Homeಅಂಕಣಗಳುಪ್ಲಾಸ್ಮಾ: ಜೀವದ್ರವದ ಜರೂರತ್ತುಗಳು:`ತಬ್ಲೀಘಿ ಜಿಹಾದಿಗಳು, ತಬ್ಲೀಘಿ ಸೇನಾನಿಗಳು’ ಆಗಿದ್ದೇಗೆ?

ಪ್ಲಾಸ್ಮಾ: ಜೀವದ್ರವದ ಜರೂರತ್ತುಗಳು:`ತಬ್ಲೀಘಿ ಜಿಹಾದಿಗಳು, ತಬ್ಲೀಘಿ ಸೇನಾನಿಗಳು’ ಆಗಿದ್ದೇಗೆ?

- Advertisement -
- Advertisement -

ಸರಕಾರಿ ಆಸ್ಪತ್ರೆಯ ವೈದ್ಯರೊಳಗ ಒಂದು ಜೋಕು ಓಡಾಡತಾ ಇರತೇತಿ. ಅದೇನಪಾ ಅಂದರ ತುರ್ತು ಚಿಕಿತ್ಸಾ ಘಟಕದೊಳಗ ಏನಾದರ ಒಂದು ಕೇಸು ಬಂತು ಅಂದರ ಅದನ್ನ ನೋಡಾಕ ನೂರು ಜನಾ ಹೊರಗ ಗುಂಪು ಕಟ್ಟಿಕೊಂಡು ಬರತಾರ. ಹೋಗರಿ, ಡಾಕ್ಟರಿಗೆ ಕೆಲಸಾ ಮಾಡಾಕ ಬಿಡ್ರಿ ಅಂದರ ಹೋಗಂಗಿಲ್ಲ. ಅವರನ್ನ ಚದುರಿಸಬೇಕು ಅಂತ ಡಾಕ್ಟರು ಒಂದು ಉಪಾಯ ಕಂಡುಕೊಂಡಿರತಾರ. ಅದೇನಪಾ ಅಂದರ ರೋಗಿಗೆ ತುರ್ತಾಗಿ ರಕ್ತ ಬೇಕಾಗೇತಿ. ಯಾರರ ಕೊಡವರು ಇದ್ದರ ಮುಂದ ಬರ್ರಿ ಅಂತ ಹೇಳತಾರ. ಆವಾಗ ಎಲ್ಲಾ ಶೂರರೂ ಅಲ್ಲಿಂದ ಹೋಗಿ ಬಿಡತಾರಂತ.

ಯಾವಾಗಲೂ, ಎಲ್ಲಾದಕ್ಕೂ `ಯಾಕ’ ಅಂತ ಪ್ರಶ್ನೆ ಮಾಡೋ ಉತ್ತರ ಕುಮಾರರಿಂದ ತುಂಬಿ ಹೋಗಿರೋ ದೇಶ ನಮ್ಮದು. ಹಂಗ ಇದ್ದಾಗ ದೆಹಲಿ- ಮುಂಬೈ ಮುಂತಾದ ನಗರಗಳಲ್ಲಿ ಕೆಲವು ಜನ ರಕ್ತ ದಾನ ಮಾಡೋ ಸುದ್ದಿ ಇದ್ದಕ್ಕಿದ್ದಂಗ ಜೋರಾಗಿ ಬಿಟ್ಟದಲ್ಲಾ ಎನು ಕತಿ?

ಈ ಹಿನ್ನೆಲೆಯೊಳಗ ಒಂದು ಮಜಾ ನೀವು ನೋಡಿದಿರಾ? ನಮ್ಮ ಠೀವಿ ಚಾನೆಲ್ಲುಗಳು ಬಳಸೋ ಶಬ್ದಗಳು ರಾತ್ರೋರಾತ್ರಿ ಬದಲಾಗಿದ್ದು ನೋಡಿದಿರಾ?

