Homeಮುಖಪುಟಗುಜರಾತ್| ಶಾಲಾ ನಾಟಕದಲ್ಲಿ ಬುರ್ಖಾಧಾರಿಗಳನ್ನು ಭಯೋತ್ಪಾದಕರಂತೆ ಚಿತ್ರಣ: ವ್ಯಾಪಕ ಆಕ್ರೋಶ

ಗುಜರಾತ್| ಶಾಲಾ ನಾಟಕದಲ್ಲಿ ಬುರ್ಖಾಧಾರಿಗಳನ್ನು ಭಯೋತ್ಪಾದಕರಂತೆ ಚಿತ್ರಣ: ವ್ಯಾಪಕ ಆಕ್ರೋಶ

- Advertisement -
- Advertisement -

ಗುಜರಾತ್‌ನ ಭಾವನಗರ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯ ಶಾಲೆಯೊಂದರಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಬುರ್ಖಾ ಧರಿಸಿದ ಮಹಿಳೆಯರನ್ನು ‘ಭಯೋತ್ಪಾಕದರು’ ಎಂದು ಚಿತ್ರಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಭಾವನಗರ ಜಿಲ್ಲಾ ಶಿಕ್ಷಣ ಅಧಿಕಾರಿ (ಡಿಇಒ) ಹಿತೇಂದ್ರಸಿಂಹ ಡಿ ಪಧೇರಿಯಾ ಅವರು ಮಂಗಳವಾರ (ಆ.19) ಭಾವನಗರ ಮುನ್ಸಿಪಲ್ ಸ್ಕೂಲ್ ಬೋರ್ಡ್ ಆಡಳಿತ ಅಧಿಕಾರಿ (ಎಒ) ಮುಂಜಾಲ್ ಬದ್ಮಾಲಿಯಾ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಭಾವನಗರದ ಕುಂಭಾರ್ವಾಡ ಪ್ರದೇಶದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಪ್ರಾಥಮಿಕ ಶಾಲಾ ಸಂಖ್ಯೆ 51 ರಲ್ಲಿ ನಡೆದ ವಿವಾದಾತ್ಮಕ ಕಾರ್ಯಕ್ರಮದ ಕುರಿತು ಏಳು ದಿನಗಳಲ್ಲಿ ವಾಸ್ತವಿಕ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ನಾಟಕವು ‘ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರಂತೆ ಚಿತ್ರಿಸಿದೆ’ ಎಂದು ಆರೋಪಿಸಿ ಮತ್ತು ನಾಟಕದ ಹಿಂದಿನ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಬಂಧನ್ ಬಚಾವ್ ಸಮಿತಿ ಭಾವನಗರ ಎಂಬ ಸಾಮಾಜಿಕ ಸಂಘಟನೆಯು ನೀಡಿದ ದೂರಿನ ಆಧಾರದ ಮೇಲೆ ಈ ನೋಟಿಸ್ ನೀಡಲಾಗಿದೆ.

ಭಾವನಗರ ಮುನ್ಸಿಪಲ್ ಸ್ಕೂಲ್ ಬೋರ್ಡ್ ಆಡಳಿತ ಅಧಿಕಾರಿ (ಎಒ) ಮುಂಜಾಲ್ ಬದ್ಮಾಲಿಯಾ ಅವರಿಗೆ ಕಳುಹಿಸಲಾದ ನೋಟಿಸ್‌ನಲ್ಲಿ ಡಿಇಒ ಅವರು, ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ವಿವರಗಳನ್ನು ಕೇಳಿದ್ದು, ವಿವಾದಾತ್ಮಕ ನಾಟಕದ ಪಾತ್ರವನ್ನು ಉದ್ದೇಶಪೂರ್ವಕವಾಗಿ ಮಾಡಿಸಲಾಗಿದೆಯೇ ಅಥವಾ ಉದ್ದೇಶಪೂರ್ವಕವಲ್ಲದ ಕೃತ್ಯವೇ? ಎಂದು ಮತ್ತು ಶಾಲಾ ಆವರಣದಲ್ಲಿ ನಡೆದ ಸಮಾರಂಭದ ವಿವರಗಳನ್ನು ಕೇಳಿದ್ದಾರೆ.

