Homeಚಳವಳಿಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ

ಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ

- Advertisement -
- Advertisement -

ಭೋಪಾಲ್‌ನ ನಿಷ್ಕ್ರಿಯಗೊಂಡ ಯೂನಿಯನ್ ಕಾರ್ಬೈಡ್ ಸ್ಥಾವರದ 40 ವರ್ಷಗಳಷ್ಟು ಹಳೆಯದಾದ 358 ಮೆಟ್ರಿಕ್ ಟನ್ ವಿಷಕಾರಿ ತ್ಯಾಜ್ಯವನ್ನು ದಹಿಸುವುದನ್ನು ವಿರೋಧಿಸಿ ಧಾರ್ ಜಿಲ್ಲೆಯ ಪಿತಾಂಪುರ್ ಕೈಗಾರಿಕಾ ಪಟ್ಟಣದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೆ, ಮಧ್ಯಪ್ರದೇಶ ಸರ್ಕಾರವು ಕೈಗಾರಿಕಾ ಪಟ್ಟಣದ ಆತಂಕಗಳು, ಕಳವಳಗಳು ಮತ್ತು ಭಾವನೆಗಳನ್ನು ನ್ಯಾಯಾಲಯಕ್ಕೆ ತಿಳಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಪಿತಾಂಪುರ್ ಪ್ರತಿಭಟನೆ

“ನಮ್ಮ ಸರ್ಕಾರವು ಸಾರ್ವಜನಿಕ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ. ಕಳೆದ ತಿಂಗಳ ಹೈಕೋರ್ಟ್ ಆದೇಶದ ಅನ್ವಯ ಯೂನಿಯನ್ ಕಾರ್ಬೈಡ್ ಘಟಕದ ವಿಷಕಾರಿ ತ್ಯಾಜ್ಯವನ್ನು ಪಿತಾಂಪುರದ ತ್ಯಾಜ್ಯ ವಿಲೇವಾರಿ ಕೇಂದ್ರಕ್ಕೆ ಸಾಗಿಸಲಾಗಿದೆ. ಜನವರಿ 6 ರಂದು ಮುಂದಿನ ವಿಚಾರಣೆಯ ದಿನಾಂಕದ ಮೊದಲು ನಾಲ್ಕು ವಾರಗಳಲ್ಲಿ ತ್ಯಾಜ್ಯವನ್ನು ಪಿತಾಂಪುರದಲ್ಲಿರುವ ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಸೌಲಭ್ಯಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸಲು ನಮಗೆ ನಿರ್ದೇಶಿಸಲಾಗಿದೆ” ಎಂದು ಮಧ್ಯಪ್ರದೇಶದ ಸಿಎಂ ಡಾ. ಮೋಹನ್ ಯಾದವ್ ಹೇಳಿದ್ದಾರೆ.

ಸಾರ್ವಜನಿಕರ ಕಾಳಜಿ ಮತ್ತು ಆತಂಕಗಳನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ನ್ಯಾಯಾಲಯದ ಆದೇಶದವರೆಗೆ ಈ ವಿಷಯದಲ್ಲಿ (ತ್ಯಾಜ್ಯವನ್ನು ಸುಡುವ ಬಗ್ಗೆ) ಯಾವುದೇ ಚಟುವಟಿಕೆ ಮಾಡದಿರಲು ನಾವು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದ್ದಾರೆ. ಪಿತಾಂಪುರ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸರ್ಕಾರವು ಯೋಜಿತ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಸ್ಥಳೀಯ ನಿವಾಸಿಗಳ ಸಂಪೂರ್ಣ ಕಾಳಜಿ, ಭಾವನೆಗಳು ಮತ್ತು ಆತಂಕಗಳನ್ನು ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸುತ್ತದೆ. ಮುಂದಿನ ಕ್ರಮಕ್ಕಾಗಿ ಮುಂದಿನ ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತದೆ ಎಂದು ಸಿಎಂ ಹೇಳಿದ್ದಾರೆ. ಶುಕ್ರವಾರ ತಡರಾತ್ರಿ ಭೋಪಾಲ್‌ನಲ್ಲಿ ಈ ವಿಷಯದ ಕುರಿತು ಸರ್ಕಾರದ ಉನ್ನತ ಅಧಿಕಾರಿಗಳ ಸುದೀರ್ಘ ತುರ್ತು ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಅವರು ಈ ಬಗ್ಗೆ ಹೇಳಿದ್ದಾರೆ.

