Homeಅಂತರಾಷ್ಟ್ರೀಯಬೆಂಕಿಯ ಜೊತೆಗೆ ಸರಸ; ರಷ್ಯಾದಲ್ಲಿ ಖಾಸಗಿ ಸೈನ್ಯದ ತುಕಡಿಗಳ ಬಂಡಾಯ

ಬೆಂಕಿಯ ಜೊತೆಗೆ ಸರಸ; ರಷ್ಯಾದಲ್ಲಿ ಖಾಸಗಿ ಸೈನ್ಯದ ತುಕಡಿಗಳ ಬಂಡಾಯ

- Advertisement -
- Advertisement -

23 ಜೂನ್ 2023 ರಂದು, ರಷ್ಯನ್ ಸರ್ಕಾರ ಆರ್ಥಿಕ ಸಹಾಯ ನೀಡಿ ಬೆಳೆಸಿದ ಖಾಸಗಿ ಸೈನ್ಯದ ಸಂಸ್ಥೆ, ವಾಗ್ನರ್ ಗುಂಪು, ರಷ್ಯಾದ ರಕ್ಷಣಾ ಸಚಿವಾಲಯದ ವಿರುದ್ಧವೇ ಬಂಡಾಯವನ್ನು ಎಬ್ಬಿಸಿತು. ವಾಗ್ನರ್‌ನ ನಾಯಕ ಯೆವ್‌ಜೆನಿ ಪ್ರಿಗೊಜಿನ್, ಶೊಯಿಗು ಮತ್ತು ಗೆರಾಸಿಮೊವ್ ಎಂಬ ಪ್ರದೇಶಗಳನ್ನು ತಮ್ಮ ವಶಕ್ಕೆ ಕೊಟ್ಟುಬಿಡಬೇಕೆಂದು ಆಗ್ರಹಪಡಿಸಿದ. ರಷ್ಯದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಾಗ್ನರ್‌ನ ಈ ನಡೆಯನ್ನು ದೇಶದ್ರೋಹ ಎಂದು ಖಂಡಿಸಿದ. ಈ ಬಂಡಾಯದ ಸಮಯದಲ್ಲಿ, ವಾಗ್ನರ್ ಸೈನ್ಯ ದಕ್ಷಿಣದ ಮಿಲಿಟರಿ ಜಿಲ್ಲೆಯ ಮುಖ್ಯ ಕಚೇರಿಯಿದ್ದ ರೊಸ್ಟೊವ್-ಆನ್-ಡಾನ್ ಅನ್ನು ವಶಪಡಿಸಿಕೊಂಡಿತು. ಅವರು ನಂತರ ರಷ್ಯದ ವಾಯುಸೇನಾದ ದಾಳಿಯನ್ನು ಹಿಮ್ಮೆಟ್ಟಿಸುತ್ತಾ ಮಾಸ್ಕೋದ ಕಡೆಗೆ ದಂಡೆತ್ತಿ ಹೋದರು. ಭೂ ಸೇನಾ ರಕ್ಷಣಾ ಪಡೆಗಳು ಮಾಸ್ಕೊ ಮೇಲೆಯೇ ತನ್ನ ಗಮನವನ್ನು ಕೇಂದ್ರೀಕರಿಸಿದ್ದವು. ಬೆಲಾರಸ್‌ನ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಸಂಧಾನಕಾರನಾಗಿ ಇಬ್ಬರ ನಡುವೆಯೂ ಒಡಂಬಡಿಕೆಯಾಗುವಂತೆ ಪಾತ್ರವಹಿಸಿದ, ಪ್ರಿಗೊಜಿನ್ ಬಂಡಾಯವನ್ನು ಅಂತ್ಯಗೊಳಿಸಲು ಒಪ್ಪಿಕೊಂಡ.