600ಕ್ಕೂ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿ ಹೊಂದಿರುವ ಭಾವನಗರದ ಬಾಲಕಿಯರ ಶಾಲೆಯು ವಿವಾದಾತ್ಮಕ ಸಾಂಸ್ಕೃತಿಕ ಕಾರ್ಯಕ್ರಮದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಗಮನ ಸೆಳೆದಿದೆ.

ಬಂಧನ್ ಬಚಾವ್ ಸಮಿತಿ ಭಾವನಗರ ತನ್ನ ದೂರಿನಲ್ಲಿ “ವಿವಾದಾತ್ಮಕ ನಾಟಕ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಲು ಮತ್ತು ಸಾರ್ವಜನಿಕರಲ್ಲಿ ಅಶಾಂತಿಯನ್ನು ಹರಡಲು ಶಾಲಾ ಸಿಬ್ಬಂದಿ ಮಾಡಿದ ಪ್ರಯತ್ನ” ಎಂದು ಆರೋಪಿಸಿದೆ.

“ಭಾವನಗರದ ಕುಂಭರ್ವಾಡಾ ಪ್ರದೇಶದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಪ್ರಾಥಮಿಕ ಶಾಲಾ ಸಂಖ್ಯೆ 50-51 ರಲ್ಲಿ, ಮಕ್ಕಳಿಂದ ನಾಟಕವನ್ನು ಪ್ರದರ್ಶಿಸಲಾಗಿದೆ. ಈ ನಾಟಕದಲ್ಲಿ, ಕಾಶ್ಮೀರಿ ಯಾತ್ರಿಕರು ಹಾಗೂ ಸೇನೆ ಮತ್ತು ಭಯೋತ್ಪಾದಕರನ್ನು ಚಿತ್ರಿಸಲಾಗಿದೆ. ನಾಟಕದಲ್ಲಿ, ಮುಸ್ಲಿಂ ಉಡುಪು (ಬುರ್ಖಾ) ಧರಿಸಿದ ಹುಡುಗಿಯರನ್ನು ಭಯೋತ್ಪಾದಕರಂತೆ ತೋರಿಸಲಾಗಿದೆ. ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರಂತೆ ಸ್ಪಷ್ಟವಾಗಿ ಚಿತ್ರಿಸಲಾಗಿದೆ” ಎಂದು ಬಂಧನ್ ಬಚಾವ್ ಸಮಿತಿ ದೂರಿನಲ್ಲಿ ಹೇಳಿದೆ.

ಶಾಲೆಯಲ್ಲಿ ಇಂತಹ ನಾಟಕ ಪ್ರದರ್ಶಿಸುವ ಮೂಲಕ ತಮ್ಮ ಕ್ರಿಮಿನಲ್ ಮನಸ್ಥಿತಿಯನ್ನು ಪ್ರದರ್ಶಿಸಿದ ಶಿಕ್ಷಕರ ವಿರುದ್ಧ ಮುಸ್ಲಿಂ ಸಮುದಾಯದ ಆಕ್ರೋಶ ವ್ಯಕ್ತಪಡಿಸಿದೆ ಎಂದು ಸಮಿತಿ ಹೇಳಿದೆ.

ಭಾವನಗರ ನಗರದ 68 ಪುರಸಭೆ ಶಾಲೆಗಳಲ್ಲಿ 30,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಈ ವರ್ಷ ಆಪರೇಷನ್ ಸಿಂಧೂರ್ ಆಚರಣೆಯ ಭಾಗವಾಗಿ, ಶಾಲಾ ವಿದ್ಯಾರ್ಥಿಗಳು ಗುಜರಾತ್‌ನ ಸೈನಿಕರಿಗೆ ರಾಖಿಗಳು ಮತ್ತು ಪತ್ರಗಳನ್ನು ಕಳುಹಿಸಿದ್ದಾರೆ. ಭಾವನಗರ ಜಿಲ್ಲೆಯಿಂದ ಮಾತ್ರ, 2 ಲಕ್ಷಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಗುಜರಾತ್‌ನ ಸೈನಿಕರಿಗೆ ಪತ್ರ ಬರೆದಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಉತ್ತರಾಖಂಡದಲ್ಲಿ ಮುಸ್ಲಿಂ ಲಾರಿ ಚಾಲಕನ ಮೇಲೆ ಗುಂಪು ಹಲ್ಲೆ: ಸಂತ್ರಸ್ತನಿಂದ ನ್ಯಾಯಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...