Homeಕರ್ನಾಟಕಅನಂತಕುಮಾರ್‌ ನೆಟ್ಟ ಗಿಡ ಉಳಿಸಬೇಕಿದೆ: ರಾಜಕೀಯ ಅರ್ಥ ಧ್ವನಿಸಿತೇ ತೇಜಸ್ವಿನಿ ಟ್ವೀಟ್?

ಅನಂತಕುಮಾರ್‌ ನೆಟ್ಟ ಗಿಡ ಉಳಿಸಬೇಕಿದೆ: ರಾಜಕೀಯ ಅರ್ಥ ಧ್ವನಿಸಿತೇ ತೇಜಸ್ವಿನಿ ಟ್ವೀಟ್?

- Advertisement -
- Advertisement -

ಅಭ್ಯರ್ಥಿಗಳ ಟಿಕೆಟ್ ಘೋಷಣೆಯಾದ ಬಳಿಕ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಕಾವು ಜೋರಾಗಿದೆ. ಮತ್ತೊಂದೆಡೆ ಮಾಜಿ ಸಚಿವ, ದಿವಂಗತ ಅನಂತಕುಮಾರ್‌ ಅವರ ಪಾಳೆಯದಲ್ಲಿದ್ದ ಬಿಜೆಪಿ ನಾಯಕರಿಗೆ ಟಿಕೆಟ್ ಕೈತಪ್ಪುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಹೀಗಿರುವಾಗ ಅನಂತಕುಮಾರ್‌ ಅವರ ಪತ್ನಿ, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಅವರು ಮಾಡಿರುವ ಟ್ವೀಟ್ ರಾಜಕೀಯ ಅರ್ಥಗಳನ್ನು ಹೊಮ್ಮಿಸಿದಂತೆ ಭಾಸವಾಗಿದೆ.

ಸೋಮವಾರ ಮಾಡಿರುವ ಟ್ವೀಟ್‌ವೊಂದರಲ್ಲಿ ತೇಜಸ್ವಿನಿ ಅನಂತಕುಮಾರ್‌, “ಈ ಗಿಡ ಜೂನ್ 5, 2015ರಂದು ಲಾಲ್‌‌ಬಾಗ್ ಪಶ್ಚಿಮ ದ್ವಾರದ ಬಳಿ ಶ್ರೀ ಅನಂತಕುಮಾರ್ ಅವರು ನೆಟ್ಟಿದ್ದು. ಯಾಕೋ ಮುದುರಿ ಹೋಗಿದೆ. ಲಾಲ್‌ಬಾಗ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇವೆ. ಶ್ರೀ ಅನಂತಕುಮಾರರ ಅನುಪಸ್ಥಿತಿಯಲ್ಲಿ ಈ ಗಿಡವನ್ನು ಉಳಿಸುವ ಜವಾಬ್ದಾರಿ ನಮ್ಮದು, ಎಂಬುದು ನನ್ನ ಭಾವನೆ” ಎಂದು ಬರೆದುಕೊಂಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ “ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ?” ಎಂದು ಕೇಳಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಆಗುತ್ತಿರುವ ಬೆಳವಣಿಗೆಗಳಿಗೂ ತೇಜಸ್ವಿನಿಯವರ ಟ್ವೀಟ್‌ಗಳಿಗೂ ಕಾಕತಾಳೀಯವೆಂಬಂತೆ ಹೋಲಿಕೆ ಮಾಡಿ ಅನೇಕರು ಪ್ರತಿಕ್ರಿಯಿಸಿದ್ದಾರೆ. ಅನಂತಕುಮಾರ್‌ ಅವರೊಂದಿಗೆ ಗುರುತಿಸಿಕೊಂಡು ಬೆಳೆದ ಅನೇಕರಿಗೆ ಬಿಜೆಪಿ ಟಿಕೆಟ್ ಕೈತಪ್ಪಿರುವಾಗ ಹಾಗೂ ರಾಜ್ಯ ಬಿಜೆಪಿಯೊಳಗೆ ಬಿಕ್ಕಟ್ಟು ತಾರಕ್ಕೇರುತ್ತಿರುವಾಗ ತೇಜಸ್ವಿನಿಯವರ ಪೋಸ್ಟ್‌ ವಿವಿಧ ಅರ್ಥಗಳಿಗೆ ಅವಕಾಶ ಮಾಡಿಕೊಟ್ಟಿದೆ.

