Homeಮುಖಪುಟಕರೆನ್ಸಿಯೊಂದಿಗೆ ಆಡುವ ಆಟ ಕರೆಂಟ್ ಜೊತೆಗೆ ಆಡಿದ ಆಟದಂತೆ; ಇದು ತುಘಲಕ್ ಮೋಜಿನಾಟ

ಕರೆನ್ಸಿಯೊಂದಿಗೆ ಆಡುವ ಆಟ ಕರೆಂಟ್ ಜೊತೆಗೆ ಆಡಿದ ಆಟದಂತೆ; ಇದು ತುಘಲಕ್ ಮೋಜಿನಾಟ

- Advertisement -
- Advertisement -

ದೆಹಲಿಯ ತೀನ್‌ಮೂರ್ತಿ ಭವನದಲ್ಲಿರುವ ದೇಶದ ಪ್ರಧಾನಮಂತ್ರಿಗಳ ಸಂಗ್ರಹಾಲಯದಲ್ಲಿ ಸದ್ಯಕ್ಕೆ ನರೇಂದ್ರ ಮೋದಿಯವರ ಕೊಠಡಿ ಅಪೂರ್ಣವಾಗಿದೆ. ಯಾವಾಗ ಅವರನ್ನು ಬೀಳ್ಕೊಡಲಾಗುವುದೋ ಆಗ, ಅವರು ತೆಗೆದುಕೊಂಡು ಒಳ್ಳೆಯ, ಕೆಟ್ಟ ತೀರ್ಮಾನಗಳ ನೆನಪುಗಳನ್ನು ಹೆಣೆಯುತ್ತ ಹೋದಲ್ಲಿ, ಆ ಮ್ಯೂಸಿಯಂನಲ್ಲಿ ನೋಟು ರದ್ದತಿಗೆ ಒಂದು ಸ್ಥಾನ ಅಥವಾ ಕೊಠಡಿ ಖಂಡಿತವಾಗಿಯೂ ಇರಲಿದೆ. ಆ ಕೊಠಡಿಯಲ್ಲಿ ಗುಲಾಬಿ ಬಣ್ಣದ 2000 ರೂಪಾಯಿಯ ನೋಟಿಗೂ ಸ್ಥಾನ ಇರಲಿದೆ. ಆ ಕೊಠಡಿಯನ್ನು ಹುಚ್ಚ ತುಘಲಕ್ ಎಂದು ಕರೆಯಲಾಗುವುದೋ ಅಥವಾ ತಮಾಷೆಯ ಕೊಠಡಿಯೆಂದು ಕರೆಯಲಾಗುವದೋ ಗೊತ್ತಿಲ್ಲ.

ಆ ಹೊಸ ರೀತಿಯ ಸಂಗ್ರಹಾಲಯದಲ್ಲಿ ಈ ನೋಟಿನ ಬಗ್ಗೆ ರಚಿಸಲಾದ ಜೋಕುಗಳಿಗೂ ಜಾಗ ಇರುವ ಸಾಧ್ಯತೆ ಇದೆ. ಬೇರೆ ಏನಾದರೂ ಇರಲಿ ಬಿಡಲಿ, ‘ಆಜ್ ತಕ್’ನ ಆಂಕರ್‌ನ ಆ ವಿಡಿಯೋ ತುಣುಕು; ನೋಟು ರದ್ದತಿಯ ದಿನದಂದು 2000 ರೂಪಾಯಿಯಲ್ಲಿ ‘ನ್ಯಾನೊ ಚಿಪ್’ನ ಇದೆ ಎಂದು ಖಡಾಖಂಡಿತವಾಗಿ ವರದಿ ಮಾಡುತ್ತಿರುವ ವಿಡಿಯೋ ತುಣುಕಂತೂ ಇರಲಿದೆ. ನನ್ನ ಮಾತು ನಡೆದರೆ, 2000 ರೂಪಾಯಿ ನೋಟನ್ನು ಹಿಂಪಡೆದಾಗ, ಆರ್‌‌ಓ‌ಎಫ್‌ಎಲ್ ಗಾಂಧಿ (ROFL Gandhi) ಹೆಸರಿನಲ್ಲಿ ಬಂದ ಈ ಟ್ವೀಟ್‌ಗೂ ಸಂಗ್ರಾಹಲಯದಲ್ಲಿ ಸ್ಥಾನ ನೀಡಬೇಕು; “ವಿಶ್ವಾಸಾರ್ಹ ಮೂಲಗಳ ಪ್ರಕಾರ 2000ದ ನೋಟಿನ ಚಿಪ್‌ಗೆ 5Gಯೊಂದಿಗೆ ಕನೆಕ್ಷನ್ ಆಗುತ್ತಿಲ್ಲ. ಈಗ 5G ಹೊಂದಿರುವ ಹೊಸ 5000ದ ಸೂಪರ್ ನ್ಯಾನೋ ಚಿಪ್‌ನ ನೋಟು ಬರಲಿದೆ. ಒಂದು ವೇಳೆ ಕಾಳಧನದ ಧಣಿಗಳು ಇದನ್ನು ತಿಜೋರಿಯಲ್ಲಿ ಇಟ್ಟರೆ, ಅದು ಖುದ್ದಾಗಿ ಊಬರ್ ಟ್ಯಾಕ್ಸಿ ಬುಕ್ ಮಾಡಿಕೊಂಡು ಆರ್‌ಬಿಐನ ಕಚೇರಿಗೆ ವಾಪಸ್ ಬರುವುದು!”