ಈ ಬಂಡಾಯದ ಪರಿಣಾಮವಾಗಿ ಅನೇಕ ಸಾವುನೋವುಗಳು ಸಂಭವಿಸಿದವು. ಕಡೇ ಪಕ್ಷ ಹದಿಮೂರು ರಷ್ಯಾದ ಸೈನಿಕರುಗಳನ್ನು ಕೊಲ್ಲಲಾಯಿತು. ವಾಗ್ನರ್ ಸಂಸ್ಥೆಯ ಈ ಬಂಡಾಯವು ರಷ್ಯಾದ ಸೈನ್ಯದ ಆಂತರಿಕ ವ್ಯವಸ್ಥೆಯಲ್ಲಿನ ಬಿಗಿವಾತಾವರಣವನ್ನು ಹೊರಗೆಡಹಿತು ಮತ್ತು ಸರ್ಕಾರದ ಬೆಂಬಲದಿಂದ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಸೈನಿಕ ಸಂಸ್ಥೆಗಳ ಕ್ರಿಯಾಶಕ್ತಿಯ ಬಗ್ಗೆ ಗಮನ ಹರಿಯುವಂತೆ ಮಾಡಿತು.

ಇದು ಹೇಗೆ ಪ್ರಾರಂಭವಾಯಿತು?

ಬಕ್ಮುಟ್‌ನ ಹೋರಾಟದ ಸಮಯದಲ್ಲಿ, ವಾಗ್ನರ್ ಗುಂಪು ಮತ್ತು ರಷ್ಯಾದ ರಕ್ಷಣಾ ಸಚಿವಾಲಯದ ಜೊತೆಯ ಬಿಗಿವಾತಾವರಣ ಉಲ್ಬಣಗೊಂಡಿತು. ರಷ್ಯಾ ಸರ್ಕಾರ ಅವರಿಗೆ ಸಾಕಷ್ಟು ಅಗತ್ಯವಸ್ತುಗಳನ್ನು ಸರಬರಾಜು ಮಾಡುತ್ತಿರಲಿಲ್ಲ ಎಂದು ಪ್ರಿಗೊಜಿನ್ ದೂರಿದ. ವಾಗ್ನರ್ ಗುಂಪಿನ ಯೋಧರ ಸಾವಿಗೆ ರಕ್ಷಣಾ ಮಂತ್ರಿ ಸರ್ಗೈ ಶೊಯಿಗು ಮತ್ತು ರಕ್ಷಣಾ ಪಡೆಗಳ ಮುಖ್ಯಸ್ಥ ವೇಲರಿ ಜೆರಾಸಿಮೊವ್ ಕಾರಣಕರ್ತರು ಎಂದು ಆತ ದೂರಿದ. ಈ ಹೋರಾಟದಲ್ಲಿ ಬಹಳಷ್ಟು ಜನ ಸೈನಿಕರನ್ನು ಕಳೆದುಕೊಳ್ಳಬೇಕಾಯಿತು ಮತ್ತು ಉಕ್ರೇನ್‌ನಲ್ಲಿ ಡಿಸೆಂಬರ್ 2022 ಮತ್ತು ಜೂನ್ 2023ರ ಅಂತರದಲ್ಲಿ ಸತ್ತ 20,000 ರಷ್ಯಾ ಪಡೆಯ ಸೈನಿಕರಲ್ಲಿ ಅರ್ಧದಷ್ಟು ಹೋರಾಟಗಾರರು ವಾಗ್ನರ್ ಗುಂಪಿಗೆ ಸೇರಿದವರಾಗಿದ್ದರು. ಬಕ್ಬುಟ್‌ನಲ್ಲಿ ರಷ್ಯಾದ ಗೆಲುವಿನ ನಂತರ ವಾಪಸ್ಸಾಗುವಾಗ ವಾಗ್ನರ್ ಮತ್ತು ರಕ್ಷಣಾ ಪಡೆಗಳ ನಡುವಿನ ಘರ್ಷಣೆ ನಡೆಯುತ್ತಲೇ ಇತ್ತು.

