Homeಅಂತರಾಷ್ಟ್ರೀಯವಿಮಾನ ಅಪಘಾತ ಪ್ರಕರಣ: ಸುಳ್ಳು ಸುದ್ದಿ ಹರಡಿದ್ದ ವ್ಯಕ್ತಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಟ್ರಾನ್ಸ್‌ಜೆಂಡರ್...

ವಿಮಾನ ಅಪಘಾತ ಪ್ರಕರಣ: ಸುಳ್ಳು ಸುದ್ದಿ ಹರಡಿದ್ದ ವ್ಯಕ್ತಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಟ್ರಾನ್ಸ್‌ಜೆಂಡರ್ ಪೈಲಟ್

- Advertisement -
- Advertisement -

ವಾಷಿಂಗ್ಟನ್: ಜನವರಿ ಅಂತ್ಯದಲ್ಲಿ ವಾಷಿಂಗ್ಟನ್‌ನಲ್ಲಿ ಪ್ರಯಾಣಿಕರ ಜೆಟ್‌ಗೆ ಡಿಕ್ಕಿ ಹೊಡೆದ ಮಿಲಿಟರಿ ಹೆಲಿಕಾಪ್ಟರ್ ಅನ್ನು ನಾನು ಚಲಾಯಿಸಿದ್ದೇನೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಹೇಳಿಕೊಂಡ ಸಂಪ್ರದಾಯವಾದಿ ಪ್ರಭಾವಿ ವ್ಯಕ್ತಿಯ ವಿರುದ್ಧ ಟ್ರಾನ್ಸ್‌ಜೆಂಡರ್ ಯುಎಸ್ ಪೈಲಟ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಕೊಲೊರಾಡೋದ ಯುಎಸ್ ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಲಾದ ಮೊಕದ್ದಮೆಯ ಪ್ರಕಾರ, ಎರಡೂ ವಿಮಾನಗಳಲ್ಲಿ 67 ಜನರು ಸಾವನ್ನಪ್ಪಿದ ಅಪಘಾತದ ನಂತರ ‘X’ ಖಾತೆಯಲ್ಲಿ 2.2 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಪ್ರಭಾವಿ ಮ್ಯಾಟ್ ವ್ಯಾಲೇಸ್ ಅವರು ವಿನಾಶಕಾರಿ ಮತ್ತು ಬೇಜವಾಬ್ದಾರಿಯುತ ಮಾನನಷ್ಟ ಅಭಿಯಾನವನ್ನು ರೂಪಿಸಿದ್ದಾರೆ ಎಂದು ಆರೋಪಿಸಿ ಟ್ರಾನ್ಸ್‌ಜೆಂಡರ್ ಯುಎಸ್ ಪೈಲಟ್  ಜೋ ಎಲಿಸ್ ಮೊಕದ್ದಮೆ ಹೂಡಿದ್ದಾರೆ.

ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿದ ವ್ಯಾಲೇಸ್  ಅವರ ಒಂದು ಪೋಸ್ಟ್, ಈ ಪೈಲಟ್ “ಟ್ರಾನ್ಸ್ ಟೆರರ್ ದಾಳಿಯಲ್ಲಿ” ಭಾಗವಹಿಸಿರಬಹುದು ಎಂದು ಹೇಳಿದೆ. ಅವರ “ಖಿನ್ನತೆ” ಮತ್ತು “ಲಿಂಗ ಡಿಸ್ಫೋರಿಯಾ” ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ವಿಮಾನ ಡಿಕ್ಕಿಯನ್ನು ಉಂಟುಮಾಡಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ನನ್ನ ಮೇಲೆ ಆರೋಪಿಸಲಾಗಿದೆ ಎಂದು ಮೊಕದ್ದಮೆಯಲ್ಲಿ  ಜೋ ಎಲಿಸ್ ತಿಳಿಸಿದ್ದಾರೆ.

