Homeಆರೋಗ್ಯಕೊರೊನಾ ಸೋಂಕಿತರ ಮೇಲಿನ ಪ್ಲಾಸ್ಮಾ ಥೆರಪಿ : ಫಲಿತಾಂಶ ತೃಪ್ತಿದಾಯಕವೆಂದ ಕೇಜ್ರಿವಾಲ್

ಕೊರೊನಾ ಸೋಂಕಿತರ ಮೇಲಿನ ಪ್ಲಾಸ್ಮಾ ಥೆರಪಿ : ಫಲಿತಾಂಶ ತೃಪ್ತಿದಾಯಕವೆಂದ ಕೇಜ್ರಿವಾಲ್

- Advertisement -
- Advertisement -

ನಾಲ್ಕು ಕೊರೊನಾ ರೋಗಿಗಳ ಮೇಲೆ ನಡೆಸಿದ ಪ್ಲಾಸ್ಮಾ ಥೆರಪಿ ಚಿಕಿತ್ಸೆಯ ಆರಂಭಿಕ ಫಲಿತಾಂಶಗಳು ತೃಪ್ತಿದಾಯಕ ಫಲಿತಾಂಶಗಳನ್ನು ನೀಡಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ಇಂತಹ ಹೆಚ್ಚಿನ ಪ್ರಯೋಗಗಳನ್ನು ನಡೆಸಲಾಗುವುದು ಎಂದು ಸಹ ಅವರು ಹೇಳಿದರು.

ದೆಹಲಿಯು ಮಂಗಳವಾರ ಕೊರೊನಾ ವೈರಸ್ ಸೋಂಕಿತರಿಗೆ ಪ್ಲಾಸ್ಮಾಥೆರಪಿ ಪ್ರಯೋಗಗಳನ್ನು ಪ್ರಾರಂಭಿಸಿತು. ಇಬ್ಬರು ಸೋಂಕಿನಿಂದ ಚೇತರಿಸಿಕೊಂಡ ವ್ಯಕ್ತಿಗಳ ಆಂಟಿಬಾಡಿ-ಭರಿತ ಪ್ಲಾಸ್ಮಾವನ್ನು ಬಳಸಿ ಚಿಕಿತ್ಸೆಯನ್ನು ನೀಡಲಾಗಿದೆ.

ಏನಿದು ಪ್ಲಾಸ್ಮಾಥೆರಪಿ?

ಈಗಾಗಲೇ ಕೊರೊನಾ ಸೋಂಕು ತಗುಲಿ ಗುಣಮುಖರಾದವರ (ಅವರ ದೇಹದಲ್ಲಿ ಕೊರೊನಾ ವೈರಸ್‌ ಇಲ್ಲ ಎಂಬುದು ಎರಡು ಸಾರಿ ಖಾತ್ರಿಯಾದ ನಂತರ) ರಕ್ತದಲ್ಲಿನ ರೋಗನಿರೋಧಕ ಪ್ಲಾಸ್ಮಾ ಕಣಗಳನ್ನು ತೆಗೆದುಕೊಂಡು ಹಾಲಿ ಸೋಂಕಿತರಿಗೆ ನೀಡುವುದೇ ಪ್ಲಾಸ್ಮಾ ಥೆರಪಿಯಾಗಿದೆ. ಕೊರೊನಾದಿಂದ ಗುಣಮುಖರಾದವರಲ್ಲಿ ಹೆಚ್ಚಿನ ರೋಗ ನಿರೋಧಕ ಶಕ್ತಿ ಬೆಳೆದಿರುವುದರಿಂದ ಸೋಂಕಿತರಿಗೆ ಅದನ್ನು ಬಳಸುವ ಪ್ರಯೋಗ ಈಗ ಆರಂಭಗೊಂಡಿದೆ.

ಐಸಿಎಂಆರ್‌ ಈ ರೀತಿಯ ಪ್ಲಾಸ್ಮಾಥೆರಪಿಯನ್ನು ಹಲವು ಆಸ್ಪತ್ರೆಗಳು ಮಾಡಬಹುದು ಎಂದು ಕರೆ ನೀಡಿದೆ. ಈ ಪ್ರಯೋಗವನ್ನು ತುಂಬಾ ಗಂಭೀರ ಸ್ಥಿತಿಯಲ್ಲಿರುವ ಕೊರೊನಾ ಸೋಂಕಿತರ ಮೇಲೆ ನಡೆಸಲಾಗುತ್ತದೆ. ಇದು ಈಗಾಗಲೇ ಚೈನಾ ಮತ್ತು ಅಮೆರಿಕಾದಲ್ಲಿ ನಡೆದಿದ್ದು ಭಾರತದಲ್ಲಿ ಇತ್ತೀಚೆಗೆ ಆರಂಭಗೊಂಡಿದೆ.

