Homeಅಂತರಾಷ್ಟ್ರೀಯಅಮೆರಿಕದ ಎಚ್ಚರಿಕೆ ಬೆನ್ನಲ್ಲೇ ವೆನೆಜುವೆಲಾ ರಾಜಧಾನಿಯಲ್ಲಿ ವಿಮಾನಗಳ ಅಬ್ಬರ; ಸರಣಿ ಸ್ಫೋಟ

ಅಮೆರಿಕದ ಎಚ್ಚರಿಕೆ ಬೆನ್ನಲ್ಲೇ ವೆನೆಜುವೆಲಾ ರಾಜಧಾನಿಯಲ್ಲಿ ವಿಮಾನಗಳ ಅಬ್ಬರ; ಸರಣಿ ಸ್ಫೋಟ

- Advertisement -
- Advertisement -

ಶನಿವಾರ ಮುಂಜಾನೆ ಸಮೀಪದಲ್ಲೇ ವಿಮಾನಗಳು ಘರ್ಜಿಸಿದವು, ಬೀದಿಗಳಲ್ಲಿ ಸರಣಿ ಸ್ಫೋಟಗಳು ಸಂಭವಿಸಿದ್ದು, ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಮೇಲೆ ಹೊಗೆ ಬುಗ್ಗೆ ಆವರಿಸಿತು ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ವರದಿಗಳ ಪ್ರೆಸ್ ಪ್ರಕಾರ, ಕನಿಷ್ಠ ಏಳು ಕಡೆ ಸರಣಿ ಸ್ಫೋಟದ ಶಬ್ದಗಳು ಕೇಳಿಬಂದವು. ನಿವಾಸಿಗಳು ಬೀದಿಗಳಿಗೆ ಧಾವಿಸಿದಾಗ ಸಮೀಪದಲ್ಲೇ ವಿಮಾನ ಹಾರಾಟ ಕಂಡುಬಂದಿದೆ. ನಗರದಾದ್ಯಂತ ಸ್ಫೋಟ ಸಂಭವಿಸಿದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ.

ವೆನೆಜುವೆಲಾದ ಪ್ರಮುಖ ಮಿಲಿಟರಿ ಕೋಟೆ, ಕ್ಯಾರಕಾಸ್ ನಗರದ ಪಶ್ಚಿಮಕ್ಕೆ ಫೋರ್ಟ್ ಟಿಯುನಾ ಮತ್ತು ಲಾ ಕಾರ್ಲೋಟಾ ಮಿಲಿಟರಿ ನೆಲೆಯಲ್ಲಿ ವಿಮಾನಗಳು ಹತ್ತಿರದಲ್ಲೇ ಹಾರುತ್ತಿರುವಾಗ ಸ್ಫೋಟಗಳು ವರದಿಯಾಗಿವೆ ಎಂದು ಸ್ಪ್ಯಾನಿಷ್ ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎಫ್‌ಇ ವರದಿ ಮಾಡಿದೆ.

“ಇಡೀ ನೆಲ ನಡುಗಿ ಭಯಾನಕವಾಗಿದೆ. ದೂರದಲ್ಲಿ ಸ್ಫೋಟ ಮತ್ತು ವಿಮಾನ ಹಾರಾಟದ ಶಬ್ಧ ನಮಗೆ ಕೇಳಿಬಂದವು. ಗಾಳಿಯು ನಮ್ಮನ್ನು ಹೊಡೆದಂತೆ ನಮಗೆ ಭಾಸವಾಯಿತು” ಎಂದು 21 ವರ್ಷದ ಕಚೇರಿ ಕೆಲಸಗಾರ ಕಾರ್ಮೆನ್ ಹಿಡಾಲ್ಗೊ ಮಾಧ್ಯಮಗಳಿಗೆ ತಿಳಿಸಿದರು.

