Homeಮುಖಪುಟಪೂಜಾ ಸ್ಥಳಗಳ ಕಾಯ್ದೆ ಸಂಬಂಧ ಹೊಸ ಅರ್ಜಿ ಸಲ್ಲಿಕೆಗೆ ಸುಪ್ರೀಂಕೋರ್ಟ್ ಅಸಮಾಧಾನ!

ಪೂಜಾ ಸ್ಥಳಗಳ ಕಾಯ್ದೆ ಸಂಬಂಧ ಹೊಸ ಅರ್ಜಿ ಸಲ್ಲಿಕೆಗೆ ಸುಪ್ರೀಂಕೋರ್ಟ್ ಅಸಮಾಧಾನ!

- Advertisement -
- Advertisement -

ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿದ್ದ ಸ್ಥಳದ ಧಾರ್ಮಿಕ ಸ್ವರೂಪವನ್ನು ಅದೇ ಸ್ಥಿತಿಯಲ್ಲಿ ಕಾಪಾಡಿಕೊಳ್ಳಬೇಕೆಂದು ಆದೇಶಿಸುವ 1991 ರ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆಯ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಹಲವಾರು ಹೊಸ ಅರ್ಜಿಗಳನ್ನು ಸಲ್ಲಿಸಿರುವ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದೆ. ಪೂಜಾ ಸ್ಥಳಗಳ ಕಾಯ್ದೆ

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು, ಇಬ್ಬರು ನ್ಯಾಯಾಧೀಶರ ಸಂಯೋಜನೆಯಲ್ಲಿ ವಿಚಾರಣೆ ನಡೆಸುತ್ತಿರುವುದರಿಂದ, ಈ ಹಿಂದೆ ಮೂವರು ನ್ಯಾಯಾಧೀಶರ ಪೀಠವು ವಿಚಾರಣೆ ನಡೆಸಿದ ಬಾಕಿ ಉಳಿದಿರುವ ನಿಗದಿತ ಅರ್ಜಿಗಳನ್ನು ವಿಚಾರಣೆಯಲ್ಲಿ ಕೈಗೆತ್ತಿಕೊಳ್ಳಲಾಗುವುದಿಲ್ಲ ಎಂದು ಸೂಚಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ಅದನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗದಿರಬಹುದು” ಎಂದು ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರ ಅರ್ಜಿ ವಿಚಾರಣೆಗೆ ಹೊಸ ಅರ್ಜಿಯನ್ನು ಪ್ರಸ್ತಾಪಿಸಿದಾಗ ಸಿಜೆಐ ಹೇಳಿದ್ದಾರೆ. ವಿಚಾರಣೆಯ ಆರಂಭದಲ್ಲಿ ಜೈಸಿಂಗ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದರು.

“ಅರ್ಜಿಗಳನ್ನು ಸಲ್ಲಿಸಲು ಕೂಡಾ ಮಿತಿ ಇದೆ. ಹಲವು ಮಧ್ಯಂತರ ಅರ್ಜಿಗಳನ್ನು ಸಲ್ಲಿಸಲಾಗಿದೆ… ನಾವು ಅದನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗದಿರಬಹುದು” ಎಂದು ಸಿಜೆಐ ಹೇಳಿದ್ದಾರೆ. ಈ ಅರ್ಜಿಗಳಿಗೆ ಮಾರ್ಚ್‌ನಲ್ಲಿ ದಿನಾಂಕವನ್ನು ನೀಡಬಹುದು ಎಂದು ಅವರು ಹೇಳಿದ್ದಾರೆ. ಪೂಜಾ ಸ್ಥಳಗಳ ಕಾಯ್ದೆ

ಡಿಸೆಂಬರ್ 12, 2024 ರಂದು ಸುಪ್ರಿಂಕೋರ್ಟ್‌ ನೀಡಿದ್ದ ಆದೇಶದ ಮೂಲಕ, ವಾರಣಾಸಿಯ ಜ್ಞಾನವಾಪಿ, ಮಥುರಾದ ಶಾಹಿ ಈದ್ಗಾ ಮಸೀದಿ ಮತ್ತು ಸಂಭಾಲ್‌ನ ಶಾಹಿ ಜಾಮಾ ಮಸೀದಿ ಸೇರಿದಂತೆ 10 ಮಸೀದಿಗಳ ‘ಮೂಲ ಧಾರ್ಮಿಕ ಸ್ವರೂಪ’ವನ್ನು ಖಚಿತಪಡಿಸಿಕೊಳ್ಳಲು ಸಮೀಕ್ಷೆ ನಡೆಸಲು ನಿರ್ದೇಶನ ನೀಡಬೇಕು ಎಂದು ಕೋರಿ ಬಿಜೆಪಿ ಬೆಂಬಲಿಗರು ಸಲ್ಲಿಸಿದ್ದ ಸುಮಾರು 18 ಮೊಕದ್ದಮೆಗಳಲ್ಲಿ ವಿಚಾರಣೆಯನ್ನು ಪರಿಣಾಮಕಾರಿಯಾಗಿ ಸ್ಥಗಿತಗೊಳಿಸಿತು.