ಹೆಚ್ಚಿನ ಮಾಹಿತಿಗೆ ಕೆಳಗಿನ ವಿಡಿಯೋ ನೋಡಿ

“ಕೊರೊನಾ ಸೋಂಕಿತರ ಮೇಲೆ ನಡೆಸಿದ ಪ್ಲಾಸ್ಮಾ ಚಿಕಿತ್ಸೆಯ ಆರಂಭಿಕ ಫಲಿತಾಂಶಗಳು ತೃಪ್ತಿದಾಯಕವಾಗಿದೆ, ಮುಂದಿನ 2-3 ದಿನಗಳಲ್ಲಿ ಹೆಚ್ಚಿನ ಪ್ರಯೋಗಗಳನ್ನು ಮಾಡಬೇಕಾಗಿದೆ” ಎಂದು ಮುಖ್ಯಮಂತ್ರಿ ಹೇಳಿದರಲ್ಲದೆ, ನಗರದಾದ್ಯಂತದ ಎಲ್ಲಾ ಗಂಭೀರ ಕೊರೊನಾ ರೋಗಿಗಳಿಗೆ ಇದೇ ಚಿಕಿತ್ಸೆಯನ್ನು ಮಾಡಲು ಕೇಂದ್ರ ಸರ್ಕಾರದ ಅನುಮತಿಯನ್ನು ಪಡೆಯುತ್ತದೆ ಎಂದು ಹೇಳಿದರು.


ಇದನ್ನೂ ಓದಿ: ಕೊರೊನಾ ವೈರಾಣುವಿನ ಬಗ್ಗೆ ಜಾಗತಿಕ ಪ್ರತಿಕ್ರಿಯೆ ಅತೀಯಾದದ್ದೇ, ಅಲ್ಲವೇ? 


ಕೊರೊನಾದಿಂದ ಚೇತರಿಸಿಕೊಂಡವರು ಮುಂದೆ ಬಂದು ಗಂಭೀರ ರೋಗಿಗಳಿಗೆ ಪ್ಲಾಸ್ಮಾ ದಾನ ಮಾಡಬೇಕೆಂದು ಕೇಜ್ರಿವಾಲ್ ಮನವಿ ಮಾಡಿದರು.

ಇನ್ಸ್ಟಿಟ್ಯೂಟ್ ಆಫ್ ಲಿವರ್ ಮತ್ತು ಬಿಲಿಯರಿ ಸೈನ್ಸಸ್ ಸಹಯೋಗದೊಂದಿಗೆ ಪ್ರಯೋಗಗಳನ್ನು ನಡೆಸಲಾಗುತ್ತಿದ್ದು, ಪ್ಲಾಸ್ಮಾವನ್ನು ಪಡೆದು ಸಂಗ್ರಹಿತ ರಕ್ತವನ್ನು ಸಂಸ್ಕರಿಸಲಾಗುತ್ತಿದೆ.

ಈ ವಿಧಾನ ಆರಂಭಿಕವಾಗಿ ದೆಹಲಿಯಲ್ಲಿ ಉತ್ತಮ ಫಲಿತಾಂಶ ಕಂಡಿರುವುದರಿಂದ ಈ ರೀತಿಯ ಚಿಕಿತ್ಸೆ ಮತ್ತಷ್ಟು ಹೆಚ್ಚಾಗಲಿದೆ ಎನ್ನಲಾಗುತ್ತದೆ.


ಇದನ್ನೂ ಓದಿ: ಪತ್ರಿಕಾ ಧರ್ಮ ಹಳ್ಳ ಹಿಡಿಸಿರುವ ಯುದ್ಧೋನ್ಮಾದಿ ಸಂಪಾದಕರು: ಮದ್ದೆರೆಯಬೇಕಾದ ಸಾಂಸ್ಕೃತಿಕ ಲೋಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...