ಜೂನ್ 2023ರ ಮಧ್ಯಭಾಗದಲ್ಲಿ ರಷ್ಯಾದ ರಕ್ಷಣಾ ಸಚಿವಾಲಯ ವಾಗ್ನರ್‌ಗೆ ರಷ್ಯಾದ ಮಾಮೂಲಿ ಸೈನ್ಯದ ಆಜ್ಞಾಪನಾ ವ್ಯವಸ್ಥೆಯ ಜೊತೆಯಲ್ಲಿ ಏಕೀಕರಣಗೊಳ್ಳಬೇಕೆಂದು ಆಜ್ಞೆ ಹೊರಡಿಸಿತು. ಪ್ರಿಗೊಜಿನ್ ಇದನ್ನು ತಳ್ಳಿ ಹಾಕಿದ. ಪ್ರಿಗೊಜಿನ್ ರಕ್ಷಣಾ ಸಚಿವಾಲಯವನ್ನು ಟೀಕಿಸಿದ ಮತ್ತು ಅಧ್ಯಕ್ಷ ಪುಟಿನ್ ಸಚಿವಾಲಯದ ವಿರುದ್ಧ ತನ್ನ ಬಂಡಾಯವನ್ನು ಬೆಂಬಲಿಸುತ್ತಾನೆ ಎಂದು ನಂಬಿಕೊಂಡು ಶೊಯಿಗುನನ್ನು ಮರಣದಂಡನೆಗೆ ಗುರಿಪಡಿಸಬೇಕೆಂದು ಆಗ್ರಹಿಸಿದ.

ಜೂನ್ 23, 2023ರಂದು, ಪ್ರಿಗೊಜಿನ್, ರಕ್ಷಣಾ ಸಚಿವಾಲಯ ಸಾರ್ವಜನಿಕರಿಗೆ ಮೋಸ ಮಾಡುತ್ತಿರುವ ವೀಡಿಯೊ ಒಂದನ್ನು ಬಿಡುಗಡೆ ಮಾಡಿದ. ಅವನು ಉಕ್ರೇನ್ ಜೊತೆಯಲ್ಲಿ ನಡೆಸುತ್ತಿರುವ ಈ ಯುದ್ಧ ರಷ್ಯದ ಗಣ್ಯವ್ಯಕ್ತಿಗಳ ಹಿತವನ್ನು ಕಾಪಾಡುವುದಕ್ಕೋಸ್ಕರ ಎಂದು ಹೇಳಿದ. ರಷ್ಯಾ ಸರ್ಕಾರದ ಉಕ್ರೇನ್‌ನ ಆಕ್ರಮಣದ ಬಗ್ಗೆ ನೀಡುತ್ತಿದ್ದ ಸಮಜಾಯಿಹಿಷಿಯನ್ನು ತಳ್ಳಿಹಾಕಿದ. ಪ್ರತಿದಿನದ ವಾಗ್ನರ್ ಹೋರಾಟಗಾರರ ಸಾವಿನ ಸಂಖ್ಯೆ ಸಾವಿರಕ್ಕೆ ಏರಿದೆ ಎಂದು ಅವನು ಪ್ರತಿಪಾದಿಸಿದ. ಅವನು ಇನ್ನೂ ಮುಂದುವರಿಯುತ್ತಾ, ಸೈನ್ಯದಲ್ಲಿನ ಅಧಿಕಾರಿ ವ್ಯವಸ್ಥೆ ಇದನ್ನು ಉದ್ದೇಶಪೂರ್ವಕವಾಗಿ ಸಾರ್ವಜನಿಕರಿಂದ ಮುಚ್ಚಿಟ್ಟಿದೆ ಎಂದು ಹೇಳಿದ.

