Homeಚಳವಳಿಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ

ಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ

- Advertisement -
- Advertisement -

ಭೋಪಾಲ್‌ನ ನಿಷ್ಕ್ರಿಯಗೊಂಡ ಯೂನಿಯನ್ ಕಾರ್ಬೈಡ್ ಸ್ಥಾವರದ 40 ವರ್ಷಗಳಷ್ಟು ಹಳೆಯದಾದ 358 ಮೆಟ್ರಿಕ್ ಟನ್ ವಿಷಕಾರಿ ತ್ಯಾಜ್ಯವನ್ನು ದಹಿಸುವುದನ್ನು ವಿರೋಧಿಸಿ ಧಾರ್ ಜಿಲ್ಲೆಯ ಪಿತಾಂಪುರ್ ಕೈಗಾರಿಕಾ ಪಟ್ಟಣದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೆ, ಮಧ್ಯಪ್ರದೇಶ ಸರ್ಕಾರವು ಕೈಗಾರಿಕಾ ಪಟ್ಟಣದ ಆತಂಕಗಳು, ಕಳವಳಗಳು ಮತ್ತು ಭಾವನೆಗಳನ್ನು ನ್ಯಾಯಾಲಯಕ್ಕೆ ತಿಳಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಪಿತಾಂಪುರ್ ಪ್ರತಿಭಟನೆ

“ನಮ್ಮ ಸರ್ಕಾರವು ಸಾರ್ವಜನಿಕ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ. ಕಳೆದ ತಿಂಗಳ ಹೈಕೋರ್ಟ್ ಆದೇಶದ ಅನ್ವಯ ಯೂನಿಯನ್ ಕಾರ್ಬೈಡ್ ಘಟಕದ ವಿಷಕಾರಿ ತ್ಯಾಜ್ಯವನ್ನು ಪಿತಾಂಪುರದ ತ್ಯಾಜ್ಯ ವಿಲೇವಾರಿ ಕೇಂದ್ರಕ್ಕೆ ಸಾಗಿಸಲಾಗಿದೆ. ಜನವರಿ 6 ರಂದು ಮುಂದಿನ ವಿಚಾರಣೆಯ ದಿನಾಂಕದ ಮೊದಲು ನಾಲ್ಕು ವಾರಗಳಲ್ಲಿ ತ್ಯಾಜ್ಯವನ್ನು ಪಿತಾಂಪುರದಲ್ಲಿರುವ ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಸೌಲಭ್ಯಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸಲು ನಮಗೆ ನಿರ್ದೇಶಿಸಲಾಗಿದೆ” ಎಂದು ಮಧ್ಯಪ್ರದೇಶದ ಸಿಎಂ ಡಾ. ಮೋಹನ್ ಯಾದವ್ ಹೇಳಿದ್ದಾರೆ.

ಸಾರ್ವಜನಿಕರ ಕಾಳಜಿ ಮತ್ತು ಆತಂಕಗಳನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ನ್ಯಾಯಾಲಯದ ಆದೇಶದವರೆಗೆ ಈ ವಿಷಯದಲ್ಲಿ (ತ್ಯಾಜ್ಯವನ್ನು ಸುಡುವ ಬಗ್ಗೆ) ಯಾವುದೇ ಚಟುವಟಿಕೆ ಮಾಡದಿರಲು ನಾವು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದ್ದಾರೆ. ಪಿತಾಂಪುರ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸರ್ಕಾರವು ಯೋಜಿತ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಸ್ಥಳೀಯ ನಿವಾಸಿಗಳ ಸಂಪೂರ್ಣ ಕಾಳಜಿ, ಭಾವನೆಗಳು ಮತ್ತು ಆತಂಕಗಳನ್ನು ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸುತ್ತದೆ. ಮುಂದಿನ ಕ್ರಮಕ್ಕಾಗಿ ಮುಂದಿನ ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತದೆ ಎಂದು ಸಿಎಂ ಹೇಳಿದ್ದಾರೆ. ಶುಕ್ರವಾರ ತಡರಾತ್ರಿ ಭೋಪಾಲ್‌ನಲ್ಲಿ ಈ ವಿಷಯದ ಕುರಿತು ಸರ್ಕಾರದ ಉನ್ನತ ಅಧಿಕಾರಿಗಳ ಸುದೀರ್ಘ ತುರ್ತು ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಅವರು ಈ ಬಗ್ಗೆ ಹೇಳಿದ್ದಾರೆ.

