Homeಮುಖಪುಟನಾವು ನೋಡಿದ ನಾಟಕ; ’ವಿ ದ ಪೀಪಲ್ ಆಫ್ ಇಂಡಿಯಾ’: ಬಾಬಾಸಾಹೇಬರ ಆಶಯಗಳಿಗೆ ಸೃಜನಶೀಲತೆಯ ಸ್ಪರ್ಶ

ನಾವು ನೋಡಿದ ನಾಟಕ; ’ವಿ ದ ಪೀಪಲ್ ಆಫ್ ಇಂಡಿಯಾ’: ಬಾಬಾಸಾಹೇಬರ ಆಶಯಗಳಿಗೆ ಸೃಜನಶೀಲತೆಯ ಸ್ಪರ್ಶ

- Advertisement -
- Advertisement -

ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನವನ್ನು ಅಪ್ರಸ್ತುತಗೊಳಿಸಲು ಹಲವು ರೀತಿಯ ತಂತ್ರಗಾರಿಕೆ ಹೆಣೆಯುತ್ತಿರುವ ದಿನಗಳಲ್ಲಿ ಸಂವಿಧಾನದ ಮಹತ್ವ ಮತ್ತು ಜರೂರತೆಯನ್ನು ಸಾರುವ ’ವಿ ದ ಪೀಪಲ್ ಆಫ್ ಇಂಡಿಯಾ’
ನಾಟಕ ಈ ಕಾಲಕ್ಕೆ ಅಗತ್ಯವಾದ ಮತ್ತು ಬಹಳ ಮಹತ್ವವಾದ ಪ್ರಯೋಗವಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಪ್ರದರ್ಶನಗೊಳ್ಳುತ್ತಿರುವ ಈ ನಾಟಕವನ್ನು ಜನ ಅಷ್ಟೇ ಆಪ್ತವಾಗಿ ಅಪ್ಪಿಕೊಳ್ಳುತ್ತಿದ್ದಾರೆ.

ಸಂವಿಧಾನದ ಪ್ರಸ್ತಾವನೆಯ ’ಭಾರತೀಯ ಪ್ರಜೆಗಳಾದ ನಾವು’ ಎಂಬ ಮೊದಲ ಸಾಲನ್ನೇ ನಾಟಕದ ಹೆಸರನ್ನಾಗಿಟ್ಟುಕೊಂಡು ಸಂವಿಧಾನದ ರಚನೆಯ ಸಂದರ್ಭದಲ್ಲಿ ನಡೆದ ಅಂಬೇಡ್ಕರ್‌ರವರ ಆಶಯಗಳು, ಚರ್ಚೆಗಳು, ವಾಗ್ವಾದಗಳು ಮತ್ತು ಸಂವಿಧಾನ ಜಾರಿಯಾದ ನಂತರವೂ ಅವುಗಳನ್ನು ಮರೆಮಾಚಲು ನಡೆಸುತ್ತಿರುವ ಹುನ್ನಾರಗಳನ್ನು ಈ ನಾಟಕದ ಮೂಲಕ ಹೇಳಲು ಹೊರಟಿದ್ದಾರೆ ನಾಟಕದ ರಚನಕಾರರಾದ ರಾಜಪ್ಪ ದಳವಾಯಿಯವರು. ಅದನ್ನು ಅಷ್ಟೇ ಪರಿಣಾಮಕಾರಿಯಾಗಿ ರಂಗದ ಮೇಲೆ ತಂದಿದ್ದಾರೆ ಯುವ ಪ್ರತಿಭಾನ್ವಿತ ನಿರ್ದೇಶಕ ಲಕ್ಷ್ಮಣ್ ಕೆ.ಪಿ.

ಬಾಬಾಸಾಹೇಬ್ ಅಂಬೇಡ್ಕರ್ ಅವರು ಪ್ರಸ್ತಾವನೆಯಲ್ಲೇ ಸಂವಿಧಾನದ ಆಶಯಗಳನ್ನು ಒಳಗೊಂಡು ಸಾರಿದ್ದಾರೆ. ಭಾರತೀಯ ಪ್ರಜೆಗಳಾದ ನಾವು ಎಂಬ ಮೊದಲ ಮಾತೇ ಅದನ್ನು ಧ್ವನಿಸುತ್ತದೆ. ಈ ಸಾಲುಗಳನ್ನು ಓದಿದಾಗ ಅಥವಾ ಕೇಳಿದಾಗ ನಿಜವಾದ ದೇಶಪ್ರೇಮಿಗಳಿಗೆ ರೋಮಾಂಚನ, ಪುಳಕ ಉಂಟಾಗುತ್ತದೆ. ಬಹುತ್ವದ, ವೈವಿಧ್ಯಮಯವಾದ ಭಾಷೆ, ಸಂಸ್ಕೃತಿ, ಧರ್ಮಗಳನ್ನು ಅನುಸರಿಸುವ ಭಾರತೀಯರನ್ನು ಒಂದೆಂಬಂತೆ ಭಾವಿಸಲು, ಒಗ್ಗೂಡಿಸಲು ಅದು ಪ್ರೇರಣೆ ನೀಡುತ್ತದೆ. ಸಮಾನತೆ, ಸಹಬಾಳ್ವೆ, ಸಹೋದರತೆ ಮತ್ತು ಸ್ವಾತಂತ್ರ್ಯದ ಭಾವಗಳನ್ನು ಹೊಮ್ಮಿಸುತ್ತದೆ.

