Homeಅಂತರಾಷ್ಟ್ರೀಯಅಮೆರಿಕದ ಎಚ್ಚರಿಕೆ ಬೆನ್ನಲ್ಲೇ ವೆನೆಜುವೆಲಾ ರಾಜಧಾನಿಯಲ್ಲಿ ವಿಮಾನಗಳ ಅಬ್ಬರ; ಸರಣಿ ಸ್ಫೋಟ

ಅಮೆರಿಕದ ಎಚ್ಚರಿಕೆ ಬೆನ್ನಲ್ಲೇ ವೆನೆಜುವೆಲಾ ರಾಜಧಾನಿಯಲ್ಲಿ ವಿಮಾನಗಳ ಅಬ್ಬರ; ಸರಣಿ ಸ್ಫೋಟ

- Advertisement -
- Advertisement -

ಶನಿವಾರ ಮುಂಜಾನೆ ಸಮೀಪದಲ್ಲೇ ವಿಮಾನಗಳು ಘರ್ಜಿಸಿದವು, ಬೀದಿಗಳಲ್ಲಿ ಸರಣಿ ಸ್ಫೋಟಗಳು ಸಂಭವಿಸಿದ್ದು, ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಮೇಲೆ ಹೊಗೆ ಬುಗ್ಗೆ ಆವರಿಸಿತು ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ವರದಿಗಳ ಪ್ರೆಸ್ ಪ್ರಕಾರ, ಕನಿಷ್ಠ ಏಳು ಕಡೆ ಸರಣಿ ಸ್ಫೋಟದ ಶಬ್ದಗಳು ಕೇಳಿಬಂದವು. ನಿವಾಸಿಗಳು ಬೀದಿಗಳಿಗೆ ಧಾವಿಸಿದಾಗ ಸಮೀಪದಲ್ಲೇ ವಿಮಾನ ಹಾರಾಟ ಕಂಡುಬಂದಿದೆ. ನಗರದಾದ್ಯಂತ ಸ್ಫೋಟ ಸಂಭವಿಸಿದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ.

ವೆನೆಜುವೆಲಾದ ಪ್ರಮುಖ ಮಿಲಿಟರಿ ಕೋಟೆ, ಕ್ಯಾರಕಾಸ್ ನಗರದ ಪಶ್ಚಿಮಕ್ಕೆ ಫೋರ್ಟ್ ಟಿಯುನಾ ಮತ್ತು ಲಾ ಕಾರ್ಲೋಟಾ ಮಿಲಿಟರಿ ನೆಲೆಯಲ್ಲಿ ವಿಮಾನಗಳು ಹತ್ತಿರದಲ್ಲೇ ಹಾರುತ್ತಿರುವಾಗ ಸ್ಫೋಟಗಳು ವರದಿಯಾಗಿವೆ ಎಂದು ಸ್ಪ್ಯಾನಿಷ್ ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎಫ್‌ಇ ವರದಿ ಮಾಡಿದೆ.

“ಇಡೀ ನೆಲ ನಡುಗಿ ಭಯಾನಕವಾಗಿದೆ. ದೂರದಲ್ಲಿ ಸ್ಫೋಟ ಮತ್ತು ವಿಮಾನ ಹಾರಾಟದ ಶಬ್ಧ ನಮಗೆ ಕೇಳಿಬಂದವು. ಗಾಳಿಯು ನಮ್ಮನ್ನು ಹೊಡೆದಂತೆ ನಮಗೆ ಭಾಸವಾಯಿತು” ಎಂದು 21 ವರ್ಷದ ಕಚೇರಿ ಕೆಲಸಗಾರ ಕಾರ್ಮೆನ್ ಹಿಡಾಲ್ಗೊ ಮಾಧ್ಯಮಗಳಿಗೆ ತಿಳಿಸಿದರು.

ಹಿಗುರೋಟ್ ವಿಮಾನ ನಿಲ್ದಾಣದಲ್ಲಿಯೂ ದೊಡ್ಡ ಸ್ಫೋಟ

ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಧಿಕಾರದಿಂದ ಹೊರಗಿಡುವ ಪ್ರಯತ್ನಗಳ ಭಾಗವಾಗಿ, ನಿರ್ಬಂಧಗಳನ್ನು ಹೆಚ್ಚಿಸುವುದು, ಈ ಪ್ರದೇಶದಲ್ಲಿ ಮಿಲಿಟರಿ ಕಾರ್ಯಚರಣೆ ಹೆಚ್ಚಿಸುವ ಜೊತೆಗೆ ಕೆರಿಬಿಯನ್ ಮತ್ತು ಪೆಸಿಫಿಕ್‌ನಲ್ಲಿ ಮಾದಕವಸ್ತು ಕಳ್ಳಸಾಗಣೆ ಆರೋಪ ಹೊತ್ತಿರುವ ಎರಡು ಡಜನ್‌ಗೂ ಹೆಚ್ಚು ಹಡಗುಗಳನ್ನು ಗುರಿಯಾಗಿಸಿಕೊಂಡು ವೆನೆಜುವೆಲಾದಲ್ಲಿ ಕಾರ್ಯಾಚರಣೆಗಳನ್ನು ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಬೆದರಿಕೆ ಹಾಕಿದ್ದಾರೆ.