ಆ ಕೊಠಡಿಯಲ್ಲಿ 2016ರ ನವೆಂಬರ್ 8ರ ಸಂಜೆಯಿಂದ ಶುರುಮಾಡಿ 2023ರ ಮೇ 23ರತನಕದ ನೋಟುರದ್ದತಿಯ ಕಥೆಯನ್ನು ಹೇಳಲಾಗುವುದು. ಪ್ರಧಾನ ಮಂತ್ರಿ ದೊಡ್ಡದೊಡ್ಡ ಭರವಸೆ ನೀಡಿದ ಭಾಷಣದ ವಿಡಿಯೋ ತುಣುಕಿನೊಂದಿಗೆ ಆ ಕಥೆ ಪ್ರಾರಂಭವಾಗುವುದು. ಅದರಲ್ಲಿ ಇತರ ಅನೇಕ ಉಪಕಥೆಗಳು ಇರಲಿವೆ: ದೇಶಾದ್ಯಂತ ಕಂಡುಬಂದ ಸರತಿ ಸಾಲುಗಳು, ಹಳೆಯ ನೋಟುಗಳನ್ನು ಕೈಯಲ್ಲಿ ಹಿಡಿದುಕೊಂಡು ಕಾತುರದಿಂದ ಕಾಯುತ್ತಿರುವ ಕಣ್ಣುಗಳು ಇತ್ಯಾದಿ. ನಿಸ್ಸಂದೇಹವಾಗಿ, ಅಲ್ಲಿ ಅನೇಕ ದಸ್ತಾವೇಜುಗಳೂ ಇರಲಿವೆ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮೂರು ಹೊಸ ನಿರ್ದೇಶನಗಳು, ದಿನನಿತ್ಯ ಬದಲಾಗುತ್ತಿರುವ ಬ್ಯಾಂಕ್‌ಗಳ ನಿಯಮಗಳು.

