Homeಮುಖಪುಟಗುಜರಾತ್| ಶಾಲಾ ನಾಟಕದಲ್ಲಿ ಬುರ್ಖಾಧಾರಿಗಳನ್ನು ಭಯೋತ್ಪಾದಕರಂತೆ ಚಿತ್ರಣ: ವ್ಯಾಪಕ ಆಕ್ರೋಶ

ಗುಜರಾತ್| ಶಾಲಾ ನಾಟಕದಲ್ಲಿ ಬುರ್ಖಾಧಾರಿಗಳನ್ನು ಭಯೋತ್ಪಾದಕರಂತೆ ಚಿತ್ರಣ: ವ್ಯಾಪಕ ಆಕ್ರೋಶ

- Advertisement -
- Advertisement -

ಗುಜರಾತ್‌ನ ಭಾವನಗರ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯ ಶಾಲೆಯೊಂದರಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಬುರ್ಖಾ ಧರಿಸಿದ ಮಹಿಳೆಯರನ್ನು ‘ಭಯೋತ್ಪಾಕದರು’ ಎಂದು ಚಿತ್ರಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಭಾವನಗರ ಜಿಲ್ಲಾ ಶಿಕ್ಷಣ ಅಧಿಕಾರಿ (ಡಿಇಒ) ಹಿತೇಂದ್ರಸಿಂಹ ಡಿ ಪಧೇರಿಯಾ ಅವರು ಮಂಗಳವಾರ (ಆ.19) ಭಾವನಗರ ಮುನ್ಸಿಪಲ್ ಸ್ಕೂಲ್ ಬೋರ್ಡ್ ಆಡಳಿತ ಅಧಿಕಾರಿ (ಎಒ) ಮುಂಜಾಲ್ ಬದ್ಮಾಲಿಯಾ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಭಾವನಗರದ ಕುಂಭಾರ್ವಾಡ ಪ್ರದೇಶದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಪ್ರಾಥಮಿಕ ಶಾಲಾ ಸಂಖ್ಯೆ 51 ರಲ್ಲಿ ನಡೆದ ವಿವಾದಾತ್ಮಕ ಕಾರ್ಯಕ್ರಮದ ಕುರಿತು ಏಳು ದಿನಗಳಲ್ಲಿ ವಾಸ್ತವಿಕ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ನಾಟಕವು ‘ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರಂತೆ ಚಿತ್ರಿಸಿದೆ’ ಎಂದು ಆರೋಪಿಸಿ ಮತ್ತು ನಾಟಕದ ಹಿಂದಿನ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಬಂಧನ್ ಬಚಾವ್ ಸಮಿತಿ ಭಾವನಗರ ಎಂಬ ಸಾಮಾಜಿಕ ಸಂಘಟನೆಯು ನೀಡಿದ ದೂರಿನ ಆಧಾರದ ಮೇಲೆ ಈ ನೋಟಿಸ್ ನೀಡಲಾಗಿದೆ.

ಭಾವನಗರ ಮುನ್ಸಿಪಲ್ ಸ್ಕೂಲ್ ಬೋರ್ಡ್ ಆಡಳಿತ ಅಧಿಕಾರಿ (ಎಒ) ಮುಂಜಾಲ್ ಬದ್ಮಾಲಿಯಾ ಅವರಿಗೆ ಕಳುಹಿಸಲಾದ ನೋಟಿಸ್‌ನಲ್ಲಿ ಡಿಇಒ ಅವರು, ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ವಿವರಗಳನ್ನು ಕೇಳಿದ್ದು, ವಿವಾದಾತ್ಮಕ ನಾಟಕದ ಪಾತ್ರವನ್ನು ಉದ್ದೇಶಪೂರ್ವಕವಾಗಿ ಮಾಡಿಸಲಾಗಿದೆಯೇ ಅಥವಾ ಉದ್ದೇಶಪೂರ್ವಕವಲ್ಲದ ಕೃತ್ಯವೇ? ಎಂದು ಮತ್ತು ಶಾಲಾ ಆವರಣದಲ್ಲಿ ನಡೆದ ಸಮಾರಂಭದ ವಿವರಗಳನ್ನು ಕೇಳಿದ್ದಾರೆ.