ಬುದ್ಧನ ಸಂದೇಶಗಳಿಂದ ಪ್ರಭಾವಿತರಾದ ಬಾಬಾಸಾಹೇಬರು ಯಾವ ತತ್ವಗಳ ಅಡಿಪಾಯದ ಮೇಲೆ ಈ ದೇಶ ರೂಪಿತವಾದರೆ ಭವಿಷ್ಯದಲ್ಲಿ ಸಮಸಮಾಜ ನಿರ್ಮಾಣವಾಗುತ್ತದೆ, ದೀನ ದಲಿತರಿಗೆ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ಘನತೆ – ಗೌರವದ ಬದುಕು ಸಿಗುತ್ತದೆ ಎಂಬುದನ್ನು ಆಶಿಸಿದ್ದರು ಮತ್ತು ಅದನ್ನು ವೈಜ್ಞಾನಿಕ ವಿಧಾನದ ಅಳವಡಿಸಲು ಮುಂದಾಗಿದ್ದರು ಎಂಬುದನ್ನು ಈ ನಾಟಕ ಮನದಟ್ಟು ಮಾಡಿಕೊಡುತ್ತದೆ.

ಒಂದು ಕಡೆ ನೆಲೆ ನಿಲ್ಲದೆ ಊರೂರು ಅಲೆಯುತ್ತಾ, ಪದ ಹೇಳುತ್ತಾ ಭಿಕ್ಷೆ ಬೇಡಿ ಬದುಕು ಸಾಗಿಸುವ ಅಲೆಮಾರಿಗಳ ಮೂಲಕ ಈ ನಾಟಕದಲ್ಲಿ ಕತೆ ಹೇಳಲೊರಟಿರುವುದು ಮಾರ್ಮಿಕವಾಗಿದೆ. ನಾಟಕ ಆರಂಭವಾಗುವುದೇ ಕಲಾವಿದರು ಪ್ರೇಕ್ಷಕರ ನಡುವಿನಿಂದಲೇ ಹಾಡು ಹೇಳಿಕೊಂಡು ಭಿಕ್ಷೆ ಬೇಡುವುದರಿಂದ. ಇದು ನೋಡುಗರು ಮತ್ತು ನಟರು ಇಬ್ಬರೂ ಸಮಾಜದಂತೆ, ಈ ಸಮಾಜದ ನಡುವಿನಿಂದ ಬರುವ ಕಲಾವಿದರು ಸಮಾಜದ ಪ್ರತಿನಿಧಿಗಳು ಎಂಬಂತೆ ಭಾಸವಾಗುತ್ತದೆ. ಅಲ್ಲದೆ ಈ ಅಲೆಮಾರಿಗಳನ್ನೂ ಒಳಗೊಂಡಂತೆ ಒಟ್ಟು ಸಮಾಜಕ್ಕೆ ಸಂವಿಧಾನದ ಬಗ್ಗೆ ಸಂಪೂರ್ಣ ಅರಿವಿಲ್ಲ. ಆದಷ್ಟು ಬೇಗ ಅದನ್ನು ಅರಿತುಕೊಳ್ಳುವಂತೆ ಮಾಡುಬೇಕು ಎಂಬುದು ನಾಟಕದ ಉದ್ದೇಶವಾಗಿದೆ.

