Homeಅಂತರಾಷ್ಟ್ರೀಯವಿಮಾನ ಅಪಘಾತ ಪ್ರಕರಣ: ಸುಳ್ಳು ಸುದ್ದಿ ಹರಡಿದ್ದ ವ್ಯಕ್ತಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಟ್ರಾನ್ಸ್‌ಜೆಂಡರ್...

ವಿಮಾನ ಅಪಘಾತ ಪ್ರಕರಣ: ಸುಳ್ಳು ಸುದ್ದಿ ಹರಡಿದ್ದ ವ್ಯಕ್ತಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಟ್ರಾನ್ಸ್‌ಜೆಂಡರ್ ಪೈಲಟ್

- Advertisement -
- Advertisement -

ವಾಷಿಂಗ್ಟನ್: ಜನವರಿ ಅಂತ್ಯದಲ್ಲಿ ವಾಷಿಂಗ್ಟನ್‌ನಲ್ಲಿ ಪ್ರಯಾಣಿಕರ ಜೆಟ್‌ಗೆ ಡಿಕ್ಕಿ ಹೊಡೆದ ಮಿಲಿಟರಿ ಹೆಲಿಕಾಪ್ಟರ್ ಅನ್ನು ನಾನು ಚಲಾಯಿಸಿದ್ದೇನೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಹೇಳಿಕೊಂಡ ಸಂಪ್ರದಾಯವಾದಿ ಪ್ರಭಾವಿ ವ್ಯಕ್ತಿಯ ವಿರುದ್ಧ ಟ್ರಾನ್ಸ್‌ಜೆಂಡರ್ ಯುಎಸ್ ಪೈಲಟ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಕೊಲೊರಾಡೋದ ಯುಎಸ್ ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಲಾದ ಮೊಕದ್ದಮೆಯ ಪ್ರಕಾರ, ಎರಡೂ ವಿಮಾನಗಳಲ್ಲಿ 67 ಜನರು ಸಾವನ್ನಪ್ಪಿದ ಅಪಘಾತದ ನಂತರ ‘X’ ಖಾತೆಯಲ್ಲಿ 2.2 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಪ್ರಭಾವಿ ಮ್ಯಾಟ್ ವ್ಯಾಲೇಸ್ ಅವರು ವಿನಾಶಕಾರಿ ಮತ್ತು ಬೇಜವಾಬ್ದಾರಿಯುತ ಮಾನನಷ್ಟ ಅಭಿಯಾನವನ್ನು ರೂಪಿಸಿದ್ದಾರೆ ಎಂದು ಆರೋಪಿಸಿ ಟ್ರಾನ್ಸ್‌ಜೆಂಡರ್ ಯುಎಸ್ ಪೈಲಟ್  ಜೋ ಎಲಿಸ್ ಮೊಕದ್ದಮೆ ಹೂಡಿದ್ದಾರೆ.

ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿದ ವ್ಯಾಲೇಸ್  ಅವರ ಒಂದು ಪೋಸ್ಟ್, ಈ ಪೈಲಟ್ “ಟ್ರಾನ್ಸ್ ಟೆರರ್ ದಾಳಿಯಲ್ಲಿ” ಭಾಗವಹಿಸಿರಬಹುದು ಎಂದು ಹೇಳಿದೆ. ಅವರ “ಖಿನ್ನತೆ” ಮತ್ತು “ಲಿಂಗ ಡಿಸ್ಫೋರಿಯಾ” ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ವಿಮಾನ ಡಿಕ್ಕಿಯನ್ನು ಉಂಟುಮಾಡಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ನನ್ನ ಮೇಲೆ ಆರೋಪಿಸಲಾಗಿದೆ ಎಂದು ಮೊಕದ್ದಮೆಯಲ್ಲಿ  ಜೋ ಎಲಿಸ್ ತಿಳಿಸಿದ್ದಾರೆ.

ವ್ಯಾಲೇಸ್‌ನಿಂದ ಈ ಮೊಕದ್ದಮೆ ಕುರಿತು ತಕ್ಷಣದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ, ನಂತರ ಅವರು ಎಲ್ಲಿಸ್ ಬಗ್ಗೆ ತಮ್ಮ ಪೋಸ್ಟ್‌ಗಳನ್ನು ಅಳಿಸಿ ಹಾಕಿದ್ದರು.

