Homeಚಳವಳಿಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ

ಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ

- Advertisement -
- Advertisement -

ಭೋಪಾಲ್‌ನ ನಿಷ್ಕ್ರಿಯಗೊಂಡ ಯೂನಿಯನ್ ಕಾರ್ಬೈಡ್ ಸ್ಥಾವರದ 40 ವರ್ಷಗಳಷ್ಟು ಹಳೆಯದಾದ 358 ಮೆಟ್ರಿಕ್ ಟನ್ ವಿಷಕಾರಿ ತ್ಯಾಜ್ಯವನ್ನು ದಹಿಸುವುದನ್ನು ವಿರೋಧಿಸಿ ಧಾರ್ ಜಿಲ್ಲೆಯ ಪಿತಾಂಪುರ್ ಕೈಗಾರಿಕಾ ಪಟ್ಟಣದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೆ, ಮಧ್ಯಪ್ರದೇಶ ಸರ್ಕಾರವು ಕೈಗಾರಿಕಾ ಪಟ್ಟಣದ ಆತಂಕಗಳು, ಕಳವಳಗಳು ಮತ್ತು ಭಾವನೆಗಳನ್ನು ನ್ಯಾಯಾಲಯಕ್ಕೆ ತಿಳಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಪಿತಾಂಪುರ್ ಪ್ರತಿಭಟನೆ

“ನಮ್ಮ ಸರ್ಕಾರವು ಸಾರ್ವಜನಿಕ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ. ಕಳೆದ ತಿಂಗಳ ಹೈಕೋರ್ಟ್ ಆದೇಶದ ಅನ್ವಯ ಯೂನಿಯನ್ ಕಾರ್ಬೈಡ್ ಘಟಕದ ವಿಷಕಾರಿ ತ್ಯಾಜ್ಯವನ್ನು ಪಿತಾಂಪುರದ ತ್ಯಾಜ್ಯ ವಿಲೇವಾರಿ ಕೇಂದ್ರಕ್ಕೆ ಸಾಗಿಸಲಾಗಿದೆ. ಜನವರಿ 6 ರಂದು ಮುಂದಿನ ವಿಚಾರಣೆಯ ದಿನಾಂಕದ ಮೊದಲು ನಾಲ್ಕು ವಾರಗಳಲ್ಲಿ ತ್ಯಾಜ್ಯವನ್ನು ಪಿತಾಂಪುರದಲ್ಲಿರುವ ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಸೌಲಭ್ಯಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸಲು ನಮಗೆ ನಿರ್ದೇಶಿಸಲಾಗಿದೆ” ಎಂದು ಮಧ್ಯಪ್ರದೇಶದ ಸಿಎಂ ಡಾ. ಮೋಹನ್ ಯಾದವ್ ಹೇಳಿದ್ದಾರೆ.

ಸಾರ್ವಜನಿಕರ ಕಾಳಜಿ ಮತ್ತು ಆತಂಕಗಳನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ನ್ಯಾಯಾಲಯದ ಆದೇಶದವರೆಗೆ ಈ ವಿಷಯದಲ್ಲಿ (ತ್ಯಾಜ್ಯವನ್ನು ಸುಡುವ ಬಗ್ಗೆ) ಯಾವುದೇ ಚಟುವಟಿಕೆ ಮಾಡದಿರಲು ನಾವು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದ್ದಾರೆ. ಪಿತಾಂಪುರ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸರ್ಕಾರವು ಯೋಜಿತ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಸ್ಥಳೀಯ ನಿವಾಸಿಗಳ ಸಂಪೂರ್ಣ ಕಾಳಜಿ, ಭಾವನೆಗಳು ಮತ್ತು ಆತಂಕಗಳನ್ನು ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸುತ್ತದೆ. ಮುಂದಿನ ಕ್ರಮಕ್ಕಾಗಿ ಮುಂದಿನ ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತದೆ ಎಂದು ಸಿಎಂ ಹೇಳಿದ್ದಾರೆ. ಶುಕ್ರವಾರ ತಡರಾತ್ರಿ ಭೋಪಾಲ್‌ನಲ್ಲಿ ಈ ವಿಷಯದ ಕುರಿತು ಸರ್ಕಾರದ ಉನ್ನತ ಅಧಿಕಾರಿಗಳ ಸುದೀರ್ಘ ತುರ್ತು ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಅವರು ಈ ಬಗ್ಗೆ ಹೇಳಿದ್ದಾರೆ.

