Homeಕರೋನಾ ತಲ್ಲಣಪ್ಲಾಸ್ಮಾ ಚಿಕಿತ್ಸೆಯು ಮರಣ ದರವನ್ನು ಕಡಿಮೆ ಮಾಡವುದಿಲ್ಲ!: ದ್ವಂದ್ವ ಮೂಡಿಸಿದ ICMR ಅಧ್ಯಯನ!

ಪ್ಲಾಸ್ಮಾ ಚಿಕಿತ್ಸೆಯು ಮರಣ ದರವನ್ನು ಕಡಿಮೆ ಮಾಡವುದಿಲ್ಲ!: ದ್ವಂದ್ವ ಮೂಡಿಸಿದ ICMR ಅಧ್ಯಯನ!

ಪ್ಲಾಸ್ಮಾ ಚಿಕಿತ್ಸೆಯನ್ನು ಪಡೆದ 34 ರೋಗಿಗಳು, ಅಂದರೆ 13.6% ಜನರು ಸಾವನ್ನಪ್ಪಿದ್ದರೆ, ಪ್ಲಾಸ್ಮಾ ಚಿಕಿತ್ಸೆ ಪಡೆಯದ 31 ರೋಗಿಗಳು, ಅಂದರೆ 14.6% ಜನರು ಸೋಂಕಿಗೆ ಬಲಿಯಾಗಿದ್ದಾರೆ.

- Advertisement -
- Advertisement -

ಪ್ಲಾಸ್ಮಾ ಚಿಕಿತ್ಸೆಯ ಬಗ್ಗೆ ICMR ನಡೆಸಿದ ವಿಶ್ವದ ಅತಿದೊಡ್ಡ ಟ್ರಯಲ್‌ನ ಫಲಿತಾಂಶದ ಪ್ರಕಾರ, ’ಪ್ಲಾಸ್ಮಾ ಚಿಕಿತ್ಸೆಯು ಮರಣ ದರವನ್ನು ಕಡಿಮೆ ಮಾಡುವುದಿಲ್ಲ” ಎಂದು ತಿಳಿದುಬಂದಿದೆ. ಇದು ಜಗತ್ತಿನಾದ್ಯಂತ ನೀತಿನಿರೂಪಕರು, ವೈದ್ಯರು, ರೋಗಿಗಳು ಮತ್ತು ಅವರ ಕುಟುಂಬದವರ ಭರವಸೆಯನ್ನು ಹುಸಿಗೊಳಿಸಿದೆ.

PLACID ಎಂದು ಕರೆಯಲ್ಪಡುವ ಈ ಪ್ರಯೋಗವನ್ನು 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 39 ಆಸ್ಪತ್ರೆಗಳಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ICMR) ಆಶ್ರಯದಲ್ಲಿ ನಡೆಸಲಾಯಿತು.

ಅಧ್ಯಯನವು, ಉಸಿರಾಟದ ತೊಂದರೆ ಇರುವ ಮತ್ತು ಆಮ್ಲಜನಕದ ಶುದ್ಧಿಯ ಮಟ್ಟವು 93% ಕ್ಕಿಂತ ಕಡಿಮೆ ಇರುವ 464 ಮಧ್ಯಮ ಮಟ್ಟದ ಅನಾರೋಗ್ಯದ ರೋಗಿಗಳನ್ನು ಒಳಗೊಂಡಿತ್ತು. ಅವುಗಳಲ್ಲಿ, 235 ಜನರಿಗೆ ರೋಗದ ವಿರುದ್ಧ ಪ್ರತಿಕಾಯಗಳನ್ನು ಹೊಂದಿರುವವರಿಗೆ, ಚೇತರಿಸಿಕೊಂಡವರಿಂದ ಸಂಗ್ರಹಿಸಿದ ’CP’ (convalescent plasma) ನೀಡಲಾಯಿತು ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ಉಳಿದ 229 ಮಂದಿ ಕೇವಲ ಗುಣಮಟ್ಟದ ಆರೈಕೆಯನ್ನು ಪಡೆದರು. ಸ್ವತಂತ್ರ ಗುಂಪಿನಲ್ಲಿದ್ದವರಿಗೆ 24 ಗಂಟೆಗಳ ಅಂತರದಲ್ಲಿ 200 ಮಿಲಿ ಪ್ಲಾಸ್ಮಾವನ್ನು ಎರಡು ಪ್ರಮಾಣದಲ್ಲಿ ವರ್ಗಾಯಿಸಲಾಯಿತು. ಸ್ವತಂತ್ರ ಮತ್ತು ನಿಯಂತ್ರಣ ಗುಂಪುಗಳನ್ನು 28 ದಿನಗಳ ನಂತರ ಅಧ್ಯಯನ ಮಾಡಲಾಯಿತು.

