Homeಅಂತರಾಷ್ಟ್ರೀಯವಿಮಾನ ಅಪಘಾತ ಪ್ರಕರಣ: ಸುಳ್ಳು ಸುದ್ದಿ ಹರಡಿದ್ದ ವ್ಯಕ್ತಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಟ್ರಾನ್ಸ್‌ಜೆಂಡರ್...

ವಿಮಾನ ಅಪಘಾತ ಪ್ರಕರಣ: ಸುಳ್ಳು ಸುದ್ದಿ ಹರಡಿದ್ದ ವ್ಯಕ್ತಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಟ್ರಾನ್ಸ್‌ಜೆಂಡರ್ ಪೈಲಟ್

- Advertisement -
- Advertisement -

ವಾಷಿಂಗ್ಟನ್: ಜನವರಿ ಅಂತ್ಯದಲ್ಲಿ ವಾಷಿಂಗ್ಟನ್‌ನಲ್ಲಿ ಪ್ರಯಾಣಿಕರ ಜೆಟ್‌ಗೆ ಡಿಕ್ಕಿ ಹೊಡೆದ ಮಿಲಿಟರಿ ಹೆಲಿಕಾಪ್ಟರ್ ಅನ್ನು ನಾನು ಚಲಾಯಿಸಿದ್ದೇನೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಹೇಳಿಕೊಂಡ ಸಂಪ್ರದಾಯವಾದಿ ಪ್ರಭಾವಿ ವ್ಯಕ್ತಿಯ ವಿರುದ್ಧ ಟ್ರಾನ್ಸ್‌ಜೆಂಡರ್ ಯುಎಸ್ ಪೈಲಟ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಕೊಲೊರಾಡೋದ ಯುಎಸ್ ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಲಾದ ಮೊಕದ್ದಮೆಯ ಪ್ರಕಾರ, ಎರಡೂ ವಿಮಾನಗಳಲ್ಲಿ 67 ಜನರು ಸಾವನ್ನಪ್ಪಿದ ಅಪಘಾತದ ನಂತರ ‘X’ ಖಾತೆಯಲ್ಲಿ 2.2 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಪ್ರಭಾವಿ ಮ್ಯಾಟ್ ವ್ಯಾಲೇಸ್ ಅವರು ವಿನಾಶಕಾರಿ ಮತ್ತು ಬೇಜವಾಬ್ದಾರಿಯುತ ಮಾನನಷ್ಟ ಅಭಿಯಾನವನ್ನು ರೂಪಿಸಿದ್ದಾರೆ ಎಂದು ಆರೋಪಿಸಿ ಟ್ರಾನ್ಸ್‌ಜೆಂಡರ್ ಯುಎಸ್ ಪೈಲಟ್  ಜೋ ಎಲಿಸ್ ಮೊಕದ್ದಮೆ ಹೂಡಿದ್ದಾರೆ.

ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿದ ವ್ಯಾಲೇಸ್  ಅವರ ಒಂದು ಪೋಸ್ಟ್, ಈ ಪೈಲಟ್ “ಟ್ರಾನ್ಸ್ ಟೆರರ್ ದಾಳಿಯಲ್ಲಿ” ಭಾಗವಹಿಸಿರಬಹುದು ಎಂದು ಹೇಳಿದೆ. ಅವರ “ಖಿನ್ನತೆ” ಮತ್ತು “ಲಿಂಗ ಡಿಸ್ಫೋರಿಯಾ” ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ವಿಮಾನ ಡಿಕ್ಕಿಯನ್ನು ಉಂಟುಮಾಡಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ನನ್ನ ಮೇಲೆ ಆರೋಪಿಸಲಾಗಿದೆ ಎಂದು ಮೊಕದ್ದಮೆಯಲ್ಲಿ  ಜೋ ಎಲಿಸ್ ತಿಳಿಸಿದ್ದಾರೆ.

