Homeಮುಖಪುಟಗುಜರಾತ್| ಶಾಲಾ ನಾಟಕದಲ್ಲಿ ಬುರ್ಖಾಧಾರಿಗಳನ್ನು ಭಯೋತ್ಪಾದಕರಂತೆ ಚಿತ್ರಣ: ವ್ಯಾಪಕ ಆಕ್ರೋಶ

ಗುಜರಾತ್| ಶಾಲಾ ನಾಟಕದಲ್ಲಿ ಬುರ್ಖಾಧಾರಿಗಳನ್ನು ಭಯೋತ್ಪಾದಕರಂತೆ ಚಿತ್ರಣ: ವ್ಯಾಪಕ ಆಕ್ರೋಶ

- Advertisement -
- Advertisement -

ಗುಜರಾತ್‌ನ ಭಾವನಗರ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯ ಶಾಲೆಯೊಂದರಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಬುರ್ಖಾ ಧರಿಸಿದ ಮಹಿಳೆಯರನ್ನು ‘ಭಯೋತ್ಪಾಕದರು’ ಎಂದು ಚಿತ್ರಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಭಾವನಗರ ಜಿಲ್ಲಾ ಶಿಕ್ಷಣ ಅಧಿಕಾರಿ (ಡಿಇಒ) ಹಿತೇಂದ್ರಸಿಂಹ ಡಿ ಪಧೇರಿಯಾ ಅವರು ಮಂಗಳವಾರ (ಆ.19) ಭಾವನಗರ ಮುನ್ಸಿಪಲ್ ಸ್ಕೂಲ್ ಬೋರ್ಡ್ ಆಡಳಿತ ಅಧಿಕಾರಿ (ಎಒ) ಮುಂಜಾಲ್ ಬದ್ಮಾಲಿಯಾ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಭಾವನಗರದ ಕುಂಭಾರ್ವಾಡ ಪ್ರದೇಶದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಪ್ರಾಥಮಿಕ ಶಾಲಾ ಸಂಖ್ಯೆ 51 ರಲ್ಲಿ ನಡೆದ ವಿವಾದಾತ್ಮಕ ಕಾರ್ಯಕ್ರಮದ ಕುರಿತು ಏಳು ದಿನಗಳಲ್ಲಿ ವಾಸ್ತವಿಕ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ನಾಟಕವು ‘ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರಂತೆ ಚಿತ್ರಿಸಿದೆ’ ಎಂದು ಆರೋಪಿಸಿ ಮತ್ತು ನಾಟಕದ ಹಿಂದಿನ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಬಂಧನ್ ಬಚಾವ್ ಸಮಿತಿ ಭಾವನಗರ ಎಂಬ ಸಾಮಾಜಿಕ ಸಂಘಟನೆಯು ನೀಡಿದ ದೂರಿನ ಆಧಾರದ ಮೇಲೆ ಈ ನೋಟಿಸ್ ನೀಡಲಾಗಿದೆ.

ಭಾವನಗರ ಮುನ್ಸಿಪಲ್ ಸ್ಕೂಲ್ ಬೋರ್ಡ್ ಆಡಳಿತ ಅಧಿಕಾರಿ (ಎಒ) ಮುಂಜಾಲ್ ಬದ್ಮಾಲಿಯಾ ಅವರಿಗೆ ಕಳುಹಿಸಲಾದ ನೋಟಿಸ್‌ನಲ್ಲಿ ಡಿಇಒ ಅವರು, ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ವಿವರಗಳನ್ನು ಕೇಳಿದ್ದು, ವಿವಾದಾತ್ಮಕ ನಾಟಕದ ಪಾತ್ರವನ್ನು ಉದ್ದೇಶಪೂರ್ವಕವಾಗಿ ಮಾಡಿಸಲಾಗಿದೆಯೇ ಅಥವಾ ಉದ್ದೇಶಪೂರ್ವಕವಲ್ಲದ ಕೃತ್ಯವೇ? ಎಂದು ಮತ್ತು ಶಾಲಾ ಆವರಣದಲ್ಲಿ ನಡೆದ ಸಮಾರಂಭದ ವಿವರಗಳನ್ನು ಕೇಳಿದ್ದಾರೆ.

