Homeಅಂಕಣಗಳುಪ್ಲಾಸ್ಮಾ: ಜೀವದ್ರವದ ಜರೂರತ್ತುಗಳು:`ತಬ್ಲೀಘಿ ಜಿಹಾದಿಗಳು, ತಬ್ಲೀಘಿ ಸೇನಾನಿಗಳು’ ಆಗಿದ್ದೇಗೆ?

ಪ್ಲಾಸ್ಮಾ: ಜೀವದ್ರವದ ಜರೂರತ್ತುಗಳು:`ತಬ್ಲೀಘಿ ಜಿಹಾದಿಗಳು, ತಬ್ಲೀಘಿ ಸೇನಾನಿಗಳು’ ಆಗಿದ್ದೇಗೆ?

- Advertisement -
- Advertisement -

ಸರಕಾರಿ ಆಸ್ಪತ್ರೆಯ ವೈದ್ಯರೊಳಗ ಒಂದು ಜೋಕು ಓಡಾಡತಾ ಇರತೇತಿ. ಅದೇನಪಾ ಅಂದರ ತುರ್ತು ಚಿಕಿತ್ಸಾ ಘಟಕದೊಳಗ ಏನಾದರ ಒಂದು ಕೇಸು ಬಂತು ಅಂದರ ಅದನ್ನ ನೋಡಾಕ ನೂರು ಜನಾ ಹೊರಗ ಗುಂಪು ಕಟ್ಟಿಕೊಂಡು ಬರತಾರ. ಹೋಗರಿ, ಡಾಕ್ಟರಿಗೆ ಕೆಲಸಾ ಮಾಡಾಕ ಬಿಡ್ರಿ ಅಂದರ ಹೋಗಂಗಿಲ್ಲ. ಅವರನ್ನ ಚದುರಿಸಬೇಕು ಅಂತ ಡಾಕ್ಟರು ಒಂದು ಉಪಾಯ ಕಂಡುಕೊಂಡಿರತಾರ. ಅದೇನಪಾ ಅಂದರ ರೋಗಿಗೆ ತುರ್ತಾಗಿ ರಕ್ತ ಬೇಕಾಗೇತಿ. ಯಾರರ ಕೊಡವರು ಇದ್ದರ ಮುಂದ ಬರ್ರಿ ಅಂತ ಹೇಳತಾರ. ಆವಾಗ ಎಲ್ಲಾ ಶೂರರೂ ಅಲ್ಲಿಂದ ಹೋಗಿ ಬಿಡತಾರಂತ.

ಯಾವಾಗಲೂ, ಎಲ್ಲಾದಕ್ಕೂ `ಯಾಕ’ ಅಂತ ಪ್ರಶ್ನೆ ಮಾಡೋ ಉತ್ತರ ಕುಮಾರರಿಂದ ತುಂಬಿ ಹೋಗಿರೋ ದೇಶ ನಮ್ಮದು. ಹಂಗ ಇದ್ದಾಗ ದೆಹಲಿ- ಮುಂಬೈ ಮುಂತಾದ ನಗರಗಳಲ್ಲಿ ಕೆಲವು ಜನ ರಕ್ತ ದಾನ ಮಾಡೋ ಸುದ್ದಿ ಇದ್ದಕ್ಕಿದ್ದಂಗ ಜೋರಾಗಿ ಬಿಟ್ಟದಲ್ಲಾ ಎನು ಕತಿ?

ಈ ಹಿನ್ನೆಲೆಯೊಳಗ ಒಂದು ಮಜಾ ನೀವು ನೋಡಿದಿರಾ? ನಮ್ಮ ಠೀವಿ ಚಾನೆಲ್ಲುಗಳು ಬಳಸೋ ಶಬ್ದಗಳು ರಾತ್ರೋರಾತ್ರಿ ಬದಲಾಗಿದ್ದು ನೋಡಿದಿರಾ?

