Homeಮುಖಪುಟಪೂಜಾ ಸ್ಥಳಗಳ ಕಾಯ್ದೆ ಸಂಬಂಧ ಹೊಸ ಅರ್ಜಿ ಸಲ್ಲಿಕೆಗೆ ಸುಪ್ರೀಂಕೋರ್ಟ್ ಅಸಮಾಧಾನ!

ಪೂಜಾ ಸ್ಥಳಗಳ ಕಾಯ್ದೆ ಸಂಬಂಧ ಹೊಸ ಅರ್ಜಿ ಸಲ್ಲಿಕೆಗೆ ಸುಪ್ರೀಂಕೋರ್ಟ್ ಅಸಮಾಧಾನ!

- Advertisement -
- Advertisement -

ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿದ್ದ ಸ್ಥಳದ ಧಾರ್ಮಿಕ ಸ್ವರೂಪವನ್ನು ಅದೇ ಸ್ಥಿತಿಯಲ್ಲಿ ಕಾಪಾಡಿಕೊಳ್ಳಬೇಕೆಂದು ಆದೇಶಿಸುವ 1991 ರ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆಯ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಹಲವಾರು ಹೊಸ ಅರ್ಜಿಗಳನ್ನು ಸಲ್ಲಿಸಿರುವ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದೆ. ಪೂಜಾ ಸ್ಥಳಗಳ ಕಾಯ್ದೆ

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು, ಇಬ್ಬರು ನ್ಯಾಯಾಧೀಶರ ಸಂಯೋಜನೆಯಲ್ಲಿ ವಿಚಾರಣೆ ನಡೆಸುತ್ತಿರುವುದರಿಂದ, ಈ ಹಿಂದೆ ಮೂವರು ನ್ಯಾಯಾಧೀಶರ ಪೀಠವು ವಿಚಾರಣೆ ನಡೆಸಿದ ಬಾಕಿ ಉಳಿದಿರುವ ನಿಗದಿತ ಅರ್ಜಿಗಳನ್ನು ವಿಚಾರಣೆಯಲ್ಲಿ ಕೈಗೆತ್ತಿಕೊಳ್ಳಲಾಗುವುದಿಲ್ಲ ಎಂದು ಸೂಚಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ಅದನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗದಿರಬಹುದು” ಎಂದು ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರ ಅರ್ಜಿ ವಿಚಾರಣೆಗೆ ಹೊಸ ಅರ್ಜಿಯನ್ನು ಪ್ರಸ್ತಾಪಿಸಿದಾಗ ಸಿಜೆಐ ಹೇಳಿದ್ದಾರೆ. ವಿಚಾರಣೆಯ ಆರಂಭದಲ್ಲಿ ಜೈಸಿಂಗ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದರು.

“ಅರ್ಜಿಗಳನ್ನು ಸಲ್ಲಿಸಲು ಕೂಡಾ ಮಿತಿ ಇದೆ. ಹಲವು ಮಧ್ಯಂತರ ಅರ್ಜಿಗಳನ್ನು ಸಲ್ಲಿಸಲಾಗಿದೆ… ನಾವು ಅದನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗದಿರಬಹುದು” ಎಂದು ಸಿಜೆಐ ಹೇಳಿದ್ದಾರೆ. ಈ ಅರ್ಜಿಗಳಿಗೆ ಮಾರ್ಚ್‌ನಲ್ಲಿ ದಿನಾಂಕವನ್ನು ನೀಡಬಹುದು ಎಂದು ಅವರು ಹೇಳಿದ್ದಾರೆ. ಪೂಜಾ ಸ್ಥಳಗಳ ಕಾಯ್ದೆ

ಡಿಸೆಂಬರ್ 12, 2024 ರಂದು ಸುಪ್ರಿಂಕೋರ್ಟ್‌ ನೀಡಿದ್ದ ಆದೇಶದ ಮೂಲಕ, ವಾರಣಾಸಿಯ ಜ್ಞಾನವಾಪಿ, ಮಥುರಾದ ಶಾಹಿ ಈದ್ಗಾ ಮಸೀದಿ ಮತ್ತು ಸಂಭಾಲ್‌ನ ಶಾಹಿ ಜಾಮಾ ಮಸೀದಿ ಸೇರಿದಂತೆ 10 ಮಸೀದಿಗಳ ‘ಮೂಲ ಧಾರ್ಮಿಕ ಸ್ವರೂಪ’ವನ್ನು ಖಚಿತಪಡಿಸಿಕೊಳ್ಳಲು ಸಮೀಕ್ಷೆ ನಡೆಸಲು ನಿರ್ದೇಶನ ನೀಡಬೇಕು ಎಂದು ಕೋರಿ ಬಿಜೆಪಿ ಬೆಂಬಲಿಗರು ಸಲ್ಲಿಸಿದ್ದ ಸುಮಾರು 18 ಮೊಕದ್ದಮೆಗಳಲ್ಲಿ ವಿಚಾರಣೆಯನ್ನು ಪರಿಣಾಮಕಾರಿಯಾಗಿ ಸ್ಥಗಿತಗೊಳಿಸಿತು.

