Homeಅಂತರಾಷ್ಟ್ರೀಯಅಮೆರಿಕದ ಎಚ್ಚರಿಕೆ ಬೆನ್ನಲ್ಲೇ ವೆನೆಜುವೆಲಾ ರಾಜಧಾನಿಯಲ್ಲಿ ವಿಮಾನಗಳ ಅಬ್ಬರ; ಸರಣಿ ಸ್ಫೋಟ

ಅಮೆರಿಕದ ಎಚ್ಚರಿಕೆ ಬೆನ್ನಲ್ಲೇ ವೆನೆಜುವೆಲಾ ರಾಜಧಾನಿಯಲ್ಲಿ ವಿಮಾನಗಳ ಅಬ್ಬರ; ಸರಣಿ ಸ್ಫೋಟ

- Advertisement -
- Advertisement -

ಶನಿವಾರ ಮುಂಜಾನೆ ಸಮೀಪದಲ್ಲೇ ವಿಮಾನಗಳು ಘರ್ಜಿಸಿದವು, ಬೀದಿಗಳಲ್ಲಿ ಸರಣಿ ಸ್ಫೋಟಗಳು ಸಂಭವಿಸಿದ್ದು, ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಮೇಲೆ ಹೊಗೆ ಬುಗ್ಗೆ ಆವರಿಸಿತು ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ವರದಿಗಳ ಪ್ರೆಸ್ ಪ್ರಕಾರ, ಕನಿಷ್ಠ ಏಳು ಕಡೆ ಸರಣಿ ಸ್ಫೋಟದ ಶಬ್ದಗಳು ಕೇಳಿಬಂದವು. ನಿವಾಸಿಗಳು ಬೀದಿಗಳಿಗೆ ಧಾವಿಸಿದಾಗ ಸಮೀಪದಲ್ಲೇ ವಿಮಾನ ಹಾರಾಟ ಕಂಡುಬಂದಿದೆ. ನಗರದಾದ್ಯಂತ ಸ್ಫೋಟ ಸಂಭವಿಸಿದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ.

ವೆನೆಜುವೆಲಾದ ಪ್ರಮುಖ ಮಿಲಿಟರಿ ಕೋಟೆ, ಕ್ಯಾರಕಾಸ್ ನಗರದ ಪಶ್ಚಿಮಕ್ಕೆ ಫೋರ್ಟ್ ಟಿಯುನಾ ಮತ್ತು ಲಾ ಕಾರ್ಲೋಟಾ ಮಿಲಿಟರಿ ನೆಲೆಯಲ್ಲಿ ವಿಮಾನಗಳು ಹತ್ತಿರದಲ್ಲೇ ಹಾರುತ್ತಿರುವಾಗ ಸ್ಫೋಟಗಳು ವರದಿಯಾಗಿವೆ ಎಂದು ಸ್ಪ್ಯಾನಿಷ್ ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎಫ್‌ಇ ವರದಿ ಮಾಡಿದೆ.

“ಇಡೀ ನೆಲ ನಡುಗಿ ಭಯಾನಕವಾಗಿದೆ. ದೂರದಲ್ಲಿ ಸ್ಫೋಟ ಮತ್ತು ವಿಮಾನ ಹಾರಾಟದ ಶಬ್ಧ ನಮಗೆ ಕೇಳಿಬಂದವು. ಗಾಳಿಯು ನಮ್ಮನ್ನು ಹೊಡೆದಂತೆ ನಮಗೆ ಭಾಸವಾಯಿತು” ಎಂದು 21 ವರ್ಷದ ಕಚೇರಿ ಕೆಲಸಗಾರ ಕಾರ್ಮೆನ್ ಹಿಡಾಲ್ಗೊ ಮಾಧ್ಯಮಗಳಿಗೆ ತಿಳಿಸಿದರು.

ಹಿಗುರೋಟ್ ವಿಮಾನ ನಿಲ್ದಾಣದಲ್ಲಿಯೂ ದೊಡ್ಡ ಸ್ಫೋಟ

ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಧಿಕಾರದಿಂದ ಹೊರಗಿಡುವ ಪ್ರಯತ್ನಗಳ ಭಾಗವಾಗಿ, ನಿರ್ಬಂಧಗಳನ್ನು ಹೆಚ್ಚಿಸುವುದು, ಈ ಪ್ರದೇಶದಲ್ಲಿ ಮಿಲಿಟರಿ ಕಾರ್ಯಚರಣೆ ಹೆಚ್ಚಿಸುವ ಜೊತೆಗೆ ಕೆರಿಬಿಯನ್ ಮತ್ತು ಪೆಸಿಫಿಕ್‌ನಲ್ಲಿ ಮಾದಕವಸ್ತು ಕಳ್ಳಸಾಗಣೆ ಆರೋಪ ಹೊತ್ತಿರುವ ಎರಡು ಡಜನ್‌ಗೂ ಹೆಚ್ಚು ಹಡಗುಗಳನ್ನು ಗುರಿಯಾಗಿಸಿಕೊಂಡು ವೆನೆಜುವೆಲಾದಲ್ಲಿ ಕಾರ್ಯಾಚರಣೆಗಳನ್ನು ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಬೆದರಿಕೆ ಹಾಕಿದ್ದಾರೆ.

