Homeಆರೋಗ್ಯಕೊರೊನಾ ಸೋಂಕಿತರ ಮೇಲಿನ ಪ್ಲಾಸ್ಮಾ ಥೆರಪಿ : ಫಲಿತಾಂಶ ತೃಪ್ತಿದಾಯಕವೆಂದ ಕೇಜ್ರಿವಾಲ್

ಕೊರೊನಾ ಸೋಂಕಿತರ ಮೇಲಿನ ಪ್ಲಾಸ್ಮಾ ಥೆರಪಿ : ಫಲಿತಾಂಶ ತೃಪ್ತಿದಾಯಕವೆಂದ ಕೇಜ್ರಿವಾಲ್

- Advertisement -
- Advertisement -

ನಾಲ್ಕು ಕೊರೊನಾ ರೋಗಿಗಳ ಮೇಲೆ ನಡೆಸಿದ ಪ್ಲಾಸ್ಮಾ ಥೆರಪಿ ಚಿಕಿತ್ಸೆಯ ಆರಂಭಿಕ ಫಲಿತಾಂಶಗಳು ತೃಪ್ತಿದಾಯಕ ಫಲಿತಾಂಶಗಳನ್ನು ನೀಡಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ಇಂತಹ ಹೆಚ್ಚಿನ ಪ್ರಯೋಗಗಳನ್ನು ನಡೆಸಲಾಗುವುದು ಎಂದು ಸಹ ಅವರು ಹೇಳಿದರು.

ದೆಹಲಿಯು ಮಂಗಳವಾರ ಕೊರೊನಾ ವೈರಸ್ ಸೋಂಕಿತರಿಗೆ ಪ್ಲಾಸ್ಮಾಥೆರಪಿ ಪ್ರಯೋಗಗಳನ್ನು ಪ್ರಾರಂಭಿಸಿತು. ಇಬ್ಬರು ಸೋಂಕಿನಿಂದ ಚೇತರಿಸಿಕೊಂಡ ವ್ಯಕ್ತಿಗಳ ಆಂಟಿಬಾಡಿ-ಭರಿತ ಪ್ಲಾಸ್ಮಾವನ್ನು ಬಳಸಿ ಚಿಕಿತ್ಸೆಯನ್ನು ನೀಡಲಾಗಿದೆ.

ಏನಿದು ಪ್ಲಾಸ್ಮಾಥೆರಪಿ?

ಈಗಾಗಲೇ ಕೊರೊನಾ ಸೋಂಕು ತಗುಲಿ ಗುಣಮುಖರಾದವರ (ಅವರ ದೇಹದಲ್ಲಿ ಕೊರೊನಾ ವೈರಸ್‌ ಇಲ್ಲ ಎಂಬುದು ಎರಡು ಸಾರಿ ಖಾತ್ರಿಯಾದ ನಂತರ) ರಕ್ತದಲ್ಲಿನ ರೋಗನಿರೋಧಕ ಪ್ಲಾಸ್ಮಾ ಕಣಗಳನ್ನು ತೆಗೆದುಕೊಂಡು ಹಾಲಿ ಸೋಂಕಿತರಿಗೆ ನೀಡುವುದೇ ಪ್ಲಾಸ್ಮಾ ಥೆರಪಿಯಾಗಿದೆ. ಕೊರೊನಾದಿಂದ ಗುಣಮುಖರಾದವರಲ್ಲಿ ಹೆಚ್ಚಿನ ರೋಗ ನಿರೋಧಕ ಶಕ್ತಿ ಬೆಳೆದಿರುವುದರಿಂದ ಸೋಂಕಿತರಿಗೆ ಅದನ್ನು ಬಳಸುವ ಪ್ರಯೋಗ ಈಗ ಆರಂಭಗೊಂಡಿದೆ.

ಐಸಿಎಂಆರ್‌ ಈ ರೀತಿಯ ಪ್ಲಾಸ್ಮಾಥೆರಪಿಯನ್ನು ಹಲವು ಆಸ್ಪತ್ರೆಗಳು ಮಾಡಬಹುದು ಎಂದು ಕರೆ ನೀಡಿದೆ. ಈ ಪ್ರಯೋಗವನ್ನು ತುಂಬಾ ಗಂಭೀರ ಸ್ಥಿತಿಯಲ್ಲಿರುವ ಕೊರೊನಾ ಸೋಂಕಿತರ ಮೇಲೆ ನಡೆಸಲಾಗುತ್ತದೆ. ಇದು ಈಗಾಗಲೇ ಚೈನಾ ಮತ್ತು ಅಮೆರಿಕಾದಲ್ಲಿ ನಡೆದಿದ್ದು ಭಾರತದಲ್ಲಿ ಇತ್ತೀಚೆಗೆ ಆರಂಭಗೊಂಡಿದೆ.