2004 ರ ಡಿಸೆಂಬರ್ 3 ರಂದು ಭೋಪಾಲ್‌ನಿಂದ (ಯೋಜಿತ ವಿಲೇವಾರಿಗಾಗಿ) ವಿಷಕಾರಿ ತ್ಯಾಜ್ಯವನ್ನು ನಾಲ್ಕು ವಾರಗಳಲ್ಲಿ ಸ್ಥಳಾಂತರಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಿದ 2004 ರ ಅರ್ಜಿಯ ವಿಚಾರಣೆಯನ್ನು ಮಧ್ಯಪ್ರದೇಶ ಹೈಕೋರ್ಟ್ ಜನವರಿ 6 ರಂದು ನಡೆಸಲಿದೆ.

ಭೋಪಾಲ್‌ನಲ್ಲಿ ಶುಕ್ರವಾರ ತಡರಾತ್ರಿ ನಡೆದ ತುರ್ತು ಸಭೆಯ 11 ಗಂಟೆಗಳ ನಂತರ, 358 ಟನ್ ವಿಷಕಾರಿ ತ್ಯಾಜ್ಯವನ್ನು ಸುಡಲು ಯೋಜಿಸಲಾಗಿರುವ ಸಂಸ್ಕರಣೆ-ಶೇಖರಣೆ-ವಿಲೇವಾರಿ ಸ್ಥಾವರದ (ಟಿಎಸ್‌ಡಿಎಫ್) ಹೊರಗೆ ಸ್ಥಳೀಯ ನಿವಾಸಿಗಳಿಂದ ಕಲ್ಲು ತೂರಾಟ ನಡೆದಿದೆ ಎಂದು ಶನಿವಾರ ಬೆಳಿಗ್ಗೆ ವರದಿಯಾಗಿತ್ತು.

