Homeಮುಖಪುಟಪೂಜಾ ಸ್ಥಳಗಳ ಕಾಯ್ದೆ ಸಂಬಂಧ ಹೊಸ ಅರ್ಜಿ ಸಲ್ಲಿಕೆಗೆ ಸುಪ್ರೀಂಕೋರ್ಟ್ ಅಸಮಾಧಾನ!

ಪೂಜಾ ಸ್ಥಳಗಳ ಕಾಯ್ದೆ ಸಂಬಂಧ ಹೊಸ ಅರ್ಜಿ ಸಲ್ಲಿಕೆಗೆ ಸುಪ್ರೀಂಕೋರ್ಟ್ ಅಸಮಾಧಾನ!

- Advertisement -
- Advertisement -

ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿದ್ದ ಸ್ಥಳದ ಧಾರ್ಮಿಕ ಸ್ವರೂಪವನ್ನು ಅದೇ ಸ್ಥಿತಿಯಲ್ಲಿ ಕಾಪಾಡಿಕೊಳ್ಳಬೇಕೆಂದು ಆದೇಶಿಸುವ 1991 ರ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆಯ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಹಲವಾರು ಹೊಸ ಅರ್ಜಿಗಳನ್ನು ಸಲ್ಲಿಸಿರುವ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದೆ. ಪೂಜಾ ಸ್ಥಳಗಳ ಕಾಯ್ದೆ

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು, ಇಬ್ಬರು ನ್ಯಾಯಾಧೀಶರ ಸಂಯೋಜನೆಯಲ್ಲಿ ವಿಚಾರಣೆ ನಡೆಸುತ್ತಿರುವುದರಿಂದ, ಈ ಹಿಂದೆ ಮೂವರು ನ್ಯಾಯಾಧೀಶರ ಪೀಠವು ವಿಚಾರಣೆ ನಡೆಸಿದ ಬಾಕಿ ಉಳಿದಿರುವ ನಿಗದಿತ ಅರ್ಜಿಗಳನ್ನು ವಿಚಾರಣೆಯಲ್ಲಿ ಕೈಗೆತ್ತಿಕೊಳ್ಳಲಾಗುವುದಿಲ್ಲ ಎಂದು ಸೂಚಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ಅದನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗದಿರಬಹುದು” ಎಂದು ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರ ಅರ್ಜಿ ವಿಚಾರಣೆಗೆ ಹೊಸ ಅರ್ಜಿಯನ್ನು ಪ್ರಸ್ತಾಪಿಸಿದಾಗ ಸಿಜೆಐ ಹೇಳಿದ್ದಾರೆ. ವಿಚಾರಣೆಯ ಆರಂಭದಲ್ಲಿ ಜೈಸಿಂಗ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದರು.

“ಅರ್ಜಿಗಳನ್ನು ಸಲ್ಲಿಸಲು ಕೂಡಾ ಮಿತಿ ಇದೆ. ಹಲವು ಮಧ್ಯಂತರ ಅರ್ಜಿಗಳನ್ನು ಸಲ್ಲಿಸಲಾಗಿದೆ… ನಾವು ಅದನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗದಿರಬಹುದು” ಎಂದು ಸಿಜೆಐ ಹೇಳಿದ್ದಾರೆ. ಈ ಅರ್ಜಿಗಳಿಗೆ ಮಾರ್ಚ್‌ನಲ್ಲಿ ದಿನಾಂಕವನ್ನು ನೀಡಬಹುದು ಎಂದು ಅವರು ಹೇಳಿದ್ದಾರೆ. ಪೂಜಾ ಸ್ಥಳಗಳ ಕಾಯ್ದೆ

ಡಿಸೆಂಬರ್ 12, 2024 ರಂದು ಸುಪ್ರಿಂಕೋರ್ಟ್‌ ನೀಡಿದ್ದ ಆದೇಶದ ಮೂಲಕ, ವಾರಣಾಸಿಯ ಜ್ಞಾನವಾಪಿ, ಮಥುರಾದ ಶಾಹಿ ಈದ್ಗಾ ಮಸೀದಿ ಮತ್ತು ಸಂಭಾಲ್‌ನ ಶಾಹಿ ಜಾಮಾ ಮಸೀದಿ ಸೇರಿದಂತೆ 10 ಮಸೀದಿಗಳ ‘ಮೂಲ ಧಾರ್ಮಿಕ ಸ್ವರೂಪ’ವನ್ನು ಖಚಿತಪಡಿಸಿಕೊಳ್ಳಲು ಸಮೀಕ್ಷೆ ನಡೆಸಲು ನಿರ್ದೇಶನ ನೀಡಬೇಕು ಎಂದು ಕೋರಿ ಬಿಜೆಪಿ ಬೆಂಬಲಿಗರು ಸಲ್ಲಿಸಿದ್ದ ಸುಮಾರು 18 ಮೊಕದ್ದಮೆಗಳಲ್ಲಿ ವಿಚಾರಣೆಯನ್ನು ಪರಿಣಾಮಕಾರಿಯಾಗಿ ಸ್ಥಗಿತಗೊಳಿಸಿತು.