ಹಿಗುರೋಟ್ ವಿಮಾನ ನಿಲ್ದಾಣದಲ್ಲಿಯೂ ದೊಡ್ಡ ಸ್ಫೋಟ

ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಧಿಕಾರದಿಂದ ಹೊರಗಿಡುವ ಪ್ರಯತ್ನಗಳ ಭಾಗವಾಗಿ, ನಿರ್ಬಂಧಗಳನ್ನು ಹೆಚ್ಚಿಸುವುದು, ಈ ಪ್ರದೇಶದಲ್ಲಿ ಮಿಲಿಟರಿ ಕಾರ್ಯಚರಣೆ ಹೆಚ್ಚಿಸುವ ಜೊತೆಗೆ ಕೆರಿಬಿಯನ್ ಮತ್ತು ಪೆಸಿಫಿಕ್‌ನಲ್ಲಿ ಮಾದಕವಸ್ತು ಕಳ್ಳಸಾಗಣೆ ಆರೋಪ ಹೊತ್ತಿರುವ ಎರಡು ಡಜನ್‌ಗೂ ಹೆಚ್ಚು ಹಡಗುಗಳನ್ನು ಗುರಿಯಾಗಿಸಿಕೊಂಡು ವೆನೆಜುವೆಲಾದಲ್ಲಿ ಕಾರ್ಯಾಚರಣೆಗಳನ್ನು ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಬೆದರಿಕೆ ಹಾಕಿದ್ದಾರೆ.

ಪೆಂಟಗನ್ ಅಥವಾ ವೆನೆಜುವೆಲಾ ಸರ್ಕಾರವು ಊವರೆಗೆ ಯಾವುದೇ ತಕ್ಷಣ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಟ್ರಂಪ್ ಆಡಳಿತದ ಅಧಿಕಾರಿಗಳಿಗೆ ವೆನೆಜುವೆಲಾದಲ್ಲಿ ಬಾಂಬ್ ದಾಳಿಗಳ ಬಗ್ಗೆ ತಿಳಿದಿರಲಿಲ್ಲ ಎಂದು ಸಿಬಿಎಸ್ ನ್ಯೂಸ್ ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಅಧ್ಯಕ್ಷ ಟ್ರಂಪ್ ಅವರು ವೆನೆಜುವೆಲಾದಲ್ಲಿ ದೇಶದ ಅಕ್ರಮ ಮಾದಕವಸ್ತು ವ್ಯಾಪಾರವನ್ನು ತಡೆಯಲು ಮತ್ತು ವಲಸಿಗರ ಹರಿವನ್ನು ತಡೆಯಲು ಕಾರ್ಯನಿರ್ವಹಿಸಲು ಸಿಐಎಗೆ ಅಧಿಕಾರ ನೀಡಿದ್ದಾರೆ ಎಂದು ಬಹಿರಂಗಪಡಿಸಿದರು.

ಮಡುರೊ, ಯುನೈಟೆಡ್ ಸ್ಟೇಟ್ಸ್‌ನಲ್ಲಿ ಮಾದಕವಸ್ತು-ಭಯೋತ್ಪಾದನಾ ಆರೋಪಗಳನ್ನು ಎದುರಿಸುತ್ತಿದ್ದಾರೆ. ಕಳೆದ ವಾರ, ಸಿಐಎ ವೆನೆಜುವೆಲಾದ ಡ್ರಗ್ ಕಾರ್ಟೆಲ್‌ಗಳು ಬಳಸುತ್ತಿದ್ದಾರೆ ಎಂದು ಹೇಳಲಾದ ಡಾಕಿಂಗ್ ಸೈಟ್ ಮೇಲೆ ಡ್ರೋನ್ ದಾಳಿ ನಡೆಸಿತು, ಇದು ಸೆಪ್ಟೆಂಬರ್‌ನಲ್ಲಿ ಹಡಗುಗಳ ಮೇಲೆ ದಾಳಿಗಳು ಪ್ರಾರಂಭವಾದ ನಂತರ ವೆನೆಜುವೆಲಾ ನೆಲದಲ್ಲಿ ಮೊದಲ ಅಧಿಕೃತ ಯುಎಸ್ ಕಾರ್ಯಾಚರಣೆಯಾಗಿದೆ.