`ತಬ್ಲೀಘಿ ಜಿಹಾದಿಗಳು’ ಅಂತಿದ್ದವರು `ತಬ್ಲೀಘಿ ಸೇನಾನಿಗಳು’ ಅಂತ ಕರೀಲಿಕ್ಕೆ ಶುರು ಮಾಡಿದ್ದು ಯಾಕ ಅಂತ ವಿಚಾರ ಮಾಡಿದಿರಾ?

ನೋಡ್ರಿ, ನಿಮಗ ಬರೇ ಬಣ್ಣದ ಚಿತ್ರ ತೋರಿಸಿ, ನಿಮ್ಮ ಹತ್ರ ಹೂಂ ಅನ್ನಿಸಿ, ನಿಮ್ಮಿಂದ ವಿಚಾರ ಶಕ್ತಿ ಕಿತ್ತುಕೊಳ್ಳೋ ಜಾದೂ ಠೀವಿಯವರ ಹತ್ರ ಐತಿ.

ಎಲ್ಲಾ ಇರಲಿ, ಅದರ ಹಿಂದಿನ ಹಕೀಕತ್ತು ಏನು ಒಂದೀಟು ತಿಳಕೊಳ್ಳೋಣು. ಅದು ಏನಪಾ ಅಂದರ ಪ್ಲಾಸ್ಮಾ ಥೆರಪಿ ಅಥವಾ ಜೀವದ್ರವ್ಯ ಚಿಕಿತ್ಸೆ. ಈ ಪ್ಲಾಸ್ಮಾ ಅಂದರ ಅದು ಮನುಷ್ಯರ ರಕ್ತದಾಗ ಇರೋ ದ್ರವ್ಯ. ಇದರಾಗನ ಕೆಂಪು ಮತ್ತು ಬಿಳಿ ರಕ್ತ ಕಣಗಳು ಈಜಾಡಿಕೊಂಡು ಇರತಾವು. ಆದರ ಇದರಾಗ ಇರೋ ಪ್ರಮುಖ ವಸ್ತು ಅಂದರ ರೋಗ ನಿರೋಧಕ ಕಣಗಳು ಅಥವಾ ಇಮ್ಯುನೋ ಗ್ಲೋಬುಲಿನ್. ಅವಕ್ಕ ಆಂಟಿಬಾಡಿ ಅಥವಾ ಪ್ರತಿಜೀವಿಗಳು ಅಂತಾರ. ಇವು ರೋಗ ಬಂದು ಗುಣವಾದ ಪ್ರತಿ ರೋಗಿಯ ದೇಹದಾಗ ಇರತಾವು. ಇವನ್ನ ರೋಗ ಇದ್ದವನಿಗೆ ಕೊಟ್ಟರ ಅವನ ದೇಹದಾಗ ಪ್ರತಿಜೀವಿಯ ಸಂಖ್ಯೆ ಜಾಸ್ತಿ ಆಗಿ, ಅವನ ರೋಗ ನಿರೋಧಕ ಶಕ್ತಿ ಹೆಚ್ಚಾಗಿ, ಅವನ ರೋಗ ಕಮ್ಮಿ ಆಗುವ ಸಾಧ್ಯತೆ ಹೆಚ್ಚು ಆಗತೇತಿ.

ಒಂದು ರೀತಿಯೊಳಗ ಇದು ಲಸಿಕೆ ಇದ್ದಂಗ. ಯಾವ ರೋಗಾಣುವಿನ ವಿರುದ್ಧ ಲಸಿಕೆಯೊ ತಯಾರು ಮಾಡಬೇಕಾಗೇದೋ, ಅದರದ ಒಂದು ಸಣ್ಣ ಪ್ರಮಾಣದ ಸೋಂಕನ್ನು ತೊಗೊಂಡು ಒಂದು ಕುದುರೆ, ಎಮ್ಮೆ ಅಥವಾ ಇನ್ನೊಂದು ಅಂಥಾ ಪ್ರಾಣಿಯ ದೇಹದಾಗ ಹಾಕತಾರ. ಅದರ ದೇಹದಾಗ ಪ್ರತಿಜೀವಿ ತಯಾರು ಆದ ಮ್ಯಾಲೆ ಅದನ್ನ ತಗದು ಮನುಷ್ಯರಿಗೆ ನಿರೋಧಕ ಔಷಧಿ ಅಂತ ಕೊಡತಾರ.

