Homeಮುಖಪುಟವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕುವುದನ್ನು ತೆಗೆದುಹಾಕಿ, ಇಲ್ಲವೆಂದರೆ ಕ್ರಿಮಿನಲ್ ಪ್ರಕರಣ ಎದುರಿಸಿ: ಸಾಮಾಜಿಕ ಮಾಧ್ಯಮಗಳಿಗೆ...

ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕುವುದನ್ನು ತೆಗೆದುಹಾಕಿ, ಇಲ್ಲವೆಂದರೆ ಕ್ರಿಮಿನಲ್ ಪ್ರಕರಣ ಎದುರಿಸಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

- Advertisement -
- Advertisement -

ಭಾರತೀಯ ವಿಮಾನಯಾನ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಮಾಡಲಾಗುತ್ತಿರುವ ಹುಸಿ ಬಾಂಬ್ ಬೆದರಿಕೆಗಳ ಹಿನ್ನಲೆ, ಕೇಂದ್ರ ಸರ್ಕಾರವು ಸಾಮಾಜಿಕ ಮಾಧ್ಯಮಗಳ ಈ ಬೆದರಿಕೆ ಮಾಹಿತಿಗಳನ್ನು ತೆಗೆದುಹಾಕುವಂತೆ ಅಥವಾ ಬ್ಲಾಕ್ ಮಾಡುವಂತೆ ಸಾಮಾಜಿಕ ಮಾಧ್ಯಮಗಳ ನಿರ್ವಾಹಕರಿಗೆ ಸೂಚಿಸಿದ್ದು, ಅದು ವಿಫಲವಾದರೆ ಮುಂದಕ್ಕೆ ಕ್ರಿಮಿನಲ್ ಪ್ರಕರಣ ದಾಖಲಿಸುವ ಬಗ್ಗೆ ಎಚ್ಚರಿಸಿದೆ. ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ

ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಹ ಕೃತ್ಯಗಳ ಬಗ್ಗೆ ಮಾಹಿತಿ ನೀಡಲು ಸಾಮಾಜಿಕ ಮಾಧ್ಯಮ ಸಂಸ್ಥೆಗಳು “ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಅಡಿಯಲ್ಲಿ ಹೆಚ್ಚುವರಿ ಹೊಣೆಗಾರಿಕೆ” ಹೊಂದಿವೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಹೇಳಿದೆ. ಸಾಮಾಜಿಕ ಮಾಧ್ಯಮ ಸಂಸ್ಥೆಗಳು ತನಿಖಾ ಸಂಸ್ಥೆಗಳಿಗೆ ಈ ಬಗ್ಗೆ ಮಾಹಿತಿ ಮತ್ತು ಸಹಾಯವನ್ನು ನೀಡಬೇಕು ಎಂದು ಸರ್ಕಾರ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಸ್ತುತ ನಿಯಮದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಹಾಕುವ ಯಾವುದೆ ಅಭಿಪ್ರಾಯಗಳಿಗೆ ಸಾಮಾಜಿಕ ಮಾಧ್ಯಮಗಳು ಹೊಣೆಯಾಗಿರುವುದಿಲ್ಲ. ಈ ಹೊಣೆಗಾರಿಕೆಯಿಂದ ಅವರಿಗೆ ವಿನಾಯಿತಿಯಿದೆ. ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ

ವಿಮಾನಗಳಿಗೆ ಬಾಂಬ್ ಬೆದರಿಕೆ ನೀಡುವ ಮಾಹಿತಿಯನ್ನು ಬ್ಲಾಕ್ ಮಾಡದಿದ್ದರೆ ಅಥವಾ ತೆಗೆದುಹಾಕದಿದ್ದರೆ, ‘ಹೊಣೆಗಾರಿಕೆಯ ವಿನಾಯಿತಿ’ ಇನ್ನು ಮುಂದೆ ಅವರಿಗೆ ಅನ್ವಯಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸಾಮಾಜಿಕ ಮಾಧ್ಯಮಗಳಿಗೆ ಎಚ್ಚರಿಸಿದೆ. ಸಾಮಾಜಿಕ ಮಾಧ್ಯಮ ಸಂಸ್ಥೆಯು ಈ ಮಾಹಿತಿಯನ್ನು ಪೋಸ್ಟ್ ಮಾಡಿದ್ದಾಗಿ ಕ್ರಿಮಿನಲ್ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಸಚಿವಾಲಯ ಹೇಳಿದೆ.