ಒಂದು ವೇಳೆ ಆ ಸಂಗ್ರಹಾಲಯವನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಿದರೆ, ಯಾವುದೇ ವಿತ್ತೀಯ ಅರ್ಥಶಾಸ್ತ್ರಜ್ಞರ ಅಭಿಪ್ರಾಯ ಪಡೆದುಕೊಳ್ಳದೇ, ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಮ್ ರಾಜನ್‌ನ ಎಚ್ಚರಿಕೆಯನ್ನು ಕಡೆಗಣಿಸಿ ಹೇಗೆ ದೇಶದ ಕರೆನ್ಸಿಯೊಂದಿಗೆ ಇಷ್ಟು ದೊಡ್ಡ ಆಟ ಆಡಲಾಯಿತು ಎಂಬುದನ್ನು ಅದರಲ್ಲಿ ದಾಖಲಿಸಲಾಗುವುದು. ಒಂದು ವೇಳೆ ಆ ಸಂಗ್ರಹಾಲಯ ಭವಿಷ್ಯದ ಪ್ರಜ್ಞೆಯನ್ನು ಹೊಂದಿದ್ದರೆ ಅದರಲ್ಲಿ ನೋಟು ರದ್ದತಿಯ ದಾವೆಗಳು ಮತ್ತು ಅದರ ಅಸಲಿಯತ್ತನ್ನು ಎದುರುಬದರು ಇರಿಸುವ ಒಂದು ಪ್ಯಾನೆಲ್ ಕೂಡ ಇರಿಸಬೇಕಾಗುವುದು. ನೋಟು ರದ್ದತಿಯಿಂದ ದೊಡ್ಡ ಪ್ರಮಾಣದಲ್ಲಿ ಕಾಳ ಧನ ಇಲ್ಲವಾಗುವುದು, ಭ್ರಷ್ಟಾಚಾರಕ್ಕೆ ಪೆಟ್ಟು ಬೀಳುವುದು ಎಂಬ ದಾವೆಗಳನ್ನು ಮಾಡಲಾಗಿತ್ತು. ಹೊರಬಂದ ಅಸಲಿಯತ್ತೇನೆಂದರೆ, ರಿಸರ್ವ್ ಬ್ಯಾಂಕಿನದ್ದೇ ವರದಿಯ ಪ್ರಕಾರ 99.3% ನೋಟುಗಳು ವಾಪಸ್ ಬಂದುಬಿಟ್ಟವು. ದುಡ್ಡಿನ ದೊಡ್ಡದೊಡ್ಡ ಚೀಲಗಳನ್ನು ಹೊಂದಿದ್ದ ಸೇಠರ ದುಡ್ಡು ಮುಳುಗಲಿಲ್ಲ, ಆದರೆ ಬಡವರ ಕರುಳಲ್ಲಿದ್ದ ಒಂದಿಷ್ಟು ನೋಟುಗಳು ಖಂಡಿತವಾಗಿಯೂ ಕೊಳೆತುಹೋದವು. ಕಾಳ ಧನ ಇರಿಸಿಕೊಳ್ಳುವ ದೊಡ್ಡ ದೊಡ್ಡ ಭ್ರಷ್ಟಾಚಾರಿಗಳು ಕರೆನ್ಸಿ ನೋಟುಗಳ ಕಂತೆಗಳನ್ನು ಬಚ್ಚಿಟ್ಟುಕೊಂಡಿರುತ್ತಾರೆ ಎಂಬುದು ಈ ತೀರ್ಮಾನದ ಹಿಂದಿದ್ದ ತಿಳಿವಳಿಕೆ. ಗೊತ್ತಾಗಿದ್ದೇನೆಂದರೆ, ಕಾಳಧನ ಇಟ್ಟುಕೊಳ್ಳುವವರು ನಮಗಿಂತ ಜಾಣರಾಗಿರುತ್ತಾರೆ, ಅವರು ತಮ್ಮ ಧನ, ಬೇನಾಮಿ ಸಂಪತ್ತನ್ನು ಭೂಮಿ ಅಥವಾ ವಜ್ರದಂತಹ ವಸ್ತುಗಳಲ್ಲಿ ಹೂಡಿಕೆ ಮಾಡಿರುತ್ತಾರೆ. ನಕಲಿ ನೋಟುಗಳ ಸಂಖ್ಯೆಯೂ ಹೆಚ್ಚಿದೆ ಎಂಬ ದಾವೆ ಹೂಡಲಾಗುತ್ತು. ನಂತರ ರಿಸರ್ವ್ ಬ್ಯಾಂಕ್ ಹೇಳಿದ್ದೇನೆಂದರೆ, ನಕಲಿ ನೋಟುಗಳು ಅನುಪಾತ ಇರುವುದು ಕೇವಲ 0.0007%ರಷ್ಟು ಎಂದು.

