Homeಅಂಕಣಗಳುಪ್ಲಾಸ್ಮಾ: ಜೀವದ್ರವದ ಜರೂರತ್ತುಗಳು:`ತಬ್ಲೀಘಿ ಜಿಹಾದಿಗಳು, ತಬ್ಲೀಘಿ ಸೇನಾನಿಗಳು’ ಆಗಿದ್ದೇಗೆ?

ಪ್ಲಾಸ್ಮಾ: ಜೀವದ್ರವದ ಜರೂರತ್ತುಗಳು:`ತಬ್ಲೀಘಿ ಜಿಹಾದಿಗಳು, ತಬ್ಲೀಘಿ ಸೇನಾನಿಗಳು’ ಆಗಿದ್ದೇಗೆ?

- Advertisement -
- Advertisement -

ಸರಕಾರಿ ಆಸ್ಪತ್ರೆಯ ವೈದ್ಯರೊಳಗ ಒಂದು ಜೋಕು ಓಡಾಡತಾ ಇರತೇತಿ. ಅದೇನಪಾ ಅಂದರ ತುರ್ತು ಚಿಕಿತ್ಸಾ ಘಟಕದೊಳಗ ಏನಾದರ ಒಂದು ಕೇಸು ಬಂತು ಅಂದರ ಅದನ್ನ ನೋಡಾಕ ನೂರು ಜನಾ ಹೊರಗ ಗುಂಪು ಕಟ್ಟಿಕೊಂಡು ಬರತಾರ. ಹೋಗರಿ, ಡಾಕ್ಟರಿಗೆ ಕೆಲಸಾ ಮಾಡಾಕ ಬಿಡ್ರಿ ಅಂದರ ಹೋಗಂಗಿಲ್ಲ. ಅವರನ್ನ ಚದುರಿಸಬೇಕು ಅಂತ ಡಾಕ್ಟರು ಒಂದು ಉಪಾಯ ಕಂಡುಕೊಂಡಿರತಾರ. ಅದೇನಪಾ ಅಂದರ ರೋಗಿಗೆ ತುರ್ತಾಗಿ ರಕ್ತ ಬೇಕಾಗೇತಿ. ಯಾರರ ಕೊಡವರು ಇದ್ದರ ಮುಂದ ಬರ್ರಿ ಅಂತ ಹೇಳತಾರ. ಆವಾಗ ಎಲ್ಲಾ ಶೂರರೂ ಅಲ್ಲಿಂದ ಹೋಗಿ ಬಿಡತಾರಂತ.

ಯಾವಾಗಲೂ, ಎಲ್ಲಾದಕ್ಕೂ `ಯಾಕ’ ಅಂತ ಪ್ರಶ್ನೆ ಮಾಡೋ ಉತ್ತರ ಕುಮಾರರಿಂದ ತುಂಬಿ ಹೋಗಿರೋ ದೇಶ ನಮ್ಮದು. ಹಂಗ ಇದ್ದಾಗ ದೆಹಲಿ- ಮುಂಬೈ ಮುಂತಾದ ನಗರಗಳಲ್ಲಿ ಕೆಲವು ಜನ ರಕ್ತ ದಾನ ಮಾಡೋ ಸುದ್ದಿ ಇದ್ದಕ್ಕಿದ್ದಂಗ ಜೋರಾಗಿ ಬಿಟ್ಟದಲ್ಲಾ ಎನು ಕತಿ?

ಈ ಹಿನ್ನೆಲೆಯೊಳಗ ಒಂದು ಮಜಾ ನೀವು ನೋಡಿದಿರಾ? ನಮ್ಮ ಠೀವಿ ಚಾನೆಲ್ಲುಗಳು ಬಳಸೋ ಶಬ್ದಗಳು ರಾತ್ರೋರಾತ್ರಿ ಬದಲಾಗಿದ್ದು ನೋಡಿದಿರಾ?