ವ್ಯಾಲೇಸ್‌ನಿಂದ ಈ ಮೊಕದ್ದಮೆ ಕುರಿತು ತಕ್ಷಣದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ, ನಂತರ ಅವರು ಎಲ್ಲಿಸ್ ಬಗ್ಗೆ ತಮ್ಮ ಪೋಸ್ಟ್‌ಗಳನ್ನು ಅಳಿಸಿ ಹಾಕಿದ್ದರು.

ವ್ಯಾಲೇಸ್ ತನ್ನ ಪ್ರಮುಖ ಸ್ಥಾನಮಾನವನ್ನು ಬಳಸಿಕೊಂಡು ‘X’ ಖಾತೆಯಲ್ಲಿ ಹಣಗಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮೊಕದ್ದಮೆಯಲ್ಲಿ ಆರೋಪಿಸಲಾಗಿದೆ.

ಹತ್ತಾರು ಸಾವಿರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಜೋ ಎಲಿಸ್ ದುರದೃಷ್ಟಕರ ಹೆಲಿಕಾಪ್ಟರ್ ಅನ್ನು ಚಾಲನೆ ಮಾಡಿದ್ದಾರೆ ಎಂದು ತಪ್ಪಾಗಿ ಆರೋಪಿಸುತ್ತಿದ್ದಂತೆ, ಸಾರ್ವಜನಿಕ ದಾಖಲೆಗಳನ್ನು ಬಳಸಿಕೊಂಡು ಯಾರಾದರೂ ತನ್ನ ಮನೆಯನ್ನು ಪತ್ತೆಹಚ್ಚಬಹುದು ಎಂದು ಅವರು ಚಿಂತಿತರಾಗಿದ್ದರು.

ಫೆಬ್ರವರಿಯಲ್ಲಿ AFP ಗೆ ನೀಡಿದ ಸಂದರ್ಶನದಲ್ಲಿ ಜೋ ಎಲಿಸ್ ತಮ್ಮ ಕುಟುಂಬವನ್ನು ತಾತ್ಕಾಲಿಕವಾಗಿ ಹೊಸ ಸ್ಥಳಕ್ಕೆ ಸ್ಥಳಾಂತರಿಸಲು ಮತ್ತು ತನಗೆ ಖಾಸಗಿ ಸಶಸ್ತ್ರ ಭದ್ರತೆಯನ್ನು ವ್ಯವಸ್ಥೆ ಮಾಡಲು ಒತ್ತಾಯಿಸಿದ್ದರು.

ವ್ಯಾಲೇಸ್‌ನಿಂದ ಉಂಟಾದ ಹಾನಿ “ಅಪಾರ” ವಾಗಿತ್ತು, ಇದರ ಪರಿಣಾಮವಾಗಿ ಅವರ “ಸುಳ್ಳುಗಳಿಂದ” ಪ್ರೇರಿತವಾದ ದ್ವೇಷದಿಂದಾಗಿ ನನ್ನ ಕುಟುಂಬವು ತೊಂದರೆಯಲ್ಲಿ ಸಿಲುಕಿಕೊಂಡಿದೆ ಎಂದು ಮೊಕದ್ದಮೆಯಲ್ಲಿ ಸೇರಿಸಲಾಗಿದೆ. ಜೊ ಎಲಿಸ್ ಅಂತಿಮವಾಗಿ ಫೇಸ್‌ಬುಕ್‌ನಲ್ಲಿ “ಜೀವನದ ಪುರಾವೆ” ವೀಡಿಯೊವನ್ನು ಪೋಸ್ಟ್ ಮಾಡಿದರು, ಇದು ಕೆಲವು ವದಂತಿಗಳನ್ನು ಮಾತ್ರ ಹತ್ತಿಕ್ಕಿತು.

2009ರಿಂದ ನ್ಯಾಷನಲ್ ಗಾರ್ಡ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ಇರಾಕ್ ಮತ್ತು ಕುವೈತ್‌ಗೆ ನಿಯೋಜಿಸಲ್ಪಟ್ಟಿರುವ ಜೊ ಎಲಿಸ್ ಎದುರಿಸುತ್ತಿರುವ ಬೆದರಿಕೆಗಳು, ಟ್ರಾನ್ಸ್‌ಜೆಂಡರ್‌ಗಳ ವಿರುದ್ಧ ರಾಜಕೀಯ ವಾಕ್ಚಾತುರ್ಯದಲ್ಲಿ ತೀವ್ರ ಏರಿಕೆ ಕಂಡುಬಂದಿರುವ ಸಮಯದಲ್ಲಿ ಅವರ ಕುರಿತ ತಪ್ಪು ಮಾಹಿತಿಯು ಅವರ ಜೀವನದ ಮೇಲೆ ತೀವ್ರ ಪರಿಣಾಮ ಬೀರಿದೆ.