“Cryptic message (ನಿಗೂಢ ಸಂದೇಶ) ಯಾಕೆ ಮೇಡಂ? ನೇರವಾಗಿ ಹೇಳಬಿಡಿ” ಎಂದು ಸಿಟಿಜನ್‌ ಆಫ್‌ ಕನ್ನಡಸ್ಥಾನ ಟ್ವಿಟರ್‌ ಖಾತೆ ಒತ್ತಾಯಿಸಿದೆ.

“ರೆಂಬೆ ಕೊಂಬೆ ಮುರಿದಿದೆ ಒಣಗಿಲ್ಲ. ಒಣಗಲು ಬಿಡಬಾರದು. ನಾವು ನೆಟ್ಟ ಸಸಿ ಮರವಾಗಿದೆ ಹೆಮ್ಮರವಾಗಿ ಬೆಳೆದು ನೂರಾರು ವರ್ಷಗಳ ಕಾಲ ಫಲ ನೀಡಬೇಕು. ಯಾರೂ ರಕ್ಷಿಸದಿದ್ದರೆ ನಾವೇ ಕಾರ್ಯ ಪ್ರವೃತ್ತರಾಗಬೇಕು. ಇಲ್ಲವಾದರೆ ನಮ್ಮ ಕಣ್ಮುಂದೆಯೇ ಒಣಗಿ ಸಾಯಬಹುದು, ಯೋಚಿಸೋಣ” ಎಂದು ಗಂಗಾಧರ್‌ ಬಿಕೆಎಸ್‌ ಎಂಬವರು ಪ್ರತಿಕ್ರಿಯಿಸಿದ್ದಾರೆ.

“ಅನಂತಕುಮಾರ್ ಅವರು ನೆಟ್ಟ ಗಿಡ ಉಳಿಸೋದು ಎಷ್ಟು ಮುಖ್ಯನೋ ಹಾಗೆ ಅವರು ಬೆವರು ಸುರಿಸಿ ಕಟ್ಟಿದ ಪಕ್ಷ ಮತ್ತು ಸಿದ್ಧಾಂತ ಉಳಿಸುವುದು ಮುಖ್ಯವೆ, ಆ ಕೆಲಸ ಎಂದಿನಿಂದ ಶುರು ಮಾಡುತ್ತೀರಿ?” ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ.

“ಕಮಲ ಕರ್ನಾಟಕದಲ್ಲಿ, ಈ ಗಿಡ ಲಾಲ್ಬಾಗ್‌ನಲ್ಲಿ (ಒಣಗುತ್ತಿದೆ)” ಎಂದು ನವೀನ್‌ಕುಮಾರ್‌ ಎಂಬವರು ಅಭಿಪ್ರಾಯಪಟ್ಟಿದ್ದಾರೆ.

“ಬಿ.ಎಲ್‌.ಸಂತೋಷ್, ಜೋಶಿ ಅವರಿಂದಾಗಿ ಗಿಡ ಮುದುಡಿ ಹೋಗಿದೆ ಅಷ್ಟೇ ಮೇಡಂ” ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ನಮ್ಮ ಈ ಸುಂದರವಾದ ಸರ್ವಜನಾಂಗದ ಶಾಂತಿಯ ತೋಟದ ಶಾಂತಿಯನ್ನು ಕದಡುತ್ತಿರುವ ಬಿಜೆಪಿ ಮುಂಬರುವ ದಿನಗಳಲ್ಲಿ ಮುದುರಿಕೊಳ್ಳುವುದರ ಸಂಕೇತವೆನಿಸುತ್ತೆ. ಬೇಗ ಬಿದ್ದು ನಾಶವಾಗಿ ಹೋಗಲಿ, ಉಳಿದೆಲ್ಲ ಮರ-ಗಿಡ-ಬಳ್ಳಿಗಳು ಹಸಿರಿನಿಂದ ಕಂಗೊಳಿಸಲಿ” ಎಂದು ಬಾರುಕೋಲು ಟ್ವಿಟರ್‌ ಖಾತೆ ಪ್ರತಿಕ್ರಿಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...