ವೆನೆಜುವೆಲಾದ ಕರಾವಳಿಯಲ್ಲಿ ಯುನೈಟೆಡ್ ಸ್ಟೇಟ್ಸ್ ಅನುಮೋದಿತ ತೈಲ ಟ್ಯಾಂಕರ್‌ಗಳನ್ನು ಸಹ ವಶಪಡಿಸಿಕೊಂಡಿದೆ. ಕೂಡಲೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇತರ ಹಡಗುಗಳನ್ನು ದಿಗ್ಬಂಧನ ಮಾಡಲು ಆದೇಶಿಸಿದರು. ವೆನೆಜುವೆಲಾ ದೇಶದ ಮೇಲೆ ಆರ್ಥಿಕ ಒತ್ತಡವನ್ನು ಬಿಗಿಗೊಳಿಸಿದರು. ಶುಕ್ರವಾರದ ವೇಳೆಗೆ, ಅಮೆರಿಕದ ದಾಳಿಗಳು 35 ದೋಣಿಗಳನ್ನು ಹೊಡೆದುರುಳಿಸಿವೆ ಎಂದು ಟ್ರಂಪ್ ಆಡಳಿತ ಹೇಳಿದೆ, ಇದರಲ್ಲಿ ಕನಿಷ್ಠ 115 ಜನರು ಸಾವನ್ನಪ್ಪಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...

ದಲಿತ ಮಹಿಳೆ ಕಾರಣಕ್ಕೆ ಪೋಷಕರಿಂದ ಅಂಗನವಾಡಿ ಬಹಿಷ್ಕಾರ: ಅಧಿಕಾರಿಗಳ ಮನವೊಲಿಕೆ ಬಳಿಕ ಮರಳಿದ ಮಕ್ಕಳು

ದಲಿತ ಸಮುದಾಯದ ಅಡುಗೆ ಸಹಾಯಕಿ ನೇಮಕದ ನಂತರ ಗ್ರಾಮಸ್ಥರು ಅಂಗನವಾಡಿ ಕೇಂದ್ರವನ್ನು ಬಹಿಷ್ಕರಿಸಿದ್ದ ವಿಚಾರ ರಾಷ್ಟ್ರದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿತ್ತು. ಒಡಿಶಾದ ಕೇಂದ್ರಪಾರ ಜಿಲ್ಲಾಡಳಿತದ ಅಧಿಕಾರಿಗಳ ಮನವೊಲಿಕೆ ಬಳಿಕ ಪೋಷಕರು ಅಂಗನವಾಡಿಗೆ ಮಕ್ಕಳನ್ನು...

FEMA ಉಲ್ಲಂಘನೆ ಆರೋಪ : ನ್ಯೂಸ್‌ಕ್ಲಿಕ್‌ ಪೋರ್ಟಲ್‌, ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥಗೆ 184 ಕೋಟಿ ರೂ.ದಂಡ ವಿಧಿಸಿದ ಇಡಿ

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್‌ಇಎಂಎ-ಫೆಮಾ) ಉಲ್ಲಂಘನೆಗೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಜಾಲತಾಣ ಮತ್ತು ಅದರ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) 184 ಕೋಟಿ ರೂಪಾಯಿ ದಂಡ...

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ...

ಶಿವಮೊಗ್ಗ: 40 ಸಾವಿರ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿ ಸೇರಿ ಇಬ್ಬರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು 

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್...

ಕಲಬುರಗಿ| ಅನುಮತಿ ಇಲ್ಲದೆ ಪುರಾತತ್ವ ಇಲಾಖೆ ಕೋಟೆ ಪ್ರವೇಶಕ್ಕೆ ಯತ್ನಿಸಿದ ಪಿಎಸ್‌ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ತಂಡ

ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮಾಜಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನೇತೃತ್ವದ ಗುಂಪೊಂದು ಭಾನುವಾರ ಕಲಬುರಗಿ ಕೋಟೆಗೆ ಮಹಾಶಿವರಾತ್ರಿ ಪೂಜೆ ಮಾಡಲು ಅನುಮತಿಯಿಲ್ಲದೆ ಪ್ರವೇಶಿಸಲು ಯತ್ನಿಸಿದ...

‘ಆರೆಸ್ಸೆಸ್ ಭೂತ, ಬಿಜೆಪಿ ಅದರ ನೆರಳು’: ಆರ್‌ಎಸ್‌ಎಸ್ ನೋಂದಣಿ ಆಗೇ ಆಗುತ್ತೆ, ನಾವು ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆ 

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಆರ್‌ಎಸ್‌ಎಸ್ ಮತ್ತು ಅದರ ಸೈದ್ಧಾಂತಿಕ ಸಂತತಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಆರ್‌ಎಸ್‌ಎಸ್ ಇಲ್ಲದೆ ಬಿಜೆಪಿ "ಜೆಡಿ (ಎಸ್) ಗಿಂತ ದುರ್ಬಲವಾಗಿದೆ"...