ಅದಕ್ಕೂ ಮೊದಲು ಸಂಭಾಲ್‌ನಲ್ಲಿ ಕೆಳ ಹಂತದ ನ್ಯಾಯಾಲಯದ ಆದೇಶದ ಮೇರೆಗೆ ನಡೆಸಲಾಗುತ್ತಿದ್ದ ಸಮೀಕ್ಷೆಯ ಸಮಯದಲ್ಲಿ ಪೊಲೀಸ್ ಗುಂಡಿನ ದಾಳಿಯಲ್ಲಿ ಅಪ್ರಾಪ್ತ ವಯಸ್ಕ ಸೇರಿದಂತೆ ಐದು ಮುಸ್ಲಿಂ ಯುವಕರು ಸಾವನ್ನಪ್ಪಿದ್ದರು. ಇದರ ನಂತರ ನಂತರ ಸುಪ್ರಿಂಕೋರ್ಟ್ ಫೆಬ್ರವರಿ 17 ರಂದು ಪರಿಣಾಮಕಾರಿ ವಿಚಾರಣೆಗೆ ಎಲ್ಲಾ ಅರ್ಜಿಗಳನ್ನು ಪಟ್ಟಿ ಮಾಡಿತ್ತು.

ಡಿಸೆಂಬರ್ 12 ರ ನಂತರ ಪೂಜಾ ಸ್ಥಳಗಳ ಕಾಯಿದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಕೋರಿ, AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಸಮಾಜವಾದಿ ಪಕ್ಷದ ನಾಯಕಿ, ಕೈರಾನಾ ಸಂಸದೆ ಇಕ್ರಾ ಚೌಧರಿ ಮತ್ತು ಕಾಂಗ್ರೆಸ್ ಪಕ್ಷ ಸೇರಿದಂತೆ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿದೆ.

ಫೆಬ್ರವರಿ 14 ರಂದು ಉತ್ತರ ಪ್ರದೇಶದ ಕೈರಾನಾದ ಲೋಕಸಭಾ ಸಂಸದೆ ಚೌಧರಿ ಅವರು, ಮಸೀದಿಗಳು ಮತ್ತು ದರ್ಗಾಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಕಾನೂನು ಕ್ರಮಗಳು ಕೋಮು ಸಾಮರಸ್ಯ ಮತ್ತು ದೇಶದ ಜಾತ್ಯತೀತ ಸಂರಚನೆಗೆ ಧಕ್ಕೆ ತರುತ್ತಿವೆ ಎಂದು ಅರ್ಜಿ ಸಲ್ಲಿಸಿದ್ದು, ಈ ರೀತಿಯ ಪ್ರವೃತ್ತಿ ಹೆಚ್ಚುತ್ತಿದ್ದು, ಅದನ್ನು ತಡೆಯುವಂತೆ ಕೋರಿದ್ದಾರೆ. ಇದೇ ರೀತಿಯ ಅರ್ಜಿಯನ್ನು ಓವೈಸಿ ಅವರ ಪ್ರತ್ಯೇಕ ಅರ್ಜಿಯಲ್ಲಿ ಪರಿಶೀಲಿಸಲು ಸುಪ್ರೀಂ ಕೋರ್ಟ್ ಈ ಹಿಂದೆ ಒಪ್ಪಿಕೊಂಡಿತ್ತು.

1991 ರ ಕಾನೂನಿನ ನಿಬಂಧನೆಗಳ ಸಿಂಧುತ್ವದ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಬಿಜೆಪಿ ಪರ ಸಂಘಟನೆಗಳು ಸುಪ್ರಿಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದಕ್ಕೂ ಮೊದಲು, 1991 ರ ಕಾನೂನಿನ ವಿವಿಧ ನಿಬಂಧನೆಗಳನ್ನು ಪ್ರಶ್ನಿಸಿ ವಕೀಲ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ ಪ್ರಮುಖ ಅರ್ಜಿ ಸೇರಿದಂತೆ ಆರು ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿತ್ತು.

1991ರ ಈ ಕಾನೂನು ಯಾವುದೇ ಪೂಜಾ ಸ್ಥಳವನ್ನು ಪರಿವರ್ತಿಸುವುದನ್ನು ನಿಷೇಧಿಸುತ್ತದೆ ಮತ್ತು ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿದ್ದ ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಹಾಗೆಯೆ ಕಾಪಾಡಿಕೊಳ್ಳಲು ಅವಕಾಶ ನೀಡುತ್ತದೆ. ಆದಾಗ್ಯೂ, ಅಯೋಧ್ಯೆಯಲ್ಲಿ ಬಾಬರಿ ಮಸೀದಿಗೆ ಸಂಬಂಧಿಸಿದ ವಿವಾದವನ್ನು ಈ ಕಾನೂನಿನ ವ್ಯಾಪ್ತಿಯಿಂದ ಹೊರಗಿಡಲಾಗಿತ್ತು.

ಇದನ್ನೂಓದಿ:  ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ ಬಂಧನ

ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...