ವ್ಯಾಲೇಸ್ ತನ್ನ ಪ್ರಮುಖ ಸ್ಥಾನಮಾನವನ್ನು ಬಳಸಿಕೊಂಡು ‘X’ ಖಾತೆಯಲ್ಲಿ ಹಣಗಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮೊಕದ್ದಮೆಯಲ್ಲಿ ಆರೋಪಿಸಲಾಗಿದೆ.

ಹತ್ತಾರು ಸಾವಿರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಜೋ ಎಲಿಸ್ ದುರದೃಷ್ಟಕರ ಹೆಲಿಕಾಪ್ಟರ್ ಅನ್ನು ಚಾಲನೆ ಮಾಡಿದ್ದಾರೆ ಎಂದು ತಪ್ಪಾಗಿ ಆರೋಪಿಸುತ್ತಿದ್ದಂತೆ, ಸಾರ್ವಜನಿಕ ದಾಖಲೆಗಳನ್ನು ಬಳಸಿಕೊಂಡು ಯಾರಾದರೂ ತನ್ನ ಮನೆಯನ್ನು ಪತ್ತೆಹಚ್ಚಬಹುದು ಎಂದು ಅವರು ಚಿಂತಿತರಾಗಿದ್ದರು.

ಫೆಬ್ರವರಿಯಲ್ಲಿ AFP ಗೆ ನೀಡಿದ ಸಂದರ್ಶನದಲ್ಲಿ ಜೋ ಎಲಿಸ್ ತಮ್ಮ ಕುಟುಂಬವನ್ನು ತಾತ್ಕಾಲಿಕವಾಗಿ ಹೊಸ ಸ್ಥಳಕ್ಕೆ ಸ್ಥಳಾಂತರಿಸಲು ಮತ್ತು ತನಗೆ ಖಾಸಗಿ ಸಶಸ್ತ್ರ ಭದ್ರತೆಯನ್ನು ವ್ಯವಸ್ಥೆ ಮಾಡಲು ಒತ್ತಾಯಿಸಿದ್ದರು.

ವ್ಯಾಲೇಸ್‌ನಿಂದ ಉಂಟಾದ ಹಾನಿ “ಅಪಾರ” ವಾಗಿತ್ತು, ಇದರ ಪರಿಣಾಮವಾಗಿ ಅವರ “ಸುಳ್ಳುಗಳಿಂದ” ಪ್ರೇರಿತವಾದ ದ್ವೇಷದಿಂದಾಗಿ ನನ್ನ ಕುಟುಂಬವು ತೊಂದರೆಯಲ್ಲಿ ಸಿಲುಕಿಕೊಂಡಿದೆ ಎಂದು ಮೊಕದ್ದಮೆಯಲ್ಲಿ ಸೇರಿಸಲಾಗಿದೆ. ಜೊ ಎಲಿಸ್ ಅಂತಿಮವಾಗಿ ಫೇಸ್‌ಬುಕ್‌ನಲ್ಲಿ “ಜೀವನದ ಪುರಾವೆ” ವೀಡಿಯೊವನ್ನು ಪೋಸ್ಟ್ ಮಾಡಿದರು, ಇದು ಕೆಲವು ವದಂತಿಗಳನ್ನು ಮಾತ್ರ ಹತ್ತಿಕ್ಕಿತು.

2009ರಿಂದ ನ್ಯಾಷನಲ್ ಗಾರ್ಡ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಮತ್ತು ಇರಾಕ್ ಮತ್ತು ಕುವೈತ್‌ಗೆ ನಿಯೋಜಿಸಲ್ಪಟ್ಟಿರುವ ಜೊ ಎಲಿಸ್ ಎದುರಿಸುತ್ತಿರುವ ಬೆದರಿಕೆಗಳು, ಟ್ರಾನ್ಸ್‌ಜೆಂಡರ್‌ಗಳ ವಿರುದ್ಧ ರಾಜಕೀಯ ವಾಕ್ಚಾತುರ್ಯದಲ್ಲಿ ತೀವ್ರ ಏರಿಕೆ ಕಂಡುಬಂದಿರುವ ಸಮಯದಲ್ಲಿ ಅವರ ಕುರಿತ ತಪ್ಪು ಮಾಹಿತಿಯು ಅವರ ಜೀವನದ ಮೇಲೆ ತೀವ್ರ ಪರಿಣಾಮ ಬೀರಿದೆ.

ಯುನೈಟೆಡ್ ಸ್ಟೇಟ್ಸ್ ನಲ್ಲಿ ಅಧ್ಯಕ್ಷ ಟ್ರಂಪ್ ಟ್ರಾನ್ಸ್ ಜೆಂಡರ್ ಗಳನ್ನು ಗುರಿಯಾಗಿಸಿಕೊಂಡು ಹಲವಾರು ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಿದ್ದಾರೆ. ಇದರಲ್ಲಿ ಒಂದು ಆದೇಶದಲ್ಲಿ ಸರ್ಕಾರಕ್ಕೆ ಗಂಡು ಮತ್ತು ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲು ಸೂಚನೆ ನೀಡುವುದು ಸೇರಿದೆ.

ವಿಮಾನ ಅಪಘಾತದ ನಂತರ, ಟ್ರಂಪ್ ಯಾವುದೇ ಪುರಾವೆಗಳನ್ನು ನೀಡದೆ ವಾಯುಯಾನ ಪ್ರಾಧಿಕಾರದ ವೈವಿಧ್ಯತೆಯ ನೇಮಕಾತಿ ಪದ್ಧತಿಗಳು ಇದಕ್ಕೆ ಭಾಗಶಃ ಕಾರಣವಾಗಿರಬಹುದು ಎಂದು ಸೂಚಿಸಿದ್ದರು. ಇದರಿಂದಾಗಿ ಟ್ರಾನ್ಸ್‌ಜೆಂಡರ್‌ಗಳು ಆನ್‌ಲೈನ್ ವದಂತಿಗಳಿಗೆ ಬಲಿಯಾದರು.

ಜೊ ಎಲ್ಲಿಸ್ ಅವರ ಮೊಕದ್ದಮೆಯ ಪ್ರಕರಣವು ಮಾನನಷ್ಟ ಮೊಕದ್ದಮೆಗಳು ಯುಎಸ್ ನಾಗರಿಕರು ಮತ್ತು ಪ್ರಜಾಪ್ರಭುತ್ವ ಪರ ಗುಂಪುಗಳು ತಪ್ಪು ಮಾಹಿತಿ ಹರಡುವವರನ್ನು ಆರ್ಥಿಕವಾಗಿ ಮತ್ತು ವೈಯಕ್ತಿಕವಾಗಿ ಹೊಣೆಗಾರರನ್ನಾಗಿ ಮಾಡಲು ಬಳಸುವ ಸಾಧನವಾಗಿ ಹೆಚ್ಚುತ್ತಿರುವ ಪ್ರವೃತ್ತಿಯ ಭಾಗವಾಗಿದೆ.

2023ರಲ್ಲಿ ಡೊಮಿನಿಯನ್ ವೋಟಿಂಗ್ ಸಿಸ್ಟಮ್ಸ್ ತನ್ನ ಯಂತ್ರಗಳು ಮತಗಳನ್ನು ಬದಲಾಯಿಸಿವೆ ಎಂಬ ಸುಳ್ಳು ಹೇಳಿಕೆಗಳ ಮೇಲೆ ಮೊಕದ್ದಮೆ ಹೂಡಿದ ನಂತರ ಫಾಕ್ಸ್ ನ್ಯೂಸ್‌ನಿಂದ $787.5 ಮಿಲಿಯನ್ ಇತ್ಯರ್ಥವನ್ನು ಪಡೆದುಕೊಂಡಿತು.

ಹೈಕೋರ್ಟ್‌ನಲ್ಲಿ ಜನ್ಮದಿನದ ಮೋಜು-ಮಸ್ತಿ: ಐವರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...