ವಾಗ್ನರ್ ಬಿಡಾರದ ಮೇಲಿನ ಕ್ಷಿಪಣಿ ಆಕ್ರಮಣದ ನಂತರ ಉಂಟಾದ ಪರಿಣಾಮವನ್ನು ಈ ವೀಡಿಯೊ ತೋರಿಸಿತು. ಈ ಕ್ಷಿಪಣಿ ಆಕ್ರಮಣವನ್ನು ನಡೆಸಿದ್ದು ರಕ್ಷಣಾ ಸಚಿವಾಲಯವೇ ಎಂದದ್ದಲ್ಲದೆ, 2000 ವಾಗ್ನರ್ ಸೈನಿಕರನ್ನು ಅದು ಕೊಂದು ಹಾಕಿತು ಎಂದು ಪ್ರಿಗೊಜಿನ್ ಪ್ರತಿಪಾದಿಸಿದ. ಈ ವಿಡಿಯೋದ ಸಿಂಧುತ್ವವನ್ನು ಪ್ರಶ್ನಿಸಲಾಯಿತು ಮತ್ತು ಕೆಲವರು ಈ ವಿಡಿಯೊವನ್ನು ಸೃಷ್ಟಿಸಲಾಗಿದೆ ಎಂದು ಹೇಳಿದರು. ಇದಾದ ನಂತರವೇ ಪ್ರಿಗೊಜಿನ್ ರಕ್ಷಣಾ ಮಂತ್ರಾಲಯದ ವಿರುದ್ಧ ಸಶಸ್ತ್ರ ಬಂಡಾಯ ಎದ್ದಿದ್ದು ಮತ್ತು ಈ ಬಂಡಾಯದಲ್ಲಿ ಬಿಡಿವ್ಯಕ್ತಿಗಳೂ ಸೇರಿಕೊಳ್ಳುವಂತೆ ಕರೆಕೊಟ್ಟಿದ್ದು. ಈ ಬಂಡಾಯವನ್ನು ಕಳಪೆಯಾಗಿ ಯೋಜಿಸಲಾಗಿತ್ತು ಮತ್ತು ಅನೇಕ ವಾಗ್ನರ್ ಸದಸ್ಯರುಗಳಿಗೆ ಈ ಬಂಡಾಯದ ಬಗ್ಗೆ ಅರಿವೇ ಇರಲಿಲ್ಲ.

ಈ ವಾಗ್ನರ್ ಗುಂಪು ಅಂದರೆ ಯಾರು?

ವಾಗ್ನರ್ ಗುಂಪು, ಅಧಿಕೃತವಾಗಿ ಕರೆಯಲಾಗುವ ಪಿ.ಎಮ್.ಸಿ. ವಾಗ್ನರ್, ರಷ್ಯಾ ಸರ್ಕಾರದಿಂದ ಹಣಸಹಾಯ ಪಡೆದ ಖಾಸಗಿ ಸೈನ್ಯ ಸಂಸ್ಥೆ. ಅದನ್ನು ದಿಮಿಟ್ರಿ ಯೂಟ್ಕಿನ್ ಎಂಬುವನಿಂದ 2014ರಲ್ಲಿ ಸ್ಥಾಪಿಸಲಾಯಿತು, ಅವನೊಬ್ಬ ಮಾಜಿ GRU (ರಷ್ಯಾ ಮಿಲಿಟರಿಯ ಒಂದು ಸಂಸ್ಥೆ) ಅಧಿಕಾರಿ, ಮತ್ತು ಪ್ರೊಗೊಜಿನ್ ಒಬ್ಬ ವ್ಯಾಪಾರಿ. ವಾಗ್ನರ್ ತನ್ನ ಪ್ರಖ್ಯಾತಿಯನ್ನು ಪಡೆದಿದ್ದು ಉಕ್ರೇನ್‌ನ ಡಾನ್‌ಬಾಸ್ ಯುದ್ಧದ ಸಮಯದಲ್ಲಿ, ಅದು ರಷ್ಯಾ ದೇಶದ ಪರವಾಗಿದ್ದ ಪ್ರತೇಕವಾದಿ ಶಕ್ತಿಗಳನ್ನು ಬೆಂಬಲಿಸಿತ್ತು. ಈ ಗುಂಪು ಪ್ರಪಂಚದಾದ್ಯಂತ ಎಲ್ಲಾ ಸಂಘರ್ಷಗಳಲ್ಲಿಯೂ ಸಕ್ರಿಯವಾಗಿತ್ತು, ಅದು ಸಿರಿಯ, ಲಿಬಿಯಾ, ಅಫ್ರಿಕಾದ ಮಧ್ಯ ಪ್ರಾಂತ ಪ್ರದೇಶ ಮತ್ತು ಮಾಲಿ ಒಳಗೊಂಡಂತೆ.