ಅಲೆಮಾರಿಗಳ ರೀತಿಯಲ್ಲಿ ಸಂವಿಧಾನದ ಬಗ್ಗೆ ಲಾವಣಿ ಪದಗಳು, ತತ್ವ ಪದಗಳನ್ನು ಕಟ್ಟಿ ಹಾಡಿದರೆ ಸಂವಿಧಾನದಲ್ಲಿರುವ ವಿಚಾರಗಳು ಜನಸಾಮಾನ್ಯರ ನಾಡಿಮಿಡಿತದಲ್ಲಿ ಮಿಳಿತವಾಗುತ್ತವೆ. ಸಂವಿಧಾನ ಉಳಿದು ನೊಂದವರ, ಅವಮಾನಿತರ, ಹಿಂದುಳಿದವರ ಏಳಿಗೆಗೆ ಬೆಳಕಾಗುವುದು ಹೀಗೆ ಎನ್ನುವುದು ನಾಟಕ ನೋಡಿದಾಗ ಮನದಟ್ಟಾಗುತ್ತದೆ. ಅಂಬೇಡ್ಕರ್ ರಚಿತ ಸಂವಿಧಾನವನ್ನು ನಿಷ್ಠೆಯಿಂದ ಕಾಪಿಟ್ಟುಕೊಳ್ಳಬೇಕು. ನಾವು ಸಂವಿಧಾನವನ್ನು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ ಎಂಬುದನ್ನು ನಿರ್ದೇಶಕರು ಇಲ್ಲಿ ಸಾರಿ ಹೇಳಿದ್ದಾರೆ.

ಸ್ವಾತ್ರಂತ್ರ ಬಂದು ನಮ್ಮದೇ ಆದ ಸಂವಿಧಾನ ರಚಿಸಿಕೊಂಡ ಮೇಲೆಯೂ ಭಾರತದ ದುಡಿಯುವ ವರ್ಗಕ್ಕೆ ದಕ್ಕಿದ್ದು ರಾಜಕೀಯ ಸ್ವಾತ್ರಂತ್ರ್ಯ ಮಾತ್ರ. ಇದು ಒಂದು ಮತ ಒಂದು ಮೌಲ್ಯ ಎನ್ನುವುದನ್ನು ಹೇಳಿತು. ಆದರೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯವಿಲ್ಲದಿದ್ದರೆ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ, ಇದನ್ನು ನಾವು ಆದಷ್ಟು ಬೇಗ ಬಗಹರಿಸಿಕೊಳ್ಳಬೇಕು, ಇಲ್ಲದಿದ್ದಲ್ಲಿ ನಾವೇ ಕಟ್ಟಿದ ಈ ಸಂವಿಧಾನವನ್ನು ನಮ್ಮ ಜನರೆ ಸ್ಫೋಟಿಸುತ್ತಾರೆ ಎನ್ನುವ ಅಂಬೇಡ್ಕರ್ ಮಾತುಗಳು ನಾಟಕದಲ್ಲಿ ಎದ್ದು ಕಾಣುತ್ತವೆ.

ನಾಟಕ ಸಾಗುತ್ತಾ ಸದ್ಯದ ವರ್ತಮಾನದ ಸವಾಲುಗಳಿಗೆ ಮುಖಾಮುಖಿಯಾಗುತ್ತದೆ. ಮಹಿಳೆಯರು ಸಾಧಿಸಿದ ಪ್ರಗತಿಯ ಆಧಾರದಲ್ಲಿ ನಾನು ಒಟ್ಟಾರೆ ಆ ಸಮಾಜದ ಪ್ರಗತಿಯನ್ನು ಅಳೆಯುತ್ತೇನೆ ಎಂದಿದ್ದರು ಅಂಬೇಡ್ಕರ್. ಆದರೆ ಇಂದಿಗೂ ಭಾರತದಲ್ಲಿ ಮಹಿಳೆಯರು ಸ್ಥಿತಿಗತಿ ಹೇಗಿದೆ? ನಿತ್ಯ ನಿರಂತರ ದೌರ್ಜನ್ಯಗಳು ಮುಂದುವರೆಯಲು ಕಾರಣವೇನು? ಮಹಿಳಾ ಮೀಸಲಾತಿ ಕೇವಲ ಕಾಗದದ ಮೇಲಿರುವುದು ಏಕೆ? ಅಸ್ಪೃಶ್ಯತೆ ಮತ್ತು ಜಾತಿ ದೌರ್ಜನ್ಯಗಳಿಗೆ ಕೊನೆಯೆಂದು? ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಆತ್ಮಗೌರವ ಸಿಗುವ ಹಾಗೆ ಮಾಡಲು ನಡೆಸಬೇಕಾದ ಹೋರಾಟದ ಕುರಿತು ನಾಟಕದಲ್ಲಿ ಚರ್ಚೆಯಾಗಿ ಮೂಡಿಬಂದಿದೆ.

