Homeಚಳವಳಿಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ

ಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ

- Advertisement -
- Advertisement -

ಭೋಪಾಲ್‌ನ ನಿಷ್ಕ್ರಿಯಗೊಂಡ ಯೂನಿಯನ್ ಕಾರ್ಬೈಡ್ ಸ್ಥಾವರದ 40 ವರ್ಷಗಳಷ್ಟು ಹಳೆಯದಾದ 358 ಮೆಟ್ರಿಕ್ ಟನ್ ವಿಷಕಾರಿ ತ್ಯಾಜ್ಯವನ್ನು ದಹಿಸುವುದನ್ನು ವಿರೋಧಿಸಿ ಧಾರ್ ಜಿಲ್ಲೆಯ ಪಿತಾಂಪುರ್ ಕೈಗಾರಿಕಾ ಪಟ್ಟಣದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೆ, ಮಧ್ಯಪ್ರದೇಶ ಸರ್ಕಾರವು ಕೈಗಾರಿಕಾ ಪಟ್ಟಣದ ಆತಂಕಗಳು, ಕಳವಳಗಳು ಮತ್ತು ಭಾವನೆಗಳನ್ನು ನ್ಯಾಯಾಲಯಕ್ಕೆ ತಿಳಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಪಿತಾಂಪುರ್ ಪ್ರತಿಭಟನೆ

“ನಮ್ಮ ಸರ್ಕಾರವು ಸಾರ್ವಜನಿಕ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತದೆ. ಕಳೆದ ತಿಂಗಳ ಹೈಕೋರ್ಟ್ ಆದೇಶದ ಅನ್ವಯ ಯೂನಿಯನ್ ಕಾರ್ಬೈಡ್ ಘಟಕದ ವಿಷಕಾರಿ ತ್ಯಾಜ್ಯವನ್ನು ಪಿತಾಂಪುರದ ತ್ಯಾಜ್ಯ ವಿಲೇವಾರಿ ಕೇಂದ್ರಕ್ಕೆ ಸಾಗಿಸಲಾಗಿದೆ. ಜನವರಿ 6 ರಂದು ಮುಂದಿನ ವಿಚಾರಣೆಯ ದಿನಾಂಕದ ಮೊದಲು ನಾಲ್ಕು ವಾರಗಳಲ್ಲಿ ತ್ಯಾಜ್ಯವನ್ನು ಪಿತಾಂಪುರದಲ್ಲಿರುವ ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಸೌಲಭ್ಯಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸಲು ನಮಗೆ ನಿರ್ದೇಶಿಸಲಾಗಿದೆ” ಎಂದು ಮಧ್ಯಪ್ರದೇಶದ ಸಿಎಂ ಡಾ. ಮೋಹನ್ ಯಾದವ್ ಹೇಳಿದ್ದಾರೆ.

ಸಾರ್ವಜನಿಕರ ಕಾಳಜಿ ಮತ್ತು ಆತಂಕಗಳನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ನ್ಯಾಯಾಲಯದ ಆದೇಶದವರೆಗೆ ಈ ವಿಷಯದಲ್ಲಿ (ತ್ಯಾಜ್ಯವನ್ನು ಸುಡುವ ಬಗ್ಗೆ) ಯಾವುದೇ ಚಟುವಟಿಕೆ ಮಾಡದಿರಲು ನಾವು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದ್ದಾರೆ. ಪಿತಾಂಪುರ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸರ್ಕಾರವು ಯೋಜಿತ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಸ್ಥಳೀಯ ನಿವಾಸಿಗಳ ಸಂಪೂರ್ಣ ಕಾಳಜಿ, ಭಾವನೆಗಳು ಮತ್ತು ಆತಂಕಗಳನ್ನು ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸುತ್ತದೆ. ಮುಂದಿನ ಕ್ರಮಕ್ಕಾಗಿ ಮುಂದಿನ ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತದೆ ಎಂದು ಸಿಎಂ ಹೇಳಿದ್ದಾರೆ. ಶುಕ್ರವಾರ ತಡರಾತ್ರಿ ಭೋಪಾಲ್‌ನಲ್ಲಿ ಈ ವಿಷಯದ ಕುರಿತು ಸರ್ಕಾರದ ಉನ್ನತ ಅಧಿಕಾರಿಗಳ ಸುದೀರ್ಘ ತುರ್ತು ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಅವರು ಈ ಬಗ್ಗೆ ಹೇಳಿದ್ದಾರೆ.

