Homeಕರೋನಾ ತಲ್ಲಣಪ್ಲಾಸ್ಮಾ ಚಿಕಿತ್ಸೆಯು ಮರಣ ದರವನ್ನು ಕಡಿಮೆ ಮಾಡವುದಿಲ್ಲ!: ದ್ವಂದ್ವ ಮೂಡಿಸಿದ ICMR ಅಧ್ಯಯನ!

ಪ್ಲಾಸ್ಮಾ ಚಿಕಿತ್ಸೆಯು ಮರಣ ದರವನ್ನು ಕಡಿಮೆ ಮಾಡವುದಿಲ್ಲ!: ದ್ವಂದ್ವ ಮೂಡಿಸಿದ ICMR ಅಧ್ಯಯನ!

ಪ್ಲಾಸ್ಮಾ ಚಿಕಿತ್ಸೆಯನ್ನು ಪಡೆದ 34 ರೋಗಿಗಳು, ಅಂದರೆ 13.6% ಜನರು ಸಾವನ್ನಪ್ಪಿದ್ದರೆ, ಪ್ಲಾಸ್ಮಾ ಚಿಕಿತ್ಸೆ ಪಡೆಯದ 31 ರೋಗಿಗಳು, ಅಂದರೆ 14.6% ಜನರು ಸೋಂಕಿಗೆ ಬಲಿಯಾಗಿದ್ದಾರೆ.

- Advertisement -
- Advertisement -

ಪ್ಲಾಸ್ಮಾ ಚಿಕಿತ್ಸೆಯ ಬಗ್ಗೆ ICMR ನಡೆಸಿದ ವಿಶ್ವದ ಅತಿದೊಡ್ಡ ಟ್ರಯಲ್‌ನ ಫಲಿತಾಂಶದ ಪ್ರಕಾರ, ’ಪ್ಲಾಸ್ಮಾ ಚಿಕಿತ್ಸೆಯು ಮರಣ ದರವನ್ನು ಕಡಿಮೆ ಮಾಡುವುದಿಲ್ಲ” ಎಂದು ತಿಳಿದುಬಂದಿದೆ. ಇದು ಜಗತ್ತಿನಾದ್ಯಂತ ನೀತಿನಿರೂಪಕರು, ವೈದ್ಯರು, ರೋಗಿಗಳು ಮತ್ತು ಅವರ ಕುಟುಂಬದವರ ಭರವಸೆಯನ್ನು ಹುಸಿಗೊಳಿಸಿದೆ.

PLACID ಎಂದು ಕರೆಯಲ್ಪಡುವ ಈ ಪ್ರಯೋಗವನ್ನು 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 39 ಆಸ್ಪತ್ರೆಗಳಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ICMR) ಆಶ್ರಯದಲ್ಲಿ ನಡೆಸಲಾಯಿತು.

ಅಧ್ಯಯನವು, ಉಸಿರಾಟದ ತೊಂದರೆ ಇರುವ ಮತ್ತು ಆಮ್ಲಜನಕದ ಶುದ್ಧಿಯ ಮಟ್ಟವು 93% ಕ್ಕಿಂತ ಕಡಿಮೆ ಇರುವ 464 ಮಧ್ಯಮ ಮಟ್ಟದ ಅನಾರೋಗ್ಯದ ರೋಗಿಗಳನ್ನು ಒಳಗೊಂಡಿತ್ತು. ಅವುಗಳಲ್ಲಿ, 235 ಜನರಿಗೆ ರೋಗದ ವಿರುದ್ಧ ಪ್ರತಿಕಾಯಗಳನ್ನು ಹೊಂದಿರುವವರಿಗೆ, ಚೇತರಿಸಿಕೊಂಡವರಿಂದ ಸಂಗ್ರಹಿಸಿದ ’CP’ (convalescent plasma) ನೀಡಲಾಯಿತು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ಉಳಿದ 229 ಮಂದಿ ಕೇವಲ ಗುಣಮಟ್ಟದ ಆರೈಕೆಯನ್ನು ಪಡೆದರು. ಸ್ವತಂತ್ರ ಗುಂಪಿನಲ್ಲಿದ್ದವರಿಗೆ 24 ಗಂಟೆಗಳ ಅಂತರದಲ್ಲಿ 200 ಮಿಲಿ ಪ್ಲಾಸ್ಮಾವನ್ನು ಎರಡು ಪ್ರಮಾಣದಲ್ಲಿ ವರ್ಗಾಯಿಸಲಾಯಿತು. ಸ್ವತಂತ್ರ ಮತ್ತು ನಿಯಂತ್ರಣ ಗುಂಪುಗಳನ್ನು 28 ದಿನಗಳ ನಂತರ ಅಧ್ಯಯನ ಮಾಡಲಾಯಿತು.

