Homeಮುಖಪುಟಮೇ 04ರಿಂದ ಕೈಗಾರಿಕೆ ತೆರೆಯಲು ಯೋಚನೆ; ನಾಳೆಯಿಂದ ಸಾರಿಗೆ ವ್ಯವಸ್ಥೆ

ಮೇ 04ರಿಂದ ಕೈಗಾರಿಕೆ ತೆರೆಯಲು ಯೋಚನೆ; ನಾಳೆಯಿಂದ ಸಾರಿಗೆ ವ್ಯವಸ್ಥೆ

- Advertisement -
- Advertisement -

ಪ್ರಧಾನಿ ಸೂಚನೆ ಮೇರೆಗೆ ಕೋವಿಡ್-19 ಹಿನ್ನೆಲೆಯಲ್ಲಿ ಕಂಟೋನ್ಮೆಂಟ್ ಜೋನ್‌ಗಳನ್ನು ಹೊರತುಪಡಿಸಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಮೇ 4ರಿಂದ ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡಿದ್ದು ಈ ಮೂಲಕ ಆರ್ಥಿಕ ಪುನಶ್ಚೇತನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮದ್ಯ ಮಾರಾಟ ಮತ್ತು ಇತರೆ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸುವ ಕುರಿತು ಮೇ 3ರ ನಂತರ ತೀರ್ಮಾನ ಕೈಗೊಳ್ಳಲಾಗುವುದು. ಹೋಟೆಲ್ ಗಳಲ್ಲಿ ಕೇವಲ ಪಾರ್ಸಲ್ ಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಕೊರೋನಾದಿಂದ ಜನರು ಆತಂಕ, ಭೀತಿ ಮತ್ತು ಖಿನ್ನತೆಗೆ ಒಳಗಾಗದಂತೆ ತಿಳುವಳಿಕೆ ಮೂಡಿಸಬೇಕು. ಜನರಲ್ಲಿ ಅತ್ಮಸ್ಥೈರ್ಯ ತುಂಬುವಂತಹ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಇದುವರೆಗೂ ಮಾಧ್ಯಮಗಳು ಸಾಕಷ್ಟು ಕೆಲಸ ಮಾಡಿವೆ ಎಂದು ಶ್ಲಾಘಿಸಿದರು.

ಕೊರೊನ ವ್ಯಾಪಕವಾದರೆ ಲಾಕ್ ಡೌನ್‌ 2-3 ತಿಂಗಳು ಮುಂದೂಡಿದರೂ ಅಚ್ಚರಿ ಇಲ್ಲ. ಆದರೂ ಆರ್ಥಿಕ ಚಟುವಟಿಕೆಗಳು ನಡೆಯಬೇಕು. ಎರಡನ್ನೂ ಒಟ್ಟೊಟ್ಟಿಗೆ ತೆಗೆದುಕೊಂಡು ಹೊಗುತ್ತೇವೆ. ಈ ಹಿನ್ನೆಲೆಯಲ್ಲಿ ಕೈಗಾರಿಕೆಗಳನ್ನು ಆರಂಭಿಸುವ ಸಂಬಂಧ ಗೃಹ ಕಚೇರಿ ಕೃಷ್ಣದಲ್ಲಿ ಸಂಜೆ ಕೈಗಾರಿಕೋದ್ಯಮಿಗಳ ಜೊತೆ ಸಮಾಲೋಚನೆ ಮಾಡುತ್ತೇವೆ ಎಂದು ತಿಳಿಸಿದರು.

ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮಾತನಾಡಿ, ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು ಸೇರಿದಂತೆ ಲಾಕ್ ಡೌನ್ ನಲ್ಲಿ ಸಿಲುಕಿರುವವರು ತಮ್ಮ ಸ್ವಸ್ಥಾನಗಳಿಗೆ ತೆರಳಲು ಅನುಕೂಲವಾಗುವಂತೆ ಅಂತರ್‌ರಾಜ್ಯ ಮತ್ತು ಅಂತರ್ ಜಿಲ್ಲೆಗಳಿಗೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ವಲಸೆ ಕಾರ್ಮಿಕರು ತಮ್ಮ ಖರ್ಚಿನಲ್ಲಿ ತೆರಳಬಹುದು. ಬೇಕೆಂದರೆ ಬಸ್ ವ್ಯವಸ್ಥೆ ಕಲ್ಪಸಲಾಗುವುದು. ಹೀಗೆ ಪ್ರಯಾಣ ಮಾಡುವವರ ಸ್ಯಾಂಪಲ್ ಸಂಗ್ರಹಿಸುವುದು ಕಡ್ಡಾಯವಾಗಿದೆ. ನಾಳೆಯಿಂದಲೇ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಂಪು ವಲಯವನ್ನು ಹೊರತುಪಡಿಸಿ ಎಲ್ಲಾ ವಲಯಗಳಲ್ಲಿ ಬಸ್ ಸಂಚಾರ ಇರಲಿದೆ ಎಂದಿದ್ದಾರೆ.


ಇದನ್ನೂ ಓದಿ: ಅಶಿಸ್ತಿನ ಕ್ರಮ: ಅತಿ ಶ್ರೀಮಂತರಿಗೆ ಕೊರೊನಾ ತೆರಿಗೆ ವಿಧಿಸುವ IRS ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪರಿಸರಕ್ಕೆ ಹಾನಿಕಾರಕ ವಾಗುವ ಕಾರ್ಖಾನೆಗಳು ಈಗೆನೇ ಮುಚ್ಚಿಕೊಂಡೇ ಇರಲಿ.
    ಅದನ್ನು ತೆರೆದು ಇನ್ನಷ್ಟು ರೋಗಿಗಳನ್ನು ನಿರ್ಮಿಸುವುದು ಬೇಡ.

  2. ಜಿಲ್ಲಯ ಯಾವುದೋ ಮೂಲೆಯಲ್ಲಿ ಕರೋನಾ ಸೋಂಕಿತರಿಂದ ಇಡಿ ಜಿಲ್ಲೆಯನ್ನು ರೆಡ್ ಜೋನ್ ಎಂದು ಸಾರುವುದು ತಪ್ಪು.
    ಎತ್ತುಗೆ, ನಂಜನಗೂಡಿನಿಂದಾಗಿ, ಪಿರಿಯಾಪಟ್ಟಣ… ಮುಂತಾದ ಊರುಗಳು ಮಯ್ಸೂರು ಜಿಲ್ಲೆಗೆ ಸೇರಿದ ಊರುಗಳು.
    ರೆಡ್ ಜೋನ್ ಗೆ ಬೇರೆ ಅಳತೆಗೋಲಿರಬೇಕು.

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...