Homeಮುಖಪುಟಗುಜರಾತ್| ಶಾಲಾ ನಾಟಕದಲ್ಲಿ ಬುರ್ಖಾಧಾರಿಗಳನ್ನು ಭಯೋತ್ಪಾದಕರಂತೆ ಚಿತ್ರಣ: ವ್ಯಾಪಕ ಆಕ್ರೋಶ

ಗುಜರಾತ್| ಶಾಲಾ ನಾಟಕದಲ್ಲಿ ಬುರ್ಖಾಧಾರಿಗಳನ್ನು ಭಯೋತ್ಪಾದಕರಂತೆ ಚಿತ್ರಣ: ವ್ಯಾಪಕ ಆಕ್ರೋಶ

- Advertisement -
- Advertisement -

ಗುಜರಾತ್‌ನ ಭಾವನಗರ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯ ಶಾಲೆಯೊಂದರಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಬುರ್ಖಾ ಧರಿಸಿದ ಮಹಿಳೆಯರನ್ನು ‘ಭಯೋತ್ಪಾಕದರು’ ಎಂದು ಚಿತ್ರಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಭಾವನಗರ ಜಿಲ್ಲಾ ಶಿಕ್ಷಣ ಅಧಿಕಾರಿ (ಡಿಇಒ) ಹಿತೇಂದ್ರಸಿಂಹ ಡಿ ಪಧೇರಿಯಾ ಅವರು ಮಂಗಳವಾರ (ಆ.19) ಭಾವನಗರ ಮುನ್ಸಿಪಲ್ ಸ್ಕೂಲ್ ಬೋರ್ಡ್ ಆಡಳಿತ ಅಧಿಕಾರಿ (ಎಒ) ಮುಂಜಾಲ್ ಬದ್ಮಾಲಿಯಾ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಭಾವನಗರದ ಕುಂಭಾರ್ವಾಡ ಪ್ರದೇಶದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಪ್ರಾಥಮಿಕ ಶಾಲಾ ಸಂಖ್ಯೆ 51 ರಲ್ಲಿ ನಡೆದ ವಿವಾದಾತ್ಮಕ ಕಾರ್ಯಕ್ರಮದ ಕುರಿತು ಏಳು ದಿನಗಳಲ್ಲಿ ವಾಸ್ತವಿಕ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ನಾಟಕವು ‘ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರಂತೆ ಚಿತ್ರಿಸಿದೆ’ ಎಂದು ಆರೋಪಿಸಿ ಮತ್ತು ನಾಟಕದ ಹಿಂದಿನ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಬಂಧನ್ ಬಚಾವ್ ಸಮಿತಿ ಭಾವನಗರ ಎಂಬ ಸಾಮಾಜಿಕ ಸಂಘಟನೆಯು ನೀಡಿದ ದೂರಿನ ಆಧಾರದ ಮೇಲೆ ಈ ನೋಟಿಸ್ ನೀಡಲಾಗಿದೆ.

ಭಾವನಗರ ಮುನ್ಸಿಪಲ್ ಸ್ಕೂಲ್ ಬೋರ್ಡ್ ಆಡಳಿತ ಅಧಿಕಾರಿ (ಎಒ) ಮುಂಜಾಲ್ ಬದ್ಮಾಲಿಯಾ ಅವರಿಗೆ ಕಳುಹಿಸಲಾದ ನೋಟಿಸ್‌ನಲ್ಲಿ ಡಿಇಒ ಅವರು, ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ವಿವರಗಳನ್ನು ಕೇಳಿದ್ದು, ವಿವಾದಾತ್ಮಕ ನಾಟಕದ ಪಾತ್ರವನ್ನು ಉದ್ದೇಶಪೂರ್ವಕವಾಗಿ ಮಾಡಿಸಲಾಗಿದೆಯೇ ಅಥವಾ ಉದ್ದೇಶಪೂರ್ವಕವಲ್ಲದ ಕೃತ್ಯವೇ? ಎಂದು ಮತ್ತು ಶಾಲಾ ಆವರಣದಲ್ಲಿ ನಡೆದ ಸಮಾರಂಭದ ವಿವರಗಳನ್ನು ಕೇಳಿದ್ದಾರೆ.