ಇಲ್ಲಿ ಪ್ರಧಾನಮಂತ್ರಿ ಸಂಗ್ರಾಹಾಲಯದ ಗುಲಾಬಿ ಬಣ್ಣದ ವ್ಯಂಗದ ಕೊಠಡಿ ನಿಮಗೆ ಒಂದು ಪ್ರಶ್ನೆ ಕೇಳಲಿದೆ: ಒಂದು ವೇಳೆ 500 ಮತ್ತು 1000 ರೂಪಾಯಿಗಳ ದೊಡ್ಡ ನೋಟಿನದ್ದೇ ಸಮಸ್ಯೆಯಾಗಿದ್ದಲ್ಲಿ ಅದಕ್ಕಿಂತ ದೊಡ್ಡ ಮೌಲ್ಯದ 2000 ರೂಪಾಯಿ ನೋಟಿನಿಂದ ಆ ಸಮಸ್ಯೆಯ ಪರಿಹಾರ ಆಗುವುದು ಹೇಗೆ? ಒಂದು ವೇಳೆ ಭ್ರಷ್ಟರಿಗೆ 1000 ರೂಪಾಯಿಯ ನೋಟುಗಳಿಂದ ಹಣ ಶೇಖರಣೆ ಮಾಡಲು ಅನುಕೂಲ ಆಗುತ್ತಿದೆ ಎಂದಲ್ಲಿ 2000 ರೂಪಾಯಿಯ ನೋಟುಗಳಿಂದ ಅವರಿಗೆ ಇನ್ನಷ್ಟು ಅನುಕೂಲ ಆಗುವುದಿಲ್ಲವೇ? ಈ ಪ್ರಶ್ನೆಯ ಉತ್ತರ ಆಗಲೂ ಸಿಗಲಿಲ್ಲ, ಇಲ್ಲಿಯತನಕವೂ ಸಿಕ್ಕಿಲ್ಲ. ತುಘಲಕ್ ದರ್ಬಾರಿನಿ ರೀತಿಯ ನೋಟು ರದ್ದತಿ ತೀರ್ಮಾನಕ್ಕಾಗಿ ಸರಕಾರವು ದೇಶದ ಜನತೆಗೆ ಎಂದೂ ಕ್ಷಮೆ ಕೇಳಿಲ್ಲ. ಆದರೆ ಕಾಳಧನ ಇಲ್ಲವಾಗಿಸುವ ದಾವೆಯ ಆಧಾರದ ಮೇಲೆ ಚುನಾವಣೆ ಗೆದ್ದರು, ಒಂದೆರಡು ಬಾರಿ ನೋಟು ರದ್ದತಿಯ ವಾರ್ಷಿಕ ಸಂಭ್ರಮ ಆಚರಿಸಿದರು ಹಾಗೂ ಅದರ ನಂತರ ಅದನ್ನು ಮರೆತುಬಿಟ್ಟರು. ಯಾರಿಗೂ ಗೊತ್ತಾಗದ ಹಾಗೆ ಸರಕಾರವು 2018ರಲ್ಲಿಯೇ 2000 ರೂಪಾಯಿಯ ನೋಟುಗಳ ಮುದ್ರಣ ನಿಲ್ಲಿಸಿತು ಹಾಗೂ ಮತ್ತೆ 2022 ಮೇ 19ರಂದು ಮತ್ತೆ ಇದನ್ನು ವಾಪಸ್ ಪಡೆಯುವ ಘೋಷಣೆ ಮಾಡಿತು. ಮತ್ತೆ ಇದನ್ನು ಭ್ರಷ್ಟಾಚಾರದ ವಿರುದ್ಧದ ಅಂತಿಮ ಯುದ್ಧ ಎಂದು ಭಟ್ಟಂಗಿಗಳು ದಾವೆ ಹೂಡಿದರು, ಆದರೆ ಈ ಬಾರಿ ಕೇಳುವವರು ಯಾರೂ ಇಲ್ಲ. 2000 ರೂಪಾಯಿ ನೋಟುಗಳ ಚಲಾವಣೆ ಹೆಚ್ಚು ಇಲ್ಲ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ. ಆದರೆ ಇಷ್ಟು ಸರಳ ವಿಷಯವನ್ನು ತಿಳಿದುಕೊಳ್ಳಲು ಇಡೀ ದೇಶದೊಂದಿಗೆ ಇಂತಹ ಪ್ರಯೋಗ ಮಾಡುವ ಅವಶ್ಯಕತೆ ಏನಿತ್ತು ಎಂಬುದರ ಬಗ್ಗೆ ಹೇಳಿಲ್ಲ. 2000ದ ನಕಲಿ ನೋಟುಗಳನ್ನು ಮಾಡುವುದು ಮುಂಚಿನ 1000 ನೋಟುಗಳಿಗಿಂತ ಸುಲಭ ಎಂಬುದು ಕೇಳಿಬಂದಿದೆ. ಈಗ ಮತ್ತೊಮ್ಮೆ 2000 ಮೌಲ್ಯದ 181 ಕೋಟಿ ನೋಟುಗಳನ್ನು ಬ್ಯಾಂಕಿಗೆ ಮರಳಿಸುವ ಕಸರತ್ತು ಶುರುವಾಗಿದೆ, ಈಗ ಮತ್ತೊಮ್ಮೆ ಪ್ರತಿನಿತ್ಯ ಮಿತಿಗಳನ್ನು ನಿಗದಿಪಡಿಸಲಾಯಿತು, ಮತ್ತೊಮ್ಮೆ ಪ್ರತಿ ವಾರ ನಿಯಮಗಳನ್ನು ಬದಲಿಸಲಾಯಿತು, ಯಾವ ನೋಟುಗಳು ತನ್ನಿಂತಾನೆ ಚಲಾವಣೆಯಿಂದ ಹೊರಹೋಗುತ್ತಿದ್ದವೋ, ಅವುಗಳನ್ನು ಇಲ್ಲವಾಗಿಸಲು ಇಷ್ಟು ದೊಡ್ಡ ದುಬಾರಿಯಾದ ಕಸರತ್ತನ್ನು ಏಕೆ ಮಾಡಲಾಯಿತು ಎಂಬುದಕ್ಕೆ ಕಾರಣ ಎಂದೂ ಯಾರಿಗೂ ಗೊತ್ತಾಗುವುದಿಲ್ಲ. ಇಷ್ಟು ಅಂದುಕೊಂಡುಬಿಡಿ, ಸರಕಾರವು ನೋಟುರದ್ದತಿಯ ಸಮಾಧಿಯ ಮೇಲೆ 2000ದ ನೋಟಿನ ರೂಪದ ಗುಲಾಬಿ ಹೂ ಅರ್ಪಿಸಿದೆ ಎಂದು.

ಪ್ರಧಾನಮಂತ್ರಿ ಸಂಗ್ರಹಾಲಯದಲ್ಲಿ, ಮೋದಿಯವರ ಪ್ರಧಾನಿ ಅವಧಿಯ ನೋಟು ರದ್ದತಿಯ ಕೊಠಡಿ ಎಂದಿಗಾದರೂ ತಯ್ಯಾರಾಗಲಿ, ಅಲ್ಲಿಯತನಕ ವಿಶ್ವದೆಲ್ಲೆಡೆಯ ಅರ್ಥಶಾಸ್ತ್ರದ ಪುಸ್ತಕಗಳಲ್ಲಿ, ಭಾರತದ ನೋಟು ರದ್ದತಿಯ ಕೇಸ್ ಸ್ಟಡಿ ಪ್ರಕಟವಾಗುವುದು; ಚಲನೆಯಲ್ಲಿರುವ ಆರ್ಥವ್ಯವಸ್ಥೆಯೊಂದಿಗೆ ಆಟವಾಡಬಾರದು ಎಂಬುದು ಉದಾಹರಣೆಯ ರೂಪದಲ್ಲಿ ಅದು ಚರ್ಚೆಯಾಗುವುದು. ಹೇಗೆ ಕಣ್ಣಿನ ಆಪರೇಷನ್‌ನ್ನು ಸ್ಕ್ರೂಡ್ರೈವರ್‌ನಿಂದ ಮಾಡಲಾಗುವುದಿಲ್ಲವೋ ಹಾಗೆಯೇ ಆಧುನಿಕ ಅರ್ಥವ್ಯವಸ್ಥೆಯ ಕರೆನ್ಸಿಯನ್ನು ಹವ್ಯಾಸಿಗಳ ಕೈಗೆ ನೀಡಲಾಗುವುದಿಲ್ಲ ಎಂಬ ಪಾಠ ಮಾಡಲಾಗುವುದು. ಆ ಕೊಠಡಿಯ ಕೊನೆಯಲ್ಲಿ ಈ ಬರಹವಿರುವ ಒಂದು ಪಟ್ಟಿಯನ್ನು ಇರಿಸುವ ಸಾಧ್ಯತೆ ಇದೆ; “ಎಚ್ಚರಿಕೆ: ಕರೆನ್ಸಿ ನೋಟುಗಳೊಂದಿಗೆ ಆಟವಾಡುವುದು ಕರೆಂಟ್‌ನೊಂದಿಗೆ ಆಟವಾಡಿದಂತೆ!”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...