Homeಮುಖಪುಟಅಫ್ಘಾನಿಸ್ತಾನದಲ್ಲಿ ಭಾರತದ ವಿಮಾನ ಪತನವಾಗಿಲ್ಲ: ಸಚಿವಾಲಯ ಸ್ಪಷ್ಟನೆ

ಅಫ್ಘಾನಿಸ್ತಾನದಲ್ಲಿ ಭಾರತದ ವಿಮಾನ ಪತನವಾಗಿಲ್ಲ: ಸಚಿವಾಲಯ ಸ್ಪಷ್ಟನೆ

- Advertisement -
- Advertisement -

ಅಫ್ಘಾನಿಸ್ತಾನದಲ್ಲಿ ಪತನಗೊಂಡ ಸಣ್ಣ ವಿಮಾನವು ಯಾವುದೇ ಭಾರತೀಯ ಮೂಲಗಳಿಗೆ ಸೇರಿದ್ದಲ್ಲ ಮತ್ತು ವಿಮಾನವು ಥಾಯ್ಲೆಂಡ್‌ನ ವಿಮಾನ ನಿಲ್ದಾಣದಿಂದ ಮಾಸ್ಕೋಗೆ ಹಾರುತ್ತಿದ್ದಾಗ ಗಯಾ ವಿಮಾನ ನಿಲ್ದಾಣದಲ್ಲಿ ಇಂಧನ ತುಂಬಿಸಿಕೊಂಡಿತ್ತು ಎಂದು ಭಾರತೀಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಅಪಘಾತದಲ್ಲಿ ಸಿಲುಕಿರುವುದು ಭಾರತೀಯ ವಿಮಾನವಾಗಿದೆ ಎಂಬ ವರದಿಗಳ ನಡುವೆ ನಾಗರಿಕ ವಿಮಾನಯಾನ ಸಚಿವಾಲಯವು ಅಪಘಾತಕ್ಕೀಡಾದ ವಿಮಾನವು ಮೊರಾಕೊಗೆ ಸೇರಿದ DF-10 ವಿಮಾನವಾಗಿದೆ ಎಂದು ಹೇಳಿದೆ.

ವಿಮಾನವು ಏರ್ ಆಂಬುಲೆನ್ಸ್ ಆಗಿತ್ತು ಮತ್ತು ಥೈಲ್ಯಾಂಡ್‌ನಿಂದ ಮಾಸ್ಕೋಗೆ ಹಾರುತ್ತಿತ್ತು ಮತ್ತು ಗಯಾ ವಿಮಾನ ನಿಲ್ದಾಣದಲ್ಲಿ ಇಂಧನವನ್ನು ರೀಫಿಲ್ಲಿಂಗ್‌ ಮಾಡಿಕೊಂಡಿತ್ತು ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಥಾಯ್ಲೆಂಡ್‌ನ ಉಟಾಪಾವೊ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಆರಂಭಿಸಿತ್ತು ಎಂದು ಮೂಲಗಳು ತಿಳಿಸಿವೆ. ಈ ಕುರಿತು ಪೋಸ್ಟ್‌ ಮಾಡಿದ ಸಚಿವಾಲಯ, ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ದುರದೃಷ್ಟಕರ ವಿಮಾನ ಅಪಘಾತವು ಭಾರತೀಯ ಏರ್‌ಕ್ರಾಫ್ಟ್  ವಿಮಾನವಲ್ಲ. ಇದು ಮೊರೊಕನ್-ನೋಂದಾಯಿತ ಸಣ್ಣ ವಿಮಾನವಾಗಿದೆ ಎಂದು ಹೇಳಿದೆ.

ಸುದ್ದಿ ಸಂಸ್ಥೆ ಎಪಿ(ಅಸೋಸಿಯೇಟೆಡ್‌ ಪ್ರೆಸ್‌) ವರದಿಯ ಪ್ರಕಾರ, ಆರು ಜನರನ್ನು ಹೊತ್ತೊಯ್ಯುತ್ತಿದ್ದ ರಷ್ಯಾದ ಖಾಸಗಿ ಜೆಟ್ ಗ್ರಾಮೀಣ ಅಫ್ಘಾನಿಸ್ತಾನದ ಭೂ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಹೇಳಿಕೊಂಡಿತ್ತು. ವಿಮಾನವು ಅಥ್ಲೆಟಿಕ್ ಗ್ರೂಪ್ ಎಲ್ಎಲ್‌ಸಿ ಮತ್ತು ಖಾಸಗಿ ವ್ಯಕ್ತಿಗೆ ಸೇರಿದೆ. ರಷ್ಯಾದ ನಾಗರಿಕ ವಿಮಾನಯಾನ ಅಧಿಕಾರಿಗಳು ವಿಮಾನವೊಂದು ಸಂವಹನವನ್ನು ಕಡಿದುಕೊಂಡು ರಾಡಾರ್ ಪರದೆಗಳಿಂದ ಕಣ್ಮರೆಯಾಗಿದೆ ಎಂದು ಹೇಳಿಕೊಂಡಿದ್ದಾರೆ ಎಂದು ಹೇಳಿತ್ತು.

ಅಫ್ಘಾನಿಸ್ತಾನದ ಟೆಲಿವಿಷನ್ ನೆಟ್‌ವರ್ಕ್ ಟೋಲೋ ನ್ಯೂಸ್ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಕುರಾನ್-ಮುಂಜಾನ್ ಮತ್ತು ಬಡಾಖಾನ್ ಪ್ರಾಂತ್ಯದ ಜಿಬಾಕ್ ಜಿಲ್ಲೆಗಳ ಜೊತೆಗೆ ಟೋಪ್‌ಖಾನಾ ಪರ್ವತಗಳಲ್ಲಿ ಭಾರತೀಯ ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ ಎಂದು ಹೇಳಿಕೊಂಡಿತ್ತು. ಘಟನೆಯ ಕುರಿತು ತನಿಖೆ ನಡೆಸಲು ತಂಡವನ್ನು ಆ ಪ್ರದೇಶಕ್ಕೆ ಕಳುಹಿಸಲಾಗಿದೆ ಎಂದು ಬಡಾಕ್ಷಣ್‌ನ ಮಾಹಿತಿ ಮತ್ತು ಸಂಸ್ಕೃತಿ ಇಲಾಖೆಯ ಮುಖ್ಯಸ್ಥ ಜಬಿಹುಲ್ಲಾ ಅಮೀರಿ ಅವರನ್ನು ಉಲ್ಲೇಖಿಸಿ ಟೋಲೋ ನ್ಯೂಸ್ ವರದಿ ಮಾಡಿತ್ತು.

ಇದನ್ನು ಓದಿ: ಭಾರತ್ ಜೋಡೋ ನ್ಯಾಯ ಯಾತ್ರೆ; ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ದೇಶವನ್ನು ವಿಭಜಿಸುತ್ತಿದೆ; ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...