ಇದನ್ನೂ ಓದಿ: ಯುಎಸ್‌ಎ ಸುಪ್ರೀಂಕೋರ್ಟ್ ತೀರ್ಪು; ಜನಾಂಗೀಯ ಅಲ್ಪಸಂಖ್ಯಾತರ ಶೈಕ್ಷಣಿಕ ಅವಕಾಶಗಳಿಗೆ ಹೊಡೆತ

ರಷ್ಯಾ ಸರ್ಕಾರ ಈ ವಾಗ್ನರ್ ಗುಂಪನ್ನು ಉಪಯೋಗಿಸಿಕೊಂಡು ಪರೋಕ್ಷ ಸಮರವನ್ನು ನಡೆಸಿ, ರಷ್ಯಾದ ಸೈನ್ಯದ ಭಾಗವಹಿಸುವಿಕೆಯ ಆಪಾದನೆಯನ್ನು ಅಲ್ಲಗಳೆಯುತ್ತಿತ್ತು. ಇದೊಂದು ಖಾಸಗಿ ಸಂಸ್ಥೆಯಾಗಿದ್ದುದರಿಂದ ವಾಗ್ನರ್‌ಗೆ ಇದ್ದ ಅನುಕೂಲವೆಂದರೆ ಅದು ಅಂತಾರಾಷ್ಟ್ರೀಯ ಮತ್ತು ರಷ್ಯಾದ ಕಾನೂನಿನ ವ್ಯಾಪ್ತಿಯಿಂದ ಹೊರಗಿರುತ್ತಿತ್ತು, ಮತ್ತು ರಷ್ಯಾದ ಸೈನಿಕ ಕಾರ್ಯಾಚರಣೆಗಳಿಗಿ ಬೆಲೆ ಕಟ್ಟಲಾರದಷ್ಟು ಸಹಾಯಕವಾಗಿರುತ್ತಿತ್ತು. ಆದರೂ ಕೂಡ ಉಕ್ರೇನ್ ಜೊತೆಯಲ್ಲಿನ ಸಂಘರ್ಷದ ನಂತರದ ದಿನಗಳಲ್ಲಿ, ಒಂದು ಖಾಸಗಿ ಸೈನಿಕ ಗುಂಪಿನಿಂದ ಬೆಂಬಲವನ್ನು ಪಡೆಯುವುದಕ್ಕೆ ಆಗುತ್ತಿದ್ದ ಖರ್ಚು ರಷ್ಯಾ ಸರ್ಕಾರಕ್ಕೆ ಬಹಳ ಹೆಚ್ಚೆಂದು ಅನಿಸತೊಡಗಿತು.

ವ್ಲಾಡಿಮಿರ್ ಪುಟಿನ್

ಒಂದು ಖಾಸಗಿ ಸೈನಿಕ ಸಂಸ್ಥೆಯಾಗಿ, ವಾಗ್ನರ್‌ಗೆ ಇದ್ದ ಆಸಕ್ತಿ ಖಾಸಗಿಯಾಗಿಯೇ ಉಳಿದುಬಿಟ್ಟಿತ್ತು ಮತ್ತು ಇದು ಬಂಡಾಯದ ಪರಿಸ್ಥಿತಿಗೆ ಎಡೆಮಾಡಿಕೊಟ್ಟಿತು. ವಾಗ್ನರ್‌ನ ಕಾರ್ಯಾಚರಣೆಯ ದಿಕ್ಕು ಬದಲಾಗಿದ್ದು ಖಾಸಗಿ ಸೈನ್ಯ ಸಂಸ್ಥೆಗೆ ಉಂಟಾಗಬಹುದಾದ ಅಪಾಯಗಳನ್ನು ತಪ್ಪಿಸುವುದಕ್ಕೋಸ್ಕರ.