ಅದಕ್ಕೂ ಮೊದಲು ಸಂಭಾಲ್‌ನಲ್ಲಿ ಕೆಳ ಹಂತದ ನ್ಯಾಯಾಲಯದ ಆದೇಶದ ಮೇರೆಗೆ ನಡೆಸಲಾಗುತ್ತಿದ್ದ ಸಮೀಕ್ಷೆಯ ಸಮಯದಲ್ಲಿ ಪೊಲೀಸ್ ಗುಂಡಿನ ದಾಳಿಯಲ್ಲಿ ಅಪ್ರಾಪ್ತ ವಯಸ್ಕ ಸೇರಿದಂತೆ ಐದು ಮುಸ್ಲಿಂ ಯುವಕರು ಸಾವನ್ನಪ್ಪಿದ್ದರು. ಇದರ ನಂತರ ನಂತರ ಸುಪ್ರಿಂಕೋರ್ಟ್ ಫೆಬ್ರವರಿ 17 ರಂದು ಪರಿಣಾಮಕಾರಿ ವಿಚಾರಣೆಗೆ ಎಲ್ಲಾ ಅರ್ಜಿಗಳನ್ನು ಪಟ್ಟಿ ಮಾಡಿತ್ತು.

ಡಿಸೆಂಬರ್ 12 ರ ನಂತರ ಪೂಜಾ ಸ್ಥಳಗಳ ಕಾಯಿದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಕೋರಿ, AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಸಮಾಜವಾದಿ ಪಕ್ಷದ ನಾಯಕಿ, ಕೈರಾನಾ ಸಂಸದೆ ಇಕ್ರಾ ಚೌಧರಿ ಮತ್ತು ಕಾಂಗ್ರೆಸ್ ಪಕ್ಷ ಸೇರಿದಂತೆ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿದೆ.

ಫೆಬ್ರವರಿ 14 ರಂದು ಉತ್ತರ ಪ್ರದೇಶದ ಕೈರಾನಾದ ಲೋಕಸಭಾ ಸಂಸದೆ ಚೌಧರಿ ಅವರು, ಮಸೀದಿಗಳು ಮತ್ತು ದರ್ಗಾಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಕಾನೂನು ಕ್ರಮಗಳು ಕೋಮು ಸಾಮರಸ್ಯ ಮತ್ತು ದೇಶದ ಜಾತ್ಯತೀತ ಸಂರಚನೆಗೆ ಧಕ್ಕೆ ತರುತ್ತಿವೆ ಎಂದು ಅರ್ಜಿ ಸಲ್ಲಿಸಿದ್ದು, ಈ ರೀತಿಯ ಪ್ರವೃತ್ತಿ ಹೆಚ್ಚುತ್ತಿದ್ದು, ಅದನ್ನು ತಡೆಯುವಂತೆ ಕೋರಿದ್ದಾರೆ. ಇದೇ ರೀತಿಯ ಅರ್ಜಿಯನ್ನು ಓವೈಸಿ ಅವರ ಪ್ರತ್ಯೇಕ ಅರ್ಜಿಯಲ್ಲಿ ಪರಿಶೀಲಿಸಲು ಸುಪ್ರೀಂ ಕೋರ್ಟ್ ಈ ಹಿಂದೆ ಒಪ್ಪಿಕೊಂಡಿತ್ತು.

1991 ರ ಕಾನೂನಿನ ನಿಬಂಧನೆಗಳ ಸಿಂಧುತ್ವದ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಬಿಜೆಪಿ ಪರ ಸಂಘಟನೆಗಳು ಸುಪ್ರಿಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದಕ್ಕೂ ಮೊದಲು, 1991 ರ ಕಾನೂನಿನ ವಿವಿಧ ನಿಬಂಧನೆಗಳನ್ನು ಪ್ರಶ್ನಿಸಿ ವಕೀಲ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ ಪ್ರಮುಖ ಅರ್ಜಿ ಸೇರಿದಂತೆ ಆರು ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿತ್ತು.

1991ರ ಈ ಕಾನೂನು ಯಾವುದೇ ಪೂಜಾ ಸ್ಥಳವನ್ನು ಪರಿವರ್ತಿಸುವುದನ್ನು ನಿಷೇಧಿಸುತ್ತದೆ ಮತ್ತು ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿದ್ದ ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಹಾಗೆಯೆ ಕಾಪಾಡಿಕೊಳ್ಳಲು ಅವಕಾಶ ನೀಡುತ್ತದೆ. ಆದಾಗ್ಯೂ, ಅಯೋಧ್ಯೆಯಲ್ಲಿ ಬಾಬರಿ ಮಸೀದಿಗೆ ಸಂಬಂಧಿಸಿದ ವಿವಾದವನ್ನು ಈ ಕಾನೂನಿನ ವ್ಯಾಪ್ತಿಯಿಂದ ಹೊರಗಿಡಲಾಗಿತ್ತು.

ಇದನ್ನೂಓದಿ:  ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ ಬಂಧನ

ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...