Homeಅಂತರಾಷ್ಟ್ರೀಯವಿಮಾನ ಅಪಘಾತ ಪ್ರಕರಣ: ಸುಳ್ಳು ಸುದ್ದಿ ಹರಡಿದ್ದ ವ್ಯಕ್ತಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಟ್ರಾನ್ಸ್‌ಜೆಂಡರ್...

ವಿಮಾನ ಅಪಘಾತ ಪ್ರಕರಣ: ಸುಳ್ಳು ಸುದ್ದಿ ಹರಡಿದ್ದ ವ್ಯಕ್ತಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಟ್ರಾನ್ಸ್‌ಜೆಂಡರ್ ಪೈಲಟ್

- Advertisement -
- Advertisement -

ವಾಷಿಂಗ್ಟನ್: ಜನವರಿ ಅಂತ್ಯದಲ್ಲಿ ವಾಷಿಂಗ್ಟನ್‌ನಲ್ಲಿ ಪ್ರಯಾಣಿಕರ ಜೆಟ್‌ಗೆ ಡಿಕ್ಕಿ ಹೊಡೆದ ಮಿಲಿಟರಿ ಹೆಲಿಕಾಪ್ಟರ್ ಅನ್ನು ನಾನು ಚಲಾಯಿಸಿದ್ದೇನೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಹೇಳಿಕೊಂಡ ಸಂಪ್ರದಾಯವಾದಿ ಪ್ರಭಾವಿ ವ್ಯಕ್ತಿಯ ವಿರುದ್ಧ ಟ್ರಾನ್ಸ್‌ಜೆಂಡರ್ ಯುಎಸ್ ಪೈಲಟ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಕೊಲೊರಾಡೋದ ಯುಎಸ್ ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಲಾದ ಮೊಕದ್ದಮೆಯ ಪ್ರಕಾರ, ಎರಡೂ ವಿಮಾನಗಳಲ್ಲಿ 67 ಜನರು ಸಾವನ್ನಪ್ಪಿದ ಅಪಘಾತದ ನಂತರ ‘X’ ಖಾತೆಯಲ್ಲಿ 2.2 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಪ್ರಭಾವಿ ಮ್ಯಾಟ್ ವ್ಯಾಲೇಸ್ ಅವರು ವಿನಾಶಕಾರಿ ಮತ್ತು ಬೇಜವಾಬ್ದಾರಿಯುತ ಮಾನನಷ್ಟ ಅಭಿಯಾನವನ್ನು ರೂಪಿಸಿದ್ದಾರೆ ಎಂದು ಆರೋಪಿಸಿ ಟ್ರಾನ್ಸ್‌ಜೆಂಡರ್ ಯುಎಸ್ ಪೈಲಟ್  ಜೋ ಎಲಿಸ್ ಮೊಕದ್ದಮೆ ಹೂಡಿದ್ದಾರೆ.

ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿದ ವ್ಯಾಲೇಸ್  ಅವರ ಒಂದು ಪೋಸ್ಟ್, ಈ ಪೈಲಟ್ “ಟ್ರಾನ್ಸ್ ಟೆರರ್ ದಾಳಿಯಲ್ಲಿ” ಭಾಗವಹಿಸಿರಬಹುದು ಎಂದು ಹೇಳಿದೆ. ಅವರ “ಖಿನ್ನತೆ” ಮತ್ತು “ಲಿಂಗ ಡಿಸ್ಫೋರಿಯಾ” ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ವಿಮಾನ ಡಿಕ್ಕಿಯನ್ನು ಉಂಟುಮಾಡಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ನನ್ನ ಮೇಲೆ ಆರೋಪಿಸಲಾಗಿದೆ ಎಂದು ಮೊಕದ್ದಮೆಯಲ್ಲಿ  ಜೋ ಎಲಿಸ್ ತಿಳಿಸಿದ್ದಾರೆ.

