Homeಮುಖಪುಟನಾವು ನೋಡಿದ ನಾಟಕ; ’ವಿ ದ ಪೀಪಲ್ ಆಫ್ ಇಂಡಿಯಾ’: ಬಾಬಾಸಾಹೇಬರ ಆಶಯಗಳಿಗೆ ಸೃಜನಶೀಲತೆಯ ಸ್ಪರ್ಶ

ನಾವು ನೋಡಿದ ನಾಟಕ; ’ವಿ ದ ಪೀಪಲ್ ಆಫ್ ಇಂಡಿಯಾ’: ಬಾಬಾಸಾಹೇಬರ ಆಶಯಗಳಿಗೆ ಸೃಜನಶೀಲತೆಯ ಸ್ಪರ್ಶ

- Advertisement -
- Advertisement -

ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನವನ್ನು ಅಪ್ರಸ್ತುತಗೊಳಿಸಲು ಹಲವು ರೀತಿಯ ತಂತ್ರಗಾರಿಕೆ ಹೆಣೆಯುತ್ತಿರುವ ದಿನಗಳಲ್ಲಿ ಸಂವಿಧಾನದ ಮಹತ್ವ ಮತ್ತು ಜರೂರತೆಯನ್ನು ಸಾರುವ ’ವಿ ದ ಪೀಪಲ್ ಆಫ್ ಇಂಡಿಯಾ’
ನಾಟಕ ಈ ಕಾಲಕ್ಕೆ ಅಗತ್ಯವಾದ ಮತ್ತು ಬಹಳ ಮಹತ್ವವಾದ ಪ್ರಯೋಗವಾಗಿದೆ. ರಾಜ್ಯದ ಹಲವಾರು ಭಾಗಗಳಲ್ಲಿ ಪ್ರದರ್ಶನಗೊಳ್ಳುತ್ತಿರುವ ಈ ನಾಟಕವನ್ನು ಜನ ಅಷ್ಟೇ ಆಪ್ತವಾಗಿ ಅಪ್ಪಿಕೊಳ್ಳುತ್ತಿದ್ದಾರೆ.

ಸಂವಿಧಾನದ ಪ್ರಸ್ತಾವನೆಯ ’ಭಾರತೀಯ ಪ್ರಜೆಗಳಾದ ನಾವು’ ಎಂಬ ಮೊದಲ ಸಾಲನ್ನೇ ನಾಟಕದ ಹೆಸರನ್ನಾಗಿಟ್ಟುಕೊಂಡು ಸಂವಿಧಾನದ ರಚನೆಯ ಸಂದರ್ಭದಲ್ಲಿ ನಡೆದ ಅಂಬೇಡ್ಕರ್‌ರವರ ಆಶಯಗಳು, ಚರ್ಚೆಗಳು, ವಾಗ್ವಾದಗಳು ಮತ್ತು ಸಂವಿಧಾನ ಜಾರಿಯಾದ ನಂತರವೂ ಅವುಗಳನ್ನು ಮರೆಮಾಚಲು ನಡೆಸುತ್ತಿರುವ ಹುನ್ನಾರಗಳನ್ನು ಈ ನಾಟಕದ ಮೂಲಕ ಹೇಳಲು ಹೊರಟಿದ್ದಾರೆ ನಾಟಕದ ರಚನಕಾರರಾದ ರಾಜಪ್ಪ ದಳವಾಯಿಯವರು. ಅದನ್ನು ಅಷ್ಟೇ ಪರಿಣಾಮಕಾರಿಯಾಗಿ ರಂಗದ ಮೇಲೆ ತಂದಿದ್ದಾರೆ ಯುವ ಪ್ರತಿಭಾನ್ವಿತ ನಿರ್ದೇಶಕ ಲಕ್ಷ್ಮಣ್ ಕೆ.ಪಿ.

ಬಾಬಾಸಾಹೇಬ್ ಅಂಬೇಡ್ಕರ್ ಅವರು ಪ್ರಸ್ತಾವನೆಯಲ್ಲೇ ಸಂವಿಧಾನದ ಆಶಯಗಳನ್ನು ಒಳಗೊಂಡು ಸಾರಿದ್ದಾರೆ. ಭಾರತೀಯ ಪ್ರಜೆಗಳಾದ ನಾವು ಎಂಬ ಮೊದಲ ಮಾತೇ ಅದನ್ನು ಧ್ವನಿಸುತ್ತದೆ. ಈ ಸಾಲುಗಳನ್ನು ಓದಿದಾಗ ಅಥವಾ ಕೇಳಿದಾಗ ನಿಜವಾದ ದೇಶಪ್ರೇಮಿಗಳಿಗೆ ರೋಮಾಂಚನ, ಪುಳಕ ಉಂಟಾಗುತ್ತದೆ. ಬಹುತ್ವದ, ವೈವಿಧ್ಯಮಯವಾದ ಭಾಷೆ, ಸಂಸ್ಕೃತಿ, ಧರ್ಮಗಳನ್ನು ಅನುಸರಿಸುವ ಭಾರತೀಯರನ್ನು ಒಂದೆಂಬಂತೆ ಭಾವಿಸಲು, ಒಗ್ಗೂಡಿಸಲು ಅದು ಪ್ರೇರಣೆ ನೀಡುತ್ತದೆ. ಸಮಾನತೆ, ಸಹಬಾಳ್ವೆ, ಸಹೋದರತೆ ಮತ್ತು ಸ್ವಾತಂತ್ರ್ಯದ ಭಾವಗಳನ್ನು ಹೊಮ್ಮಿಸುತ್ತದೆ.

