Homeಅಂಕಣಗಳುಪ್ಲಾಸ್ಮಾ: ಜೀವದ್ರವದ ಜರೂರತ್ತುಗಳು:`ತಬ್ಲೀಘಿ ಜಿಹಾದಿಗಳು, ತಬ್ಲೀಘಿ ಸೇನಾನಿಗಳು’ ಆಗಿದ್ದೇಗೆ?

ಪ್ಲಾಸ್ಮಾ: ಜೀವದ್ರವದ ಜರೂರತ್ತುಗಳು:`ತಬ್ಲೀಘಿ ಜಿಹಾದಿಗಳು, ತಬ್ಲೀಘಿ ಸೇನಾನಿಗಳು’ ಆಗಿದ್ದೇಗೆ?

- Advertisement -
- Advertisement -

ಸರಕಾರಿ ಆಸ್ಪತ್ರೆಯ ವೈದ್ಯರೊಳಗ ಒಂದು ಜೋಕು ಓಡಾಡತಾ ಇರತೇತಿ. ಅದೇನಪಾ ಅಂದರ ತುರ್ತು ಚಿಕಿತ್ಸಾ ಘಟಕದೊಳಗ ಏನಾದರ ಒಂದು ಕೇಸು ಬಂತು ಅಂದರ ಅದನ್ನ ನೋಡಾಕ ನೂರು ಜನಾ ಹೊರಗ ಗುಂಪು ಕಟ್ಟಿಕೊಂಡು ಬರತಾರ. ಹೋಗರಿ, ಡಾಕ್ಟರಿಗೆ ಕೆಲಸಾ ಮಾಡಾಕ ಬಿಡ್ರಿ ಅಂದರ ಹೋಗಂಗಿಲ್ಲ. ಅವರನ್ನ ಚದುರಿಸಬೇಕು ಅಂತ ಡಾಕ್ಟರು ಒಂದು ಉಪಾಯ ಕಂಡುಕೊಂಡಿರತಾರ. ಅದೇನಪಾ ಅಂದರ ರೋಗಿಗೆ ತುರ್ತಾಗಿ ರಕ್ತ ಬೇಕಾಗೇತಿ. ಯಾರರ ಕೊಡವರು ಇದ್ದರ ಮುಂದ ಬರ್ರಿ ಅಂತ ಹೇಳತಾರ. ಆವಾಗ ಎಲ್ಲಾ ಶೂರರೂ ಅಲ್ಲಿಂದ ಹೋಗಿ ಬಿಡತಾರಂತ.

ಯಾವಾಗಲೂ, ಎಲ್ಲಾದಕ್ಕೂ `ಯಾಕ’ ಅಂತ ಪ್ರಶ್ನೆ ಮಾಡೋ ಉತ್ತರ ಕುಮಾರರಿಂದ ತುಂಬಿ ಹೋಗಿರೋ ದೇಶ ನಮ್ಮದು. ಹಂಗ ಇದ್ದಾಗ ದೆಹಲಿ- ಮುಂಬೈ ಮುಂತಾದ ನಗರಗಳಲ್ಲಿ ಕೆಲವು ಜನ ರಕ್ತ ದಾನ ಮಾಡೋ ಸುದ್ದಿ ಇದ್ದಕ್ಕಿದ್ದಂಗ ಜೋರಾಗಿ ಬಿಟ್ಟದಲ್ಲಾ ಎನು ಕತಿ?

ಈ ಹಿನ್ನೆಲೆಯೊಳಗ ಒಂದು ಮಜಾ ನೀವು ನೋಡಿದಿರಾ? ನಮ್ಮ ಠೀವಿ ಚಾನೆಲ್ಲುಗಳು ಬಳಸೋ ಶಬ್ದಗಳು ರಾತ್ರೋರಾತ್ರಿ ಬದಲಾಗಿದ್ದು ನೋಡಿದಿರಾ?