ಅದರ ರೀತಿಯೊಳಗನ ಇರೋದು ಇದು ಪ್ಲಾಸ್ಮಾ ಥೆರಪಿ ಅಥವಾ ಜೀವದ್ರವ್ಯ ಚಿಕಿತ್ಸೆ. ಇದನ್ನ ಯಾರು ರೋಗದಿಂದ ಗುಣಾ ಆಗಿರತಾರೋ ಅವರ ದೇಹದಿಂದ ತೊಗೋಬೇಕಾಗತದ. ಭಾರತದಾಗ ರಕ್ತ ದಾನ ಸ್ವಯಂ ಆಸಕ್ತಿಯಿಂದ ಮಾತ್ರ ಕೊಡಬಹುದಾದ್ದರಿಂದ, ರಕ್ತದಾಗ ಇರೋ ಜೀವದ್ರವ್ಯವನ್ನ ಸಹಿತ ದಾನಿಗಳ ಸಮ್ಮತಿಯಿಂದ ಮಾತ್ರ ತೊಗೋಬಹುದು.

ಆದರ ಈಗ ಈ ಜೀವದ್ರವ್ಯದ ಜರೂರತ್ತು ಬರೇ ಯಾರೋ ಕೆಲವರ ಆರೋಗ್ಯ ರಕ್ಷಣೆಯ ಕಾರಣಗಳಿಗೆ ಬೇಕಾಗಿಲ್ಲ. ಸಮಾಜದ ಸ್ವಾಸ ಕಾಪಾಡೋ ಸಲುವಾಗಿ ಬೇಕಾಗೇತಿ.

ತಮ್ಮ ರಕ್ತದೊಳಗಿನ ಪ್ಲಾಸ್ಮಾ ತೊಗೊಳ್ಳಲಿಕ್ಕೆ ದೆಹಲಿ- ಮುಂಬಯಿ ಸೇರಿದಂತೆ 300 ಜನ ತಬ್ಲೀಘ ಜಮಾತ ಸದಸ್ಯರು ಸಮ್ಮತಿ ಕೊಟ್ಟಾರ ಅನ್ನೋ ಸುದ್ದಿ ಬಂದಕೂಡಲೇ ಕೆಲವರು ವಿರೋಧ ಮಾಡಲಿಕ್ಕೆ ಸುರು ಮಾಡಿದರು. ನನಗ ಕೊರೋನಾ ಬಂದು, ನಾನು ಸತ್ತರೂ ಸತ್ತೆ, ಗದ್ದಾರುಗಳ ರಕ್ತ ತೊಗೊಳ್ಳೋದಿಲ್ಲಾ ಅಂತ ಘೋಷಣೆ ಮಾಡಿಕೊಂಡರು.

ಇನ್ನ ಕೆಲವರು ನೋಡ್ರಿ ಅವರು ದೇವರಂಥಾವರು. ರೋಗಿಗಳಿಗೆ ತಮ್ಮ ರಕ್ತ ಕೊಟ್ಟು ಉಳಿಸಿಕೊಳ್ಳಾಕ ಹತ್ಯಾರು, ಅಂತ ಹೇಳಿದರು. ಆದರ ಸತ್ಯ ಅನ್ನೋದು ಈ ಎರಡು ವಿಪರೀತಗಳ ನಡುವೆ ಐತಿ.