ಸಿರಿಯ ದೇಶದಲ್ಲಿ ವಾಗ್ನರ್ ಗುಂಪು ಸಿರಿಯನ್ ಸೈನ್ಯದ ಜೊತೆಯಲ್ಲಿ ನಿಕಟವಾಗಿ ಕಾರ್ಯನಿರ್ವಹಿಸಿತು, ನಿರ್ದಿಷ್ಟವಾಗಿ ಐಎಸ್‌ಐಎಸ್ ವಿರುದ್ಧದ ಕಾರ್ಯಾಚರಣೆಯಲ್ಲಿ. ಸುಡಾನ್‌ನಲ್ಲಿ ವಾಗ್ನರ್ ಅಮೆರಿಕದ ಸೈನ್ಯದ ವಿರುದ್ಧ, ಅಂದರೆ ಸುಡಾನ್‌ನ ಗಣಿಗಾರಿಕೆಯ ಸ್ವಾಮ್ಯವನ್ನು, ಅದರಲ್ಲೂ ನಿರ್ದಿಷ್ಟವಾಗಿ ಚಿನ್ನ, ಯುರಾನಿಯಮ್ ಮತ್ತು ವಜ್ರದ ಗಣಿಗಾರಿಕೆಯನ್ನು ಅಮೆರಿಕ ಸೈನ್ಯ ವಶ ಪಡಿಸಿಕೊಳ್ಳುವುದರ ವಿರುದ್ಧವಾಗಿ ಕಾರ್ಯಾಚರಣೆ ನಡೆಸಿತು. ಸೆಂಟ್ರಲ್ ಆಫ್ರಿಕಾ ರಿಪಬ್ಲಿಕ್‌ನಲ್ಲಿ, ವಾಗ್ನರ್ ಗುಂಪು ಗಣಿಕ್ಷೇಪಗಳ ರಕ್ಷಣೆಗೋಸ್ಕರ ಕಾರ್ಯಾಚರಣೆ ನಡೆಸಿ ಅಲ್ಲಿನ ಸರ್ಕಾರದ ಬೆಂಬಲಕ್ಕೆ ನಿಂತಿತು. ಅನೇಕ ಸಂಘರ್ಷಗಳಲ್ಲಿ, ವಾಗ್ನರ್ ಗುಂಪು ಪ್ರಾಂತೀಯ ಸರ್ಕಾರಗಳ ಜೊತೆಗೂಡಿ ಹೋರಾಟ ಮಾಡಿತು ಮತ್ತು ಆ ಪ್ರದೇಶಗಳನ್ನು ಅದರಲ್ಲೂ ರಷ್ಯಾ ಬೆಂಬಲಿತ ಪ್ರದೇಶಗಳನ್ನು ಆಕ್ರಮಿಸಲು ಪ್ರಯತ್ನಿಸುತ್ತಿದ್ದ ಪಾಶ್ಚಿಮಾತ್ಯ ದೇಶಗಳ ವಿರುದ್ಧ ಹೋರಾಟ ಮಾಡಿತು. ಕೆಲವು ಬಾರಿ, ವಾಗ್ನರ್ ಗುಂಪಿಗೆ ಸ್ಥಳೀಯರ ಬೆಂಬಲವೂ ಸಿಗುತ್ತಿತ್ತು. ಒಂದು ವ್ಯವಸ್ಥಿತ ಖಾಸಗಿ ಗುಂಪಾಗಿ, ವಾಗ್ನರ್ ಗುಂಪು ರಷ್ಯಾ ಸರ್ಕಾರದ ಶಕ್ತಿಗಳಿಗೆ ಬೇರೆ ದೇಶಗಳ ಮೇಲೆ ಸ್ವಾಮ್ಯತೆಯನ್ನು ಸ್ಥಾಪಿಸಲು ಸಹಾಯ ಮಾಡಿತು ಮತ್ತು ರಷ್ಯಾ ಮಿಲಿಟರಿಯ ಹಸ್ತಕ್ಷೇಪದ ಬಗ್ಗೆ ನಿರಾಕರಣೆ ಮಾಡುವುದಕ್ಕೆ ಸಹಾಯವಾಗುವಂತೆ ಮಾಡಿತು.