“ಇಂತಹ ಹುಸಿ ಬಾಂಬ್ ಬೆದರಿಕೆಗಳು ಹೆಚ್ಚಿನ ಸಂಖ್ಯೆಯ ನಾಗರಿಕರ ಮೇಲೆ ಪರಿಣಾಮ ಬೀರುತ್ತದೆ ಮತ್ತು ದೇಶದ ಆರ್ಥಿಕ ಭದ್ರತೆಯನ್ನು ಸಹ ಅಸ್ಥಿರಗೊಳಿಸುತ್ತದೆ. ತಪ್ಪು ಮಾಹಿತಿಯನ್ನು ಫಾರ್ವರ್ಡ್ ಮಾಡುವ, ಮರುಪೋಸ್ಟ್ ಮಾಡುವ ಅಥವಾ ರಿಟ್ವೀಟ್ ಮಾಡುವ ಆಯ್ಕೆಗಳಿಂದಾಗಿ ಅಂತಹ ಬೆದರಿಕೆಗಳ ಪ್ರಮಾಣವು ನಿಯಂತ್ರಿಸಲಾರದಷ್ಟು ಅಪಾಯಕಾರಿಯಾಗಿ ಪರಿಣಮಿಸಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

“ಇಂತಹ ಹುಸಿ ಬಾಂಬ್ ಬೆದರಿಕೆಗಳು ಸಾರ್ವಜನಿಕ ಸುವ್ಯವಸ್ಥೆ, ವಿಮಾನಯಾನ ಸಂಸ್ಥೆಗಳ ಕಾರ್ಯಾಚರಣೆಗಳು ಮತ್ತು ವಿಮಾನಯಾನ ಪ್ರಯಾಣಿಕರ ಸುರಕ್ಷತೆಯನ್ನು ಭಾರಿ ಪ್ರಮಾಣದಲ್ಲಿ ಅಡ್ಡಿಪಡಿಸುವ ತಪ್ಪು ಮಾಹಿತಿಯಾಗಿದೆ” ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೇಳಿದೆ.

ಕಳೆದ 12 ದಿನಗಳಲ್ಲಿ, ಭಾರತೀಯ ವಿಮಾನಯಾನ ಸಂಸ್ಥೆಗಳ 275 ಕ್ಕೂ ಹೆಚ್ಚು ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆಗಳು ಬಂದಿವೆ ಎಂದು ಪಿಟಿಐ ವರದಿ ಮಾಡಿದೆ. ಅತೀ ಹೆಚ್ಚು ಬೆದರಿಕೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ನೀಡಲಾಗಿದ್ದು, ಪರಿಣಾಮವಾಗಿ ಹಲವಾರು ವಿಮಾನಗಳನ್ನು ತಿರುಗಿಸಲಾಗಿದ್ದು, ಹಲವು ಪ್ರಯಾಣವನ್ನು ವಿಳಂಬಗೊಳಿಸಲಾಗಿದೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ಕಿಂಜರಾಪು ನಾಯ್ಡು ಅವರು, ವಿಮಾನಗಳಿಗೆ ಬೆದರಿಕೆ ಒಡ್ಡಿದ ತಪ್ಪಿತಸ್ಥರನ್ನು ‘ನೊ-ಫ್ಲೈ’ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರವು ಶಾಸಕಾಂಗ ಕ್ರಮವನ್ನು ತರಲು ಪರಿಗಣಿಸುತ್ತಿದೆ ಎಂದು ಸೋಮವಾರ ಹೇಳಿದ್ದಾರೆ.

ಇದನ್ನೂ ಓದಿ: ಜಾಗತಿಕ ಪ್ರಕೃತಿ ಸಂರಕ್ಷಣಾ ಸೂಚ್ಯಂಕ | ಭಾರತಕ್ಕೆ 180ರಲ್ಲಿ 176 ನೇ ಸ್ಥಾನ

ಜಾಗತಿಕ ಪ್ರಕೃತಿ ಸಂರಕ್ಷಣಾ ಸೂಚ್ಯಂಕ | ಭಾರತಕ್ಕೆ 180ರಲ್ಲಿ 176 ನೇ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...