`ತಬ್ಲೀಘಿ ಜಿಹಾದಿಗಳು’ ಅಂತಿದ್ದವರು `ತಬ್ಲೀಘಿ ಸೇನಾನಿಗಳು’ ಅಂತ ಕರೀಲಿಕ್ಕೆ ಶುರು ಮಾಡಿದ್ದು ಯಾಕ ಅಂತ ವಿಚಾರ ಮಾಡಿದಿರಾ?

ನೋಡ್ರಿ, ನಿಮಗ ಬರೇ ಬಣ್ಣದ ಚಿತ್ರ ತೋರಿಸಿ, ನಿಮ್ಮ ಹತ್ರ ಹೂಂ ಅನ್ನಿಸಿ, ನಿಮ್ಮಿಂದ ವಿಚಾರ ಶಕ್ತಿ ಕಿತ್ತುಕೊಳ್ಳೋ ಜಾದೂ ಠೀವಿಯವರ ಹತ್ರ ಐತಿ.

ಎಲ್ಲಾ ಇರಲಿ, ಅದರ ಹಿಂದಿನ ಹಕೀಕತ್ತು ಏನು ಒಂದೀಟು ತಿಳಕೊಳ್ಳೋಣು. ಅದು ಏನಪಾ ಅಂದರ ಪ್ಲಾಸ್ಮಾ ಥೆರಪಿ ಅಥವಾ ಜೀವದ್ರವ್ಯ ಚಿಕಿತ್ಸೆ. ಈ ಪ್ಲಾಸ್ಮಾ ಅಂದರ ಅದು ಮನುಷ್ಯರ ರಕ್ತದಾಗ ಇರೋ ದ್ರವ್ಯ. ಇದರಾಗನ ಕೆಂಪು ಮತ್ತು ಬಿಳಿ ರಕ್ತ ಕಣಗಳು ಈಜಾಡಿಕೊಂಡು ಇರತಾವು. ಆದರ ಇದರಾಗ ಇರೋ ಪ್ರಮುಖ ವಸ್ತು ಅಂದರ ರೋಗ ನಿರೋಧಕ ಕಣಗಳು ಅಥವಾ ಇಮ್ಯುನೋ ಗ್ಲೋಬುಲಿನ್. ಅವಕ್ಕ ಆಂಟಿಬಾಡಿ ಅಥವಾ ಪ್ರತಿಜೀವಿಗಳು ಅಂತಾರ. ಇವು ರೋಗ ಬಂದು ಗುಣವಾದ ಪ್ರತಿ ರೋಗಿಯ ದೇಹದಾಗ ಇರತಾವು. ಇವನ್ನ ರೋಗ ಇದ್ದವನಿಗೆ ಕೊಟ್ಟರ ಅವನ ದೇಹದಾಗ ಪ್ರತಿಜೀವಿಯ ಸಂಖ್ಯೆ ಜಾಸ್ತಿ ಆಗಿ, ಅವನ ರೋಗ ನಿರೋಧಕ ಶಕ್ತಿ ಹೆಚ್ಚಾಗಿ, ಅವನ ರೋಗ ಕಮ್ಮಿ ಆಗುವ ಸಾಧ್ಯತೆ ಹೆಚ್ಚು ಆಗತೇತಿ.

ಒಂದು ರೀತಿಯೊಳಗ ಇದು ಲಸಿಕೆ ಇದ್ದಂಗ. ಯಾವ ರೋಗಾಣುವಿನ ವಿರುದ್ಧ ಲಸಿಕೆಯೊ ತಯಾರು ಮಾಡಬೇಕಾಗೇದೋ, ಅದರದ ಒಂದು ಸಣ್ಣ ಪ್ರಮಾಣದ ಸೋಂಕನ್ನು ತೊಗೊಂಡು ಒಂದು ಕುದುರೆ, ಎಮ್ಮೆ ಅಥವಾ ಇನ್ನೊಂದು ಅಂಥಾ ಪ್ರಾಣಿಯ ದೇಹದಾಗ ಹಾಕತಾರ. ಅದರ ದೇಹದಾಗ ಪ್ರತಿಜೀವಿ ತಯಾರು ಆದ ಮ್ಯಾಲೆ ಅದನ್ನ ತಗದು ಮನುಷ್ಯರಿಗೆ ನಿರೋಧಕ ಔಷಧಿ ಅಂತ ಕೊಡತಾರ.

