Homeಆರೋಗ್ಯಪ್ಲಾಸ್ಮಾ ಥೆರಪಿ ಸಕ್ಸಸ್‌, 4 ರೋಗಿಗಳು ಗುಣಮುಖ: ದೆಹಲಿ ಆರೋಗ್ಯ ಸಚಿವ

ಪ್ಲಾಸ್ಮಾ ಥೆರಪಿ ಸಕ್ಸಸ್‌, 4 ರೋಗಿಗಳು ಗುಣಮುಖ: ದೆಹಲಿ ಆರೋಗ್ಯ ಸಚಿವ

- Advertisement -
- Advertisement -

ಗಂಭೀರ ಸ್ಥಿತಿಯಲ್ಲಿರುವ ನಾಲ್ಕು ಕೊರೊನಾ ರೋಗಿಗಳ ಮೇಲೆ ನಡೆಸಿದ ಪ್ಲಾಸ್ಮಾ ಥೆರಪಿ ಚಿಕಿತ್ಸೆಯು ಫಲ ನೀಡಿದ್ದು ಅವರು ಗುಣಮುಖರಾಗಿದ್ದಾರೆ ಎಂದು ದೆಹಲಿಯ ಆರೋಗ್ಯ ಸಚಿವ ಸತ್ಯೆಂದರ್‌ ಜೈನ್‌ ತಿಳಿಸಿದ್ದಾರೆ.

ನಾವು ಇದುವರೆಗೂ ಗಂಭೀರ ಸ್ಥಿತಿಯಲ್ಲಿರುವ ಆರು ಕೊರೊನಾ ಬಾಧಿತರನ್ನು ದಾಖಲಿಸಿಕೊಂಡಿದ್ದೇವೆ. ಈ ನಾಲ್ಕು ದಿನದಲ್ಲಿ ನಾಲ್ಕು ರೋಗಿಗಳು ಗುಣಮುಖರಾಗಿದ್ದರೆ ಎಂದು ಅವರು ತಿಳಿಸಿದ್ದಾರೆ.

ದೆಹಲಿಯು ಮಂಗಳವಾರ ಕೊರೊನಾ ವೈರಸ್ ಸೋಂಕಿತರಿಗೆ ಪ್ಲಾಸ್ಮಾಥೆರಪಿ ಪ್ರಯೋಗಗಳನ್ನು ಪ್ರಾರಂಭಿಸಿತು. ಇಬ್ಬರು ಸೋಂಕಿನಿಂದ ಚೇತರಿಸಿಕೊಂಡ ವ್ಯಕ್ತಿಗಳ ಆಂಟಿಬಾಡಿ-ಭರಿತ ಪ್ಲಾಸ್ಮಾವನ್ನು ಬಳಸಿ ಚಿಕಿತ್ಸೆಯನ್ನು ನೀಡಲಾಗಿದೆ.

ಏನಿದು ಪ್ಲಾಸ್ಮಾಥೆರಪಿ?

ಈಗಾಗಲೇ ಕೊರೊನಾ ಸೋಂಕು ತಗುಲಿ ಗುಣಮುಖರಾದವರ (ಅವರ ದೇಹದಲ್ಲಿ ಕೊರೊನಾ ವೈರಸ್‌ ಇಲ್ಲ ಎಂಬುದು ಎರಡು ಸಾರಿ ಖಾತ್ರಿಯಾದ ನಂತರ) ರಕ್ತದಲ್ಲಿನ ರೋಗನಿರೋಧಕ ಪ್ಲಾಸ್ಮಾ ಕಣಗಳನ್ನು ತೆಗೆದುಕೊಂಡು ಹಾಲಿ ಸೋಂಕಿತರಿಗೆ ನೀಡುವುದೇ ಪ್ಲಾಸ್ಮಾ ಥೆರಪಿಯಾಗಿದೆ. ಕೊರೊನಾದಿಂದ ಗುಣಮುಖರಾದವರಲ್ಲಿ ಹೆಚ್ಚಿನ ರೋಗ ನಿರೋಧಕ ಶಕ್ತಿ ಬೆಳೆದಿರುವುದರಿಂದ ಸೋಂಕಿತರಿಗೆ ಅದನ್ನು ಬಳಸುವ ಪ್ರಯೋಗ ಈಗ ಆರಂಭಗೊಂಡಿದೆ.

ಐಸಿಎಂಆರ್‌ ಈ ರೀತಿಯ ಪ್ಲಾಸ್ಮಾಥೆರಪಿಯನ್ನು ಹಲವು ಆಸ್ಪತ್ರೆಗಳು ಮಾಡಬಹುದು ಎಂದು ಕರೆ ನೀಡಿದೆ. ಈ ಪ್ರಯೋಗವನ್ನು ತುಂಬಾ ಗಂಭೀರ ಸ್ಥಿತಿಯಲ್ಲಿರುವ ಕೊರೊನಾ ಸೋಂಕಿತರ ಮೇಲೆ ನಡೆಸಲಾಗುತ್ತದೆ. ಇದು ಈಗಾಗಲೇ ಚೈನಾ ಮತ್ತು ಅಮೆರಿಕಾದಲ್ಲಿ ನಡೆದಿದ್ದು ಭಾರತದಲ್ಲಿ ಇತ್ತೀಚೆಗೆ ಆರಂಭಗೊಂಡಿದೆ.

ಹೆಚ್ಚಿನ ಮಾಹಿತಿಗೆ ಕೆಳಗಿನ ವಿಡಿಯೋ ನೋಡಿ

“ಕೊರೊನಾ ಸೋಂಕಿತರ ಮೇಲೆ ನಡೆಸಿದ ಪ್ಲಾಸ್ಮಾ ಚಿಕಿತ್ಸೆಯ ಆರಂಭಿಕ ಫಲಿತಾಂಶಗಳು ತೃಪ್ತಿದಾಯಕವಾಗಿದೆ, ಮುಂದಿನ 2-3 ದಿನಗಳಲ್ಲಿ ಹೆಚ್ಚಿನ ಪ್ರಯೋಗಗಳನ್ನು ಮಾಡಬೇಕಾಗಿದೆ”. ನಗರದಾದ್ಯಂತದ ಎಲ್ಲಾ ಗಂಭೀರ ಕೊರೊನಾ ರೋಗಿಗಳಿಗೆ ಇದೇ ಚಿಕಿತ್ಸೆಯನ್ನು ಮಾಡಲು ಕೇಂದ್ರ ಸರ್ಕಾರದ ಅನುಮತಿಯನ್ನು ಪಡೆಯುತ್ತದೆ ಎಂದು ಸಿಎಂ ಕೇಜ್ರಿವಾಲ್‌ ಹೇಳಿದ್ದರು.


ಇದನ್ನೂ ಓದಿ: ಕೊರೊನಾ ವೈರಾಣುವಿನ ಬಗ್ಗೆ ಜಾಗತಿಕ ಪ್ರತಿಕ್ರಿಯೆ ಅತೀಯಾದದ್ದೇ, ಅಲ್ಲವೇ? 


ಕೊರೊನಾದಿಂದ ಚೇತರಿಸಿಕೊಂಡವರು ಮುಂದೆ ಬಂದು ಗಂಭೀರ ರೋಗಿಗಳಿಗೆ ಪ್ಲಾಸ್ಮಾ ದಾನ ಮಾಡಬೇಕೆಂದು ಸಹ ಕೇಜ್ರಿವಾಲ್ ಮನವಿ ಮಾಡಿದ್ದರು.

ಇನ್ಸ್ಟಿಟ್ಯೂಟ್ ಆಫ್ ಲಿವರ್ ಮತ್ತು ಬಿಲಿಯರಿ ಸೈನ್ಸಸ್ ಸಹಯೋಗದೊಂದಿಗೆ ಪ್ರಯೋಗಗಳನ್ನು ನಡೆಸಲಾಗುತ್ತಿದ್ದು, ಪ್ಲಾಸ್ಮಾವನ್ನು ಪಡೆದು ಸಂಗ್ರಹಿತ ರಕ್ತವನ್ನು ಸಂಸ್ಕರಿಸಲಾಗುತ್ತಿದೆ.

ಈ ವಿಧಾನ ಆರಂಭಿಕವಾಗಿ ದೆಹಲಿಯಲ್ಲಿ ಉತ್ತಮ ಫಲಿತಾಂಶ ಕಂಡಿರುವುದರಿಂದ ಈ ರೀತಿಯ ಚಿಕಿತ್ಸೆ ಮತ್ತಷ್ಟು ಹೆಚ್ಚಾಗಲಿದೆ ಎನ್ನಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...