Homeಕರ್ನಾಟಕಅನಂತಕುಮಾರ್‌ ನೆಟ್ಟ ಗಿಡ ಉಳಿಸಬೇಕಿದೆ: ರಾಜಕೀಯ ಅರ್ಥ ಧ್ವನಿಸಿತೇ ತೇಜಸ್ವಿನಿ ಟ್ವೀಟ್?

ಅನಂತಕುಮಾರ್‌ ನೆಟ್ಟ ಗಿಡ ಉಳಿಸಬೇಕಿದೆ: ರಾಜಕೀಯ ಅರ್ಥ ಧ್ವನಿಸಿತೇ ತೇಜಸ್ವಿನಿ ಟ್ವೀಟ್?

- Advertisement -
- Advertisement -

ಅಭ್ಯರ್ಥಿಗಳ ಟಿಕೆಟ್ ಘೋಷಣೆಯಾದ ಬಳಿಕ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಕಾವು ಜೋರಾಗಿದೆ. ಮತ್ತೊಂದೆಡೆ ಮಾಜಿ ಸಚಿವ, ದಿವಂಗತ ಅನಂತಕುಮಾರ್‌ ಅವರ ಪಾಳೆಯದಲ್ಲಿದ್ದ ಬಿಜೆಪಿ ನಾಯಕರಿಗೆ ಟಿಕೆಟ್ ಕೈತಪ್ಪುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಹೀಗಿರುವಾಗ ಅನಂತಕುಮಾರ್‌ ಅವರ ಪತ್ನಿ, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಅವರು ಮಾಡಿರುವ ಟ್ವೀಟ್ ರಾಜಕೀಯ ಅರ್ಥಗಳನ್ನು ಹೊಮ್ಮಿಸಿದಂತೆ ಭಾಸವಾಗಿದೆ.

ಸೋಮವಾರ ಮಾಡಿರುವ ಟ್ವೀಟ್‌ವೊಂದರಲ್ಲಿ ತೇಜಸ್ವಿನಿ ಅನಂತಕುಮಾರ್‌, “ಈ ಗಿಡ ಜೂನ್ 5, 2015ರಂದು ಲಾಲ್‌‌ಬಾಗ್ ಪಶ್ಚಿಮ ದ್ವಾರದ ಬಳಿ ಶ್ರೀ ಅನಂತಕುಮಾರ್ ಅವರು ನೆಟ್ಟಿದ್ದು. ಯಾಕೋ ಮುದುರಿ ಹೋಗಿದೆ. ಲಾಲ್‌ಬಾಗ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇವೆ. ಶ್ರೀ ಅನಂತಕುಮಾರರ ಅನುಪಸ್ಥಿತಿಯಲ್ಲಿ ಈ ಗಿಡವನ್ನು ಉಳಿಸುವ ಜವಾಬ್ದಾರಿ ನಮ್ಮದು, ಎಂಬುದು ನನ್ನ ಭಾವನೆ” ಎಂದು ಬರೆದುಕೊಂಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ “ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ?” ಎಂದು ಕೇಳಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಆಗುತ್ತಿರುವ ಬೆಳವಣಿಗೆಗಳಿಗೂ ತೇಜಸ್ವಿನಿಯವರ ಟ್ವೀಟ್‌ಗಳಿಗೂ ಕಾಕತಾಳೀಯವೆಂಬಂತೆ ಹೋಲಿಕೆ ಮಾಡಿ ಅನೇಕರು ಪ್ರತಿಕ್ರಿಯಿಸಿದ್ದಾರೆ. ಅನಂತಕುಮಾರ್‌ ಅವರೊಂದಿಗೆ ಗುರುತಿಸಿಕೊಂಡು ಬೆಳೆದ ಅನೇಕರಿಗೆ ಬಿಜೆಪಿ ಟಿಕೆಟ್ ಕೈತಪ್ಪಿರುವಾಗ ಹಾಗೂ ರಾಜ್ಯ ಬಿಜೆಪಿಯೊಳಗೆ ಬಿಕ್ಕಟ್ಟು ತಾರಕ್ಕೇರುತ್ತಿರುವಾಗ ತೇಜಸ್ವಿನಿಯವರ ಪೋಸ್ಟ್‌ ವಿವಿಧ ಅರ್ಥಗಳಿಗೆ ಅವಕಾಶ ಮಾಡಿಕೊಟ್ಟಿದೆ.