600ಕ್ಕೂ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿ ಹೊಂದಿರುವ ಭಾವನಗರದ ಬಾಲಕಿಯರ ಶಾಲೆಯು ವಿವಾದಾತ್ಮಕ ಸಾಂಸ್ಕೃತಿಕ ಕಾರ್ಯಕ್ರಮದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಗಮನ ಸೆಳೆದಿದೆ.

ಬಂಧನ್ ಬಚಾವ್ ಸಮಿತಿ ಭಾವನಗರ ತನ್ನ ದೂರಿನಲ್ಲಿ “ವಿವಾದಾತ್ಮಕ ನಾಟಕ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಲು ಮತ್ತು ಸಾರ್ವಜನಿಕರಲ್ಲಿ ಅಶಾಂತಿಯನ್ನು ಹರಡಲು ಶಾಲಾ ಸಿಬ್ಬಂದಿ ಮಾಡಿದ ಪ್ರಯತ್ನ” ಎಂದು ಆರೋಪಿಸಿದೆ.

“ಭಾವನಗರದ ಕುಂಭರ್ವಾಡಾ ಪ್ರದೇಶದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಪ್ರಾಥಮಿಕ ಶಾಲಾ ಸಂಖ್ಯೆ 50-51 ರಲ್ಲಿ, ಮಕ್ಕಳಿಂದ ನಾಟಕವನ್ನು ಪ್ರದರ್ಶಿಸಲಾಗಿದೆ. ಈ ನಾಟಕದಲ್ಲಿ, ಕಾಶ್ಮೀರಿ ಯಾತ್ರಿಕರು ಹಾಗೂ ಸೇನೆ ಮತ್ತು ಭಯೋತ್ಪಾದಕರನ್ನು ಚಿತ್ರಿಸಲಾಗಿದೆ. ನಾಟಕದಲ್ಲಿ, ಮುಸ್ಲಿಂ ಉಡುಪು (ಬುರ್ಖಾ) ಧರಿಸಿದ ಹುಡುಗಿಯರನ್ನು ಭಯೋತ್ಪಾದಕರಂತೆ ತೋರಿಸಲಾಗಿದೆ. ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರಂತೆ ಸ್ಪಷ್ಟವಾಗಿ ಚಿತ್ರಿಸಲಾಗಿದೆ” ಎಂದು ಬಂಧನ್ ಬಚಾವ್ ಸಮಿತಿ ದೂರಿನಲ್ಲಿ ಹೇಳಿದೆ.

ಶಾಲೆಯಲ್ಲಿ ಇಂತಹ ನಾಟಕ ಪ್ರದರ್ಶಿಸುವ ಮೂಲಕ ತಮ್ಮ ಕ್ರಿಮಿನಲ್ ಮನಸ್ಥಿತಿಯನ್ನು ಪ್ರದರ್ಶಿಸಿದ ಶಿಕ್ಷಕರ ವಿರುದ್ಧ ಮುಸ್ಲಿಂ ಸಮುದಾಯದ ಆಕ್ರೋಶ ವ್ಯಕ್ತಪಡಿಸಿದೆ ಎಂದು ಸಮಿತಿ ಹೇಳಿದೆ.

ಭಾವನಗರ ನಗರದ 68 ಪುರಸಭೆ ಶಾಲೆಗಳಲ್ಲಿ 30,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಈ ವರ್ಷ ಆಪರೇಷನ್ ಸಿಂಧೂರ್ ಆಚರಣೆಯ ಭಾಗವಾಗಿ, ಶಾಲಾ ವಿದ್ಯಾರ್ಥಿಗಳು ಗುಜರಾತ್‌ನ ಸೈನಿಕರಿಗೆ ರಾಖಿಗಳು ಮತ್ತು ಪತ್ರಗಳನ್ನು ಕಳುಹಿಸಿದ್ದಾರೆ. ಭಾವನಗರ ಜಿಲ್ಲೆಯಿಂದ ಮಾತ್ರ, 2 ಲಕ್ಷಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಗುಜರಾತ್‌ನ ಸೈನಿಕರಿಗೆ ಪತ್ರ ಬರೆದಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಉತ್ತರಾಖಂಡದಲ್ಲಿ ಮುಸ್ಲಿಂ ಲಾರಿ ಚಾಲಕನ ಮೇಲೆ ಗುಂಪು ಹಲ್ಲೆ: ಸಂತ್ರಸ್ತನಿಂದ ನ್ಯಾಯಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...