Homeಅಂತರಾಷ್ಟ್ರೀಯಅಮೆರಿಕದ ಎಚ್ಚರಿಕೆ ಬೆನ್ನಲ್ಲೇ ವೆನೆಜುವೆಲಾ ರಾಜಧಾನಿಯಲ್ಲಿ ವಿಮಾನಗಳ ಅಬ್ಬರ; ಸರಣಿ ಸ್ಫೋಟ

ಅಮೆರಿಕದ ಎಚ್ಚರಿಕೆ ಬೆನ್ನಲ್ಲೇ ವೆನೆಜುವೆಲಾ ರಾಜಧಾನಿಯಲ್ಲಿ ವಿಮಾನಗಳ ಅಬ್ಬರ; ಸರಣಿ ಸ್ಫೋಟ

- Advertisement -
- Advertisement -

ಶನಿವಾರ ಮುಂಜಾನೆ ಸಮೀಪದಲ್ಲೇ ವಿಮಾನಗಳು ಘರ್ಜಿಸಿದವು, ಬೀದಿಗಳಲ್ಲಿ ಸರಣಿ ಸ್ಫೋಟಗಳು ಸಂಭವಿಸಿದ್ದು, ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಮೇಲೆ ಹೊಗೆ ಬುಗ್ಗೆ ಆವರಿಸಿತು ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ವರದಿಗಳ ಪ್ರೆಸ್ ಪ್ರಕಾರ, ಕನಿಷ್ಠ ಏಳು ಕಡೆ ಸರಣಿ ಸ್ಫೋಟದ ಶಬ್ದಗಳು ಕೇಳಿಬಂದವು. ನಿವಾಸಿಗಳು ಬೀದಿಗಳಿಗೆ ಧಾವಿಸಿದಾಗ ಸಮೀಪದಲ್ಲೇ ವಿಮಾನ ಹಾರಾಟ ಕಂಡುಬಂದಿದೆ. ನಗರದಾದ್ಯಂತ ಸ್ಫೋಟ ಸಂಭವಿಸಿದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ.

ವೆನೆಜುವೆಲಾದ ಪ್ರಮುಖ ಮಿಲಿಟರಿ ಕೋಟೆ, ಕ್ಯಾರಕಾಸ್ ನಗರದ ಪಶ್ಚಿಮಕ್ಕೆ ಫೋರ್ಟ್ ಟಿಯುನಾ ಮತ್ತು ಲಾ ಕಾರ್ಲೋಟಾ ಮಿಲಿಟರಿ ನೆಲೆಯಲ್ಲಿ ವಿಮಾನಗಳು ಹತ್ತಿರದಲ್ಲೇ ಹಾರುತ್ತಿರುವಾಗ ಸ್ಫೋಟಗಳು ವರದಿಯಾಗಿವೆ ಎಂದು ಸ್ಪ್ಯಾನಿಷ್ ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎಫ್‌ಇ ವರದಿ ಮಾಡಿದೆ.

“ಇಡೀ ನೆಲ ನಡುಗಿ ಭಯಾನಕವಾಗಿದೆ. ದೂರದಲ್ಲಿ ಸ್ಫೋಟ ಮತ್ತು ವಿಮಾನ ಹಾರಾಟದ ಶಬ್ಧ ನಮಗೆ ಕೇಳಿಬಂದವು. ಗಾಳಿಯು ನಮ್ಮನ್ನು ಹೊಡೆದಂತೆ ನಮಗೆ ಭಾಸವಾಯಿತು” ಎಂದು 21 ವರ್ಷದ ಕಚೇರಿ ಕೆಲಸಗಾರ ಕಾರ್ಮೆನ್ ಹಿಡಾಲ್ಗೊ ಮಾಧ್ಯಮಗಳಿಗೆ ತಿಳಿಸಿದರು.

ಹಿಗುರೋಟ್ ವಿಮಾನ ನಿಲ್ದಾಣದಲ್ಲಿಯೂ ದೊಡ್ಡ ಸ್ಫೋಟ

ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಧಿಕಾರದಿಂದ ಹೊರಗಿಡುವ ಪ್ರಯತ್ನಗಳ ಭಾಗವಾಗಿ, ನಿರ್ಬಂಧಗಳನ್ನು ಹೆಚ್ಚಿಸುವುದು, ಈ ಪ್ರದೇಶದಲ್ಲಿ ಮಿಲಿಟರಿ ಕಾರ್ಯಚರಣೆ ಹೆಚ್ಚಿಸುವ ಜೊತೆಗೆ ಕೆರಿಬಿಯನ್ ಮತ್ತು ಪೆಸಿಫಿಕ್‌ನಲ್ಲಿ ಮಾದಕವಸ್ತು ಕಳ್ಳಸಾಗಣೆ ಆರೋಪ ಹೊತ್ತಿರುವ ಎರಡು ಡಜನ್‌ಗೂ ಹೆಚ್ಚು ಹಡಗುಗಳನ್ನು ಗುರಿಯಾಗಿಸಿಕೊಂಡು ವೆನೆಜುವೆಲಾದಲ್ಲಿ ಕಾರ್ಯಾಚರಣೆಗಳನ್ನು ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಬೆದರಿಕೆ ಹಾಕಿದ್ದಾರೆ.