`ತಬ್ಲೀಘಿ ಜಿಹಾದಿಗಳು’ ಅಂತಿದ್ದವರು `ತಬ್ಲೀಘಿ ಸೇನಾನಿಗಳು’ ಅಂತ ಕರೀಲಿಕ್ಕೆ ಶುರು ಮಾಡಿದ್ದು ಯಾಕ ಅಂತ ವಿಚಾರ ಮಾಡಿದಿರಾ?

ನೋಡ್ರಿ, ನಿಮಗ ಬರೇ ಬಣ್ಣದ ಚಿತ್ರ ತೋರಿಸಿ, ನಿಮ್ಮ ಹತ್ರ ಹೂಂ ಅನ್ನಿಸಿ, ನಿಮ್ಮಿಂದ ವಿಚಾರ ಶಕ್ತಿ ಕಿತ್ತುಕೊಳ್ಳೋ ಜಾದೂ ಠೀವಿಯವರ ಹತ್ರ ಐತಿ.

ಎಲ್ಲಾ ಇರಲಿ, ಅದರ ಹಿಂದಿನ ಹಕೀಕತ್ತು ಏನು ಒಂದೀಟು ತಿಳಕೊಳ್ಳೋಣು. ಅದು ಏನಪಾ ಅಂದರ ಪ್ಲಾಸ್ಮಾ ಥೆರಪಿ ಅಥವಾ ಜೀವದ್ರವ್ಯ ಚಿಕಿತ್ಸೆ. ಈ ಪ್ಲಾಸ್ಮಾ ಅಂದರ ಅದು ಮನುಷ್ಯರ ರಕ್ತದಾಗ ಇರೋ ದ್ರವ್ಯ. ಇದರಾಗನ ಕೆಂಪು ಮತ್ತು ಬಿಳಿ ರಕ್ತ ಕಣಗಳು ಈಜಾಡಿಕೊಂಡು ಇರತಾವು. ಆದರ ಇದರಾಗ ಇರೋ ಪ್ರಮುಖ ವಸ್ತು ಅಂದರ ರೋಗ ನಿರೋಧಕ ಕಣಗಳು ಅಥವಾ ಇಮ್ಯುನೋ ಗ್ಲೋಬುಲಿನ್. ಅವಕ್ಕ ಆಂಟಿಬಾಡಿ ಅಥವಾ ಪ್ರತಿಜೀವಿಗಳು ಅಂತಾರ. ಇವು ರೋಗ ಬಂದು ಗುಣವಾದ ಪ್ರತಿ ರೋಗಿಯ ದೇಹದಾಗ ಇರತಾವು. ಇವನ್ನ ರೋಗ ಇದ್ದವನಿಗೆ ಕೊಟ್ಟರ ಅವನ ದೇಹದಾಗ ಪ್ರತಿಜೀವಿಯ ಸಂಖ್ಯೆ ಜಾಸ್ತಿ ಆಗಿ, ಅವನ ರೋಗ ನಿರೋಧಕ ಶಕ್ತಿ ಹೆಚ್ಚಾಗಿ, ಅವನ ರೋಗ ಕಮ್ಮಿ ಆಗುವ ಸಾಧ್ಯತೆ ಹೆಚ್ಚು ಆಗತೇತಿ.

ಒಂದು ರೀತಿಯೊಳಗ ಇದು ಲಸಿಕೆ ಇದ್ದಂಗ. ಯಾವ ರೋಗಾಣುವಿನ ವಿರುದ್ಧ ಲಸಿಕೆಯೊ ತಯಾರು ಮಾಡಬೇಕಾಗೇದೋ, ಅದರದ ಒಂದು ಸಣ್ಣ ಪ್ರಮಾಣದ ಸೋಂಕನ್ನು ತೊಗೊಂಡು ಒಂದು ಕುದುರೆ, ಎಮ್ಮೆ ಅಥವಾ ಇನ್ನೊಂದು ಅಂಥಾ ಪ್ರಾಣಿಯ ದೇಹದಾಗ ಹಾಕತಾರ. ಅದರ ದೇಹದಾಗ ಪ್ರತಿಜೀವಿ ತಯಾರು ಆದ ಮ್ಯಾಲೆ ಅದನ್ನ ತಗದು ಮನುಷ್ಯರಿಗೆ ನಿರೋಧಕ ಔಷಧಿ ಅಂತ ಕೊಡತಾರ.