“ಬಹುಶಃ ಜನವರಿ 2 ರಂದು ಬೆಳಿಗ್ಗೆ ಭೋಪಾಲ್‌ನಿಂದ ಪಿತಾಮ್‌ಪುರದ ಟಿಎಸ್‌ಡಿಎಫ್‌ಗೆ ತ್ಯಾಜ್ಯವನ್ನು ಸಾಗಿಸಿದ ಬಗ್ಗೆ ಕೆಲವು ವದಂತಿಗಳ ಹಿನ್ನಲೆ, ತಾರ್ಪುರ ಗ್ರಾಮದ 100 ಕ್ಕೂ ಹೆಚ್ಚು ನಿವಾಸಿಗಳು ಸ್ಥಾವರದ ಹೊರಗೆ ಕಲ್ಲು ತೂರಿದ್ದಾರೆ. ಜೊತೆಗೆ ಶನಿವಾರ ಬೆಳಿಗ್ಗೆ ಕರ್ತವ್ಯದಲ್ಲಿದ್ದ ಪೊಲೀಸರ ಕಣ್ಣಿಗೆ ಮೆಣಸಿನ ಪುಡಿ ಎರಚಲು ಪ್ರಯತ್ನಿಸಿದ್ದಾರೆ” ಎಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಆದಾಗ್ಯೂ, ಪೊಲೀಸರು ಮಹಿಳೆಯರು ಸೇರಿದಂತೆ ಗುಂಪನ್ನು ಬೆನ್ನಟ್ಟಿದ್ದು, ಆಕ್ರೋಶಗೊಂಡ ಗ್ರಾಮಸ್ಥರನ್ನು ಚದುರಿಸಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ. ಇಂದು ಸಂಜೆಯ ನಂತರ ಈ ವಿಷಯದ ಬಗ್ಗೆ ಪ್ರಕರಣ ದಾಖಲಿಸಲಾಗುವುದು” ಎಂದು ಪಿತಾಂಪುರ ಪಟ್ಟಣದಲ್ಲಿ ಮೊಕ್ಕಾಂ ಹೂಡಿರುವ ಅವರುತಿಳಿಸಿದ್ದಾರೆ. ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಧಾರ್ ಜಿಲ್ಲಾಡಳಿತದಿಂದ ಪಿತಾಂಪುರ ಪಟ್ಟಣದ ಟಿಎಸ್‌ಡಿಎಫ್ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಅಲ್ಲದೆ, ಶುಕ್ರವಾರ ಪಿತಾಂಪುರ ಬಂದ್ ಕರೆ ವೇಳೆ ಪಿತಾಂಪುರ ಪಟ್ಟಣದಲ್ಲಿ ಪ್ರತಿಭಟನಾಕಾರರು ಸಾರ್ವಜನಿಕ ಗೊಂದಲ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಐದು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಎಫ್‌ಐಆರ್‌ಗಳಲ್ಲಿ ಒಂದು ಪ್ರಕರಣ, ಸಾರ್ವಜನಿಕ ಪ್ರತಿಭಟನೆಯ ಸಂದರ್ಭದಲ್ಲಿ ಇಬ್ಬರು ವ್ಯಕ್ತಿಗಳು ಆತ್ಮಾಹುತಿಗೆ ಯತ್ನಿಸಿ ಸುಟ್ಟ ಗಾಯಗಳಿಗೆ ಒಳಗಾದ ಘಟನೆಗೆ ಸಂಬಂಧಿಸಿದೆ. “ಆ ಘಟನೆಯಲ್ಲಿ ನಡೆಸಲಾಗಿರುವ ತನಿಖೆಯಲ್ಲಿ ವ್ಯಕ್ತಿಗಳಿಗೆ ಬೆಂಕಿ ಹೊತ್ತಿಸಿದ್ದು ಮೂರನೇ ವ್ಯಕ್ತಿ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆಗಳು ನಡೆಯುತ್ತಿವೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಏತನ್ಮಧ್ಯೆ, ಇಂದೋರ್ ಪ್ರದೇಶದ ಆಡಳಿತಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಶನಿವಾರ ಪಿತಾಂಪುರದ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಪ್ರಮುಖ ನಾಗರಿಕರ ಜೊತೆಗೆ ಸುಮಾರು 45 ನಿಮಿಷಗಳ ಕಾಲ ಸಭೆ ನಡೆಸಿದ್ದು, ರಾಜ್ಯದ ಮುಖ್ಯಮಂತ್ರಿಯ ಸಂದೇಶವನ್ನು ರವಾನಿಸಿದ್ದಾರೆ. ಯೋಜಿತ ತ್ಯಾಜ್ಯ ದಹನದ ಬಗ್ಗೆ ಜನರ ಕುಂದುಕೊರತೆಗಳು ಮತ್ತು ಕಳವಳಗಳನ್ನು ಜನವರಿ 6 ರಂದು ಹೈಕೋರ್ಟ್‌ಗೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ್ದು, ಮುಂದಿನ ನ್ಯಾಯಾಲಯದ ನಿರ್ದೇಶನದವರೆಗೆ, TSDF ನಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಏನೂ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ.

ಧಾರ್ ಪ್ರದೇಶವು ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಮೀ ಮತ್ತು ಇಂದೋರ್ ನಗರದಿಂದ 30 ಕಿಮೀ ದೂರದಲ್ಲಿರುವ ಪಿತಾಂಪುರ್ ಮಧ್ಯಪ್ರದೇಶದ ಪ್ರಮುಖ ಕೈಗಾರಿಕಾ ಪಟ್ಟಣವಾಗಿದೆ. ಈ ಪಟ್ಟಣದಲ್ಲಿ 700 ಕಾರ್ಖಾನೆಗಳು (ಅವುಗಳಲ್ಲಿ ಹೆಚ್ಚಿನವು ಆಟೋಮೊಬೈಲ್ ಕ್ಷೇತ್ರಕ್ಕೆ ಸಂಬಂಧಿಸಿವೆ) ಇದ್ದು ಮತ್ತು ಸುಮಾರು 1.75 ಲಕ್ಷ ಜನಸಂಖ್ಯೆಯನ್ನು ಹೊಂದಿದೆ.

ಇದನ್ನೂಓದಿ:  ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...