2004 ರ ಡಿಸೆಂಬರ್ 3 ರಂದು ಭೋಪಾಲ್‌ನಿಂದ (ಯೋಜಿತ ವಿಲೇವಾರಿಗಾಗಿ) ವಿಷಕಾರಿ ತ್ಯಾಜ್ಯವನ್ನು ನಾಲ್ಕು ವಾರಗಳಲ್ಲಿ ಸ್ಥಳಾಂತರಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಿದ 2004 ರ ಅರ್ಜಿಯ ವಿಚಾರಣೆಯನ್ನು ಮಧ್ಯಪ್ರದೇಶ ಹೈಕೋರ್ಟ್ ಜನವರಿ 6 ರಂದು ನಡೆಸಲಿದೆ.

ಭೋಪಾಲ್‌ನಲ್ಲಿ ಶುಕ್ರವಾರ ತಡರಾತ್ರಿ ನಡೆದ ತುರ್ತು ಸಭೆಯ 11 ಗಂಟೆಗಳ ನಂತರ, 358 ಟನ್ ವಿಷಕಾರಿ ತ್ಯಾಜ್ಯವನ್ನು ಸುಡಲು ಯೋಜಿಸಲಾಗಿರುವ ಸಂಸ್ಕರಣೆ-ಶೇಖರಣೆ-ವಿಲೇವಾರಿ ಸ್ಥಾವರದ (ಟಿಎಸ್‌ಡಿಎಫ್) ಹೊರಗೆ ಸ್ಥಳೀಯ ನಿವಾಸಿಗಳಿಂದ ಕಲ್ಲು ತೂರಾಟ ನಡೆದಿದೆ ಎಂದು ಶನಿವಾರ ಬೆಳಿಗ್ಗೆ ವರದಿಯಾಗಿತ್ತು.

