Homeಮುಖಪುಟವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕುವುದನ್ನು ತೆಗೆದುಹಾಕಿ, ಇಲ್ಲವೆಂದರೆ ಕ್ರಿಮಿನಲ್ ಪ್ರಕರಣ ಎದುರಿಸಿ: ಸಾಮಾಜಿಕ ಮಾಧ್ಯಮಗಳಿಗೆ...

ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕುವುದನ್ನು ತೆಗೆದುಹಾಕಿ, ಇಲ್ಲವೆಂದರೆ ಕ್ರಿಮಿನಲ್ ಪ್ರಕರಣ ಎದುರಿಸಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

- Advertisement -
- Advertisement -

ಭಾರತೀಯ ವಿಮಾನಯಾನ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಮಾಡಲಾಗುತ್ತಿರುವ ಹುಸಿ ಬಾಂಬ್ ಬೆದರಿಕೆಗಳ ಹಿನ್ನಲೆ, ಕೇಂದ್ರ ಸರ್ಕಾರವು ಸಾಮಾಜಿಕ ಮಾಧ್ಯಮಗಳ ಈ ಬೆದರಿಕೆ ಮಾಹಿತಿಗಳನ್ನು ತೆಗೆದುಹಾಕುವಂತೆ ಅಥವಾ ಬ್ಲಾಕ್ ಮಾಡುವಂತೆ ಸಾಮಾಜಿಕ ಮಾಧ್ಯಮಗಳ ನಿರ್ವಾಹಕರಿಗೆ ಸೂಚಿಸಿದ್ದು, ಅದು ವಿಫಲವಾದರೆ ಮುಂದಕ್ಕೆ ಕ್ರಿಮಿನಲ್ ಪ್ರಕರಣ ದಾಖಲಿಸುವ ಬಗ್ಗೆ ಎಚ್ಚರಿಸಿದೆ. ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ

ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಹ ಕೃತ್ಯಗಳ ಬಗ್ಗೆ ಮಾಹಿತಿ ನೀಡಲು ಸಾಮಾಜಿಕ ಮಾಧ್ಯಮ ಸಂಸ್ಥೆಗಳು “ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಅಡಿಯಲ್ಲಿ ಹೆಚ್ಚುವರಿ ಹೊಣೆಗಾರಿಕೆ” ಹೊಂದಿವೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಹೇಳಿದೆ. ಸಾಮಾಜಿಕ ಮಾಧ್ಯಮ ಸಂಸ್ಥೆಗಳು ತನಿಖಾ ಸಂಸ್ಥೆಗಳಿಗೆ ಈ ಬಗ್ಗೆ ಮಾಹಿತಿ ಮತ್ತು ಸಹಾಯವನ್ನು ನೀಡಬೇಕು ಎಂದು ಸರ್ಕಾರ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಸ್ತುತ ನಿಯಮದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಹಾಕುವ ಯಾವುದೆ ಅಭಿಪ್ರಾಯಗಳಿಗೆ ಸಾಮಾಜಿಕ ಮಾಧ್ಯಮಗಳು ಹೊಣೆಯಾಗಿರುವುದಿಲ್ಲ. ಈ ಹೊಣೆಗಾರಿಕೆಯಿಂದ ಅವರಿಗೆ ವಿನಾಯಿತಿಯಿದೆ. ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ

ವಿಮಾನಗಳಿಗೆ ಬಾಂಬ್ ಬೆದರಿಕೆ ನೀಡುವ ಮಾಹಿತಿಯನ್ನು ಬ್ಲಾಕ್ ಮಾಡದಿದ್ದರೆ ಅಥವಾ ತೆಗೆದುಹಾಕದಿದ್ದರೆ, ‘ಹೊಣೆಗಾರಿಕೆಯ ವಿನಾಯಿತಿ’ ಇನ್ನು ಮುಂದೆ ಅವರಿಗೆ ಅನ್ವಯಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸಾಮಾಜಿಕ ಮಾಧ್ಯಮಗಳಿಗೆ ಎಚ್ಚರಿಸಿದೆ. ಸಾಮಾಜಿಕ ಮಾಧ್ಯಮ ಸಂಸ್ಥೆಯು ಈ ಮಾಹಿತಿಯನ್ನು ಪೋಸ್ಟ್ ಮಾಡಿದ್ದಾಗಿ ಕ್ರಿಮಿನಲ್ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಸಚಿವಾಲಯ ಹೇಳಿದೆ.