ಇದನ್ನೂ ಓದಿ: ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಟ್ರಂಪ್

ಪ್ರಭುತ್ವಗಳ ಜೊತೆಜೊತೆಗೆ ಖಾಸಗಿ ಸಂಸ್ಥೆಗಳನ್ನು ಉಪಯೋಗಿಸಿಕೊಂಡು ಕಾರ್ಯಾಚರಣೆ ನಡೆಸುವುದೇನೂ ರಷ್ಯ ಒಂದಕ್ಕೇ ಸೀಮಿತವಾಗಿಲ್ಲ. ಹಣಕ್ಕಾಗಿಯೇ ಕೆಲಸ ಮಾಡುವ ಇಂತಹ ಗುಂಪುಗಳ ಪ್ರಯೋಜನವನ್ನು, ಅನೇಕ ಸರ್ಕಾರಗಳು ತಮ್ಮ ಕೈಲಿ ಆಗದೇ ಇರುವ ಕೆಲಸಗಳನ್ನು ಮಾಡಲು ಅಂದರೆ ಕಾನೂನು ವ್ಯವಸ್ಥೆಯನ್ನು ಬುಡಮೇಲು ಮಾಡುವ ಮತ್ತು ಪ್ರಜಾಪ್ರಭುತ್ವದ ಕಾರಣದಿಂದ ಉಂಟಾಗುವ ಹೊಣೆಗಾರಿಕೆಯಿಂದ ಪಾರುಮಾಡುವಂತಹ ಕೆಲಸಗಳಿಗೆ ಬಳಸಿಕೊಂಡಿವೆ. ರಷ್ಯಾ ಸರ್ಕಾರ ತನ್ನ ಅಪೇಕ್ಷೆಯಂತೆ ವಾಗ್ನರ್ ಗುಂಪನ್ನು ರಾಷ್ಟ್ರೀಕರಣಗೊಳಿಸಿ ರಷ್ಯಾ ಸರ್ಕಾರದ ಕೈಕೆಳಗೆ ಕೆಲಸ ಮಾಡಬಹುದು ಎಂದು ಎಣಿಸಿದಾಕ್ಷಣ, ವಾಗ್ನರ್ ಗುಂಪು, ರಷ್ಯ ಸರ್ಕಾರಕ್ಕೇ ಒಂದು ಬೆದರಿಕೆಯಾಗಿ ನಿಲ್ಲಬಹುದು. ಒಂದು ಸೈನಿಕ ಗುಂಪನ್ನು ನಿರ್ವಹಿಸಿ ಬೆಂಬಲಿಸುವುದು ಅಪಾಯಕಾರಿಯಾದ ನಡೆ. ಶೀತಲ ಸಮರದ ನಂತರ, ಅನೇಕ ದೇಶಗಳು ಈ ರೀತಿಯ ಗುಂಪನ್ನು ದೂರದ ಬೇರೇ ದೇಶಗಳ ಕಾರ್ಯಾಚರಣೆಗೆ ಮಾತ್ರ ಉಪಯೋಗಿಸಿಕೊಳ್ಳುವ ಮೂಲಕ ಅವುಗಳ ಅಪಾಯವನ್ನು ನಿಯಂತ್ರಿಸಿಕೊಳ್ಳಲು ಪ್ರಯತ್ನಿಸಿವೆ.

ಈ ರೀತಿಯ ಬೇರೆಬೇರೆ ಖಾಸಗಿ ಮಿಲಿಟರಿ ಸಂಸ್ಥೆಗಳು ಯಾವುವಿವೆ?

ಕೆಲವು ಪ್ರಮುಖವಾದ ಖಾಸಗಿ ಸೇನಾ ಸಂಸ್ಥೆಗಳು ಮತ್ತು ಅವುಗಳ ಜೊತೆಗೆ ಸಂಬಂಧ ಹೊಂದಿರುವ ದೇಶಗಳು ಇಂತಿವೆ:

DynCorp International: ಯುಎಸ್ ಮೂಲದ ಈ ಸಂಸ್ಥೆ ರಕ್ಷಣಾ ಸೇವೆಗಳನ್ನು ಒದಗಿಸುತ್ತದೆ. ವಿವಾದಾತ್ಮಕ ಅಬು ಘ್ರೈಬ್ ಹಗರಣ ಸೇರಿದಂತೆ ಹಲವು ಕಾರ್ಯಾಚರಣೆಗಳಲ್ಲಿ ಅಮೆರಿಕ ಈ ಸಂಸ್ಥೆಯ ಜೊತೆಗೆ ಒಪ್ಪಂದ ಮಾಡಿಕೊಂಡಿತ್ತು.