`ತಬ್ಲೀಘಿ ಜಿಹಾದಿಗಳು’ ಅಂತಿದ್ದವರು `ತಬ್ಲೀಘಿ ಸೇನಾನಿಗಳು’ ಅಂತ ಕರೀಲಿಕ್ಕೆ ಶುರು ಮಾಡಿದ್ದು ಯಾಕ ಅಂತ ವಿಚಾರ ಮಾಡಿದಿರಾ?

ನೋಡ್ರಿ, ನಿಮಗ ಬರೇ ಬಣ್ಣದ ಚಿತ್ರ ತೋರಿಸಿ, ನಿಮ್ಮ ಹತ್ರ ಹೂಂ ಅನ್ನಿಸಿ, ನಿಮ್ಮಿಂದ ವಿಚಾರ ಶಕ್ತಿ ಕಿತ್ತುಕೊಳ್ಳೋ ಜಾದೂ ಠೀವಿಯವರ ಹತ್ರ ಐತಿ.

ಎಲ್ಲಾ ಇರಲಿ, ಅದರ ಹಿಂದಿನ ಹಕೀಕತ್ತು ಏನು ಒಂದೀಟು ತಿಳಕೊಳ್ಳೋಣು. ಅದು ಏನಪಾ ಅಂದರ ಪ್ಲಾಸ್ಮಾ ಥೆರಪಿ ಅಥವಾ ಜೀವದ್ರವ್ಯ ಚಿಕಿತ್ಸೆ. ಈ ಪ್ಲಾಸ್ಮಾ ಅಂದರ ಅದು ಮನುಷ್ಯರ ರಕ್ತದಾಗ ಇರೋ ದ್ರವ್ಯ. ಇದರಾಗನ ಕೆಂಪು ಮತ್ತು ಬಿಳಿ ರಕ್ತ ಕಣಗಳು ಈಜಾಡಿಕೊಂಡು ಇರತಾವು. ಆದರ ಇದರಾಗ ಇರೋ ಪ್ರಮುಖ ವಸ್ತು ಅಂದರ ರೋಗ ನಿರೋಧಕ ಕಣಗಳು ಅಥವಾ ಇಮ್ಯುನೋ ಗ್ಲೋಬುಲಿನ್. ಅವಕ್ಕ ಆಂಟಿಬಾಡಿ ಅಥವಾ ಪ್ರತಿಜೀವಿಗಳು ಅಂತಾರ. ಇವು ರೋಗ ಬಂದು ಗುಣವಾದ ಪ್ರತಿ ರೋಗಿಯ ದೇಹದಾಗ ಇರತಾವು. ಇವನ್ನ ರೋಗ ಇದ್ದವನಿಗೆ ಕೊಟ್ಟರ ಅವನ ದೇಹದಾಗ ಪ್ರತಿಜೀವಿಯ ಸಂಖ್ಯೆ ಜಾಸ್ತಿ ಆಗಿ, ಅವನ ರೋಗ ನಿರೋಧಕ ಶಕ್ತಿ ಹೆಚ್ಚಾಗಿ, ಅವನ ರೋಗ ಕಮ್ಮಿ ಆಗುವ ಸಾಧ್ಯತೆ ಹೆಚ್ಚು ಆಗತೇತಿ.

ಒಂದು ರೀತಿಯೊಳಗ ಇದು ಲಸಿಕೆ ಇದ್ದಂಗ. ಯಾವ ರೋಗಾಣುವಿನ ವಿರುದ್ಧ ಲಸಿಕೆಯೊ ತಯಾರು ಮಾಡಬೇಕಾಗೇದೋ, ಅದರದ ಒಂದು ಸಣ್ಣ ಪ್ರಮಾಣದ ಸೋಂಕನ್ನು ತೊಗೊಂಡು ಒಂದು ಕುದುರೆ, ಎಮ್ಮೆ ಅಥವಾ ಇನ್ನೊಂದು ಅಂಥಾ ಪ್ರಾಣಿಯ ದೇಹದಾಗ ಹಾಕತಾರ. ಅದರ ದೇಹದಾಗ ಪ್ರತಿಜೀವಿ ತಯಾರು ಆದ ಮ್ಯಾಲೆ ಅದನ್ನ ತಗದು ಮನುಷ್ಯರಿಗೆ ನಿರೋಧಕ ಔಷಧಿ ಅಂತ ಕೊಡತಾರ.