ವ್ಯಾಲೇಸ್‌ನಿಂದ ಈ ಮೊಕದ್ದಮೆ ಕುರಿತು ತಕ್ಷಣದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ, ನಂತರ ಅವರು ಎಲ್ಲಿಸ್ ಬಗ್ಗೆ ತಮ್ಮ ಪೋಸ್ಟ್‌ಗಳನ್ನು ಅಳಿಸಿ ಹಾಕಿದ್ದರು.

ವ್ಯಾಲೇಸ್ ತನ್ನ ಪ್ರಮುಖ ಸ್ಥಾನಮಾನವನ್ನು ಬಳಸಿಕೊಂಡು ‘X’ ಖಾತೆಯಲ್ಲಿ ಹಣಗಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮೊಕದ್ದಮೆಯಲ್ಲಿ ಆರೋಪಿಸಲಾಗಿದೆ.

ಹತ್ತಾರು ಸಾವಿರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಜೋ ಎಲಿಸ್ ದುರದೃಷ್ಟಕರ ಹೆಲಿಕಾಪ್ಟರ್ ಅನ್ನು ಚಾಲನೆ ಮಾಡಿದ್ದಾರೆ ಎಂದು ತಪ್ಪಾಗಿ ಆರೋಪಿಸುತ್ತಿದ್ದಂತೆ, ಸಾರ್ವಜನಿಕ ದಾಖಲೆಗಳನ್ನು ಬಳಸಿಕೊಂಡು ಯಾರಾದರೂ ತನ್ನ ಮನೆಯನ್ನು ಪತ್ತೆಹಚ್ಚಬಹುದು ಎಂದು ಅವರು ಚಿಂತಿತರಾಗಿದ್ದರು.

ಫೆಬ್ರವರಿಯಲ್ಲಿ AFP ಗೆ ನೀಡಿದ ಸಂದರ್ಶನದಲ್ಲಿ ಜೋ ಎಲಿಸ್ ತಮ್ಮ ಕುಟುಂಬವನ್ನು ತಾತ್ಕಾಲಿಕವಾಗಿ ಹೊಸ ಸ್ಥಳಕ್ಕೆ ಸ್ಥಳಾಂತರಿಸಲು ಮತ್ತು ತನಗೆ ಖಾಸಗಿ ಸಶಸ್ತ್ರ ಭದ್ರತೆಯನ್ನು ವ್ಯವಸ್ಥೆ ಮಾಡಲು ಒತ್ತಾಯಿಸಿದ್ದರು.

ವ್ಯಾಲೇಸ್‌ನಿಂದ ಉಂಟಾದ ಹಾನಿ “ಅಪಾರ” ವಾಗಿತ್ತು, ಇದರ ಪರಿಣಾಮವಾಗಿ ಅವರ “ಸುಳ್ಳುಗಳಿಂದ” ಪ್ರೇರಿತವಾದ ದ್ವೇಷದಿಂದಾಗಿ ನನ್ನ ಕುಟುಂಬವು ತೊಂದರೆಯಲ್ಲಿ ಸಿಲುಕಿಕೊಂಡಿದೆ ಎಂದು ಮೊಕದ್ದಮೆಯಲ್ಲಿ ಸೇರಿಸಲಾಗಿದೆ. ಜೊ ಎಲಿಸ್ ಅಂತಿಮವಾಗಿ ಫೇಸ್‌ಬುಕ್‌ನಲ್ಲಿ “ಜೀವನದ ಪುರಾವೆ” ವೀಡಿಯೊವನ್ನು ಪೋಸ್ಟ್ ಮಾಡಿದರು, ಇದು ಕೆಲವು ವದಂತಿಗಳನ್ನು ಮಾತ್ರ ಹತ್ತಿಕ್ಕಿತು.

2009ರಿಂದ ನ್ಯಾಷನಲ್ ಗಾರ್ಡ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ಇರಾಕ್ ಮತ್ತು ಕುವೈತ್‌ಗೆ ನಿಯೋಜಿಸಲ್ಪಟ್ಟಿರುವ ಜೊ ಎಲಿಸ್ ಎದುರಿಸುತ್ತಿರುವ ಬೆದರಿಕೆಗಳು, ಟ್ರಾನ್ಸ್‌ಜೆಂಡರ್‌ಗಳ ವಿರುದ್ಧ ರಾಜಕೀಯ ವಾಕ್ಚಾತುರ್ಯದಲ್ಲಿ ತೀವ್ರ ಏರಿಕೆ ಕಂಡುಬಂದಿರುವ ಸಮಯದಲ್ಲಿ ಅವರ ಕುರಿತ ತಪ್ಪು ಮಾಹಿತಿಯು ಅವರ ಜೀವನದ ಮೇಲೆ ತೀವ್ರ ಪರಿಣಾಮ ಬೀರಿದೆ.