ಪೆಂಟಗನ್ ಅಥವಾ ವೆನೆಜುವೆಲಾ ಸರ್ಕಾರವು ಊವರೆಗೆ ಯಾವುದೇ ತಕ್ಷಣ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಟ್ರಂಪ್ ಆಡಳಿತದ ಅಧಿಕಾರಿಗಳಿಗೆ ವೆನೆಜುವೆಲಾದಲ್ಲಿ ಬಾಂಬ್ ದಾಳಿಗಳ ಬಗ್ಗೆ ತಿಳಿದಿರಲಿಲ್ಲ ಎಂದು ಸಿಬಿಎಸ್ ನ್ಯೂಸ್ ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಅಧ್ಯಕ್ಷ ಟ್ರಂಪ್ ಅವರು ವೆನೆಜುವೆಲಾದಲ್ಲಿ ದೇಶದ ಅಕ್ರಮ ಮಾದಕವಸ್ತು ವ್ಯಾಪಾರವನ್ನು ತಡೆಯಲು ಮತ್ತು ವಲಸಿಗರ ಹರಿವನ್ನು ತಡೆಯಲು ಕಾರ್ಯನಿರ್ವಹಿಸಲು ಸಿಐಎಗೆ ಅಧಿಕಾರ ನೀಡಿದ್ದಾರೆ ಎಂದು ಬಹಿರಂಗಪಡಿಸಿದರು.

ಮಡುರೊ, ಯುನೈಟೆಡ್ ಸ್ಟೇಟ್ಸ್‌ನಲ್ಲಿ ಮಾದಕವಸ್ತು-ಭಯೋತ್ಪಾದನಾ ಆರೋಪಗಳನ್ನು ಎದುರಿಸುತ್ತಿದ್ದಾರೆ. ಕಳೆದ ವಾರ, ಸಿಐಎ ವೆನೆಜುವೆಲಾದ ಡ್ರಗ್ ಕಾರ್ಟೆಲ್‌ಗಳು ಬಳಸುತ್ತಿದ್ದಾರೆ ಎಂದು ಹೇಳಲಾದ ಡಾಕಿಂಗ್ ಸೈಟ್ ಮೇಲೆ ಡ್ರೋನ್ ದಾಳಿ ನಡೆಸಿತು, ಇದು ಸೆಪ್ಟೆಂಬರ್‌ನಲ್ಲಿ ಹಡಗುಗಳ ಮೇಲೆ ದಾಳಿಗಳು ಪ್ರಾರಂಭವಾದ ನಂತರ ವೆನೆಜುವೆಲಾ ನೆಲದಲ್ಲಿ ಮೊದಲ ಅಧಿಕೃತ ಯುಎಸ್ ಕಾರ್ಯಾಚರಣೆಯಾಗಿದೆ.

ವೆನೆಜುವೆಲಾದ ಕರಾವಳಿಯಲ್ಲಿ ಯುನೈಟೆಡ್ ಸ್ಟೇಟ್ಸ್ ಅನುಮೋದಿತ ತೈಲ ಟ್ಯಾಂಕರ್‌ಗಳನ್ನು ಸಹ ವಶಪಡಿಸಿಕೊಂಡಿದೆ. ಕೂಡಲೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇತರ ಹಡಗುಗಳನ್ನು ದಿಗ್ಬಂಧನ ಮಾಡಲು ಆದೇಶಿಸಿದರು. ವೆನೆಜುವೆಲಾ ದೇಶದ ಮೇಲೆ ಆರ್ಥಿಕ ಒತ್ತಡವನ್ನು ಬಿಗಿಗೊಳಿಸಿದರು. ಶುಕ್ರವಾರದ ವೇಳೆಗೆ, ಅಮೆರಿಕದ ದಾಳಿಗಳು 35 ದೋಣಿಗಳನ್ನು ಹೊಡೆದುರುಳಿಸಿವೆ ಎಂದು ಟ್ರಂಪ್ ಆಡಳಿತ ಹೇಳಿದೆ, ಇದರಲ್ಲಿ ಕನಿಷ್ಠ 115 ಜನರು ಸಾವನ್ನಪ್ಪಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...