ವ್ಯಾಲೇಸ್‌ನಿಂದ ಈ ಮೊಕದ್ದಮೆ ಕುರಿತು ತಕ್ಷಣದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ, ನಂತರ ಅವರು ಎಲ್ಲಿಸ್ ಬಗ್ಗೆ ತಮ್ಮ ಪೋಸ್ಟ್‌ಗಳನ್ನು ಅಳಿಸಿ ಹಾಕಿದ್ದರು.

ವ್ಯಾಲೇಸ್ ತನ್ನ ಪ್ರಮುಖ ಸ್ಥಾನಮಾನವನ್ನು ಬಳಸಿಕೊಂಡು ‘X’ ಖಾತೆಯಲ್ಲಿ ಹಣಗಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮೊಕದ್ದಮೆಯಲ್ಲಿ ಆರೋಪಿಸಲಾಗಿದೆ.

ಹತ್ತಾರು ಸಾವಿರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಜೋ ಎಲಿಸ್ ದುರದೃಷ್ಟಕರ ಹೆಲಿಕಾಪ್ಟರ್ ಅನ್ನು ಚಾಲನೆ ಮಾಡಿದ್ದಾರೆ ಎಂದು ತಪ್ಪಾಗಿ ಆರೋಪಿಸುತ್ತಿದ್ದಂತೆ, ಸಾರ್ವಜನಿಕ ದಾಖಲೆಗಳನ್ನು ಬಳಸಿಕೊಂಡು ಯಾರಾದರೂ ತನ್ನ ಮನೆಯನ್ನು ಪತ್ತೆಹಚ್ಚಬಹುದು ಎಂದು ಅವರು ಚಿಂತಿತರಾಗಿದ್ದರು.

ಫೆಬ್ರವರಿಯಲ್ಲಿ AFP ಗೆ ನೀಡಿದ ಸಂದರ್ಶನದಲ್ಲಿ ಜೋ ಎಲಿಸ್ ತಮ್ಮ ಕುಟುಂಬವನ್ನು ತಾತ್ಕಾಲಿಕವಾಗಿ ಹೊಸ ಸ್ಥಳಕ್ಕೆ ಸ್ಥಳಾಂತರಿಸಲು ಮತ್ತು ತನಗೆ ಖಾಸಗಿ ಸಶಸ್ತ್ರ ಭದ್ರತೆಯನ್ನು ವ್ಯವಸ್ಥೆ ಮಾಡಲು ಒತ್ತಾಯಿಸಿದ್ದರು.

ವ್ಯಾಲೇಸ್‌ನಿಂದ ಉಂಟಾದ ಹಾನಿ “ಅಪಾರ” ವಾಗಿತ್ತು, ಇದರ ಪರಿಣಾಮವಾಗಿ ಅವರ “ಸುಳ್ಳುಗಳಿಂದ” ಪ್ರೇರಿತವಾದ ದ್ವೇಷದಿಂದಾಗಿ ನನ್ನ ಕುಟುಂಬವು ತೊಂದರೆಯಲ್ಲಿ ಸಿಲುಕಿಕೊಂಡಿದೆ ಎಂದು ಮೊಕದ್ದಮೆಯಲ್ಲಿ ಸೇರಿಸಲಾಗಿದೆ. ಜೊ ಎಲಿಸ್ ಅಂತಿಮವಾಗಿ ಫೇಸ್‌ಬುಕ್‌ನಲ್ಲಿ “ಜೀವನದ ಪುರಾವೆ” ವೀಡಿಯೊವನ್ನು ಪೋಸ್ಟ್ ಮಾಡಿದರು, ಇದು ಕೆಲವು ವದಂತಿಗಳನ್ನು ಮಾತ್ರ ಹತ್ತಿಕ್ಕಿತು.

2009ರಿಂದ ನ್ಯಾಷನಲ್ ಗಾರ್ಡ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ಇರಾಕ್ ಮತ್ತು ಕುವೈತ್‌ಗೆ ನಿಯೋಜಿಸಲ್ಪಟ್ಟಿರುವ ಜೊ ಎಲಿಸ್ ಎದುರಿಸುತ್ತಿರುವ ಬೆದರಿಕೆಗಳು, ಟ್ರಾನ್ಸ್‌ಜೆಂಡರ್‌ಗಳ ವಿರುದ್ಧ ರಾಜಕೀಯ ವಾಕ್ಚಾತುರ್ಯದಲ್ಲಿ ತೀವ್ರ ಏರಿಕೆ ಕಂಡುಬಂದಿರುವ ಸಮಯದಲ್ಲಿ ಅವರ ಕುರಿತ ತಪ್ಪು ಮಾಹಿತಿಯು ಅವರ ಜೀವನದ ಮೇಲೆ ತೀವ್ರ ಪರಿಣಾಮ ಬೀರಿದೆ.