ರಕ್ತ ಸ್ರಾವದಿಂದ ಸಾಯುವವರನ್ನ ರಕ್ತ ಮರುಪೂರಣೆಯಿಂದ ರಕ್ಷಣೆ ಮಾಡೋ ತಂತ್ರಜ್ಞಾನ ಇವತ್ತಿನದಲ್ಲ. ಎರಡನೇ ಮಹಾ ಯುದ್ಧದಿಂದನೂ ಈ ಪದ್ಧತಿ ನಡೆಯುತ್ತಾ ಬಂದೇತಿ. ಭಾರತದೊಳಗ ಸ್ವಾತಂತ್ರ ಪೂರ್ವದಾಗೂ ರಕ್ತದಾನದ ಉದಾಹರಣೆಗಳು ಇದ್ದಾವ. ಪ್ರತಿ ಸಲೆ ನಮ್ಮ ತಂಗಿಯೋ, ಹೆಂಡತಿಯೋ, ಮಗಳೋ, ರಕ್ತ ಹೀನತೆಯಿಂದ ಬಳಲುವಾಗ, ಯಾರಿಗರ ನಮ್ಮವರಿಗೆ ಅಪಘಾತ ಆದಾಗ, ಅವರಿಗೆ ರಕ್ತ ಹೊಂದಿಸಲು ನಾವು ಹುಡುಕಾಡಿರುತೇವಿ. ರಕ್ತ ದಾನಿ ಸಿಕ್ಕರ ಸಾಕು ಅಂತ ಆಗಿರತೇತಿ. ಅವರ ಮತ, ಜಾತಿ ಕೇಳಾಕ ಹೋಗೋದಿಲ್ಲ. ಇದು ನಮಗ ಮಾನವ ಕುಲದ ಏಕತೆಯ ಪಾಠ ಆಗಿರತದೋ ಇಲ್ಲೋ. ಇಂಥಾ ಪರಿಸ್ಥಿತಿಯೊಳಗ `ಮಾನವ ಜಾತಿ ತಾನು ಒಂದೇ ವಲಂ’ ಅಂದರ ಅಲ್ಲಂ ಅಂತ ಯಾರರ ಹೇಳತೇವೇನು?

ಇನ್ನ ತಿಂಗಳಾನುಗಟ್ಟಲೆ ಕೊರೋನಾ ಜಿಹಾದು- ಭಯೋತ್ಪಾದನೆ ಅಂತ ಹೀಯಾಳಿಸಿಕೊಂಡ ತಬ್ಲೀಘು ಜಮಾತು ಸದಸ್ಯರು ರಕ್ತದಾನಕ್ಕೆ ತಯಾರಾದ ತಕ್ಷಣ ಅವರನ್ನು ಕೊರೊನಾ ಸೇನಾನಿಗಳು ಅಂತ ಮಾಡಿದವರು ಯಾರು? ಅವರಿಗೆ `ನಾನು ನಿನ್ನೆ ಏನು ಮಾತಾಡಿದ್ದೆ?- ಇವತ್ತು ಏನು ಮಾತಾಡಾಕ ಹತ್ತೇನಿ’ ಅಂತ ನೆನಪು ಇರತೈತೋ ಇಲ್ಲೋ?

ಅವರಿಗೆ ಇರಲಿ ಬಿಡಲಿ, ನಮಗರ ಅಷ್ಟು ಬುದ್ಧಿ ಅದನೋ ಇಲ್ಲೋ? ರಾಜಕಾರಣಿಗಳು ಮಾಧ್ಯಮ ದುರುಪಯೋಗ ಪಡಿಸಿಕೊಳ್ಳೋದು, ಮಾಧ್ಯಮದವರು ರಾಜಕಾರಣ ಮಾಡೋದು ನಮಗ ಗೊತ್ತು ಆಗತೇತೋ ಇಲ್ಲೋ? ಈ ಪ್ರಶ್ನೆಗಳ ಉತ್ತರಗಳೇ ನಮ್ಮ ನಾಳೆಗಳನ್ನ ನಿರ್ಧರಿಸತಾವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...