ಯುನೈಟೆಡ್ ಸ್ಟೇಟ್ಸ್ ನಲ್ಲಿ ಅಧ್ಯಕ್ಷ ಟ್ರಂಪ್ ಟ್ರಾನ್ಸ್ ಜೆಂಡರ್ ಗಳನ್ನು ಗುರಿಯಾಗಿಸಿಕೊಂಡು ಹಲವಾರು ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಿದ್ದಾರೆ. ಇದರಲ್ಲಿ ಒಂದು ಆದೇಶದಲ್ಲಿ ಸರ್ಕಾರಕ್ಕೆ ಗಂಡು ಮತ್ತು ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲು ಸೂಚನೆ ನೀಡುವುದು ಸೇರಿದೆ.

ವಿಮಾನ ಅಪಘಾತದ ನಂತರ, ಟ್ರಂಪ್ ಯಾವುದೇ ಪುರಾವೆಗಳನ್ನು ನೀಡದೆ ವಾಯುಯಾನ ಪ್ರಾಧಿಕಾರದ ವೈವಿಧ್ಯತೆಯ ನೇಮಕಾತಿ ಪದ್ಧತಿಗಳು ಇದಕ್ಕೆ ಭಾಗಶಃ ಕಾರಣವಾಗಿರಬಹುದು ಎಂದು ಸೂಚಿಸಿದ್ದರು. ಇದರಿಂದಾಗಿ ಟ್ರಾನ್ಸ್‌ಜೆಂಡರ್‌ಗಳು ಆನ್‌ಲೈನ್ ವದಂತಿಗಳಿಗೆ ಬಲಿಯಾದರು.

ಜೊ ಎಲ್ಲಿಸ್ ಅವರ ಮೊಕದ್ದಮೆಯ ಪ್ರಕರಣವು ಮಾನನಷ್ಟ ಮೊಕದ್ದಮೆಗಳು ಯುಎಸ್ ನಾಗರಿಕರು ಮತ್ತು ಪ್ರಜಾಪ್ರಭುತ್ವ ಪರ ಗುಂಪುಗಳು ತಪ್ಪು ಮಾಹಿತಿ ಹರಡುವವರನ್ನು ಆರ್ಥಿಕವಾಗಿ ಮತ್ತು ವೈಯಕ್ತಿಕವಾಗಿ ಹೊಣೆಗಾರರನ್ನಾಗಿ ಮಾಡಲು ಬಳಸುವ ಸಾಧನವಾಗಿ ಹೆಚ್ಚುತ್ತಿರುವ ಪ್ರವೃತ್ತಿಯ ಭಾಗವಾಗಿದೆ.

2023ರಲ್ಲಿ ಡೊಮಿನಿಯನ್ ವೋಟಿಂಗ್ ಸಿಸ್ಟಮ್ಸ್ ತನ್ನ ಯಂತ್ರಗಳು ಮತಗಳನ್ನು ಬದಲಾಯಿಸಿವೆ ಎಂಬ ಸುಳ್ಳು ಹೇಳಿಕೆಗಳ ಮೇಲೆ ಮೊಕದ್ದಮೆ ಹೂಡಿದ ನಂತರ ಫಾಕ್ಸ್ ನ್ಯೂಸ್‌ನಿಂದ $787.5 ಮಿಲಿಯನ್ ಇತ್ಯರ್ಥವನ್ನು ಪಡೆದುಕೊಂಡಿತು.

ಹೈಕೋರ್ಟ್‌ನಲ್ಲಿ ಜನ್ಮದಿನದ ಮೋಜು-ಮಸ್ತಿ: ಐವರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...