ಯುನೈಟೆಡ್ ಸ್ಟೇಟ್ಸ್ ನಲ್ಲಿ ಅಧ್ಯಕ್ಷ ಟ್ರಂಪ್ ಟ್ರಾನ್ಸ್ ಜೆಂಡರ್ ಗಳನ್ನು ಗುರಿಯಾಗಿಸಿಕೊಂಡು ಹಲವಾರು ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಿದ್ದಾರೆ. ಇದರಲ್ಲಿ ಒಂದು ಆದೇಶದಲ್ಲಿ ಸರ್ಕಾರಕ್ಕೆ ಗಂಡು ಮತ್ತು ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲು ಸೂಚನೆ ನೀಡುವುದು ಸೇರಿದೆ.

ವಿಮಾನ ಅಪಘಾತದ ನಂತರ, ಟ್ರಂಪ್ ಯಾವುದೇ ಪುರಾವೆಗಳನ್ನು ನೀಡದೆ ವಾಯುಯಾನ ಪ್ರಾಧಿಕಾರದ ವೈವಿಧ್ಯತೆಯ ನೇಮಕಾತಿ ಪದ್ಧತಿಗಳು ಇದಕ್ಕೆ ಭಾಗಶಃ ಕಾರಣವಾಗಿರಬಹುದು ಎಂದು ಸೂಚಿಸಿದ್ದರು. ಇದರಿಂದಾಗಿ ಟ್ರಾನ್ಸ್‌ಜೆಂಡರ್‌ಗಳು ಆನ್‌ಲೈನ್ ವದಂತಿಗಳಿಗೆ ಬಲಿಯಾದರು.

ಜೊ ಎಲ್ಲಿಸ್ ಅವರ ಮೊಕದ್ದಮೆಯ ಪ್ರಕರಣವು ಮಾನನಷ್ಟ ಮೊಕದ್ದಮೆಗಳು ಯುಎಸ್ ನಾಗರಿಕರು ಮತ್ತು ಪ್ರಜಾಪ್ರಭುತ್ವ ಪರ ಗುಂಪುಗಳು ತಪ್ಪು ಮಾಹಿತಿ ಹರಡುವವರನ್ನು ಆರ್ಥಿಕವಾಗಿ ಮತ್ತು ವೈಯಕ್ತಿಕವಾಗಿ ಹೊಣೆಗಾರರನ್ನಾಗಿ ಮಾಡಲು ಬಳಸುವ ಸಾಧನವಾಗಿ ಹೆಚ್ಚುತ್ತಿರುವ ಪ್ರವೃತ್ತಿಯ ಭಾಗವಾಗಿದೆ.

2023ರಲ್ಲಿ ಡೊಮಿನಿಯನ್ ವೋಟಿಂಗ್ ಸಿಸ್ಟಮ್ಸ್ ತನ್ನ ಯಂತ್ರಗಳು ಮತಗಳನ್ನು ಬದಲಾಯಿಸಿವೆ ಎಂಬ ಸುಳ್ಳು ಹೇಳಿಕೆಗಳ ಮೇಲೆ ಮೊಕದ್ದಮೆ ಹೂಡಿದ ನಂತರ ಫಾಕ್ಸ್ ನ್ಯೂಸ್‌ನಿಂದ $787.5 ಮಿಲಿಯನ್ ಇತ್ಯರ್ಥವನ್ನು ಪಡೆದುಕೊಂಡಿತು.

ಹೈಕೋರ್ಟ್‌ನಲ್ಲಿ ಜನ್ಮದಿನದ ಮೋಜು-ಮಸ್ತಿ: ಐವರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...