Homeಅಂಕಣಗಳುಪ್ಲಾಸ್ಮಾ: ಜೀವದ್ರವದ ಜರೂರತ್ತುಗಳು:`ತಬ್ಲೀಘಿ ಜಿಹಾದಿಗಳು, ತಬ್ಲೀಘಿ ಸೇನಾನಿಗಳು’ ಆಗಿದ್ದೇಗೆ?

ಪ್ಲಾಸ್ಮಾ: ಜೀವದ್ರವದ ಜರೂರತ್ತುಗಳು:`ತಬ್ಲೀಘಿ ಜಿಹಾದಿಗಳು, ತಬ್ಲೀಘಿ ಸೇನಾನಿಗಳು’ ಆಗಿದ್ದೇಗೆ?

- Advertisement -
- Advertisement -

ಸರಕಾರಿ ಆಸ್ಪತ್ರೆಯ ವೈದ್ಯರೊಳಗ ಒಂದು ಜೋಕು ಓಡಾಡತಾ ಇರತೇತಿ. ಅದೇನಪಾ ಅಂದರ ತುರ್ತು ಚಿಕಿತ್ಸಾ ಘಟಕದೊಳಗ ಏನಾದರ ಒಂದು ಕೇಸು ಬಂತು ಅಂದರ ಅದನ್ನ ನೋಡಾಕ ನೂರು ಜನಾ ಹೊರಗ ಗುಂಪು ಕಟ್ಟಿಕೊಂಡು ಬರತಾರ. ಹೋಗರಿ, ಡಾಕ್ಟರಿಗೆ ಕೆಲಸಾ ಮಾಡಾಕ ಬಿಡ್ರಿ ಅಂದರ ಹೋಗಂಗಿಲ್ಲ. ಅವರನ್ನ ಚದುರಿಸಬೇಕು ಅಂತ ಡಾಕ್ಟರು ಒಂದು ಉಪಾಯ ಕಂಡುಕೊಂಡಿರತಾರ. ಅದೇನಪಾ ಅಂದರ ರೋಗಿಗೆ ತುರ್ತಾಗಿ ರಕ್ತ ಬೇಕಾಗೇತಿ. ಯಾರರ ಕೊಡವರು ಇದ್ದರ ಮುಂದ ಬರ್ರಿ ಅಂತ ಹೇಳತಾರ. ಆವಾಗ ಎಲ್ಲಾ ಶೂರರೂ ಅಲ್ಲಿಂದ ಹೋಗಿ ಬಿಡತಾರಂತ.

ಯಾವಾಗಲೂ, ಎಲ್ಲಾದಕ್ಕೂ `ಯಾಕ’ ಅಂತ ಪ್ರಶ್ನೆ ಮಾಡೋ ಉತ್ತರ ಕುಮಾರರಿಂದ ತುಂಬಿ ಹೋಗಿರೋ ದೇಶ ನಮ್ಮದು. ಹಂಗ ಇದ್ದಾಗ ದೆಹಲಿ- ಮುಂಬೈ ಮುಂತಾದ ನಗರಗಳಲ್ಲಿ ಕೆಲವು ಜನ ರಕ್ತ ದಾನ ಮಾಡೋ ಸುದ್ದಿ ಇದ್ದಕ್ಕಿದ್ದಂಗ ಜೋರಾಗಿ ಬಿಟ್ಟದಲ್ಲಾ ಎನು ಕತಿ?

ಈ ಹಿನ್ನೆಲೆಯೊಳಗ ಒಂದು ಮಜಾ ನೀವು ನೋಡಿದಿರಾ? ನಮ್ಮ ಠೀವಿ ಚಾನೆಲ್ಲುಗಳು ಬಳಸೋ ಶಬ್ದಗಳು ರಾತ್ರೋರಾತ್ರಿ ಬದಲಾಗಿದ್ದು ನೋಡಿದಿರಾ?