ದಳವಾಯಿಯವರ ನಾಟಕ ’ವಿ ದ ಪೀಪಲ್ ಆಫ್ ಇಂಡಿಯಾ’ ಸಂವಿಧಾನದ ಆಶಯಗಳನ್ನು ಸರಳವಾಗಿ, ನೇರವಾಗಿ, ತೆಳು ಹಾಸ್ಯದ ಮೂಲಕ ನೋಡುಗರ ಮನಮುಟ್ಟುತ್ತದೆ. ನಿರ್ದೇಶಕರು ನೋಡುಗರನ್ನು ತಲುಪಲು ಆಯ್ಕೆ ಮಾಡಿಕೊಂಡ ನಿರೂಪಣೆಯ ದಾರಿ ಯಶಸ್ವಿಯಾಗಿದೆ. ರಂಗಾಯಣದ ನಟರು ಸಹಜವೆಂಬಂತೆ ಪರಿಣಾಮಕಾರಿಯಾಗಿ ನಟಿಸಿದ್ದಾರೆ. ಪ್ರಸಾಧನ, ರಂಗಸಜ್ಜಿಕೆ, ಹಾಡುಗಳು ನಾಟಕದ ಸಿರಿವಂತಿಕೆಯನ್ನು ಹೆಚ್ಚಿಸಿವೆ.

ನಾಟಕ ನೋಡಿ ಹೊರಬಂದ ಮೇಲೆಯೂ ಒಟ್ಟಾರೆ ನಾಟಕದ ಆಶಯ ಮನದಲ್ಲಿ ಉಳಿಯುತ್ತದೆ ಮತ್ತು ಗುನುಗುತ್ತಿರುತ್ತದೆ. ಜೊತೆಗೆ ಇನ್ನೊಂದಷ್ಟು ಸಂಗತಿಗಳನ್ನು ಹೇಳಬಹುದಿತ್ತೇನೋ ಅನಿಸದಿರದು. ಸಂವಿಧಾನ ರಚನಾ ಸಂದರ್ಭದಲ್ಲಿ ಬಾಬಾಸಾಹೇಬರು ಅನುಭವಿಸಿದ ಅಡೆತಡೆಗಳು, ಅವಮಾನಗಳು, ಸವಾಲುಗಳು, ಹಿಂದು ಬಿಲ್ ಕೋಡ್ ತಿರಸ್ಕೃತವಾದಾಗ ಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದು ಹೀಗೆ ಇನ್ನೂ ಕೆಲವನ್ನು
ಸೇರಿಸಬಹುದಿತ್ತೇನೊ ಎಂಬ ಆಶಯ ಕೊರತೆಯಾಗಿ ಕಾಣಿಸಿ ಉಳಿಯುತ್ತಾದರೂ, ರಂಗಭೂಮಿಯೂ ಕೋಮುವಾದಿಕರಣಗೊಂಡಿರುವ ಈ ಕಾಲದಲ್ಲಿ ಈ ನಾಟಕ ಮಹತ್ವದ್ದಾಗಿದೆ. ನಾಟಕ ರಚಿಸಿದ ರಾಜಪ್ಪ ದಳವಾಯಿ, ನಿರ್ದೇಶಿಸಿದ ಲಕ್ಷ್ಮಣ್ ಕೆ.ಪಿ ಮತ್ತು ಪ್ರಸ್ತುತಪಡಿಸಿದ ಶಿವಮೊಗ್ಗ ರಂಗಾಯಣಕ್ಕೆ ಅಭಿನಂದನೆಗಳು. ಇದು ಸಾವಿರಾರು ಪ್ರದರ್ಶನ ಕಾಣಲಿ.

ಎಂ.ವಿ ಕೃಷ್ಣ

ಎಂ.ವಿ ಕೃಷ್ಣ
ರಂಗಭೂಮಿ ಕಲಾವಿದರಾಗಿರುವ ಕೃಷ್ಣರವರು ಹಲವು ನಾಟಕ ಮತ್ತು ಸಾಕ್ಷರತಾ ಆಂದೋಲನದ ಬೀದಿ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಪತ್ರಸಂಗಪ್ಪನ ಕೊಲೆ ಪ್ರಕರಣ ಎಂಬ ನಾಟಕ ಬರೆದು ನಿರ್ದೇಶಿಸಿದ್ದರು. ಪ್ರಾಂಶುಪಾಲರಾಗಿ ನಿವೃತ್ತರಾಗಿ ಮಳವಳ್ಳಿಯಲ್ಲಿ ನೆಲೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

 


ಇದನ್ನೂ ಓದಿ: ‘ಅಂಬೇಡ್ಕರ್ ಆ ಕಾಲದಲ್ಲಿ ಸಂವಿಧಾನ ಬರ್ದಿದ್ಕೋ, ನಮ್ಮಪ್ಪಾಮ್ಮ ಸ್ಕೂಲಿಗೆ ಕಳ್ಸಿದ್ಕೊ, ಇಷ್ಟೆಲ್ಲಾ ಜಗತ್ತು ತಿಳ್ಕೋಣಕ್ಕಾಯ್ತು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...