Homeಮುಖಪುಟವಿದೇಶದಲ್ಲಿ ಸಿಕ್ಕಿಕೊಂಡಿರುವ ಭಾರತೀಯರನ್ನು ಸ್ಥಳಾಂತರಿಸಲು ಯೋಜನೆ

ವಿದೇಶದಲ್ಲಿ ಸಿಕ್ಕಿಕೊಂಡಿರುವ ಭಾರತೀಯರನ್ನು ಸ್ಥಳಾಂತರಿಸಲು ಯೋಜನೆ

- Advertisement -
- Advertisement -

ಕೊರೊನಾ ಕಾರಣಕ್ಕೆ ವಿದೇಶದಲ್ಲಿ ಸಿಕ್ಕಿಕೊಂಡಿರುವ ಭಾರತೀಯರನ್ನು ಸ್ಥಳಾಂತರಿಸುವ ಯೋಜನೆಗಳು ಲಾಕ್ ಡೌನ್ ತೆರವುಗೊಳಿಸಿದ ನಂತರ ಪ್ರಾರಂಭವಾಗಲಿದೆ. ವಿದೇಶಾಂಗ ಸಚಿವಾಲಯ, ನಾಗರಿಕ ವಿಮಾನಯಾನ ಸಚಿವಾಲಯ, ಏರ್ ಇಂಡಿಯಾ, ರಾಜ್ಯ ಸರ್ಕಾರಗಳು ಮತ್ತು ವಿದೇಶದಲ್ಲಿರುವ ಭಾರತೀಯ ನಿಯೋಗಗಳ ಸಹಯೋಗದೊಂದಿಗೆ ಈ ಕೆಲಸ ರೂಪೊಗೊಳ್ಳುತ್ತಿದೆ ಎಂದು ಎನ್ಡಿಡಿವಿ ವರದಿ ಮಾಡಿದೆ.

ಲಾಕ್ ಡೌನ್ ತೆರವಾದ ನಂತರ ವಿಶೇಷ ವಿಮಾನಗಳು ಅಥವಾ ನಿಯಮಿತ ವಿಮಾನಗಳ ಮೂಲಕ ಸ್ಥಳಾಂತರಿಸಲಾಗುವುದು ಹಾಗೂ ಇದು ಲಾಕ್‌ಡೌನ್ ಪರಿಸ್ಥಿತಿಗೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಸ್ಥಳಾಂತರಿಸುವಿಕೆಯನ್ನು ಪಾವತಿಯ ಮೇರೆಗೆ ಮಾಡಲಾಗುವುದು ಹಾಗೂ ನಾಗರಿಕರು ವಿಮಾನ ಟಿಕೆಟ್ ಗೆ ಹಣ ನೀಡಬೇಕಾಗುತ್ತದೆ ಎಂದು ತಿಳಿಸಲಾಗಿದೆ.

ವಿದೇಶದಲ್ಲಿ, ವಿಶೇಷವಾಗಿ ಗಲ್ಪ್ ಗಳಲ್ಲಿ ಸಾವಿರಾರು ಭಾರತೀಯರು ಸಿಕ್ಕಿಬಿದ್ದಿದ್ದು, ಭಾರತೀಯ ಪ್ರಜೆಗಳನ್ನು ಬೇಗ ಹಿಂದಕ್ಕೆ ಕರೆದೊಯ್ಯಲು ಒತ್ತಡ ಹಾಕುತ್ತಿವೆ.

ಈ ಪ್ರದೇಶದಲ್ಲಿ ಕೆಲಸ ಮಾಡುವವರ ಸ್ಥಳಾಂತರಿಸುವ ಬಗ್ಗೆ ವಿಶೇಷವಾಗಿ ಕೇರಳದಿಂದ ರಾಜಕೀಯ ಬೇಡಿಕೆಗಳು ಬಂದಿವೆ. ಭಾರತಕ್ಕೆ ಮರಳಲು ಬಯಸುವ ಭಾರತೀಯ ನಾಗರಿಕರನ್ನು ನೋಂದಾಯಿಸಲು ರಾಜ್ಯ ಸರ್ಕಾರಗಳು ಹಾಗೂ ವಿದೇಶಾಂಗ ಸಚಿವಾಲಯವು ವಿದೇಶದಲ್ಲಿರುವ, ವಿದೇಶಿ ಭಾರತೀಯ ನಿಯೋಗಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ. ಸ್ಥಳಾಂತರಿಸುವಿಕೆಯು ವಿವಿಧ ದೇಶಗಳಿಂದ ನಡೆಯುತ್ತದೆ ಆದರೆ ನಾಗರಿಕರು ವಿಮಾನದ ಟಿಕೆಟ್‌ ಹಣವನ್ನು ಪಾವತಿಸಬೇಕಾಗುತ್ತದೆ.

ಲಾಕ್ ಡೌನ್ ನಿಂದಾಗಿ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಯಾನಗಳು ಸ್ಥಗಿತಗೊಂಡಿವೆ. ಆದರೆ ಲಾಕ್ ಡೌನ್ ಗಿಂತಲೂ ಮುಂಚಿತವಾಗಿ ಭಾರತವು ಅಂತರಾಷ್ಟ್ರೀಯ ಯಾನವನ್ನು ಸ್ಥಗಿತಗೊಳಿಸಿದ್ದರಿಂದ ಹಲವಾರು ನಾಗರಿಕರು ವಿದೇಶದಲ್ಲಿ ಸಿಲುಕಿದ್ದಾರೆ.

ಕೊರೊನಾ ಹರಡುವುದನ್ನು ತಡೆಯಲು ಭಾರತದಲ್ಲಿ ಒಂದು ತಿಂಗಳಿನಿಂದ ಲಾಕ್‌ಡೌನ್ ಘೋಷಿಸಲಾಗಿದೆ. ಸಾಂಕ್ರಾಮಿಕ ರೋಗವೂ ಹೆಚ್ಚುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮೇ 3 ರವರೆಗೆ ಲಾಕ್ ಡೌನ್ ವಿಸ್ತರಿಸಿದ್ದರು.

ದೇಶದಲ್ಲಿ ಇದುವರೆಗೆ 26,000 ಕ್ಕೂ ಹೆಚ್ಚು ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿದೆ; 824 ಮಂದಿ ಮೃತಪಟ್ಟಿದ್ದಾರೆ.


ಇದನ್ನೂ ಓದಿ: ಮಹಾವಲಸೆ – ಬಡಜನತೆಯ ನಡು ಮುರಿದ ಮೋದಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...