“ಇಂತಹ ಹುಸಿ ಬಾಂಬ್ ಬೆದರಿಕೆಗಳು ಹೆಚ್ಚಿನ ಸಂಖ್ಯೆಯ ನಾಗರಿಕರ ಮೇಲೆ ಪರಿಣಾಮ ಬೀರುತ್ತದೆ ಮತ್ತು ದೇಶದ ಆರ್ಥಿಕ ಭದ್ರತೆಯನ್ನು ಸಹ ಅಸ್ಥಿರಗೊಳಿಸುತ್ತದೆ. ತಪ್ಪು ಮಾಹಿತಿಯನ್ನು ಫಾರ್ವರ್ಡ್ ಮಾಡುವ, ಮರುಪೋಸ್ಟ್ ಮಾಡುವ ಅಥವಾ ರಿಟ್ವೀಟ್ ಮಾಡುವ ಆಯ್ಕೆಗಳಿಂದಾಗಿ ಅಂತಹ ಬೆದರಿಕೆಗಳ ಪ್ರಮಾಣವು ನಿಯಂತ್ರಿಸಲಾರದಷ್ಟು ಅಪಾಯಕಾರಿಯಾಗಿ ಪರಿಣಮಿಸಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

“ಇಂತಹ ಹುಸಿ ಬಾಂಬ್ ಬೆದರಿಕೆಗಳು ಸಾರ್ವಜನಿಕ ಸುವ್ಯವಸ್ಥೆ, ವಿಮಾನಯಾನ ಸಂಸ್ಥೆಗಳ ಕಾರ್ಯಾಚರಣೆಗಳು ಮತ್ತು ವಿಮಾನಯಾನ ಪ್ರಯಾಣಿಕರ ಸುರಕ್ಷತೆಯನ್ನು ಭಾರಿ ಪ್ರಮಾಣದಲ್ಲಿ ಅಡ್ಡಿಪಡಿಸುವ ತಪ್ಪು ಮಾಹಿತಿಯಾಗಿದೆ” ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೇಳಿದೆ.

ಕಳೆದ 12 ದಿನಗಳಲ್ಲಿ, ಭಾರತೀಯ ವಿಮಾನಯಾನ ಸಂಸ್ಥೆಗಳ 275 ಕ್ಕೂ ಹೆಚ್ಚು ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆಗಳು ಬಂದಿವೆ ಎಂದು ಪಿಟಿಐ ವರದಿ ಮಾಡಿದೆ. ಅತೀ ಹೆಚ್ಚು ಬೆದರಿಕೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ನೀಡಲಾಗಿದ್ದು, ಪರಿಣಾಮವಾಗಿ ಹಲವಾರು ವಿಮಾನಗಳನ್ನು ತಿರುಗಿಸಲಾಗಿದ್ದು, ಹಲವು ಪ್ರಯಾಣವನ್ನು ವಿಳಂಬಗೊಳಿಸಲಾಗಿದೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ಕಿಂಜರಾಪು ನಾಯ್ಡು ಅವರು, ವಿಮಾನಗಳಿಗೆ ಬೆದರಿಕೆ ಒಡ್ಡಿದ ತಪ್ಪಿತಸ್ಥರನ್ನು ‘ನೊ-ಫ್ಲೈ’ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರವು ಶಾಸಕಾಂಗ ಕ್ರಮವನ್ನು ತರಲು ಪರಿಗಣಿಸುತ್ತಿದೆ ಎಂದು ಸೋಮವಾರ ಹೇಳಿದ್ದಾರೆ.

ಇದನ್ನೂ ಓದಿ: ಜಾಗತಿಕ ಪ್ರಕೃತಿ ಸಂರಕ್ಷಣಾ ಸೂಚ್ಯಂಕ | ಭಾರತಕ್ಕೆ 180ರಲ್ಲಿ 176 ನೇ ಸ್ಥಾನ

ಜಾಗತಿಕ ಪ್ರಕೃತಿ ಸಂರಕ್ಷಣಾ ಸೂಚ್ಯಂಕ | ಭಾರತಕ್ಕೆ 180ರಲ್ಲಿ 176 ನೇ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...