ಅದರ ರೀತಿಯೊಳಗನ ಇರೋದು ಇದು ಪ್ಲಾಸ್ಮಾ ಥೆರಪಿ ಅಥವಾ ಜೀವದ್ರವ್ಯ ಚಿಕಿತ್ಸೆ. ಇದನ್ನ ಯಾರು ರೋಗದಿಂದ ಗುಣಾ ಆಗಿರತಾರೋ ಅವರ ದೇಹದಿಂದ ತೊಗೋಬೇಕಾಗತದ. ಭಾರತದಾಗ ರಕ್ತ ದಾನ ಸ್ವಯಂ ಆಸಕ್ತಿಯಿಂದ ಮಾತ್ರ ಕೊಡಬಹುದಾದ್ದರಿಂದ, ರಕ್ತದಾಗ ಇರೋ ಜೀವದ್ರವ್ಯವನ್ನ ಸಹಿತ ದಾನಿಗಳ ಸಮ್ಮತಿಯಿಂದ ಮಾತ್ರ ತೊಗೋಬಹುದು.

ಆದರ ಈಗ ಈ ಜೀವದ್ರವ್ಯದ ಜರೂರತ್ತು ಬರೇ ಯಾರೋ ಕೆಲವರ ಆರೋಗ್ಯ ರಕ್ಷಣೆಯ ಕಾರಣಗಳಿಗೆ ಬೇಕಾಗಿಲ್ಲ. ಸಮಾಜದ ಸ್ವಾಸ ಕಾಪಾಡೋ ಸಲುವಾಗಿ ಬೇಕಾಗೇತಿ.

ತಮ್ಮ ರಕ್ತದೊಳಗಿನ ಪ್ಲಾಸ್ಮಾ ತೊಗೊಳ್ಳಲಿಕ್ಕೆ ದೆಹಲಿ- ಮುಂಬಯಿ ಸೇರಿದಂತೆ 300 ಜನ ತಬ್ಲೀಘ ಜಮಾತ ಸದಸ್ಯರು ಸಮ್ಮತಿ ಕೊಟ್ಟಾರ ಅನ್ನೋ ಸುದ್ದಿ ಬಂದಕೂಡಲೇ ಕೆಲವರು ವಿರೋಧ ಮಾಡಲಿಕ್ಕೆ ಸುರು ಮಾಡಿದರು. ನನಗ ಕೊರೋನಾ ಬಂದು, ನಾನು ಸತ್ತರೂ ಸತ್ತೆ, ಗದ್ದಾರುಗಳ ರಕ್ತ ತೊಗೊಳ್ಳೋದಿಲ್ಲಾ ಅಂತ ಘೋಷಣೆ ಮಾಡಿಕೊಂಡರು.

ಇನ್ನ ಕೆಲವರು ನೋಡ್ರಿ ಅವರು ದೇವರಂಥಾವರು. ರೋಗಿಗಳಿಗೆ ತಮ್ಮ ರಕ್ತ ಕೊಟ್ಟು ಉಳಿಸಿಕೊಳ್ಳಾಕ ಹತ್ಯಾರು, ಅಂತ ಹೇಳಿದರು. ಆದರ ಸತ್ಯ ಅನ್ನೋದು ಈ ಎರಡು ವಿಪರೀತಗಳ ನಡುವೆ ಐತಿ.