ಅದರ ರೀತಿಯೊಳಗನ ಇರೋದು ಇದು ಪ್ಲಾಸ್ಮಾ ಥೆರಪಿ ಅಥವಾ ಜೀವದ್ರವ್ಯ ಚಿಕಿತ್ಸೆ. ಇದನ್ನ ಯಾರು ರೋಗದಿಂದ ಗುಣಾ ಆಗಿರತಾರೋ ಅವರ ದೇಹದಿಂದ ತೊಗೋಬೇಕಾಗತದ. ಭಾರತದಾಗ ರಕ್ತ ದಾನ ಸ್ವಯಂ ಆಸಕ್ತಿಯಿಂದ ಮಾತ್ರ ಕೊಡಬಹುದಾದ್ದರಿಂದ, ರಕ್ತದಾಗ ಇರೋ ಜೀವದ್ರವ್ಯವನ್ನ ಸಹಿತ ದಾನಿಗಳ ಸಮ್ಮತಿಯಿಂದ ಮಾತ್ರ ತೊಗೋಬಹುದು.

ಆದರ ಈಗ ಈ ಜೀವದ್ರವ್ಯದ ಜರೂರತ್ತು ಬರೇ ಯಾರೋ ಕೆಲವರ ಆರೋಗ್ಯ ರಕ್ಷಣೆಯ ಕಾರಣಗಳಿಗೆ ಬೇಕಾಗಿಲ್ಲ. ಸಮಾಜದ ಸ್ವಾಸ ಕಾಪಾಡೋ ಸಲುವಾಗಿ ಬೇಕಾಗೇತಿ.

ತಮ್ಮ ರಕ್ತದೊಳಗಿನ ಪ್ಲಾಸ್ಮಾ ತೊಗೊಳ್ಳಲಿಕ್ಕೆ ದೆಹಲಿ- ಮುಂಬಯಿ ಸೇರಿದಂತೆ 300 ಜನ ತಬ್ಲೀಘ ಜಮಾತ ಸದಸ್ಯರು ಸಮ್ಮತಿ ಕೊಟ್ಟಾರ ಅನ್ನೋ ಸುದ್ದಿ ಬಂದಕೂಡಲೇ ಕೆಲವರು ವಿರೋಧ ಮಾಡಲಿಕ್ಕೆ ಸುರು ಮಾಡಿದರು. ನನಗ ಕೊರೋನಾ ಬಂದು, ನಾನು ಸತ್ತರೂ ಸತ್ತೆ, ಗದ್ದಾರುಗಳ ರಕ್ತ ತೊಗೊಳ್ಳೋದಿಲ್ಲಾ ಅಂತ ಘೋಷಣೆ ಮಾಡಿಕೊಂಡರು.

ಇನ್ನ ಕೆಲವರು ನೋಡ್ರಿ ಅವರು ದೇವರಂಥಾವರು. ರೋಗಿಗಳಿಗೆ ತಮ್ಮ ರಕ್ತ ಕೊಟ್ಟು ಉಳಿಸಿಕೊಳ್ಳಾಕ ಹತ್ಯಾರು, ಅಂತ ಹೇಳಿದರು. ಆದರ ಸತ್ಯ ಅನ್ನೋದು ಈ ಎರಡು ವಿಪರೀತಗಳ ನಡುವೆ ಐತಿ.