2004 ರ ಡಿಸೆಂಬರ್ 3 ರಂದು ಭೋಪಾಲ್‌ನಿಂದ (ಯೋಜಿತ ವಿಲೇವಾರಿಗಾಗಿ) ವಿಷಕಾರಿ ತ್ಯಾಜ್ಯವನ್ನು ನಾಲ್ಕು ವಾರಗಳಲ್ಲಿ ಸ್ಥಳಾಂತರಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಿದ 2004 ರ ಅರ್ಜಿಯ ವಿಚಾರಣೆಯನ್ನು ಮಧ್ಯಪ್ರದೇಶ ಹೈಕೋರ್ಟ್ ಜನವರಿ 6 ರಂದು ನಡೆಸಲಿದೆ.

ಭೋಪಾಲ್‌ನಲ್ಲಿ ಶುಕ್ರವಾರ ತಡರಾತ್ರಿ ನಡೆದ ತುರ್ತು ಸಭೆಯ 11 ಗಂಟೆಗಳ ನಂತರ, 358 ಟನ್ ವಿಷಕಾರಿ ತ್ಯಾಜ್ಯವನ್ನು ಸುಡಲು ಯೋಜಿಸಲಾಗಿರುವ ಸಂಸ್ಕರಣೆ-ಶೇಖರಣೆ-ವಿಲೇವಾರಿ ಸ್ಥಾವರದ (ಟಿಎಸ್‌ಡಿಎಫ್) ಹೊರಗೆ ಸ್ಥಳೀಯ ನಿವಾಸಿಗಳಿಂದ ಕಲ್ಲು ತೂರಾಟ ನಡೆದಿದೆ ಎಂದು ಶನಿವಾರ ಬೆಳಿಗ್ಗೆ ವರದಿಯಾಗಿತ್ತು.