ರಕ್ತ ಸ್ರಾವದಿಂದ ಸಾಯುವವರನ್ನ ರಕ್ತ ಮರುಪೂರಣೆಯಿಂದ ರಕ್ಷಣೆ ಮಾಡೋ ತಂತ್ರಜ್ಞಾನ ಇವತ್ತಿನದಲ್ಲ. ಎರಡನೇ ಮಹಾ ಯುದ್ಧದಿಂದನೂ ಈ ಪದ್ಧತಿ ನಡೆಯುತ್ತಾ ಬಂದೇತಿ. ಭಾರತದೊಳಗ ಸ್ವಾತಂತ್ರ ಪೂರ್ವದಾಗೂ ರಕ್ತದಾನದ ಉದಾಹರಣೆಗಳು ಇದ್ದಾವ. ಪ್ರತಿ ಸಲೆ ನಮ್ಮ ತಂಗಿಯೋ, ಹೆಂಡತಿಯೋ, ಮಗಳೋ, ರಕ್ತ ಹೀನತೆಯಿಂದ ಬಳಲುವಾಗ, ಯಾರಿಗರ ನಮ್ಮವರಿಗೆ ಅಪಘಾತ ಆದಾಗ, ಅವರಿಗೆ ರಕ್ತ ಹೊಂದಿಸಲು ನಾವು ಹುಡುಕಾಡಿರುತೇವಿ. ರಕ್ತ ದಾನಿ ಸಿಕ್ಕರ ಸಾಕು ಅಂತ ಆಗಿರತೇತಿ. ಅವರ ಮತ, ಜಾತಿ ಕೇಳಾಕ ಹೋಗೋದಿಲ್ಲ. ಇದು ನಮಗ ಮಾನವ ಕುಲದ ಏಕತೆಯ ಪಾಠ ಆಗಿರತದೋ ಇಲ್ಲೋ. ಇಂಥಾ ಪರಿಸ್ಥಿತಿಯೊಳಗ `ಮಾನವ ಜಾತಿ ತಾನು ಒಂದೇ ವಲಂ’ ಅಂದರ ಅಲ್ಲಂ ಅಂತ ಯಾರರ ಹೇಳತೇವೇನು?

ಇನ್ನ ತಿಂಗಳಾನುಗಟ್ಟಲೆ ಕೊರೋನಾ ಜಿಹಾದು- ಭಯೋತ್ಪಾದನೆ ಅಂತ ಹೀಯಾಳಿಸಿಕೊಂಡ ತಬ್ಲೀಘು ಜಮಾತು ಸದಸ್ಯರು ರಕ್ತದಾನಕ್ಕೆ ತಯಾರಾದ ತಕ್ಷಣ ಅವರನ್ನು ಕೊರೊನಾ ಸೇನಾನಿಗಳು ಅಂತ ಮಾಡಿದವರು ಯಾರು? ಅವರಿಗೆ `ನಾನು ನಿನ್ನೆ ಏನು ಮಾತಾಡಿದ್ದೆ?- ಇವತ್ತು ಏನು ಮಾತಾಡಾಕ ಹತ್ತೇನಿ’ ಅಂತ ನೆನಪು ಇರತೈತೋ ಇಲ್ಲೋ?

ಅವರಿಗೆ ಇರಲಿ ಬಿಡಲಿ, ನಮಗರ ಅಷ್ಟು ಬುದ್ಧಿ ಅದನೋ ಇಲ್ಲೋ? ರಾಜಕಾರಣಿಗಳು ಮಾಧ್ಯಮ ದುರುಪಯೋಗ ಪಡಿಸಿಕೊಳ್ಳೋದು, ಮಾಧ್ಯಮದವರು ರಾಜಕಾರಣ ಮಾಡೋದು ನಮಗ ಗೊತ್ತು ಆಗತೇತೋ ಇಲ್ಲೋ? ಈ ಪ್ರಶ್ನೆಗಳ ಉತ್ತರಗಳೇ ನಮ್ಮ ನಾಳೆಗಳನ್ನ ನಿರ್ಧರಿಸತಾವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...