ಪೆಂಟಗನ್ ಅಥವಾ ವೆನೆಜುವೆಲಾ ಸರ್ಕಾರವು ಊವರೆಗೆ ಯಾವುದೇ ತಕ್ಷಣ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಟ್ರಂಪ್ ಆಡಳಿತದ ಅಧಿಕಾರಿಗಳಿಗೆ ವೆನೆಜುವೆಲಾದಲ್ಲಿ ಬಾಂಬ್ ದಾಳಿಗಳ ಬಗ್ಗೆ ತಿಳಿದಿರಲಿಲ್ಲ ಎಂದು ಸಿಬಿಎಸ್ ನ್ಯೂಸ್ ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಅಧ್ಯಕ್ಷ ಟ್ರಂಪ್ ಅವರು ವೆನೆಜುವೆಲಾದಲ್ಲಿ ದೇಶದ ಅಕ್ರಮ ಮಾದಕವಸ್ತು ವ್ಯಾಪಾರವನ್ನು ತಡೆಯಲು ಮತ್ತು ವಲಸಿಗರ ಹರಿವನ್ನು ತಡೆಯಲು ಕಾರ್ಯನಿರ್ವಹಿಸಲು ಸಿಐಎಗೆ ಅಧಿಕಾರ ನೀಡಿದ್ದಾರೆ ಎಂದು ಬಹಿರಂಗಪಡಿಸಿದರು.

ಮಡುರೊ, ಯುನೈಟೆಡ್ ಸ್ಟೇಟ್ಸ್‌ನಲ್ಲಿ ಮಾದಕವಸ್ತು-ಭಯೋತ್ಪಾದನಾ ಆರೋಪಗಳನ್ನು ಎದುರಿಸುತ್ತಿದ್ದಾರೆ. ಕಳೆದ ವಾರ, ಸಿಐಎ ವೆನೆಜುವೆಲಾದ ಡ್ರಗ್ ಕಾರ್ಟೆಲ್‌ಗಳು ಬಳಸುತ್ತಿದ್ದಾರೆ ಎಂದು ಹೇಳಲಾದ ಡಾಕಿಂಗ್ ಸೈಟ್ ಮೇಲೆ ಡ್ರೋನ್ ದಾಳಿ ನಡೆಸಿತು, ಇದು ಸೆಪ್ಟೆಂಬರ್‌ನಲ್ಲಿ ಹಡಗುಗಳ ಮೇಲೆ ದಾಳಿಗಳು ಪ್ರಾರಂಭವಾದ ನಂತರ ವೆನೆಜುವೆಲಾ ನೆಲದಲ್ಲಿ ಮೊದಲ ಅಧಿಕೃತ ಯುಎಸ್ ಕಾರ್ಯಾಚರಣೆಯಾಗಿದೆ.

ವೆನೆಜುವೆಲಾದ ಕರಾವಳಿಯಲ್ಲಿ ಯುನೈಟೆಡ್ ಸ್ಟೇಟ್ಸ್ ಅನುಮೋದಿತ ತೈಲ ಟ್ಯಾಂಕರ್‌ಗಳನ್ನು ಸಹ ವಶಪಡಿಸಿಕೊಂಡಿದೆ. ಕೂಡಲೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇತರ ಹಡಗುಗಳನ್ನು ದಿಗ್ಬಂಧನ ಮಾಡಲು ಆದೇಶಿಸಿದರು. ವೆನೆಜುವೆಲಾ ದೇಶದ ಮೇಲೆ ಆರ್ಥಿಕ ಒತ್ತಡವನ್ನು ಬಿಗಿಗೊಳಿಸಿದರು. ಶುಕ್ರವಾರದ ವೇಳೆಗೆ, ಅಮೆರಿಕದ ದಾಳಿಗಳು 35 ದೋಣಿಗಳನ್ನು ಹೊಡೆದುರುಳಿಸಿವೆ ಎಂದು ಟ್ರಂಪ್ ಆಡಳಿತ ಹೇಳಿದೆ, ಇದರಲ್ಲಿ ಕನಿಷ್ಠ 115 ಜನರು ಸಾವನ್ನಪ್ಪಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...