Homeಮುಖಪುಟಪೂಜಾ ಸ್ಥಳಗಳ ಕಾಯ್ದೆ ಸಂಬಂಧ ಹೊಸ ಅರ್ಜಿ ಸಲ್ಲಿಕೆಗೆ ಸುಪ್ರೀಂಕೋರ್ಟ್ ಅಸಮಾಧಾನ!

ಪೂಜಾ ಸ್ಥಳಗಳ ಕಾಯ್ದೆ ಸಂಬಂಧ ಹೊಸ ಅರ್ಜಿ ಸಲ್ಲಿಕೆಗೆ ಸುಪ್ರೀಂಕೋರ್ಟ್ ಅಸಮಾಧಾನ!

- Advertisement -
- Advertisement -

ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿದ್ದ ಸ್ಥಳದ ಧಾರ್ಮಿಕ ಸ್ವರೂಪವನ್ನು ಅದೇ ಸ್ಥಿತಿಯಲ್ಲಿ ಕಾಪಾಡಿಕೊಳ್ಳಬೇಕೆಂದು ಆದೇಶಿಸುವ 1991 ರ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆಯ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಹಲವಾರು ಹೊಸ ಅರ್ಜಿಗಳನ್ನು ಸಲ್ಲಿಸಿರುವ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದೆ. ಪೂಜಾ ಸ್ಥಳಗಳ ಕಾಯ್ದೆ

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು, ಇಬ್ಬರು ನ್ಯಾಯಾಧೀಶರ ಸಂಯೋಜನೆಯಲ್ಲಿ ವಿಚಾರಣೆ ನಡೆಸುತ್ತಿರುವುದರಿಂದ, ಈ ಹಿಂದೆ ಮೂವರು ನ್ಯಾಯಾಧೀಶರ ಪೀಠವು ವಿಚಾರಣೆ ನಡೆಸಿದ ಬಾಕಿ ಉಳಿದಿರುವ ನಿಗದಿತ ಅರ್ಜಿಗಳನ್ನು ವಿಚಾರಣೆಯಲ್ಲಿ ಕೈಗೆತ್ತಿಕೊಳ್ಳಲಾಗುವುದಿಲ್ಲ ಎಂದು ಸೂಚಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ಅದನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗದಿರಬಹುದು” ಎಂದು ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರ ಅರ್ಜಿ ವಿಚಾರಣೆಗೆ ಹೊಸ ಅರ್ಜಿಯನ್ನು ಪ್ರಸ್ತಾಪಿಸಿದಾಗ ಸಿಜೆಐ ಹೇಳಿದ್ದಾರೆ. ವಿಚಾರಣೆಯ ಆರಂಭದಲ್ಲಿ ಜೈಸಿಂಗ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದರು.

“ಅರ್ಜಿಗಳನ್ನು ಸಲ್ಲಿಸಲು ಕೂಡಾ ಮಿತಿ ಇದೆ. ಹಲವು ಮಧ್ಯಂತರ ಅರ್ಜಿಗಳನ್ನು ಸಲ್ಲಿಸಲಾಗಿದೆ… ನಾವು ಅದನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗದಿರಬಹುದು” ಎಂದು ಸಿಜೆಐ ಹೇಳಿದ್ದಾರೆ. ಈ ಅರ್ಜಿಗಳಿಗೆ ಮಾರ್ಚ್‌ನಲ್ಲಿ ದಿನಾಂಕವನ್ನು ನೀಡಬಹುದು ಎಂದು ಅವರು ಹೇಳಿದ್ದಾರೆ. ಪೂಜಾ ಸ್ಥಳಗಳ ಕಾಯ್ದೆ

ಡಿಸೆಂಬರ್ 12, 2024 ರಂದು ಸುಪ್ರಿಂಕೋರ್ಟ್‌ ನೀಡಿದ್ದ ಆದೇಶದ ಮೂಲಕ, ವಾರಣಾಸಿಯ ಜ್ಞಾನವಾಪಿ, ಮಥುರಾದ ಶಾಹಿ ಈದ್ಗಾ ಮಸೀದಿ ಮತ್ತು ಸಂಭಾಲ್‌ನ ಶಾಹಿ ಜಾಮಾ ಮಸೀದಿ ಸೇರಿದಂತೆ 10 ಮಸೀದಿಗಳ ‘ಮೂಲ ಧಾರ್ಮಿಕ ಸ್ವರೂಪ’ವನ್ನು ಖಚಿತಪಡಿಸಿಕೊಳ್ಳಲು ಸಮೀಕ್ಷೆ ನಡೆಸಲು ನಿರ್ದೇಶನ ನೀಡಬೇಕು ಎಂದು ಕೋರಿ ಬಿಜೆಪಿ ಬೆಂಬಲಿಗರು ಸಲ್ಲಿಸಿದ್ದ ಸುಮಾರು 18 ಮೊಕದ್ದಮೆಗಳಲ್ಲಿ ವಿಚಾರಣೆಯನ್ನು ಪರಿಣಾಮಕಾರಿಯಾಗಿ ಸ್ಥಗಿತಗೊಳಿಸಿತು.