ಅದರ ರೀತಿಯೊಳಗನ ಇರೋದು ಇದು ಪ್ಲಾಸ್ಮಾ ಥೆರಪಿ ಅಥವಾ ಜೀವದ್ರವ್ಯ ಚಿಕಿತ್ಸೆ. ಇದನ್ನ ಯಾರು ರೋಗದಿಂದ ಗುಣಾ ಆಗಿರತಾರೋ ಅವರ ದೇಹದಿಂದ ತೊಗೋಬೇಕಾಗತದ. ಭಾರತದಾಗ ರಕ್ತ ದಾನ ಸ್ವಯಂ ಆಸಕ್ತಿಯಿಂದ ಮಾತ್ರ ಕೊಡಬಹುದಾದ್ದರಿಂದ, ರಕ್ತದಾಗ ಇರೋ ಜೀವದ್ರವ್ಯವನ್ನ ಸಹಿತ ದಾನಿಗಳ ಸಮ್ಮತಿಯಿಂದ ಮಾತ್ರ ತೊಗೋಬಹುದು.

ಆದರ ಈಗ ಈ ಜೀವದ್ರವ್ಯದ ಜರೂರತ್ತು ಬರೇ ಯಾರೋ ಕೆಲವರ ಆರೋಗ್ಯ ರಕ್ಷಣೆಯ ಕಾರಣಗಳಿಗೆ ಬೇಕಾಗಿಲ್ಲ. ಸಮಾಜದ ಸ್ವಾಸ ಕಾಪಾಡೋ ಸಲುವಾಗಿ ಬೇಕಾಗೇತಿ.

ತಮ್ಮ ರಕ್ತದೊಳಗಿನ ಪ್ಲಾಸ್ಮಾ ತೊಗೊಳ್ಳಲಿಕ್ಕೆ ದೆಹಲಿ- ಮುಂಬಯಿ ಸೇರಿದಂತೆ 300 ಜನ ತಬ್ಲೀಘ ಜಮಾತ ಸದಸ್ಯರು ಸಮ್ಮತಿ ಕೊಟ್ಟಾರ ಅನ್ನೋ ಸುದ್ದಿ ಬಂದಕೂಡಲೇ ಕೆಲವರು ವಿರೋಧ ಮಾಡಲಿಕ್ಕೆ ಸುರು ಮಾಡಿದರು. ನನಗ ಕೊರೋನಾ ಬಂದು, ನಾನು ಸತ್ತರೂ ಸತ್ತೆ, ಗದ್ದಾರುಗಳ ರಕ್ತ ತೊಗೊಳ್ಳೋದಿಲ್ಲಾ ಅಂತ ಘೋಷಣೆ ಮಾಡಿಕೊಂಡರು.

ಇನ್ನ ಕೆಲವರು ನೋಡ್ರಿ ಅವರು ದೇವರಂಥಾವರು. ರೋಗಿಗಳಿಗೆ ತಮ್ಮ ರಕ್ತ ಕೊಟ್ಟು ಉಳಿಸಿಕೊಳ್ಳಾಕ ಹತ್ಯಾರು, ಅಂತ ಹೇಳಿದರು. ಆದರ ಸತ್ಯ ಅನ್ನೋದು ಈ ಎರಡು ವಿಪರೀತಗಳ ನಡುವೆ ಐತಿ.