ಪ್ರಿಪ್ರಿಂಟ್ ಸರ್ವರ್‌ನಲ್ಲಿ ಬಿಡುಗಡೆಯಾದ ಫಲಿತಾಂಶಗಳು, ಪ್ಲಾಸ್ಮಾ ಚಿಕಿತ್ಸೆಯನ್ನು ಪಡೆದ 34 ರೋಗಿಗಳು, ಅಂದರೆ 13.6% ಜನರು ಸಾವನ್ನಪ್ಪಿದ್ದರೆ, ಪ್ಲಾಸ್ಮಾ ಚಿಕಿತ್ಸೆ ಪಡೆಯದ 31 ರೋಗಿಗಳು, ಅಂದರೆ 14.6% ಜನರು ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೆ, ಪ್ರತಿ ಗುಂಪಿನಲ್ಲಿಯೂ 17 ರೋಗಿಗಳು ತೀವ್ರ ರೋಗದ ಮಟ್ಟವನ್ನು ಹೊಂದಿದ್ದಾರೆ.

“CP ಬಳಕೆಯು ಉಸಿರಾಟದ ತೊಂದರೆ ಮತ್ತು ಆಯಾಸದ ಪರಿಹಾರವನ್ನು ಸುಧಾರಿಸುತ್ತದೆ ಎಂದು ತೋರುತ್ತದೆಯಾದರೂ, ಇದು 28 ದಿನಗಳ ಮರಣವನ್ನು ಕಡಿಮೆ ಮಾಡಲು ಅಥವಾ ಮಧ್ಯಮ ಮಟ್ಟದ ಕೊರೊನಾ ರೋಗಿಗಳಲ್ಲಿ ತೀವ್ರ ಕಾಯಿಲೆಗೆ ಒಳಗಾಗುವುದನ್ನು ತಡೆಯಲಿಲ್ಲ” ಎಂಬುದನ್ನು ಅಧ್ಯಯನವು ತಿಳಿಸಿದೆ ಎಂದು ICMR ನ ವಿಜ್ಞಾನಿ ಡಾ.ಅಪರ್ಣ ಮುಖರ್ಜಿ ಹೇಳಿದರು.

ಇದನ್ನೂ ಓದಿ:  ರಾಜ್ಯದಲ್ಲಿ ಕೊರೊನಾ ವಿರುದ್ದ ಪ್ಲಾಸ್ಮಾ ಥೆರಪಿ ಮುಂದುವರೆಸಲಾಗುವುದು: ಆರೋಗ್ಯ ಸಚಿವ ಶ್ರೀರಾಮುಲು

ಹಲವಾರು ರಾಜ್ಯ ಸರ್ಕಾರಗಳು ಪ್ಲಾಸ್ಮಾ ಚಿಕಿತ್ಸೆಯನ್ನು ಸಕ್ರಿಯವಾಗಿ ಉತ್ತೇಜಿಸುತ್ತಿರುವುದರಿಂದ ಈ ಸಂಶೋಧನಾ ಫಲಿತಾಂಶಗಳು ಪ್ರಸ್ತುತ ಸಾಂಕ್ರಾಮಿಕದಲ್ಲಿ ಮಹತ್ವವನ್ನು ಪಡೆದುಕೊಳ್ಳುತ್ತವೆ.