ಅದಕ್ಕೂ ಮೊದಲು ಸಂಭಾಲ್‌ನಲ್ಲಿ ಕೆಳ ಹಂತದ ನ್ಯಾಯಾಲಯದ ಆದೇಶದ ಮೇರೆಗೆ ನಡೆಸಲಾಗುತ್ತಿದ್ದ ಸಮೀಕ್ಷೆಯ ಸಮಯದಲ್ಲಿ ಪೊಲೀಸ್ ಗುಂಡಿನ ದಾಳಿಯಲ್ಲಿ ಅಪ್ರಾಪ್ತ ವಯಸ್ಕ ಸೇರಿದಂತೆ ಐದು ಮುಸ್ಲಿಂ ಯುವಕರು ಸಾವನ್ನಪ್ಪಿದ್ದರು. ಇದರ ನಂತರ ನಂತರ ಸುಪ್ರಿಂಕೋರ್ಟ್ ಫೆಬ್ರವರಿ 17 ರಂದು ಪರಿಣಾಮಕಾರಿ ವಿಚಾರಣೆಗೆ ಎಲ್ಲಾ ಅರ್ಜಿಗಳನ್ನು ಪಟ್ಟಿ ಮಾಡಿತ್ತು.

ಡಿಸೆಂಬರ್ 12 ರ ನಂತರ ಪೂಜಾ ಸ್ಥಳಗಳ ಕಾಯಿದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಕೋರಿ, AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಸಮಾಜವಾದಿ ಪಕ್ಷದ ನಾಯಕಿ, ಕೈರಾನಾ ಸಂಸದೆ ಇಕ್ರಾ ಚೌಧರಿ ಮತ್ತು ಕಾಂಗ್ರೆಸ್ ಪಕ್ಷ ಸೇರಿದಂತೆ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿದೆ.

ಫೆಬ್ರವರಿ 14 ರಂದು ಉತ್ತರ ಪ್ರದೇಶದ ಕೈರಾನಾದ ಲೋಕಸಭಾ ಸಂಸದೆ ಚೌಧರಿ ಅವರು, ಮಸೀದಿಗಳು ಮತ್ತು ದರ್ಗಾಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಕಾನೂನು ಕ್ರಮಗಳು ಕೋಮು ಸಾಮರಸ್ಯ ಮತ್ತು ದೇಶದ ಜಾತ್ಯತೀತ ಸಂರಚನೆಗೆ ಧಕ್ಕೆ ತರುತ್ತಿವೆ ಎಂದು ಅರ್ಜಿ ಸಲ್ಲಿಸಿದ್ದು, ಈ ರೀತಿಯ ಪ್ರವೃತ್ತಿ ಹೆಚ್ಚುತ್ತಿದ್ದು, ಅದನ್ನು ತಡೆಯುವಂತೆ ಕೋರಿದ್ದಾರೆ. ಇದೇ ರೀತಿಯ ಅರ್ಜಿಯನ್ನು ಓವೈಸಿ ಅವರ ಪ್ರತ್ಯೇಕ ಅರ್ಜಿಯಲ್ಲಿ ಪರಿಶೀಲಿಸಲು ಸುಪ್ರೀಂ ಕೋರ್ಟ್ ಈ ಹಿಂದೆ ಒಪ್ಪಿಕೊಂಡಿತ್ತು.

1991 ರ ಕಾನೂನಿನ ನಿಬಂಧನೆಗಳ ಸಿಂಧುತ್ವದ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಬಿಜೆಪಿ ಪರ ಸಂಘಟನೆಗಳು ಸುಪ್ರಿಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದಕ್ಕೂ ಮೊದಲು, 1991 ರ ಕಾನೂನಿನ ವಿವಿಧ ನಿಬಂಧನೆಗಳನ್ನು ಪ್ರಶ್ನಿಸಿ ವಕೀಲ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ ಪ್ರಮುಖ ಅರ್ಜಿ ಸೇರಿದಂತೆ ಆರು ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿತ್ತು.

1991ರ ಈ ಕಾನೂನು ಯಾವುದೇ ಪೂಜಾ ಸ್ಥಳವನ್ನು ಪರಿವರ್ತಿಸುವುದನ್ನು ನಿಷೇಧಿಸುತ್ತದೆ ಮತ್ತು ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿದ್ದ ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಹಾಗೆಯೆ ಕಾಪಾಡಿಕೊಳ್ಳಲು ಅವಕಾಶ ನೀಡುತ್ತದೆ. ಆದಾಗ್ಯೂ, ಅಯೋಧ್ಯೆಯಲ್ಲಿ ಬಾಬರಿ ಮಸೀದಿಗೆ ಸಂಬಂಧಿಸಿದ ವಿವಾದವನ್ನು ಈ ಕಾನೂನಿನ ವ್ಯಾಪ್ತಿಯಿಂದ ಹೊರಗಿಡಲಾಗಿತ್ತು.

ಇದನ್ನೂಓದಿ:  ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ ಬಂಧನ

ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...