Homeಮುಖಪುಟವಿದೇಶದಲ್ಲಿ ಸಿಕ್ಕಿಕೊಂಡಿರುವ ಭಾರತೀಯರನ್ನು ಸ್ಥಳಾಂತರಿಸಲು ಯೋಜನೆ

ವಿದೇಶದಲ್ಲಿ ಸಿಕ್ಕಿಕೊಂಡಿರುವ ಭಾರತೀಯರನ್ನು ಸ್ಥಳಾಂತರಿಸಲು ಯೋಜನೆ

- Advertisement -
- Advertisement -

ಕೊರೊನಾ ಕಾರಣಕ್ಕೆ ವಿದೇಶದಲ್ಲಿ ಸಿಕ್ಕಿಕೊಂಡಿರುವ ಭಾರತೀಯರನ್ನು ಸ್ಥಳಾಂತರಿಸುವ ಯೋಜನೆಗಳು ಲಾಕ್ ಡೌನ್ ತೆರವುಗೊಳಿಸಿದ ನಂತರ ಪ್ರಾರಂಭವಾಗಲಿದೆ. ವಿದೇಶಾಂಗ ಸಚಿವಾಲಯ, ನಾಗರಿಕ ವಿಮಾನಯಾನ ಸಚಿವಾಲಯ, ಏರ್ ಇಂಡಿಯಾ, ರಾಜ್ಯ ಸರ್ಕಾರಗಳು ಮತ್ತು ವಿದೇಶದಲ್ಲಿರುವ ಭಾರತೀಯ ನಿಯೋಗಗಳ ಸಹಯೋಗದೊಂದಿಗೆ ಈ ಕೆಲಸ ರೂಪೊಗೊಳ್ಳುತ್ತಿದೆ ಎಂದು ಎನ್ಡಿಡಿವಿ ವರದಿ ಮಾಡಿದೆ.

ಲಾಕ್ ಡೌನ್ ತೆರವಾದ ನಂತರ ವಿಶೇಷ ವಿಮಾನಗಳು ಅಥವಾ ನಿಯಮಿತ ವಿಮಾನಗಳ ಮೂಲಕ ಸ್ಥಳಾಂತರಿಸಲಾಗುವುದು ಹಾಗೂ ಇದು ಲಾಕ್‌ಡೌನ್ ಪರಿಸ್ಥಿತಿಗೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಸ್ಥಳಾಂತರಿಸುವಿಕೆಯನ್ನು ಪಾವತಿಯ ಮೇರೆಗೆ ಮಾಡಲಾಗುವುದು ಹಾಗೂ ನಾಗರಿಕರು ವಿಮಾನ ಟಿಕೆಟ್ ಗೆ ಹಣ ನೀಡಬೇಕಾಗುತ್ತದೆ ಎಂದು ತಿಳಿಸಲಾಗಿದೆ.

ವಿದೇಶದಲ್ಲಿ, ವಿಶೇಷವಾಗಿ ಗಲ್ಪ್ ಗಳಲ್ಲಿ ಸಾವಿರಾರು ಭಾರತೀಯರು ಸಿಕ್ಕಿಬಿದ್ದಿದ್ದು, ಭಾರತೀಯ ಪ್ರಜೆಗಳನ್ನು ಬೇಗ ಹಿಂದಕ್ಕೆ ಕರೆದೊಯ್ಯಲು ಒತ್ತಡ ಹಾಕುತ್ತಿವೆ.

ಈ ಪ್ರದೇಶದಲ್ಲಿ ಕೆಲಸ ಮಾಡುವವರ ಸ್ಥಳಾಂತರಿಸುವ ಬಗ್ಗೆ ವಿಶೇಷವಾಗಿ ಕೇರಳದಿಂದ ರಾಜಕೀಯ ಬೇಡಿಕೆಗಳು ಬಂದಿವೆ. ಭಾರತಕ್ಕೆ ಮರಳಲು ಬಯಸುವ ಭಾರತೀಯ ನಾಗರಿಕರನ್ನು ನೋಂದಾಯಿಸಲು ರಾಜ್ಯ ಸರ್ಕಾರಗಳು ಹಾಗೂ ವಿದೇಶಾಂಗ ಸಚಿವಾಲಯವು ವಿದೇಶದಲ್ಲಿರುವ, ವಿದೇಶಿ ಭಾರತೀಯ ನಿಯೋಗಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ. ಸ್ಥಳಾಂತರಿಸುವಿಕೆಯು ವಿವಿಧ ದೇಶಗಳಿಂದ ನಡೆಯುತ್ತದೆ ಆದರೆ ನಾಗರಿಕರು ವಿಮಾನದ ಟಿಕೆಟ್‌ ಹಣವನ್ನು ಪಾವತಿಸಬೇಕಾಗುತ್ತದೆ.

ಲಾಕ್ ಡೌನ್ ನಿಂದಾಗಿ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಯಾನಗಳು ಸ್ಥಗಿತಗೊಂಡಿವೆ. ಆದರೆ ಲಾಕ್ ಡೌನ್ ಗಿಂತಲೂ ಮುಂಚಿತವಾಗಿ ಭಾರತವು ಅಂತರಾಷ್ಟ್ರೀಯ ಯಾನವನ್ನು ಸ್ಥಗಿತಗೊಳಿಸಿದ್ದರಿಂದ ಹಲವಾರು ನಾಗರಿಕರು ವಿದೇಶದಲ್ಲಿ ಸಿಲುಕಿದ್ದಾರೆ.

ಕೊರೊನಾ ಹರಡುವುದನ್ನು ತಡೆಯಲು ಭಾರತದಲ್ಲಿ ಒಂದು ತಿಂಗಳಿನಿಂದ ಲಾಕ್‌ಡೌನ್ ಘೋಷಿಸಲಾಗಿದೆ. ಸಾಂಕ್ರಾಮಿಕ ರೋಗವೂ ಹೆಚ್ಚುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮೇ 3 ರವರೆಗೆ ಲಾಕ್ ಡೌನ್ ವಿಸ್ತರಿಸಿದ್ದರು.

ದೇಶದಲ್ಲಿ ಇದುವರೆಗೆ 26,000 ಕ್ಕೂ ಹೆಚ್ಚು ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿದೆ; 824 ಮಂದಿ ಮೃತಪಟ್ಟಿದ್ದಾರೆ.


ಇದನ್ನೂ ಓದಿ: ಮಹಾವಲಸೆ – ಬಡಜನತೆಯ ನಡು ಮುರಿದ ಮೋದಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...