ರಕ್ತ ಸ್ರಾವದಿಂದ ಸಾಯುವವರನ್ನ ರಕ್ತ ಮರುಪೂರಣೆಯಿಂದ ರಕ್ಷಣೆ ಮಾಡೋ ತಂತ್ರಜ್ಞಾನ ಇವತ್ತಿನದಲ್ಲ. ಎರಡನೇ ಮಹಾ ಯುದ್ಧದಿಂದನೂ ಈ ಪದ್ಧತಿ ನಡೆಯುತ್ತಾ ಬಂದೇತಿ. ಭಾರತದೊಳಗ ಸ್ವಾತಂತ್ರ ಪೂರ್ವದಾಗೂ ರಕ್ತದಾನದ ಉದಾಹರಣೆಗಳು ಇದ್ದಾವ. ಪ್ರತಿ ಸಲೆ ನಮ್ಮ ತಂಗಿಯೋ, ಹೆಂಡತಿಯೋ, ಮಗಳೋ, ರಕ್ತ ಹೀನತೆಯಿಂದ ಬಳಲುವಾಗ, ಯಾರಿಗರ ನಮ್ಮವರಿಗೆ ಅಪಘಾತ ಆದಾಗ, ಅವರಿಗೆ ರಕ್ತ ಹೊಂದಿಸಲು ನಾವು ಹುಡುಕಾಡಿರುತೇವಿ. ರಕ್ತ ದಾನಿ ಸಿಕ್ಕರ ಸಾಕು ಅಂತ ಆಗಿರತೇತಿ. ಅವರ ಮತ, ಜಾತಿ ಕೇಳಾಕ ಹೋಗೋದಿಲ್ಲ. ಇದು ನಮಗ ಮಾನವ ಕುಲದ ಏಕತೆಯ ಪಾಠ ಆಗಿರತದೋ ಇಲ್ಲೋ. ಇಂಥಾ ಪರಿಸ್ಥಿತಿಯೊಳಗ `ಮಾನವ ಜಾತಿ ತಾನು ಒಂದೇ ವಲಂ’ ಅಂದರ ಅಲ್ಲಂ ಅಂತ ಯಾರರ ಹೇಳತೇವೇನು?

ಇನ್ನ ತಿಂಗಳಾನುಗಟ್ಟಲೆ ಕೊರೋನಾ ಜಿಹಾದು- ಭಯೋತ್ಪಾದನೆ ಅಂತ ಹೀಯಾಳಿಸಿಕೊಂಡ ತಬ್ಲೀಘು ಜಮಾತು ಸದಸ್ಯರು ರಕ್ತದಾನಕ್ಕೆ ತಯಾರಾದ ತಕ್ಷಣ ಅವರನ್ನು ಕೊರೊನಾ ಸೇನಾನಿಗಳು ಅಂತ ಮಾಡಿದವರು ಯಾರು? ಅವರಿಗೆ `ನಾನು ನಿನ್ನೆ ಏನು ಮಾತಾಡಿದ್ದೆ?- ಇವತ್ತು ಏನು ಮಾತಾಡಾಕ ಹತ್ತೇನಿ’ ಅಂತ ನೆನಪು ಇರತೈತೋ ಇಲ್ಲೋ?

ಅವರಿಗೆ ಇರಲಿ ಬಿಡಲಿ, ನಮಗರ ಅಷ್ಟು ಬುದ್ಧಿ ಅದನೋ ಇಲ್ಲೋ? ರಾಜಕಾರಣಿಗಳು ಮಾಧ್ಯಮ ದುರುಪಯೋಗ ಪಡಿಸಿಕೊಳ್ಳೋದು, ಮಾಧ್ಯಮದವರು ರಾಜಕಾರಣ ಮಾಡೋದು ನಮಗ ಗೊತ್ತು ಆಗತೇತೋ ಇಲ್ಲೋ? ಈ ಪ್ರಶ್ನೆಗಳ ಉತ್ತರಗಳೇ ನಮ್ಮ ನಾಳೆಗಳನ್ನ ನಿರ್ಧರಿಸತಾವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...