ಹೆಚ್ಚಿನ ಮಾಹಿತಿಗೆ ಕೆಳಗಿನ ವಿಡಿಯೋ ನೋಡಿ

“ಕೊರೊನಾ ಸೋಂಕಿತರ ಮೇಲೆ ನಡೆಸಿದ ಪ್ಲಾಸ್ಮಾ ಚಿಕಿತ್ಸೆಯ ಆರಂಭಿಕ ಫಲಿತಾಂಶಗಳು ತೃಪ್ತಿದಾಯಕವಾಗಿದೆ, ಮುಂದಿನ 2-3 ದಿನಗಳಲ್ಲಿ ಹೆಚ್ಚಿನ ಪ್ರಯೋಗಗಳನ್ನು ಮಾಡಬೇಕಾಗಿದೆ” ಎಂದು ಮುಖ್ಯಮಂತ್ರಿ ಹೇಳಿದರಲ್ಲದೆ, ನಗರದಾದ್ಯಂತದ ಎಲ್ಲಾ ಗಂಭೀರ ಕೊರೊನಾ ರೋಗಿಗಳಿಗೆ ಇದೇ ಚಿಕಿತ್ಸೆಯನ್ನು ಮಾಡಲು ಕೇಂದ್ರ ಸರ್ಕಾರದ ಅನುಮತಿಯನ್ನು ಪಡೆಯುತ್ತದೆ ಎಂದು ಹೇಳಿದರು.


ಇದನ್ನೂ ಓದಿ: ಕೊರೊನಾ ವೈರಾಣುವಿನ ಬಗ್ಗೆ ಜಾಗತಿಕ ಪ್ರತಿಕ್ರಿಯೆ ಅತೀಯಾದದ್ದೇ, ಅಲ್ಲವೇ? 


ಕೊರೊನಾದಿಂದ ಚೇತರಿಸಿಕೊಂಡವರು ಮುಂದೆ ಬಂದು ಗಂಭೀರ ರೋಗಿಗಳಿಗೆ ಪ್ಲಾಸ್ಮಾ ದಾನ ಮಾಡಬೇಕೆಂದು ಕೇಜ್ರಿವಾಲ್ ಮನವಿ ಮಾಡಿದರು.

ಇನ್ಸ್ಟಿಟ್ಯೂಟ್ ಆಫ್ ಲಿವರ್ ಮತ್ತು ಬಿಲಿಯರಿ ಸೈನ್ಸಸ್ ಸಹಯೋಗದೊಂದಿಗೆ ಪ್ರಯೋಗಗಳನ್ನು ನಡೆಸಲಾಗುತ್ತಿದ್ದು, ಪ್ಲಾಸ್ಮಾವನ್ನು ಪಡೆದು ಸಂಗ್ರಹಿತ ರಕ್ತವನ್ನು ಸಂಸ್ಕರಿಸಲಾಗುತ್ತಿದೆ.

ಈ ವಿಧಾನ ಆರಂಭಿಕವಾಗಿ ದೆಹಲಿಯಲ್ಲಿ ಉತ್ತಮ ಫಲಿತಾಂಶ ಕಂಡಿರುವುದರಿಂದ ಈ ರೀತಿಯ ಚಿಕಿತ್ಸೆ ಮತ್ತಷ್ಟು ಹೆಚ್ಚಾಗಲಿದೆ ಎನ್ನಲಾಗುತ್ತದೆ.


ಇದನ್ನೂ ಓದಿ: ಪತ್ರಿಕಾ ಧರ್ಮ ಹಳ್ಳ ಹಿಡಿಸಿರುವ ಯುದ್ಧೋನ್ಮಾದಿ ಸಂಪಾದಕರು: ಮದ್ದೆರೆಯಬೇಕಾದ ಸಾಂಸ್ಕೃತಿಕ ಲೋಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...