600ಕ್ಕೂ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿ ಹೊಂದಿರುವ ಭಾವನಗರದ ಬಾಲಕಿಯರ ಶಾಲೆಯು ವಿವಾದಾತ್ಮಕ ಸಾಂಸ್ಕೃತಿಕ ಕಾರ್ಯಕ್ರಮದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಗಮನ ಸೆಳೆದಿದೆ.

ಬಂಧನ್ ಬಚಾವ್ ಸಮಿತಿ ಭಾವನಗರ ತನ್ನ ದೂರಿನಲ್ಲಿ “ವಿವಾದಾತ್ಮಕ ನಾಟಕ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಲು ಮತ್ತು ಸಾರ್ವಜನಿಕರಲ್ಲಿ ಅಶಾಂತಿಯನ್ನು ಹರಡಲು ಶಾಲಾ ಸಿಬ್ಬಂದಿ ಮಾಡಿದ ಪ್ರಯತ್ನ” ಎಂದು ಆರೋಪಿಸಿದೆ.

“ಭಾವನಗರದ ಕುಂಭರ್ವಾಡಾ ಪ್ರದೇಶದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಪ್ರಾಥಮಿಕ ಶಾಲಾ ಸಂಖ್ಯೆ 50-51 ರಲ್ಲಿ, ಮಕ್ಕಳಿಂದ ನಾಟಕವನ್ನು ಪ್ರದರ್ಶಿಸಲಾಗಿದೆ. ಈ ನಾಟಕದಲ್ಲಿ, ಕಾಶ್ಮೀರಿ ಯಾತ್ರಿಕರು ಹಾಗೂ ಸೇನೆ ಮತ್ತು ಭಯೋತ್ಪಾದಕರನ್ನು ಚಿತ್ರಿಸಲಾಗಿದೆ. ನಾಟಕದಲ್ಲಿ, ಮುಸ್ಲಿಂ ಉಡುಪು (ಬುರ್ಖಾ) ಧರಿಸಿದ ಹುಡುಗಿಯರನ್ನು ಭಯೋತ್ಪಾದಕರಂತೆ ತೋರಿಸಲಾಗಿದೆ. ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರಂತೆ ಸ್ಪಷ್ಟವಾಗಿ ಚಿತ್ರಿಸಲಾಗಿದೆ” ಎಂದು ಬಂಧನ್ ಬಚಾವ್ ಸಮಿತಿ ದೂರಿನಲ್ಲಿ ಹೇಳಿದೆ.

ಶಾಲೆಯಲ್ಲಿ ಇಂತಹ ನಾಟಕ ಪ್ರದರ್ಶಿಸುವ ಮೂಲಕ ತಮ್ಮ ಕ್ರಿಮಿನಲ್ ಮನಸ್ಥಿತಿಯನ್ನು ಪ್ರದರ್ಶಿಸಿದ ಶಿಕ್ಷಕರ ವಿರುದ್ಧ ಮುಸ್ಲಿಂ ಸಮುದಾಯದ ಆಕ್ರೋಶ ವ್ಯಕ್ತಪಡಿಸಿದೆ ಎಂದು ಸಮಿತಿ ಹೇಳಿದೆ.

ಭಾವನಗರ ನಗರದ 68 ಪುರಸಭೆ ಶಾಲೆಗಳಲ್ಲಿ 30,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಈ ವರ್ಷ ಆಪರೇಷನ್ ಸಿಂಧೂರ್ ಆಚರಣೆಯ ಭಾಗವಾಗಿ, ಶಾಲಾ ವಿದ್ಯಾರ್ಥಿಗಳು ಗುಜರಾತ್‌ನ ಸೈನಿಕರಿಗೆ ರಾಖಿಗಳು ಮತ್ತು ಪತ್ರಗಳನ್ನು ಕಳುಹಿಸಿದ್ದಾರೆ. ಭಾವನಗರ ಜಿಲ್ಲೆಯಿಂದ ಮಾತ್ರ, 2 ಲಕ್ಷಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಗುಜರಾತ್‌ನ ಸೈನಿಕರಿಗೆ ಪತ್ರ ಬರೆದಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಉತ್ತರಾಖಂಡದಲ್ಲಿ ಮುಸ್ಲಿಂ ಲಾರಿ ಚಾಲಕನ ಮೇಲೆ ಗುಂಪು ಹಲ್ಲೆ: ಸಂತ್ರಸ್ತನಿಂದ ನ್ಯಾಯಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...