ರಕ್ತ ಸ್ರಾವದಿಂದ ಸಾಯುವವರನ್ನ ರಕ್ತ ಮರುಪೂರಣೆಯಿಂದ ರಕ್ಷಣೆ ಮಾಡೋ ತಂತ್ರಜ್ಞಾನ ಇವತ್ತಿನದಲ್ಲ. ಎರಡನೇ ಮಹಾ ಯುದ್ಧದಿಂದನೂ ಈ ಪದ್ಧತಿ ನಡೆಯುತ್ತಾ ಬಂದೇತಿ. ಭಾರತದೊಳಗ ಸ್ವಾತಂತ್ರ ಪೂರ್ವದಾಗೂ ರಕ್ತದಾನದ ಉದಾಹರಣೆಗಳು ಇದ್ದಾವ. ಪ್ರತಿ ಸಲೆ ನಮ್ಮ ತಂಗಿಯೋ, ಹೆಂಡತಿಯೋ, ಮಗಳೋ, ರಕ್ತ ಹೀನತೆಯಿಂದ ಬಳಲುವಾಗ, ಯಾರಿಗರ ನಮ್ಮವರಿಗೆ ಅಪಘಾತ ಆದಾಗ, ಅವರಿಗೆ ರಕ್ತ ಹೊಂದಿಸಲು ನಾವು ಹುಡುಕಾಡಿರುತೇವಿ. ರಕ್ತ ದಾನಿ ಸಿಕ್ಕರ ಸಾಕು ಅಂತ ಆಗಿರತೇತಿ. ಅವರ ಮತ, ಜಾತಿ ಕೇಳಾಕ ಹೋಗೋದಿಲ್ಲ. ಇದು ನಮಗ ಮಾನವ ಕುಲದ ಏಕತೆಯ ಪಾಠ ಆಗಿರತದೋ ಇಲ್ಲೋ. ಇಂಥಾ ಪರಿಸ್ಥಿತಿಯೊಳಗ `ಮಾನವ ಜಾತಿ ತಾನು ಒಂದೇ ವಲಂ’ ಅಂದರ ಅಲ್ಲಂ ಅಂತ ಯಾರರ ಹೇಳತೇವೇನು?

ಇನ್ನ ತಿಂಗಳಾನುಗಟ್ಟಲೆ ಕೊರೋನಾ ಜಿಹಾದು- ಭಯೋತ್ಪಾದನೆ ಅಂತ ಹೀಯಾಳಿಸಿಕೊಂಡ ತಬ್ಲೀಘು ಜಮಾತು ಸದಸ್ಯರು ರಕ್ತದಾನಕ್ಕೆ ತಯಾರಾದ ತಕ್ಷಣ ಅವರನ್ನು ಕೊರೊನಾ ಸೇನಾನಿಗಳು ಅಂತ ಮಾಡಿದವರು ಯಾರು? ಅವರಿಗೆ `ನಾನು ನಿನ್ನೆ ಏನು ಮಾತಾಡಿದ್ದೆ?- ಇವತ್ತು ಏನು ಮಾತಾಡಾಕ ಹತ್ತೇನಿ’ ಅಂತ ನೆನಪು ಇರತೈತೋ ಇಲ್ಲೋ?

ಅವರಿಗೆ ಇರಲಿ ಬಿಡಲಿ, ನಮಗರ ಅಷ್ಟು ಬುದ್ಧಿ ಅದನೋ ಇಲ್ಲೋ? ರಾಜಕಾರಣಿಗಳು ಮಾಧ್ಯಮ ದುರುಪಯೋಗ ಪಡಿಸಿಕೊಳ್ಳೋದು, ಮಾಧ್ಯಮದವರು ರಾಜಕಾರಣ ಮಾಡೋದು ನಮಗ ಗೊತ್ತು ಆಗತೇತೋ ಇಲ್ಲೋ? ಈ ಪ್ರಶ್ನೆಗಳ ಉತ್ತರಗಳೇ ನಮ್ಮ ನಾಳೆಗಳನ್ನ ನಿರ್ಧರಿಸತಾವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

"ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ...