Homeಆರೋಗ್ಯಕೊರೊನಾ ಸೋಂಕಿತರ ಮೇಲಿನ ಪ್ಲಾಸ್ಮಾ ಥೆರಪಿ : ಫಲಿತಾಂಶ ತೃಪ್ತಿದಾಯಕವೆಂದ ಕೇಜ್ರಿವಾಲ್

ಕೊರೊನಾ ಸೋಂಕಿತರ ಮೇಲಿನ ಪ್ಲಾಸ್ಮಾ ಥೆರಪಿ : ಫಲಿತಾಂಶ ತೃಪ್ತಿದಾಯಕವೆಂದ ಕೇಜ್ರಿವಾಲ್

- Advertisement -
- Advertisement -

ನಾಲ್ಕು ಕೊರೊನಾ ರೋಗಿಗಳ ಮೇಲೆ ನಡೆಸಿದ ಪ್ಲಾಸ್ಮಾ ಥೆರಪಿ ಚಿಕಿತ್ಸೆಯ ಆರಂಭಿಕ ಫಲಿತಾಂಶಗಳು ತೃಪ್ತಿದಾಯಕ ಫಲಿತಾಂಶಗಳನ್ನು ನೀಡಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ಇಂತಹ ಹೆಚ್ಚಿನ ಪ್ರಯೋಗಗಳನ್ನು ನಡೆಸಲಾಗುವುದು ಎಂದು ಸಹ ಅವರು ಹೇಳಿದರು.

ದೆಹಲಿಯು ಮಂಗಳವಾರ ಕೊರೊನಾ ವೈರಸ್ ಸೋಂಕಿತರಿಗೆ ಪ್ಲಾಸ್ಮಾಥೆರಪಿ ಪ್ರಯೋಗಗಳನ್ನು ಪ್ರಾರಂಭಿಸಿತು. ಇಬ್ಬರು ಸೋಂಕಿನಿಂದ ಚೇತರಿಸಿಕೊಂಡ ವ್ಯಕ್ತಿಗಳ ಆಂಟಿಬಾಡಿ-ಭರಿತ ಪ್ಲಾಸ್ಮಾವನ್ನು ಬಳಸಿ ಚಿಕಿತ್ಸೆಯನ್ನು ನೀಡಲಾಗಿದೆ.

ಏನಿದು ಪ್ಲಾಸ್ಮಾಥೆರಪಿ?

ಈಗಾಗಲೇ ಕೊರೊನಾ ಸೋಂಕು ತಗುಲಿ ಗುಣಮುಖರಾದವರ (ಅವರ ದೇಹದಲ್ಲಿ ಕೊರೊನಾ ವೈರಸ್‌ ಇಲ್ಲ ಎಂಬುದು ಎರಡು ಸಾರಿ ಖಾತ್ರಿಯಾದ ನಂತರ) ರಕ್ತದಲ್ಲಿನ ರೋಗನಿರೋಧಕ ಪ್ಲಾಸ್ಮಾ ಕಣಗಳನ್ನು ತೆಗೆದುಕೊಂಡು ಹಾಲಿ ಸೋಂಕಿತರಿಗೆ ನೀಡುವುದೇ ಪ್ಲಾಸ್ಮಾ ಥೆರಪಿಯಾಗಿದೆ. ಕೊರೊನಾದಿಂದ ಗುಣಮುಖರಾದವರಲ್ಲಿ ಹೆಚ್ಚಿನ ರೋಗ ನಿರೋಧಕ ಶಕ್ತಿ ಬೆಳೆದಿರುವುದರಿಂದ ಸೋಂಕಿತರಿಗೆ ಅದನ್ನು ಬಳಸುವ ಪ್ರಯೋಗ ಈಗ ಆರಂಭಗೊಂಡಿದೆ.

ಐಸಿಎಂಆರ್‌ ಈ ರೀತಿಯ ಪ್ಲಾಸ್ಮಾಥೆರಪಿಯನ್ನು ಹಲವು ಆಸ್ಪತ್ರೆಗಳು ಮಾಡಬಹುದು ಎಂದು ಕರೆ ನೀಡಿದೆ. ಈ ಪ್ರಯೋಗವನ್ನು ತುಂಬಾ ಗಂಭೀರ ಸ್ಥಿತಿಯಲ್ಲಿರುವ ಕೊರೊನಾ ಸೋಂಕಿತರ ಮೇಲೆ ನಡೆಸಲಾಗುತ್ತದೆ. ಇದು ಈಗಾಗಲೇ ಚೈನಾ ಮತ್ತು ಅಮೆರಿಕಾದಲ್ಲಿ ನಡೆದಿದ್ದು ಭಾರತದಲ್ಲಿ ಇತ್ತೀಚೆಗೆ ಆರಂಭಗೊಂಡಿದೆ.

ಹೆಚ್ಚಿನ ಮಾಹಿತಿಗೆ ಕೆಳಗಿನ ವಿಡಿಯೋ ನೋಡಿ

“ಕೊರೊನಾ ಸೋಂಕಿತರ ಮೇಲೆ ನಡೆಸಿದ ಪ್ಲಾಸ್ಮಾ ಚಿಕಿತ್ಸೆಯ ಆರಂಭಿಕ ಫಲಿತಾಂಶಗಳು ತೃಪ್ತಿದಾಯಕವಾಗಿದೆ, ಮುಂದಿನ 2-3 ದಿನಗಳಲ್ಲಿ ಹೆಚ್ಚಿನ ಪ್ರಯೋಗಗಳನ್ನು ಮಾಡಬೇಕಾಗಿದೆ” ಎಂದು ಮುಖ್ಯಮಂತ್ರಿ ಹೇಳಿದರಲ್ಲದೆ, ನಗರದಾದ್ಯಂತದ ಎಲ್ಲಾ ಗಂಭೀರ ಕೊರೊನಾ ರೋಗಿಗಳಿಗೆ ಇದೇ ಚಿಕಿತ್ಸೆಯನ್ನು ಮಾಡಲು ಕೇಂದ್ರ ಸರ್ಕಾರದ ಅನುಮತಿಯನ್ನು ಪಡೆಯುತ್ತದೆ ಎಂದು ಹೇಳಿದರು.


ಇದನ್ನೂ ಓದಿ: ಕೊರೊನಾ ವೈರಾಣುವಿನ ಬಗ್ಗೆ ಜಾಗತಿಕ ಪ್ರತಿಕ್ರಿಯೆ ಅತೀಯಾದದ್ದೇ, ಅಲ್ಲವೇ? 


ಕೊರೊನಾದಿಂದ ಚೇತರಿಸಿಕೊಂಡವರು ಮುಂದೆ ಬಂದು ಗಂಭೀರ ರೋಗಿಗಳಿಗೆ ಪ್ಲಾಸ್ಮಾ ದಾನ ಮಾಡಬೇಕೆಂದು ಕೇಜ್ರಿವಾಲ್ ಮನವಿ ಮಾಡಿದರು.

ಇನ್ಸ್ಟಿಟ್ಯೂಟ್ ಆಫ್ ಲಿವರ್ ಮತ್ತು ಬಿಲಿಯರಿ ಸೈನ್ಸಸ್ ಸಹಯೋಗದೊಂದಿಗೆ ಪ್ರಯೋಗಗಳನ್ನು ನಡೆಸಲಾಗುತ್ತಿದ್ದು, ಪ್ಲಾಸ್ಮಾವನ್ನು ಪಡೆದು ಸಂಗ್ರಹಿತ ರಕ್ತವನ್ನು ಸಂಸ್ಕರಿಸಲಾಗುತ್ತಿದೆ.

ಈ ವಿಧಾನ ಆರಂಭಿಕವಾಗಿ ದೆಹಲಿಯಲ್ಲಿ ಉತ್ತಮ ಫಲಿತಾಂಶ ಕಂಡಿರುವುದರಿಂದ ಈ ರೀತಿಯ ಚಿಕಿತ್ಸೆ ಮತ್ತಷ್ಟು ಹೆಚ್ಚಾಗಲಿದೆ ಎನ್ನಲಾಗುತ್ತದೆ.


ಇದನ್ನೂ ಓದಿ: ಪತ್ರಿಕಾ ಧರ್ಮ ಹಳ್ಳ ಹಿಡಿಸಿರುವ ಯುದ್ಧೋನ್ಮಾದಿ ಸಂಪಾದಕರು: ಮದ್ದೆರೆಯಬೇಕಾದ ಸಾಂಸ್ಕೃತಿಕ ಲೋಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...