600ಕ್ಕೂ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿ ಹೊಂದಿರುವ ಭಾವನಗರದ ಬಾಲಕಿಯರ ಶಾಲೆಯು ವಿವಾದಾತ್ಮಕ ಸಾಂಸ್ಕೃತಿಕ ಕಾರ್ಯಕ್ರಮದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಗಮನ ಸೆಳೆದಿದೆ.

ಬಂಧನ್ ಬಚಾವ್ ಸಮಿತಿ ಭಾವನಗರ ತನ್ನ ದೂರಿನಲ್ಲಿ “ವಿವಾದಾತ್ಮಕ ನಾಟಕ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಲು ಮತ್ತು ಸಾರ್ವಜನಿಕರಲ್ಲಿ ಅಶಾಂತಿಯನ್ನು ಹರಡಲು ಶಾಲಾ ಸಿಬ್ಬಂದಿ ಮಾಡಿದ ಪ್ರಯತ್ನ” ಎಂದು ಆರೋಪಿಸಿದೆ.

“ಭಾವನಗರದ ಕುಂಭರ್ವಾಡಾ ಪ್ರದೇಶದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಪ್ರಾಥಮಿಕ ಶಾಲಾ ಸಂಖ್ಯೆ 50-51 ರಲ್ಲಿ, ಮಕ್ಕಳಿಂದ ನಾಟಕವನ್ನು ಪ್ರದರ್ಶಿಸಲಾಗಿದೆ. ಈ ನಾಟಕದಲ್ಲಿ, ಕಾಶ್ಮೀರಿ ಯಾತ್ರಿಕರು ಹಾಗೂ ಸೇನೆ ಮತ್ತು ಭಯೋತ್ಪಾದಕರನ್ನು ಚಿತ್ರಿಸಲಾಗಿದೆ. ನಾಟಕದಲ್ಲಿ, ಮುಸ್ಲಿಂ ಉಡುಪು (ಬುರ್ಖಾ) ಧರಿಸಿದ ಹುಡುಗಿಯರನ್ನು ಭಯೋತ್ಪಾದಕರಂತೆ ತೋರಿಸಲಾಗಿದೆ. ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರಂತೆ ಸ್ಪಷ್ಟವಾಗಿ ಚಿತ್ರಿಸಲಾಗಿದೆ” ಎಂದು ಬಂಧನ್ ಬಚಾವ್ ಸಮಿತಿ ದೂರಿನಲ್ಲಿ ಹೇಳಿದೆ.

ಶಾಲೆಯಲ್ಲಿ ಇಂತಹ ನಾಟಕ ಪ್ರದರ್ಶಿಸುವ ಮೂಲಕ ತಮ್ಮ ಕ್ರಿಮಿನಲ್ ಮನಸ್ಥಿತಿಯನ್ನು ಪ್ರದರ್ಶಿಸಿದ ಶಿಕ್ಷಕರ ವಿರುದ್ಧ ಮುಸ್ಲಿಂ ಸಮುದಾಯದ ಆಕ್ರೋಶ ವ್ಯಕ್ತಪಡಿಸಿದೆ ಎಂದು ಸಮಿತಿ ಹೇಳಿದೆ.

ಭಾವನಗರ ನಗರದ 68 ಪುರಸಭೆ ಶಾಲೆಗಳಲ್ಲಿ 30,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಈ ವರ್ಷ ಆಪರೇಷನ್ ಸಿಂಧೂರ್ ಆಚರಣೆಯ ಭಾಗವಾಗಿ, ಶಾಲಾ ವಿದ್ಯಾರ್ಥಿಗಳು ಗುಜರಾತ್‌ನ ಸೈನಿಕರಿಗೆ ರಾಖಿಗಳು ಮತ್ತು ಪತ್ರಗಳನ್ನು ಕಳುಹಿಸಿದ್ದಾರೆ. ಭಾವನಗರ ಜಿಲ್ಲೆಯಿಂದ ಮಾತ್ರ, 2 ಲಕ್ಷಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಗುಜರಾತ್‌ನ ಸೈನಿಕರಿಗೆ ಪತ್ರ ಬರೆದಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಉತ್ತರಾಖಂಡದಲ್ಲಿ ಮುಸ್ಲಿಂ ಲಾರಿ ಚಾಲಕನ ಮೇಲೆ ಗುಂಪು ಹಲ್ಲೆ: ಸಂತ್ರಸ್ತನಿಂದ ನ್ಯಾಯಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...