ಪೆಂಟಗನ್ ಅಥವಾ ವೆನೆಜುವೆಲಾ ಸರ್ಕಾರವು ಊವರೆಗೆ ಯಾವುದೇ ತಕ್ಷಣ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಟ್ರಂಪ್ ಆಡಳಿತದ ಅಧಿಕಾರಿಗಳಿಗೆ ವೆನೆಜುವೆಲಾದಲ್ಲಿ ಬಾಂಬ್ ದಾಳಿಗಳ ಬಗ್ಗೆ ತಿಳಿದಿರಲಿಲ್ಲ ಎಂದು ಸಿಬಿಎಸ್ ನ್ಯೂಸ್ ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಅಧ್ಯಕ್ಷ ಟ್ರಂಪ್ ಅವರು ವೆನೆಜುವೆಲಾದಲ್ಲಿ ದೇಶದ ಅಕ್ರಮ ಮಾದಕವಸ್ತು ವ್ಯಾಪಾರವನ್ನು ತಡೆಯಲು ಮತ್ತು ವಲಸಿಗರ ಹರಿವನ್ನು ತಡೆಯಲು ಕಾರ್ಯನಿರ್ವಹಿಸಲು ಸಿಐಎಗೆ ಅಧಿಕಾರ ನೀಡಿದ್ದಾರೆ ಎಂದು ಬಹಿರಂಗಪಡಿಸಿದರು.

ಮಡುರೊ, ಯುನೈಟೆಡ್ ಸ್ಟೇಟ್ಸ್‌ನಲ್ಲಿ ಮಾದಕವಸ್ತು-ಭಯೋತ್ಪಾದನಾ ಆರೋಪಗಳನ್ನು ಎದುರಿಸುತ್ತಿದ್ದಾರೆ. ಕಳೆದ ವಾರ, ಸಿಐಎ ವೆನೆಜುವೆಲಾದ ಡ್ರಗ್ ಕಾರ್ಟೆಲ್‌ಗಳು ಬಳಸುತ್ತಿದ್ದಾರೆ ಎಂದು ಹೇಳಲಾದ ಡಾಕಿಂಗ್ ಸೈಟ್ ಮೇಲೆ ಡ್ರೋನ್ ದಾಳಿ ನಡೆಸಿತು, ಇದು ಸೆಪ್ಟೆಂಬರ್‌ನಲ್ಲಿ ಹಡಗುಗಳ ಮೇಲೆ ದಾಳಿಗಳು ಪ್ರಾರಂಭವಾದ ನಂತರ ವೆನೆಜುವೆಲಾ ನೆಲದಲ್ಲಿ ಮೊದಲ ಅಧಿಕೃತ ಯುಎಸ್ ಕಾರ್ಯಾಚರಣೆಯಾಗಿದೆ.

ವೆನೆಜುವೆಲಾದ ಕರಾವಳಿಯಲ್ಲಿ ಯುನೈಟೆಡ್ ಸ್ಟೇಟ್ಸ್ ಅನುಮೋದಿತ ತೈಲ ಟ್ಯಾಂಕರ್‌ಗಳನ್ನು ಸಹ ವಶಪಡಿಸಿಕೊಂಡಿದೆ. ಕೂಡಲೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇತರ ಹಡಗುಗಳನ್ನು ದಿಗ್ಬಂಧನ ಮಾಡಲು ಆದೇಶಿಸಿದರು. ವೆನೆಜುವೆಲಾ ದೇಶದ ಮೇಲೆ ಆರ್ಥಿಕ ಒತ್ತಡವನ್ನು ಬಿಗಿಗೊಳಿಸಿದರು. ಶುಕ್ರವಾರದ ವೇಳೆಗೆ, ಅಮೆರಿಕದ ದಾಳಿಗಳು 35 ದೋಣಿಗಳನ್ನು ಹೊಡೆದುರುಳಿಸಿವೆ ಎಂದು ಟ್ರಂಪ್ ಆಡಳಿತ ಹೇಳಿದೆ, ಇದರಲ್ಲಿ ಕನಿಷ್ಠ 115 ಜನರು ಸಾವನ್ನಪ್ಪಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...