ಬುದ್ಧನ ಸಂದೇಶಗಳಿಂದ ಪ್ರಭಾವಿತರಾದ ಬಾಬಾಸಾಹೇಬರು ಯಾವ ತತ್ವಗಳ ಅಡಿಪಾಯದ ಮೇಲೆ ಈ ದೇಶ ರೂಪಿತವಾದರೆ ಭವಿಷ್ಯದಲ್ಲಿ ಸಮಸಮಾಜ ನಿರ್ಮಾಣವಾಗುತ್ತದೆ, ದೀನ ದಲಿತರಿಗೆ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ಘನತೆ – ಗೌರವದ ಬದುಕು ಸಿಗುತ್ತದೆ ಎಂಬುದನ್ನು ಆಶಿಸಿದ್ದರು ಮತ್ತು ಅದನ್ನು ವೈಜ್ಞಾನಿಕ ವಿಧಾನದ ಅಳವಡಿಸಲು ಮುಂದಾಗಿದ್ದರು ಎಂಬುದನ್ನು ಈ ನಾಟಕ ಮನದಟ್ಟು ಮಾಡಿಕೊಡುತ್ತದೆ.

ಒಂದು ಕಡೆ ನೆಲೆ ನಿಲ್ಲದೆ ಊರೂರು ಅಲೆಯುತ್ತಾ, ಪದ ಹೇಳುತ್ತಾ ಭಿಕ್ಷೆ ಬೇಡಿ ಬದುಕು ಸಾಗಿಸುವ ಅಲೆಮಾರಿಗಳ ಮೂಲಕ ಈ ನಾಟಕದಲ್ಲಿ ಕತೆ ಹೇಳಲೊರಟಿರುವುದು ಮಾರ್ಮಿಕವಾಗಿದೆ. ನಾಟಕ ಆರಂಭವಾಗುವುದೇ ಕಲಾವಿದರು ಪ್ರೇಕ್ಷಕರ ನಡುವಿನಿಂದಲೇ ಹಾಡು ಹೇಳಿಕೊಂಡು ಭಿಕ್ಷೆ ಬೇಡುವುದರಿಂದ. ಇದು ನೋಡುಗರು ಮತ್ತು ನಟರು ಇಬ್ಬರೂ ಸಮಾಜದಂತೆ, ಈ ಸಮಾಜದ ನಡುವಿನಿಂದ ಬರುವ ಕಲಾವಿದರು ಸಮಾಜದ ಪ್ರತಿನಿಧಿಗಳು ಎಂಬಂತೆ ಭಾಸವಾಗುತ್ತದೆ. ಅಲ್ಲದೆ ಈ ಅಲೆಮಾರಿಗಳನ್ನೂ ಒಳಗೊಂಡಂತೆ ಒಟ್ಟು ಸಮಾಜಕ್ಕೆ ಸಂವಿಧಾನದ ಬಗ್ಗೆ ಸಂಪೂರ್ಣ ಅರಿವಿಲ್ಲ. ಆದಷ್ಟು ಬೇಗ ಅದನ್ನು ಅರಿತುಕೊಳ್ಳುವಂತೆ ಮಾಡುಬೇಕು ಎಂಬುದು ನಾಟಕದ ಉದ್ದೇಶವಾಗಿದೆ.