`ತಬ್ಲೀಘಿ ಜಿಹಾದಿಗಳು’ ಅಂತಿದ್ದವರು `ತಬ್ಲೀಘಿ ಸೇನಾನಿಗಳು’ ಅಂತ ಕರೀಲಿಕ್ಕೆ ಶುರು ಮಾಡಿದ್ದು ಯಾಕ ಅಂತ ವಿಚಾರ ಮಾಡಿದಿರಾ?

ನೋಡ್ರಿ, ನಿಮಗ ಬರೇ ಬಣ್ಣದ ಚಿತ್ರ ತೋರಿಸಿ, ನಿಮ್ಮ ಹತ್ರ ಹೂಂ ಅನ್ನಿಸಿ, ನಿಮ್ಮಿಂದ ವಿಚಾರ ಶಕ್ತಿ ಕಿತ್ತುಕೊಳ್ಳೋ ಜಾದೂ ಠೀವಿಯವರ ಹತ್ರ ಐತಿ.

ಎಲ್ಲಾ ಇರಲಿ, ಅದರ ಹಿಂದಿನ ಹಕೀಕತ್ತು ಏನು ಒಂದೀಟು ತಿಳಕೊಳ್ಳೋಣು. ಅದು ಏನಪಾ ಅಂದರ ಪ್ಲಾಸ್ಮಾ ಥೆರಪಿ ಅಥವಾ ಜೀವದ್ರವ್ಯ ಚಿಕಿತ್ಸೆ. ಈ ಪ್ಲಾಸ್ಮಾ ಅಂದರ ಅದು ಮನುಷ್ಯರ ರಕ್ತದಾಗ ಇರೋ ದ್ರವ್ಯ. ಇದರಾಗನ ಕೆಂಪು ಮತ್ತು ಬಿಳಿ ರಕ್ತ ಕಣಗಳು ಈಜಾಡಿಕೊಂಡು ಇರತಾವು. ಆದರ ಇದರಾಗ ಇರೋ ಪ್ರಮುಖ ವಸ್ತು ಅಂದರ ರೋಗ ನಿರೋಧಕ ಕಣಗಳು ಅಥವಾ ಇಮ್ಯುನೋ ಗ್ಲೋಬುಲಿನ್. ಅವಕ್ಕ ಆಂಟಿಬಾಡಿ ಅಥವಾ ಪ್ರತಿಜೀವಿಗಳು ಅಂತಾರ. ಇವು ರೋಗ ಬಂದು ಗುಣವಾದ ಪ್ರತಿ ರೋಗಿಯ ದೇಹದಾಗ ಇರತಾವು. ಇವನ್ನ ರೋಗ ಇದ್ದವನಿಗೆ ಕೊಟ್ಟರ ಅವನ ದೇಹದಾಗ ಪ್ರತಿಜೀವಿಯ ಸಂಖ್ಯೆ ಜಾಸ್ತಿ ಆಗಿ, ಅವನ ರೋಗ ನಿರೋಧಕ ಶಕ್ತಿ ಹೆಚ್ಚಾಗಿ, ಅವನ ರೋಗ ಕಮ್ಮಿ ಆಗುವ ಸಾಧ್ಯತೆ ಹೆಚ್ಚು ಆಗತೇತಿ.

ಒಂದು ರೀತಿಯೊಳಗ ಇದು ಲಸಿಕೆ ಇದ್ದಂಗ. ಯಾವ ರೋಗಾಣುವಿನ ವಿರುದ್ಧ ಲಸಿಕೆಯೊ ತಯಾರು ಮಾಡಬೇಕಾಗೇದೋ, ಅದರದ ಒಂದು ಸಣ್ಣ ಪ್ರಮಾಣದ ಸೋಂಕನ್ನು ತೊಗೊಂಡು ಒಂದು ಕುದುರೆ, ಎಮ್ಮೆ ಅಥವಾ ಇನ್ನೊಂದು ಅಂಥಾ ಪ್ರಾಣಿಯ ದೇಹದಾಗ ಹಾಕತಾರ. ಅದರ ದೇಹದಾಗ ಪ್ರತಿಜೀವಿ ತಯಾರು ಆದ ಮ್ಯಾಲೆ ಅದನ್ನ ತಗದು ಮನುಷ್ಯರಿಗೆ ನಿರೋಧಕ ಔಷಧಿ ಅಂತ ಕೊಡತಾರ.