ಅದಕ್ಕೂ ಮೊದಲು ಸಂಭಾಲ್‌ನಲ್ಲಿ ಕೆಳ ಹಂತದ ನ್ಯಾಯಾಲಯದ ಆದೇಶದ ಮೇರೆಗೆ ನಡೆಸಲಾಗುತ್ತಿದ್ದ ಸಮೀಕ್ಷೆಯ ಸಮಯದಲ್ಲಿ ಪೊಲೀಸ್ ಗುಂಡಿನ ದಾಳಿಯಲ್ಲಿ ಅಪ್ರಾಪ್ತ ವಯಸ್ಕ ಸೇರಿದಂತೆ ಐದು ಮುಸ್ಲಿಂ ಯುವಕರು ಸಾವನ್ನಪ್ಪಿದ್ದರು. ಇದರ ನಂತರ ನಂತರ ಸುಪ್ರಿಂಕೋರ್ಟ್ ಫೆಬ್ರವರಿ 17 ರಂದು ಪರಿಣಾಮಕಾರಿ ವಿಚಾರಣೆಗೆ ಎಲ್ಲಾ ಅರ್ಜಿಗಳನ್ನು ಪಟ್ಟಿ ಮಾಡಿತ್ತು.

ಡಿಸೆಂಬರ್ 12 ರ ನಂತರ ಪೂಜಾ ಸ್ಥಳಗಳ ಕಾಯಿದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಕೋರಿ, AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಸಮಾಜವಾದಿ ಪಕ್ಷದ ನಾಯಕಿ, ಕೈರಾನಾ ಸಂಸದೆ ಇಕ್ರಾ ಚೌಧರಿ ಮತ್ತು ಕಾಂಗ್ರೆಸ್ ಪಕ್ಷ ಸೇರಿದಂತೆ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿದೆ.

ಫೆಬ್ರವರಿ 14 ರಂದು ಉತ್ತರ ಪ್ರದೇಶದ ಕೈರಾನಾದ ಲೋಕಸಭಾ ಸಂಸದೆ ಚೌಧರಿ ಅವರು, ಮಸೀದಿಗಳು ಮತ್ತು ದರ್ಗಾಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಕಾನೂನು ಕ್ರಮಗಳು ಕೋಮು ಸಾಮರಸ್ಯ ಮತ್ತು ದೇಶದ ಜಾತ್ಯತೀತ ಸಂರಚನೆಗೆ ಧಕ್ಕೆ ತರುತ್ತಿವೆ ಎಂದು ಅರ್ಜಿ ಸಲ್ಲಿಸಿದ್ದು, ಈ ರೀತಿಯ ಪ್ರವೃತ್ತಿ ಹೆಚ್ಚುತ್ತಿದ್ದು, ಅದನ್ನು ತಡೆಯುವಂತೆ ಕೋರಿದ್ದಾರೆ. ಇದೇ ರೀತಿಯ ಅರ್ಜಿಯನ್ನು ಓವೈಸಿ ಅವರ ಪ್ರತ್ಯೇಕ ಅರ್ಜಿಯಲ್ಲಿ ಪರಿಶೀಲಿಸಲು ಸುಪ್ರೀಂ ಕೋರ್ಟ್ ಈ ಹಿಂದೆ ಒಪ್ಪಿಕೊಂಡಿತ್ತು.

1991 ರ ಕಾನೂನಿನ ನಿಬಂಧನೆಗಳ ಸಿಂಧುತ್ವದ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಬಿಜೆಪಿ ಪರ ಸಂಘಟನೆಗಳು ಸುಪ್ರಿಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದಕ್ಕೂ ಮೊದಲು, 1991 ರ ಕಾನೂನಿನ ವಿವಿಧ ನಿಬಂಧನೆಗಳನ್ನು ಪ್ರಶ್ನಿಸಿ ವಕೀಲ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ ಪ್ರಮುಖ ಅರ್ಜಿ ಸೇರಿದಂತೆ ಆರು ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿತ್ತು.

1991ರ ಈ ಕಾನೂನು ಯಾವುದೇ ಪೂಜಾ ಸ್ಥಳವನ್ನು ಪರಿವರ್ತಿಸುವುದನ್ನು ನಿಷೇಧಿಸುತ್ತದೆ ಮತ್ತು ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿದ್ದ ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಹಾಗೆಯೆ ಕಾಪಾಡಿಕೊಳ್ಳಲು ಅವಕಾಶ ನೀಡುತ್ತದೆ. ಆದಾಗ್ಯೂ, ಅಯೋಧ್ಯೆಯಲ್ಲಿ ಬಾಬರಿ ಮಸೀದಿಗೆ ಸಂಬಂಧಿಸಿದ ವಿವಾದವನ್ನು ಈ ಕಾನೂನಿನ ವ್ಯಾಪ್ತಿಯಿಂದ ಹೊರಗಿಡಲಾಗಿತ್ತು.

ಇದನ್ನೂಓದಿ:  ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ ಬಂಧನ

ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...