ಅಲೆಮಾರಿಗಳ ರೀತಿಯಲ್ಲಿ ಸಂವಿಧಾನದ ಬಗ್ಗೆ ಲಾವಣಿ ಪದಗಳು, ತತ್ವ ಪದಗಳನ್ನು ಕಟ್ಟಿ ಹಾಡಿದರೆ ಸಂವಿಧಾನದಲ್ಲಿರುವ ವಿಚಾರಗಳು ಜನಸಾಮಾನ್ಯರ ನಾಡಿಮಿಡಿತದಲ್ಲಿ ಮಿಳಿತವಾಗುತ್ತವೆ. ಸಂವಿಧಾನ ಉಳಿದು ನೊಂದವರ, ಅವಮಾನಿತರ, ಹಿಂದುಳಿದವರ ಏಳಿಗೆಗೆ ಬೆಳಕಾಗುವುದು ಹೀಗೆ ಎನ್ನುವುದು ನಾಟಕ ನೋಡಿದಾಗ ಮನದಟ್ಟಾಗುತ್ತದೆ. ಅಂಬೇಡ್ಕರ್ ರಚಿತ ಸಂವಿಧಾನವನ್ನು ನಿಷ್ಠೆಯಿಂದ ಕಾಪಿಟ್ಟುಕೊಳ್ಳಬೇಕು. ನಾವು ಸಂವಿಧಾನವನ್ನು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ ಎಂಬುದನ್ನು ನಿರ್ದೇಶಕರು ಇಲ್ಲಿ ಸಾರಿ ಹೇಳಿದ್ದಾರೆ.

ಸ್ವಾತ್ರಂತ್ರ ಬಂದು ನಮ್ಮದೇ ಆದ ಸಂವಿಧಾನ ರಚಿಸಿಕೊಂಡ ಮೇಲೆಯೂ ಭಾರತದ ದುಡಿಯುವ ವರ್ಗಕ್ಕೆ ದಕ್ಕಿದ್ದು ರಾಜಕೀಯ ಸ್ವಾತ್ರಂತ್ರ್ಯ ಮಾತ್ರ. ಇದು ಒಂದು ಮತ ಒಂದು ಮೌಲ್ಯ ಎನ್ನುವುದನ್ನು ಹೇಳಿತು. ಆದರೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯವಿಲ್ಲದಿದ್ದರೆ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ, ಇದನ್ನು ನಾವು ಆದಷ್ಟು ಬೇಗ ಬಗಹರಿಸಿಕೊಳ್ಳಬೇಕು, ಇಲ್ಲದಿದ್ದಲ್ಲಿ ನಾವೇ ಕಟ್ಟಿದ ಈ ಸಂವಿಧಾನವನ್ನು ನಮ್ಮ ಜನರೆ ಸ್ಫೋಟಿಸುತ್ತಾರೆ ಎನ್ನುವ ಅಂಬೇಡ್ಕರ್ ಮಾತುಗಳು ನಾಟಕದಲ್ಲಿ ಎದ್ದು ಕಾಣುತ್ತವೆ.

ನಾಟಕ ಸಾಗುತ್ತಾ ಸದ್ಯದ ವರ್ತಮಾನದ ಸವಾಲುಗಳಿಗೆ ಮುಖಾಮುಖಿಯಾಗುತ್ತದೆ. ಮಹಿಳೆಯರು ಸಾಧಿಸಿದ ಪ್ರಗತಿಯ ಆಧಾರದಲ್ಲಿ ನಾನು ಒಟ್ಟಾರೆ ಆ ಸಮಾಜದ ಪ್ರಗತಿಯನ್ನು ಅಳೆಯುತ್ತೇನೆ ಎಂದಿದ್ದರು ಅಂಬೇಡ್ಕರ್. ಆದರೆ ಇಂದಿಗೂ ಭಾರತದಲ್ಲಿ ಮಹಿಳೆಯರು ಸ್ಥಿತಿಗತಿ ಹೇಗಿದೆ? ನಿತ್ಯ ನಿರಂತರ ದೌರ್ಜನ್ಯಗಳು ಮುಂದುವರೆಯಲು ಕಾರಣವೇನು? ಮಹಿಳಾ ಮೀಸಲಾತಿ ಕೇವಲ ಕಾಗದದ ಮೇಲಿರುವುದು ಏಕೆ? ಅಸ್ಪೃಶ್ಯತೆ ಮತ್ತು ಜಾತಿ ದೌರ್ಜನ್ಯಗಳಿಗೆ ಕೊನೆಯೆಂದು? ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಆತ್ಮಗೌರವ ಸಿಗುವ ಹಾಗೆ ಮಾಡಲು ನಡೆಸಬೇಕಾದ ಹೋರಾಟದ ಕುರಿತು ನಾಟಕದಲ್ಲಿ ಚರ್ಚೆಯಾಗಿ ಮೂಡಿಬಂದಿದೆ.