“ಬಹುಶಃ ಜನವರಿ 2 ರಂದು ಬೆಳಿಗ್ಗೆ ಭೋಪಾಲ್‌ನಿಂದ ಪಿತಾಮ್‌ಪುರದ ಟಿಎಸ್‌ಡಿಎಫ್‌ಗೆ ತ್ಯಾಜ್ಯವನ್ನು ಸಾಗಿಸಿದ ಬಗ್ಗೆ ಕೆಲವು ವದಂತಿಗಳ ಹಿನ್ನಲೆ, ತಾರ್ಪುರ ಗ್ರಾಮದ 100 ಕ್ಕೂ ಹೆಚ್ಚು ನಿವಾಸಿಗಳು ಸ್ಥಾವರದ ಹೊರಗೆ ಕಲ್ಲು ತೂರಿದ್ದಾರೆ. ಜೊತೆಗೆ ಶನಿವಾರ ಬೆಳಿಗ್ಗೆ ಕರ್ತವ್ಯದಲ್ಲಿದ್ದ ಪೊಲೀಸರ ಕಣ್ಣಿಗೆ ಮೆಣಸಿನ ಪುಡಿ ಎರಚಲು ಪ್ರಯತ್ನಿಸಿದ್ದಾರೆ” ಎಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಆದಾಗ್ಯೂ, ಪೊಲೀಸರು ಮಹಿಳೆಯರು ಸೇರಿದಂತೆ ಗುಂಪನ್ನು ಬೆನ್ನಟ್ಟಿದ್ದು, ಆಕ್ರೋಶಗೊಂಡ ಗ್ರಾಮಸ್ಥರನ್ನು ಚದುರಿಸಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ. ಇಂದು ಸಂಜೆಯ ನಂತರ ಈ ವಿಷಯದ ಬಗ್ಗೆ ಪ್ರಕರಣ ದಾಖಲಿಸಲಾಗುವುದು” ಎಂದು ಪಿತಾಂಪುರ ಪಟ್ಟಣದಲ್ಲಿ ಮೊಕ್ಕಾಂ ಹೂಡಿರುವ ಅವರುತಿಳಿಸಿದ್ದಾರೆ. ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಧಾರ್ ಜಿಲ್ಲಾಡಳಿತದಿಂದ ಪಿತಾಂಪುರ ಪಟ್ಟಣದ ಟಿಎಸ್‌ಡಿಎಫ್ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಅಲ್ಲದೆ, ಶುಕ್ರವಾರ ಪಿತಾಂಪುರ ಬಂದ್ ಕರೆ ವೇಳೆ ಪಿತಾಂಪುರ ಪಟ್ಟಣದಲ್ಲಿ ಪ್ರತಿಭಟನಾಕಾರರು ಸಾರ್ವಜನಿಕ ಗೊಂದಲ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಐದು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಎಫ್‌ಐಆರ್‌ಗಳಲ್ಲಿ ಒಂದು ಪ್ರಕರಣ, ಸಾರ್ವಜನಿಕ ಪ್ರತಿಭಟನೆಯ ಸಂದರ್ಭದಲ್ಲಿ ಇಬ್ಬರು ವ್ಯಕ್ತಿಗಳು ಆತ್ಮಾಹುತಿಗೆ ಯತ್ನಿಸಿ ಸುಟ್ಟ ಗಾಯಗಳಿಗೆ ಒಳಗಾದ ಘಟನೆಗೆ ಸಂಬಂಧಿಸಿದೆ. “ಆ ಘಟನೆಯಲ್ಲಿ ನಡೆಸಲಾಗಿರುವ ತನಿಖೆಯಲ್ಲಿ ವ್ಯಕ್ತಿಗಳಿಗೆ ಬೆಂಕಿ ಹೊತ್ತಿಸಿದ್ದು ಮೂರನೇ ವ್ಯಕ್ತಿ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆಗಳು ನಡೆಯುತ್ತಿವೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಏತನ್ಮಧ್ಯೆ, ಇಂದೋರ್ ಪ್ರದೇಶದ ಆಡಳಿತಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಶನಿವಾರ ಪಿತಾಂಪುರದ ಸಾರ್ವಜನಿಕ ಪ್ರತಿನಿಧಿಗಳು ಮತ್ತು ಪ್ರಮುಖ ನಾಗರಿಕರ ಜೊತೆಗೆ ಸುಮಾರು 45 ನಿಮಿಷಗಳ ಕಾಲ ಸಭೆ ನಡೆಸಿದ್ದು, ರಾಜ್ಯದ ಮುಖ್ಯಮಂತ್ರಿಯ ಸಂದೇಶವನ್ನು ರವಾನಿಸಿದ್ದಾರೆ. ಯೋಜಿತ ತ್ಯಾಜ್ಯ ದಹನದ ಬಗ್ಗೆ ಜನರ ಕುಂದುಕೊರತೆಗಳು ಮತ್ತು ಕಳವಳಗಳನ್ನು ಜನವರಿ 6 ರಂದು ಹೈಕೋರ್ಟ್‌ಗೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ್ದು, ಮುಂದಿನ ನ್ಯಾಯಾಲಯದ ನಿರ್ದೇಶನದವರೆಗೆ, TSDF ನಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಏನೂ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ.

ಧಾರ್ ಪ್ರದೇಶವು ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಮೀ ಮತ್ತು ಇಂದೋರ್ ನಗರದಿಂದ 30 ಕಿಮೀ ದೂರದಲ್ಲಿರುವ ಪಿತಾಂಪುರ್ ಮಧ್ಯಪ್ರದೇಶದ ಪ್ರಮುಖ ಕೈಗಾರಿಕಾ ಪಟ್ಟಣವಾಗಿದೆ. ಈ ಪಟ್ಟಣದಲ್ಲಿ 700 ಕಾರ್ಖಾನೆಗಳು (ಅವುಗಳಲ್ಲಿ ಹೆಚ್ಚಿನವು ಆಟೋಮೊಬೈಲ್ ಕ್ಷೇತ್ರಕ್ಕೆ ಸಂಬಂಧಿಸಿವೆ) ಇದ್ದು ಮತ್ತು ಸುಮಾರು 1.75 ಲಕ್ಷ ಜನಸಂಖ್ಯೆಯನ್ನು ಹೊಂದಿದೆ.

ಇದನ್ನೂಓದಿ:  ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಯಿಂದ ದುಷ್ಪರಿಣಾಮವಿಲ್ಲವೆಂಬ ಪ್ರಮಾಣ ಮಾಡುವಂತೆ ಕೋರಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...