ಯುನೈಟೆಡ್ ಸ್ಟೇಟ್ಸ್ ನಲ್ಲಿ ಅಧ್ಯಕ್ಷ ಟ್ರಂಪ್ ಟ್ರಾನ್ಸ್ ಜೆಂಡರ್ ಗಳನ್ನು ಗುರಿಯಾಗಿಸಿಕೊಂಡು ಹಲವಾರು ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಿದ್ದಾರೆ. ಇದರಲ್ಲಿ ಒಂದು ಆದೇಶದಲ್ಲಿ ಸರ್ಕಾರಕ್ಕೆ ಗಂಡು ಮತ್ತು ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲು ಸೂಚನೆ ನೀಡುವುದು ಸೇರಿದೆ.

ವಿಮಾನ ಅಪಘಾತದ ನಂತರ, ಟ್ರಂಪ್ ಯಾವುದೇ ಪುರಾವೆಗಳನ್ನು ನೀಡದೆ ವಾಯುಯಾನ ಪ್ರಾಧಿಕಾರದ ವೈವಿಧ್ಯತೆಯ ನೇಮಕಾತಿ ಪದ್ಧತಿಗಳು ಇದಕ್ಕೆ ಭಾಗಶಃ ಕಾರಣವಾಗಿರಬಹುದು ಎಂದು ಸೂಚಿಸಿದ್ದರು. ಇದರಿಂದಾಗಿ ಟ್ರಾನ್ಸ್‌ಜೆಂಡರ್‌ಗಳು ಆನ್‌ಲೈನ್ ವದಂತಿಗಳಿಗೆ ಬಲಿಯಾದರು.

ಜೊ ಎಲ್ಲಿಸ್ ಅವರ ಮೊಕದ್ದಮೆಯ ಪ್ರಕರಣವು ಮಾನನಷ್ಟ ಮೊಕದ್ದಮೆಗಳು ಯುಎಸ್ ನಾಗರಿಕರು ಮತ್ತು ಪ್ರಜಾಪ್ರಭುತ್ವ ಪರ ಗುಂಪುಗಳು ತಪ್ಪು ಮಾಹಿತಿ ಹರಡುವವರನ್ನು ಆರ್ಥಿಕವಾಗಿ ಮತ್ತು ವೈಯಕ್ತಿಕವಾಗಿ ಹೊಣೆಗಾರರನ್ನಾಗಿ ಮಾಡಲು ಬಳಸುವ ಸಾಧನವಾಗಿ ಹೆಚ್ಚುತ್ತಿರುವ ಪ್ರವೃತ್ತಿಯ ಭಾಗವಾಗಿದೆ.

2023ರಲ್ಲಿ ಡೊಮಿನಿಯನ್ ವೋಟಿಂಗ್ ಸಿಸ್ಟಮ್ಸ್ ತನ್ನ ಯಂತ್ರಗಳು ಮತಗಳನ್ನು ಬದಲಾಯಿಸಿವೆ ಎಂಬ ಸುಳ್ಳು ಹೇಳಿಕೆಗಳ ಮೇಲೆ ಮೊಕದ್ದಮೆ ಹೂಡಿದ ನಂತರ ಫಾಕ್ಸ್ ನ್ಯೂಸ್‌ನಿಂದ $787.5 ಮಿಲಿಯನ್ ಇತ್ಯರ್ಥವನ್ನು ಪಡೆದುಕೊಂಡಿತು.

ಹೈಕೋರ್ಟ್‌ನಲ್ಲಿ ಜನ್ಮದಿನದ ಮೋಜು-ಮಸ್ತಿ: ಐವರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...