ದಳವಾಯಿಯವರ ನಾಟಕ ’ವಿ ದ ಪೀಪಲ್ ಆಫ್ ಇಂಡಿಯಾ’ ಸಂವಿಧಾನದ ಆಶಯಗಳನ್ನು ಸರಳವಾಗಿ, ನೇರವಾಗಿ, ತೆಳು ಹಾಸ್ಯದ ಮೂಲಕ ನೋಡುಗರ ಮನಮುಟ್ಟುತ್ತದೆ. ನಿರ್ದೇಶಕರು ನೋಡುಗರನ್ನು ತಲುಪಲು ಆಯ್ಕೆ ಮಾಡಿಕೊಂಡ ನಿರೂಪಣೆಯ ದಾರಿ ಯಶಸ್ವಿಯಾಗಿದೆ. ರಂಗಾಯಣದ ನಟರು ಸಹಜವೆಂಬಂತೆ ಪರಿಣಾಮಕಾರಿಯಾಗಿ ನಟಿಸಿದ್ದಾರೆ. ಪ್ರಸಾಧನ, ರಂಗಸಜ್ಜಿಕೆ, ಹಾಡುಗಳು ನಾಟಕದ ಸಿರಿವಂತಿಕೆಯನ್ನು ಹೆಚ್ಚಿಸಿವೆ.

ನಾಟಕ ನೋಡಿ ಹೊರಬಂದ ಮೇಲೆಯೂ ಒಟ್ಟಾರೆ ನಾಟಕದ ಆಶಯ ಮನದಲ್ಲಿ ಉಳಿಯುತ್ತದೆ ಮತ್ತು ಗುನುಗುತ್ತಿರುತ್ತದೆ. ಜೊತೆಗೆ ಇನ್ನೊಂದಷ್ಟು ಸಂಗತಿಗಳನ್ನು ಹೇಳಬಹುದಿತ್ತೇನೋ ಅನಿಸದಿರದು. ಸಂವಿಧಾನ ರಚನಾ ಸಂದರ್ಭದಲ್ಲಿ ಬಾಬಾಸಾಹೇಬರು ಅನುಭವಿಸಿದ ಅಡೆತಡೆಗಳು, ಅವಮಾನಗಳು, ಸವಾಲುಗಳು, ಹಿಂದು ಬಿಲ್ ಕೋಡ್ ತಿರಸ್ಕೃತವಾದಾಗ ಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದು ಹೀಗೆ ಇನ್ನೂ ಕೆಲವನ್ನು
ಸೇರಿಸಬಹುದಿತ್ತೇನೊ ಎಂಬ ಆಶಯ ಕೊರತೆಯಾಗಿ ಕಾಣಿಸಿ ಉಳಿಯುತ್ತಾದರೂ, ರಂಗಭೂಮಿಯೂ ಕೋಮುವಾದಿಕರಣಗೊಂಡಿರುವ ಈ ಕಾಲದಲ್ಲಿ ಈ ನಾಟಕ ಮಹತ್ವದ್ದಾಗಿದೆ. ನಾಟಕ ರಚಿಸಿದ ರಾಜಪ್ಪ ದಳವಾಯಿ, ನಿರ್ದೇಶಿಸಿದ ಲಕ್ಷ್ಮಣ್ ಕೆ.ಪಿ ಮತ್ತು ಪ್ರಸ್ತುತಪಡಿಸಿದ ಶಿವಮೊಗ್ಗ ರಂಗಾಯಣಕ್ಕೆ ಅಭಿನಂದನೆಗಳು. ಇದು ಸಾವಿರಾರು ಪ್ರದರ್ಶನ ಕಾಣಲಿ.

ಎಂ.ವಿ ಕೃಷ್ಣ

ಎಂ.ವಿ ಕೃಷ್ಣ
ರಂಗಭೂಮಿ ಕಲಾವಿದರಾಗಿರುವ ಕೃಷ್ಣರವರು ಹಲವು ನಾಟಕ ಮತ್ತು ಸಾಕ್ಷರತಾ ಆಂದೋಲನದ ಬೀದಿ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಪತ್ರಸಂಗಪ್ಪನ ಕೊಲೆ ಪ್ರಕರಣ ಎಂಬ ನಾಟಕ ಬರೆದು ನಿರ್ದೇಶಿಸಿದ್ದರು. ಪ್ರಾಂಶುಪಾಲರಾಗಿ ನಿವೃತ್ತರಾಗಿ ಮಳವಳ್ಳಿಯಲ್ಲಿ ನೆಲೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

 


ಇದನ್ನೂ ಓದಿ: ‘ಅಂಬೇಡ್ಕರ್ ಆ ಕಾಲದಲ್ಲಿ ಸಂವಿಧಾನ ಬರ್ದಿದ್ಕೋ, ನಮ್ಮಪ್ಪಾಮ್ಮ ಸ್ಕೂಲಿಗೆ ಕಳ್ಸಿದ್ಕೊ, ಇಷ್ಟೆಲ್ಲಾ ಜಗತ್ತು ತಿಳ್ಕೋಣಕ್ಕಾಯ್ತು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...