“ಬಹುಶಃ ಜನವರಿ 2 ರಂದು ಬೆಳಿಗ್ಗೆ ಭೋಪಾಲ್‌ನಿಂದ ಪಿತಾಮ್‌ಪುರದ ಟಿಎಸ್‌ಡಿಎಫ್‌ಗೆ ತ್ಯಾಜ್ಯವನ್ನು ಸಾಗಿಸಿದ ಬಗ್ಗೆ ಕೆಲವು ವದಂತಿಗಳ ಹಿನ್ನಲೆ, ತಾರ್ಪುರ ಗ್ರಾಮದ 100 ಕ್ಕೂ ಹೆಚ್ಚು ನಿವಾಸಿಗಳು ಸ್ಥಾವರದ ಹೊರಗೆ ಕಲ್ಲು ತೂರಿದ್ದಾರೆ. ಜೊತೆಗೆ ಶನಿವಾರ ಬೆಳಿಗ್ಗೆ ಕರ್ತವ್ಯದಲ್ಲಿದ್ದ ಪೊಲೀಸರ ಕಣ್ಣಿಗೆ ಮೆಣಸಿನ ಪುಡಿ ಎರಚಲು ಪ್ರಯತ್ನಿಸಿದ್ದಾರೆ” ಎಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಆದಾಗ್ಯೂ, ಪೊಲೀಸರು ಮಹಿಳೆಯರು ಸೇರಿದಂತೆ ಗುಂಪನ್ನು ಬೆನ್ನಟ್ಟಿದ್ದು, ಆಕ್ರೋಶಗೊಂಡ ಗ್ರಾಮಸ್ಥರನ್ನು ಚದುರಿಸಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ. ಇಂದು ಸಂಜೆಯ ನಂತರ ಈ ವಿಷಯದ ಬಗ್ಗೆ ಪ್ರಕರಣ ದಾಖಲಿಸಲಾಗುವುದು” ಎಂದು ಪಿತಾಂಪುರ ಪಟ್ಟಣದಲ್ಲಿ ಮೊಕ್ಕಾಂ ಹೂಡಿರುವ ಅವರುತಿಳಿಸಿದ್ದಾರೆ. ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಧಾರ್ ಜಿಲ್ಲಾಡಳಿತದಿಂದ ಪಿತಾಂಪುರ ಪಟ್ಟಣದ ಟಿಎಸ್‌ಡಿಎಫ್ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಅಲ್ಲದೆ, ಶುಕ್ರವಾರ ಪಿತಾಂಪುರ ಬಂದ್ ಕರೆ ವೇಳೆ ಪಿತಾಂಪುರ ಪಟ್ಟಣದಲ್ಲಿ ಪ್ರತಿಭಟನಾಕಾರರು ಸಾರ್ವಜನಿಕ ಗೊಂದಲ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಐದು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಎಫ್‌ಐಆರ್‌ಗಳಲ್ಲಿ ಒಂದು ಪ್ರಕರಣ, ಸಾರ್ವಜನಿಕ ಪ್ರತಿಭಟನೆಯ ಸಂದರ್ಭದಲ್ಲಿ ಇಬ್ಬರು ವ್ಯಕ್ತಿಗಳು ಆತ್ಮಾಹುತಿಗೆ ಯತ್ನಿಸಿ ಸುಟ್ಟ ಗಾಯಗಳಿಗೆ ಒಳಗಾದ ಘಟನೆಗೆ ಸಂಬಂಧಿಸಿದೆ. “ಆ ಘಟನೆಯಲ್ಲಿ ನಡೆಸಲಾಗಿರುವ ತನಿಖೆಯಲ್ಲಿ ವ್ಯಕ್ತಿಗಳಿಗೆ ಬೆಂಕಿ ಹೊತ್ತಿಸಿದ್ದು ಮೂರನೇ ವ್ಯಕ್ತಿ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆಗಳು ನಡೆಯುತ್ತಿವೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಏತನ್ಮಧ್ಯೆ, ಇಂದೋರ್ ಪ್ರದೇಶದ ಆಡಳಿತಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಶನಿವಾರ ಪಿತಾಂಪುರದ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಪ್ರಮುಖ ನಾಗರಿಕರ ಜೊತೆಗೆ ಸುಮಾರು 45 ನಿಮಿಷಗಳ ಕಾಲ ಸಭೆ ನಡೆಸಿದ್ದು, ರಾಜ್ಯದ ಮುಖ್ಯಮಂತ್ರಿಯ ಸಂದೇಶವನ್ನು ರವಾನಿಸಿದ್ದಾರೆ. ಯೋಜಿತ ತ್ಯಾಜ್ಯ ದಹನದ ಬಗ್ಗೆ ಜನರ ಕುಂದುಕೊರತೆಗಳು ಮತ್ತು ಕಳವಳಗಳನ್ನು ಜನವರಿ 6 ರಂದು ಹೈಕೋರ್ಟ್‌ಗೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ್ದು, ಮುಂದಿನ ನ್ಯಾಯಾಲಯದ ನಿರ್ದೇಶನದವರೆಗೆ, TSDF ನಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಏನೂ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ.

ಧಾರ್ ಪ್ರದೇಶವು ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಮೀ ಮತ್ತು ಇಂದೋರ್ ನಗರದಿಂದ 30 ಕಿಮೀ ದೂರದಲ್ಲಿರುವ ಪಿತಾಂಪುರ್ ಮಧ್ಯಪ್ರದೇಶದ ಪ್ರಮುಖ ಕೈಗಾರಿಕಾ ಪಟ್ಟಣವಾಗಿದೆ. ಈ ಪಟ್ಟಣದಲ್ಲಿ 700 ಕಾರ್ಖಾನೆಗಳು (ಅವುಗಳಲ್ಲಿ ಹೆಚ್ಚಿನವು ಆಟೋಮೊಬೈಲ್ ಕ್ಷೇತ್ರಕ್ಕೆ ಸಂಬಂಧಿಸಿವೆ) ಇದ್ದು ಮತ್ತು ಸುಮಾರು 1.75 ಲಕ್ಷ ಜನಸಂಖ್ಯೆಯನ್ನು ಹೊಂದಿದೆ.

ಇದನ್ನೂಓದಿ:  ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...