ಪ್ರಿಪ್ರಿಂಟ್ ಸರ್ವರ್‌ನಲ್ಲಿ ಬಿಡುಗಡೆಯಾದ ಫಲಿತಾಂಶಗಳು, ಪ್ಲಾಸ್ಮಾ ಚಿಕಿತ್ಸೆಯನ್ನು ಪಡೆದ 34 ರೋಗಿಗಳು, ಅಂದರೆ 13.6% ಜನರು ಸಾವನ್ನಪ್ಪಿದ್ದರೆ, ಪ್ಲಾಸ್ಮಾ ಚಿಕಿತ್ಸೆ ಪಡೆಯದ 31 ರೋಗಿಗಳು, ಅಂದರೆ 14.6% ಜನರು ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೆ, ಪ್ರತಿ ಗುಂಪಿನಲ್ಲಿಯೂ 17 ರೋಗಿಗಳು ತೀವ್ರ ರೋಗದ ಮಟ್ಟವನ್ನು ಹೊಂದಿದ್ದಾರೆ.

“CP ಬಳಕೆಯು ಉಸಿರಾಟದ ತೊಂದರೆ ಮತ್ತು ಆಯಾಸದ ಪರಿಹಾರವನ್ನು ಸುಧಾರಿಸುತ್ತದೆ ಎಂದು ತೋರುತ್ತದೆಯಾದರೂ, ಇದು 28 ದಿನಗಳ ಮರಣವನ್ನು ಕಡಿಮೆ ಮಾಡಲು ಅಥವಾ ಮಧ್ಯಮ ಮಟ್ಟದ ಕೊರೊನಾ ರೋಗಿಗಳಲ್ಲಿ ತೀವ್ರ ಕಾಯಿಲೆಗೆ ಒಳಗಾಗುವುದನ್ನು ತಡೆಯಲಿಲ್ಲ” ಎಂಬುದನ್ನು ಅಧ್ಯಯನವು ತಿಳಿಸಿದೆ ಎಂದು ICMR ನ ವಿಜ್ಞಾನಿ ಡಾ.ಅಪರ್ಣ ಮುಖರ್ಜಿ ಹೇಳಿದರು.

ಇದನ್ನೂ ಓದಿ:  ರಾಜ್ಯದಲ್ಲಿ ಕೊರೊನಾ ವಿರುದ್ದ ಪ್ಲಾಸ್ಮಾ ಥೆರಪಿ ಮುಂದುವರೆಸಲಾಗುವುದು: ಆರೋಗ್ಯ ಸಚಿವ ಶ್ರೀರಾಮುಲು

ಹಲವಾರು ರಾಜ್ಯ ಸರ್ಕಾರಗಳು ಪ್ಲಾಸ್ಮಾ ಚಿಕಿತ್ಸೆಯನ್ನು ಸಕ್ರಿಯವಾಗಿ ಉತ್ತೇಜಿಸುತ್ತಿರುವುದರಿಂದ ಈ ಸಂಶೋಧನಾ ಫಲಿತಾಂಶಗಳು ಪ್ರಸ್ತುತ ಸಾಂಕ್ರಾಮಿಕದಲ್ಲಿ ಮಹತ್ವವನ್ನು ಪಡೆದುಕೊಳ್ಳುತ್ತವೆ.