ಏನಿದು ಪ್ಲಾಸ್ಮಾ ಚಿಕಿತ್ಸೆ?

ಈಗಾಗಲೇ ಕೊರೊನಾ ಸೋಂಕು ತಗುಲಿ ಗುಣಮುಖರಾದವರ (ಅವರ ದೇಹದಲ್ಲಿ ಕೊರೊನಾ ವೈರಸ್‌ ಇಲ್ಲ ಎಂಬುದು ಎರಡು ಸಾರಿ ಖಾತ್ರಿಯಾದ ನಂತರ) ರಕ್ತದಲ್ಲಿನ ರೋಗನಿರೋಧಕ ಪ್ಲಾಸ್ಮಾ ಕಣಗಳನ್ನು ತೆಗೆದುಕೊಂಡು ಹಾಲಿ ಸೋಂಕಿತರಿಗೆ ನೀಡುವುದೇ ಪ್ಲಾಸ್ಮಾ ಥೆರಪಿಯಾಗಿದೆ. ಕೊರೊನಾದಿಂದ ಗುಣಮುಖರಾದವರಲ್ಲಿ ಹೆಚ್ಚಿನ ರೋಗ ನಿರೋಧಕ ಶಕ್ತಿ ಬೆಳೆದಿರುವುದರಿಂದ ಸೋಂಕಿತರಿಗೆ ಅದನ್ನು ಬಳಸುವ ಪ್ರಯೋಗ ಆರಂಭಗೊಂಡು, ಹಲವು ಕಡೆ ಯಶಸ್ವಿಯೂ ಆಗಿದೆ.

ಅದಾಗ್ಯೂ,‌ ಈ ರೀತಿಯ ಪ್ಲಾಸ್ಮಾಥೆರಪಿಯನ್ನು ಹಲವು ಆಸ್ಪತ್ರೆಗಳು ಮಾಡಬಹುದು ಎಂದು ಸ್ವತಃ ICMR ಕರೆ ನೀಡಿತ್ತು. ದೇಶ-ವಿದೇಶಗಳಲ್ಲಿ ಪ್ಲಾಸ್ಮಾ ಚಿಕಿತ್ಸೆಯಿಂದ ನೂರಾರು ಜನ ರೋಗಿಗಳು ತಮ್ಮ ಜೀವ ಉಳಿಸಿಕೊಂಡಿದ್ದಾರೆ. ಭಾರತದಲ್ಲಿಯೂ ಸಹ ಸರ್ಕಾರವೇ ಪ್ಲಾಸ್ಮಾ ಚಿಕಿತ್ಸೆಗೆ ಪ್ರೋತ್ಸಾಹವನ್ನು ನೀಡಿತ್ತು. ಕರ್ನಾಟಕದಲ್ಲಿಯೂ ಪ್ಲಾಸ್ಮಾ ಚಿಕಿತ್ಸೆಯನ್ನು ತೃಪ್ತಿದಾಯಕವಾಗಿದೆ, ಹಾಗಾಗಿ ಅದನ್ನು ಮುಂದುವರೆಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀ ರಾಮುಲು ಹೇಳಿದ್ದರು.

ರಾಷ್ಟ್ರೀಯ ಕೋವಿಡ್ -19 ಕ್ಲಿನಿಕಲ್ ಮ್ಯಾನೇಜ್‌ಮೆಂಟ್ ಪ್ರೋಟೋಕಾಲ್ ಇದನ್ನು ತನಿಖಾ ಚಿಕಿತ್ಸೆಯಾಗಿ ಅನುಮತಿಸಿದ ನಂತರ ಕೆಲವರು ಪ್ಲಾಸ್ಮಾ ಬ್ಯಾಂಕುಗಳನ್ನು ಸ್ಥಾಪಿಸಿದ್ದರು.


ಇದನ್ನೂ ಓದಿ: ಕೊರೊನಾ ಸೋಂಕಿತರ ಮೇಲಿನ ಪ್ಲಾಸ್ಮಾ ಥೆರಪಿ : ಫಲಿತಾಂಶ ತೃಪ್ತಿದಾಯಕವೆಂದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...