“Cryptic message (ನಿಗೂಢ ಸಂದೇಶ) ಯಾಕೆ ಮೇಡಂ? ನೇರವಾಗಿ ಹೇಳಬಿಡಿ” ಎಂದು ಸಿಟಿಜನ್‌ ಆಫ್‌ ಕನ್ನಡಸ್ಥಾನ ಟ್ವಿಟರ್‌ ಖಾತೆ ಒತ್ತಾಯಿಸಿದೆ.

“ರೆಂಬೆ ಕೊಂಬೆ ಮುರಿದಿದೆ ಒಣಗಿಲ್ಲ. ಒಣಗಲು ಬಿಡಬಾರದು. ನಾವು ನೆಟ್ಟ ಸಸಿ ಮರವಾಗಿದೆ ಹೆಮ್ಮರವಾಗಿ ಬೆಳೆದು ನೂರಾರು ವರ್ಷಗಳ ಕಾಲ ಫಲ ನೀಡಬೇಕು. ಯಾರೂ ರಕ್ಷಿಸದಿದ್ದರೆ ನಾವೇ ಕಾರ್ಯ ಪ್ರವೃತ್ತರಾಗಬೇಕು. ಇಲ್ಲವಾದರೆ ನಮ್ಮ ಕಣ್ಮುಂದೆಯೇ ಒಣಗಿ ಸಾಯಬಹುದು, ಯೋಚಿಸೋಣ” ಎಂದು ಗಂಗಾಧರ್‌ ಬಿಕೆಎಸ್‌ ಎಂಬವರು ಪ್ರತಿಕ್ರಿಯಿಸಿದ್ದಾರೆ.

“ಅನಂತಕುಮಾರ್ ಅವರು ನೆಟ್ಟ ಗಿಡ ಉಳಿಸೋದು ಎಷ್ಟು ಮುಖ್ಯನೋ ಹಾಗೆ ಅವರು ಬೆವರು ಸುರಿಸಿ ಕಟ್ಟಿದ ಪಕ್ಷ ಮತ್ತು ಸಿದ್ಧಾಂತ ಉಳಿಸುವುದು ಮುಖ್ಯವೆ, ಆ ಕೆಲಸ ಎಂದಿನಿಂದ ಶುರು ಮಾಡುತ್ತೀರಿ?” ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

“ಕಮಲ ಕರ್ನಾಟಕದಲ್ಲಿ, ಈ ಗಿಡ ಲಾಲ್ಬಾಗ್‌ನಲ್ಲಿ (ಒಣಗುತ್ತಿದೆ)” ಎಂದು ನವೀನ್‌ಕುಮಾರ್‌ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

“ಬಿ.ಎಲ್‌.ಸಂತೋಷ್, ಜೋಶಿ ಅವರಿಂದಾಗಿ ಗಿಡ ಮುದುಡಿ ಹೋಗಿದೆ ಅಷ್ಟೇ ಮೇಡಂ” ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ನಮ್ಮ ಈ ಸುಂದರವಾದ ಸರ್ವಜನಾಂಗದ ಶಾಂತಿಯ ತೋಟದ ಶಾಂತಿಯನ್ನು ಕದಡುತ್ತಿರುವ ಬಿಜೆಪಿ ಮುಂಬರುವ ದಿನಗಳಲ್ಲಿ ಮುದುರಿಕೊಳ್ಳುವುದರ ಸಂಕೇತವೆನಿಸುತ್ತೆ. ಬೇಗ ಬಿದ್ದು ನಾಶವಾಗಿ ಹೋಗಲಿ, ಉಳಿದೆಲ್ಲ ಮರ-ಗಿಡ-ಬಳ್ಳಿಗಳು ಹಸಿರಿನಿಂದ ಕಂಗೊಳಿಸಲಿ” ಎಂದು ಬಾರುಕೋಲು ಟ್ವಿಟರ್‌ ಖಾತೆ ಪ್ರತಿಕ್ರಿಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....