ಏನಿದು ಪ್ಲಾಸ್ಮಾ ಚಿಕಿತ್ಸೆ?

ಈಗಾಗಲೇ ಕೊರೊನಾ ಸೋಂಕು ತಗುಲಿ ಗುಣಮುಖರಾದವರ (ಅವರ ದೇಹದಲ್ಲಿ ಕೊರೊನಾ ವೈರಸ್‌ ಇಲ್ಲ ಎಂಬುದು ಎರಡು ಸಾರಿ ಖಾತ್ರಿಯಾದ ನಂತರ) ರಕ್ತದಲ್ಲಿನ ರೋಗನಿರೋಧಕ ಪ್ಲಾಸ್ಮಾ ಕಣಗಳನ್ನು ತೆಗೆದುಕೊಂಡು ಹಾಲಿ ಸೋಂಕಿತರಿಗೆ ನೀಡುವುದೇ ಪ್ಲಾಸ್ಮಾ ಥೆರಪಿಯಾಗಿದೆ. ಕೊರೊನಾದಿಂದ ಗುಣಮುಖರಾದವರಲ್ಲಿ ಹೆಚ್ಚಿನ ರೋಗ ನಿರೋಧಕ ಶಕ್ತಿ ಬೆಳೆದಿರುವುದರಿಂದ ಸೋಂಕಿತರಿಗೆ ಅದನ್ನು ಬಳಸುವ ಪ್ರಯೋಗ ಆರಂಭಗೊಂಡು, ಹಲವು ಕಡೆ ಯಶಸ್ವಿಯೂ ಆಗಿದೆ.

ಅದಾಗ್ಯೂ,‌ ಈ ರೀತಿಯ ಪ್ಲಾಸ್ಮಾಥೆರಪಿಯನ್ನು ಹಲವು ಆಸ್ಪತ್ರೆಗಳು ಮಾಡಬಹುದು ಎಂದು ಸ್ವತಃ ICMR ಕರೆ ನೀಡಿತ್ತು. ದೇಶ-ವಿದೇಶಗಳಲ್ಲಿ ಪ್ಲಾಸ್ಮಾ ಚಿಕಿತ್ಸೆಯಿಂದ ನೂರಾರು ಜನ ರೋಗಿಗಳು ತಮ್ಮ ಜೀವ ಉಳಿಸಿಕೊಂಡಿದ್ದಾರೆ. ಭಾರತದಲ್ಲಿಯೂ ಸಹ ಸರ್ಕಾರವೇ ಪ್ಲಾಸ್ಮಾ ಚಿಕಿತ್ಸೆಗೆ ಪ್ರೋತ್ಸಾಹವನ್ನು ನೀಡಿತ್ತು. ಕರ್ನಾಟಕದಲ್ಲಿಯೂ ಪ್ಲಾಸ್ಮಾ ಚಿಕಿತ್ಸೆಯನ್ನು ತೃಪ್ತಿದಾಯಕವಾಗಿದೆ, ಹಾಗಾಗಿ ಅದನ್ನು ಮುಂದುವರೆಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀ ರಾಮುಲು ಹೇಳಿದ್ದರು.

ರಾಷ್ಟ್ರೀಯ ಕೋವಿಡ್ -19 ಕ್ಲಿನಿಕಲ್ ಮ್ಯಾನೇಜ್‌ಮೆಂಟ್ ಪ್ರೋಟೋಕಾಲ್ ಇದನ್ನು ತನಿಖಾ ಚಿಕಿತ್ಸೆಯಾಗಿ ಅನುಮತಿಸಿದ ನಂತರ ಕೆಲವರು ಪ್ಲಾಸ್ಮಾ ಬ್ಯಾಂಕುಗಳನ್ನು ಸ್ಥಾಪಿಸಿದ್ದರು.


ಇದನ್ನೂ ಓದಿ: ಕೊರೊನಾ ಸೋಂಕಿತರ ಮೇಲಿನ ಪ್ಲಾಸ್ಮಾ ಥೆರಪಿ : ಫಲಿತಾಂಶ ತೃಪ್ತಿದಾಯಕವೆಂದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...