2004 ರ ಡಿಸೆಂಬರ್ 3 ರಂದು ಭೋಪಾಲ್‌ನಿಂದ (ಯೋಜಿತ ವಿಲೇವಾರಿಗಾಗಿ) ವಿಷಕಾರಿ ತ್ಯಾಜ್ಯವನ್ನು ನಾಲ್ಕು ವಾರಗಳಲ್ಲಿ ಸ್ಥಳಾಂತರಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಿದ 2004 ರ ಅರ್ಜಿಯ ವಿಚಾರಣೆಯನ್ನು ಮಧ್ಯಪ್ರದೇಶ ಹೈಕೋರ್ಟ್ ಜನವರಿ 6 ರಂದು ನಡೆಸಲಿದೆ.

ಭೋಪಾಲ್‌ನಲ್ಲಿ ಶುಕ್ರವಾರ ತಡರಾತ್ರಿ ನಡೆದ ತುರ್ತು ಸಭೆಯ 11 ಗಂಟೆಗಳ ನಂತರ, 358 ಟನ್ ವಿಷಕಾರಿ ತ್ಯಾಜ್ಯವನ್ನು ಸುಡಲು ಯೋಜಿಸಲಾಗಿರುವ ಸಂಸ್ಕರಣೆ-ಶೇಖರಣೆ-ವಿಲೇವಾರಿ ಸ್ಥಾವರದ (ಟಿಎಸ್‌ಡಿಎಫ್) ಹೊರಗೆ ಸ್ಥಳೀಯ ನಿವಾಸಿಗಳಿಂದ ಕಲ್ಲು ತೂರಾಟ ನಡೆದಿದೆ ಎಂದು ಶನಿವಾರ ಬೆಳಿಗ್ಗೆ ವರದಿಯಾಗಿತ್ತು.

