಟನ್ ವಿಷಕಾರಿ ತ್ಯಾಜ್ಯವನ್ನು ಸುಡಲು ಯೋಜಿಸಲಾಗಿರುವ ಸಂಸ್ಕರಣೆ-ಶೇಖರಣೆ-ವಿಲೇವಾರಿ ಸ್ಥಾವರದ (ಟಿಎಸ್‌ಡಿಎಫ್) ಹೊರಗೆ ಸ್ಥಳೀಯ ನಿವಾಸಿಗಳಿಂದ ಕಲ್ಲು ತೂರಾಟ ನಡೆದಿದೆ ಎಂದು ಶನಿವಾರ ಬೆಳಿಗ್ಗೆ ವರದಿಯಾಗಿತ್ತು.

“ಬಹುಶಃ ಜನವರಿ 2 ರಂದು ಬೆಳಿಗ್ಗೆ ಭೋಪಾಲ್‌ನಿಂದ ಪಿತಾಮ್‌ಪುರದ ಟಿಎಸ್‌ಡಿಎಫ್‌ಗೆ ತ್ಯಾಜ್ಯವನ್ನು ಸಾಗಿಸಿದ ಬಗ್ಗೆ ಕೆಲವು ವದಂತಿಗಳ ಹಿನ್ನಲೆ, ತಾರ್ಪುರ ಗ್ರಾಮದ 100 ಕ್ಕೂ ಹೆಚ್ಚು ನಿವಾಸಿಗಳು ಸ್ಥಾವರದ ಹೊರಗೆ ಕಲ್ಲು ತೂರಿದ್ದಾರೆ. ಜೊತೆಗೆ ಶನಿವಾರ ಬೆಳಿಗ್ಗೆ ಕರ್ತವ್ಯದಲ್ಲಿದ್ದ ಪೊಲೀಸರ ಕಣ್ಣಿಗೆ ಮೆಣಸಿನ ಪುಡಿ ಎರಚಲು ಪ್ರಯತ್ನಿಸಿದ್ದಾರೆ” ಎಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಆದಾಗ್ಯೂ, ಪೊಲೀಸರು ಮಹಿಳೆಯರು ಸೇರಿದಂತೆ ಗುಂಪನ್ನು ಬೆನ್ನಟ್ಟಿದ್ದು, ಆಕ್ರೋಶಗೊಂಡ ಗ್ರಾಮಸ್ಥರನ್ನು ಚದುರಿಸಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ. ಇಂದು ಸಂಜೆಯ ನಂತರ ಈ ವಿಷಯದ ಬಗ್ಗೆ ಪ್ರಕರಣ ದಾಖಲಿಸಲಾಗುವುದು” ಎಂದು ಪಿತಾಂಪುರ ಪಟ್ಟಣದಲ್ಲಿ ಮೊಕ್ಕಾಂ ಹೂಡಿರುವ ಅವರುತಿಳಿಸಿದ್ದಾರೆ. ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಧಾರ್ ಜಿಲ್ಲಾಡಳಿತದಿಂದ ಪಿತಾಂಪುರ ಪಟ್ಟಣದ ಟಿಎಸ್‌ಡಿಎಫ್ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಅಲ್ಲದೆ, ಶುಕ್ರವಾರ ಪಿತಾಂಪುರ ಬಂದ್ ಕರೆ ವೇಳೆ ಪಿತಾಂಪುರ ಪಟ್ಟಣದಲ್ಲಿ ಪ್ರತಿಭಟನಾಕಾರರು ಸಾರ್ವಜನಿಕ ಗೊಂದಲ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಐದು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಎಫ್‌ಐಆರ್‌ಗಳಲ್ಲಿ ಒಂದು ಪ್ರಕರಣ, ಸಾರ್ವಜನಿಕ ಪ್ರತಿಭಟನೆಯ ಸಂದರ್ಭದಲ್ಲಿ ಇಬ್ಬರು ವ್ಯಕ್ತಿಗಳು ಆತ್ಮಾಹುತಿಗೆ ಯತ್ನಿಸಿ ಸುಟ್ಟ ಗಾಯಗಳಿಗೆ ಒಳಗಾದ ಘಟನೆಗೆ ಸಂಬಂಧಿಸಿದೆ. “ಆ ಘಟನೆಯಲ್ಲಿ ನಡೆಸಲಾಗಿರುವ ತನಿಖೆಯಲ್ಲಿ ವ್ಯಕ್ತಿಗಳಿಗೆ ಬೆಂಕಿ ಹೊತ್ತಿಸಿದ್ದು ಮೂರನೇ ವ್ಯಕ್ತಿ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆಗಳು ನಡೆಯುತ್ತಿವೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಏತನ್ಮಧ್ಯೆ, ಇಂದೋರ್ ಪ್ರದೇಶದ ಆಡಳಿತಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಶನಿವಾರ ಪಿತಾಂಪುರದ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಪ್ರಮುಖ ನಾಗರಿಕರ ಜೊತೆಗೆ ಸುಮಾರು 45 ನಿಮಿಷಗಳ ಕಾಲ ಸಭೆ ನಡೆಸಿದ್ದು, ರಾಜ್ಯದ ಮುಖ್ಯಮಂತ್ರಿಯ ಸಂದೇಶವನ್ನು ರವಾನಿಸಿದ್ದಾರೆ. ಯೋಜಿತ ತ್ಯಾಜ್ಯ ದಹನದ ಬಗ್ಗೆ ಜನರ ಕುಂದುಕೊರತೆಗಳು ಮತ್ತು ಕಳವಳಗಳನ್ನು ಜನವರಿ 6 ರಂದು ಹೈಕೋರ್ಟ್‌ಗೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ್ದು, ಮುಂದಿನ ನ್ಯಾಯಾಲಯದ ನಿರ್ದೇಶನದವರೆಗೆ, TSDF ನಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಏನೂ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ.

ಧಾರ್ ಪ್ರದೇಶವು ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಮೀ ಮತ್ತು ಇಂದೋರ್ ನಗರದಿಂದ 30 ಕಿಮೀ ದೂರದಲ್ಲಿರುವ ಪಿತಾಂಪುರ್ ಮಧ್ಯಪ್ರದೇಶದ ಪ್ರಮುಖ ಕೈಗಾರಿಕಾ ಪಟ್ಟಣವಾಗಿದೆ. ಈ ಪಟ್ಟಣದಲ್ಲಿ 700 ಕಾರ್ಖಾನೆಗಳು (ಅವುಗಳಲ್ಲಿ ಹೆಚ್ಚಿನವು ಆಟೋಮೊಬೈಲ್ ಕ್ಷೇತ್ರಕ್ಕೆ ಸಂಬಂಧಿಸಿವೆ) ಇದ್ದು ಮತ್ತು ಸುಮಾರು 1.75 ಲಕ್ಷ ಜನಸಂಖ್ಯೆಯನ್ನು ಹೊಂದಿದೆ.

ಇದನ್ನೂಓದಿ:  ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...