ಅದರ ರೀತಿಯೊಳಗನ ಇರೋದು ಇದು ಪ್ಲಾಸ್ಮಾ ಥೆರಪಿ ಅಥವಾ ಜೀವದ್ರವ್ಯ ಚಿಕಿತ್ಸೆ. ಇದನ್ನ ಯಾರು ರೋಗದಿಂದ ಗುಣಾ ಆಗಿರತಾರೋ ಅವರ ದೇಹದಿಂದ ತೊಗೋಬೇಕಾಗತದ. ಭಾರತದಾಗ ರಕ್ತ ದಾನ ಸ್ವಯಂ ಆಸಕ್ತಿಯಿಂದ ಮಾತ್ರ ಕೊಡಬಹುದಾದ್ದರಿಂದ, ರಕ್ತದಾಗ ಇರೋ ಜೀವದ್ರವ್ಯವನ್ನ ಸಹಿತ ದಾನಿಗಳ ಸಮ್ಮತಿಯಿಂದ ಮಾತ್ರ ತೊಗೋಬಹುದು.

ಆದರ ಈಗ ಈ ಜೀವದ್ರವ್ಯದ ಜರೂರತ್ತು ಬರೇ ಯಾರೋ ಕೆಲವರ ಆರೋಗ್ಯ ರಕ್ಷಣೆಯ ಕಾರಣಗಳಿಗೆ ಬೇಕಾಗಿಲ್ಲ. ಸಮಾಜದ ಸ್ವಾಸ ಕಾಪಾಡೋ ಸಲುವಾಗಿ ಬೇಕಾಗೇತಿ.

ತಮ್ಮ ರಕ್ತದೊಳಗಿನ ಪ್ಲಾಸ್ಮಾ ತೊಗೊಳ್ಳಲಿಕ್ಕೆ ದೆಹಲಿ- ಮುಂಬಯಿ ಸೇರಿದಂತೆ 300 ಜನ ತಬ್ಲೀಘ ಜಮಾತ ಸದಸ್ಯರು ಸಮ್ಮತಿ ಕೊಟ್ಟಾರ ಅನ್ನೋ ಸುದ್ದಿ ಬಂದಕೂಡಲೇ ಕೆಲವರು ವಿರೋಧ ಮಾಡಲಿಕ್ಕೆ ಸುರು ಮಾಡಿದರು. ನನಗ ಕೊರೋನಾ ಬಂದು, ನಾನು ಸತ್ತರೂ ಸತ್ತೆ, ಗದ್ದಾರುಗಳ ರಕ್ತ ತೊಗೊಳ್ಳೋದಿಲ್ಲಾ ಅಂತ ಘೋಷಣೆ ಮಾಡಿಕೊಂಡರು.

ಇನ್ನ ಕೆಲವರು ನೋಡ್ರಿ ಅವರು ದೇವರಂಥಾವರು. ರೋಗಿಗಳಿಗೆ ತಮ್ಮ ರಕ್ತ ಕೊಟ್ಟು ಉಳಿಸಿಕೊಳ್ಳಾಕ ಹತ್ಯಾರು, ಅಂತ ಹೇಳಿದರು. ಆದರ ಸತ್ಯ ಅನ್ನೋದು ಈ ಎರಡು ವಿಪರೀತಗಳ ನಡುವೆ ಐತಿ.