“ಬಹುಶಃ ಜನವರಿ 2 ರಂದು ಬೆಳಿಗ್ಗೆ ಭೋಪಾಲ್‌ನಿಂದ ಪಿತಾಮ್‌ಪುರದ ಟಿಎಸ್‌ಡಿಎಫ್‌ಗೆ ತ್ಯಾಜ್ಯವನ್ನು ಸಾಗಿಸಿದ ಬಗ್ಗೆ ಕೆಲವು ವದಂತಿಗಳ ಹಿನ್ನಲೆ, ತಾರ್ಪುರ ಗ್ರಾಮದ 100 ಕ್ಕೂ ಹೆಚ್ಚು ನಿವಾಸಿಗಳು ಸ್ಥಾವರದ ಹೊರಗೆ ಕಲ್ಲು ತೂರಿದ್ದಾರೆ. ಜೊತೆಗೆ ಶನಿವಾರ ಬೆಳಿಗ್ಗೆ ಕರ್ತವ್ಯದಲ್ಲಿದ್ದ ಪೊಲೀಸರ ಕಣ್ಣಿಗೆ ಮೆಣಸಿನ ಪುಡಿ ಎರಚಲು ಪ್ರಯತ್ನಿಸಿದ್ದಾರೆ” ಎಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಆದಾಗ್ಯೂ, ಪೊಲೀಸರು ಮಹಿಳೆಯರು ಸೇರಿದಂತೆ ಗುಂಪನ್ನು ಬೆನ್ನಟ್ಟಿದ್ದು, ಆಕ್ರೋಶಗೊಂಡ ಗ್ರಾಮಸ್ಥರನ್ನು ಚದುರಿಸಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ. ಇಂದು ಸಂಜೆಯ ನಂತರ ಈ ವಿಷಯದ ಬಗ್ಗೆ ಪ್ರಕರಣ ದಾಖಲಿಸಲಾಗುವುದು” ಎಂದು ಪಿತಾಂಪುರ ಪಟ್ಟಣದಲ್ಲಿ ಮೊಕ್ಕಾಂ ಹೂಡಿರುವ ಅವರುತಿಳಿಸಿದ್ದಾರೆ. ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಧಾರ್ ಜಿಲ್ಲಾಡಳಿತದಿಂದ ಪಿತಾಂಪುರ ಪಟ್ಟಣದ ಟಿಎಸ್‌ಡಿಎಫ್ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಅಲ್ಲದೆ, ಶುಕ್ರವಾರ ಪಿತಾಂಪುರ ಬಂದ್ ಕರೆ ವೇಳೆ ಪಿತಾಂಪುರ ಪಟ್ಟಣದಲ್ಲಿ ಪ್ರತಿಭಟನಾಕಾರರು ಸಾರ್ವಜನಿಕ ಗೊಂದಲ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಐದು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಎಫ್‌ಐಆರ್‌ಗಳಲ್ಲಿ ಒಂದು ಪ್ರಕರಣ, ಸಾರ್ವಜನಿಕ ಪ್ರತಿಭಟನೆಯ ಸಂದರ್ಭದಲ್ಲಿ ಇಬ್ಬರು ವ್ಯಕ್ತಿಗಳು ಆತ್ಮಾಹುತಿಗೆ ಯತ್ನಿಸಿ ಸುಟ್ಟ ಗಾಯಗಳಿಗೆ ಒಳಗಾದ ಘಟನೆಗೆ ಸಂಬಂಧಿಸಿದೆ. “ಆ ಘಟನೆಯಲ್ಲಿ ನಡೆಸಲಾಗಿರುವ ತನಿಖೆಯಲ್ಲಿ ವ್ಯಕ್ತಿಗಳಿಗೆ ಬೆಂಕಿ ಹೊತ್ತಿಸಿದ್ದು ಮೂರನೇ ವ್ಯಕ್ತಿ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆಗಳು ನಡೆಯುತ್ತಿವೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಏತನ್ಮಧ್ಯೆ, ಇಂದೋರ್ ಪ್ರದೇಶದ ಆಡಳಿತಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಶನಿವಾರ ಪಿತಾಂಪುರದ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಪ್ರಮುಖ ನಾಗರಿಕರ ಜೊತೆಗೆ ಸುಮಾರು 45 ನಿಮಿಷಗಳ ಕಾಲ ಸಭೆ ನಡೆಸಿದ್ದು, ರಾಜ್ಯದ ಮುಖ್ಯಮಂತ್ರಿಯ ಸಂದೇಶವನ್ನು ರವಾನಿಸಿದ್ದಾರೆ. ಯೋಜಿತ ತ್ಯಾಜ್ಯ ದಹನದ ಬಗ್ಗೆ ಜನರ ಕುಂದುಕೊರತೆಗಳು ಮತ್ತು ಕಳವಳಗಳನ್ನು ಜನವರಿ 6 ರಂದು ಹೈಕೋರ್ಟ್‌ಗೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ್ದು, ಮುಂದಿನ ನ್ಯಾಯಾಲಯದ ನಿರ್ದೇಶನದವರೆಗೆ, TSDF ನಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಏನೂ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ.

ಧಾರ್ ಪ್ರದೇಶವು ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಮೀ ಮತ್ತು ಇಂದೋರ್ ನಗರದಿಂದ 30 ಕಿಮೀ ದೂರದಲ್ಲಿರುವ ಪಿತಾಂಪುರ್ ಮಧ್ಯಪ್ರದೇಶದ ಪ್ರಮುಖ ಕೈಗಾರಿಕಾ ಪಟ್ಟಣವಾಗಿದೆ. ಈ ಪಟ್ಟಣದಲ್ಲಿ 700 ಕಾರ್ಖಾನೆಗಳು (ಅವುಗಳಲ್ಲಿ ಹೆಚ್ಚಿನವು ಆಟೋಮೊಬೈಲ್ ಕ್ಷೇತ್ರಕ್ಕೆ ಸಂಬಂಧಿಸಿವೆ) ಇದ್ದು ಮತ್ತು ಸುಮಾರು 1.75 ಲಕ್ಷ ಜನಸಂಖ್ಯೆಯನ್ನು ಹೊಂದಿದೆ.

ಇದನ್ನೂಓದಿ:  ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...