ರಕ್ತ ಸ್ರಾವದಿಂದ ಸಾಯುವವರನ್ನ ರಕ್ತ ಮರುಪೂರಣೆಯಿಂದ ರಕ್ಷಣೆ ಮಾಡೋ ತಂತ್ರಜ್ಞಾನ ಇವತ್ತಿನದಲ್ಲ. ಎರಡನೇ ಮಹಾ ಯುದ್ಧದಿಂದನೂ ಈ ಪದ್ಧತಿ ನಡೆಯುತ್ತಾ ಬಂದೇತಿ. ಭಾರತದೊಳಗ ಸ್ವಾತಂತ್ರ ಪೂರ್ವದಾಗೂ ರಕ್ತದಾನದ ಉದಾಹರಣೆಗಳು ಇದ್ದಾವ. ಪ್ರತಿ ಸಲೆ ನಮ್ಮ ತಂಗಿಯೋ, ಹೆಂಡತಿಯೋ, ಮಗಳೋ, ರಕ್ತ ಹೀನತೆಯಿಂದ ಬಳಲುವಾಗ, ಯಾರಿಗರ ನಮ್ಮವರಿಗೆ ಅಪಘಾತ ಆದಾಗ, ಅವರಿಗೆ ರಕ್ತ ಹೊಂದಿಸಲು ನಾವು ಹುಡುಕಾಡಿರುತೇವಿ. ರಕ್ತ ದಾನಿ ಸಿಕ್ಕರ ಸಾಕು ಅಂತ ಆಗಿರತೇತಿ. ಅವರ ಮತ, ಜಾತಿ ಕೇಳಾಕ ಹೋಗೋದಿಲ್ಲ. ಇದು ನಮಗ ಮಾನವ ಕುಲದ ಏಕತೆಯ ಪಾಠ ಆಗಿರತದೋ ಇಲ್ಲೋ. ಇಂಥಾ ಪರಿಸ್ಥಿತಿಯೊಳಗ `ಮಾನವ ಜಾತಿ ತಾನು ಒಂದೇ ವಲಂ’ ಅಂದರ ಅಲ್ಲಂ ಅಂತ ಯಾರರ ಹೇಳತೇವೇನು?

ಇನ್ನ ತಿಂಗಳಾನುಗಟ್ಟಲೆ ಕೊರೋನಾ ಜಿಹಾದು- ಭಯೋತ್ಪಾದನೆ ಅಂತ ಹೀಯಾಳಿಸಿಕೊಂಡ ತಬ್ಲೀಘು ಜಮಾತು ಸದಸ್ಯರು ರಕ್ತದಾನಕ್ಕೆ ತಯಾರಾದ ತಕ್ಷಣ ಅವರನ್ನು ಕೊರೊನಾ ಸೇನಾನಿಗಳು ಅಂತ ಮಾಡಿದವರು ಯಾರು? ಅವರಿಗೆ `ನಾನು ನಿನ್ನೆ ಏನು ಮಾತಾಡಿದ್ದೆ?- ಇವತ್ತು ಏನು ಮಾತಾಡಾಕ ಹತ್ತೇನಿ’ ಅಂತ ನೆನಪು ಇರತೈತೋ ಇಲ್ಲೋ?

ಅವರಿಗೆ ಇರಲಿ ಬಿಡಲಿ, ನಮಗರ ಅಷ್ಟು ಬುದ್ಧಿ ಅದನೋ ಇಲ್ಲೋ? ರಾಜಕಾರಣಿಗಳು ಮಾಧ್ಯಮ ದುರುಪಯೋಗ ಪಡಿಸಿಕೊಳ್ಳೋದು, ಮಾಧ್ಯಮದವರು ರಾಜಕಾರಣ ಮಾಡೋದು ನಮಗ ಗೊತ್ತು ಆಗತೇತೋ ಇಲ್ಲೋ? ಈ ಪ್ರಶ್ನೆಗಳ ಉತ್ತರಗಳೇ ನಮ್ಮ ನಾಳೆಗಳನ್ನ ನಿರ್ಧರಿಸತಾವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...