G4S: ಇದೊಂದು ಬ್ರಿಟನ್ ಮೂಲದ ಸಂಸ್ಥೆ, ಮತ್ತು ಅದು ಅನೇಕ ಭದ್ರತಾ ಸೇವೆಗಳನ್ನು ನೀಡುತ್ತದೆ. ಅದು ವಿಶ್ವಾದ್ಯಂತ ಕೆಲಸ ಮಾಡುತ್ತದೆ, ಮತ್ತು ಅನೇಕ ದೇಶಗಳು ಅದರ ಸೇವೆಯನ್ನು ಪಡೆದುಕೊಂಡಿವೆ.

Executive outcomes: ಇದೊಂದು ಸೌತ್ ಆಫ್ರಿಕ ಮೂಲದ ಸಂಸ್ಥೆ ಮತ್ತು ಅದು ಆಂಗೋಲನ್ ಸಿವಿಲ್ ಯುದ್ಧದಲ್ಲಿ ಪಾಲ್ಗೊಂಡಿದ್ದರ ಮೂಲಕ ಹೆಚ್ಚು ಪರಿಚಿತವಾಗಿದೆ. ಅದೂ ಕೂಡ ತನ್ನ ಸೇವೆಯನ್ನು ವಿಶ್ವದಾದ್ಯಂತ ಹಲವು ಸರ್ಕಾರಗಳಿಗೆ ಮತ್ತು ಉದ್ದಿಮೆಗಳಿಗೆ ನೀಡಿದೆ.

ಭಾರತದಲ್ಲಿ, ಖಾಸಗಿ ಸೈನಿಕ ಕಾರ್ಯಾಚರಣೆಯ ಸಂಸ್ಥೆಯನ್ನು ಸ್ಥಾಪಿಸಲು ಕಾನೂನು ರೂಪಗೊಂಡಿಲ್ಲ. ಖಾಸಗಿಯವರನ್ನು ಕಾನೂನು ಮತ್ತು ವ್ಯವಸ್ಥೆಯನ್ನು ಕಾಪಾಡಿಕೊಂಡು ಬರಲು ದೇಶದ ಅನೇಕ ಭಾಗಗಳಲ್ಲಿ ಪ್ರಭುತ್ವ ಉಪಯೋಗಿಸಿಕೊಂಡಿರುವ ಉದಾಹರಣೆಗಳು ಚರಿತ್ರೆಯಲ್ಲಿವೆ. ಖಾಸಗಿ ಸೈನಿಕ ಸಂಸ್ಥೆಗಳನ್ನು ಸ್ಥಾಪಿಸಲು ಅನುಕೂಲಕಾರಿ ಪರಿಸ್ಥಿತಿಗಳೇನೋ ಇವೆ. ಮತ್ತು ಭಾರತದಲ್ಲಿ ಈ ಭದ್ರತಾ ವಿಭಾಗದಲ್ಲಿನ ಬೇಡಿಕೆ ಹೆಚ್ಚುತ್ತಲೇ ಇದೆ, ಮತ್ತು ಭಾರತದಲ್ಲಿ ಬೃಹತ್ತಾದ ಸೈನ್ಯವೂ ಇದೆ. ಈ ವ್ಯಾಪ್ತಿಯಲ್ಲಿ ಸೂಕ್ತವಾದ ಕಾರ್ಮಿಕ ಪಡೆಯನ್ನು ಸ್ಥಾಪಿಸಲು ಬೇಡಿಕೆಯೇನೊ ಇದೆ. ಆದರೂ ಕೂಡ ಈ ದಾರಿ ಅಪಾಯಕಾರಿಯಾದದ್ದು, ವಾಗ್ನರ್ ಸಂಸ್ಥೆಯ ವಿಷಯದಲ್ಲಿ ಈಗ ನಡೆದ ಘಟನೆಯ ಅದನ್ನು ಮನಗಾಣಿಸುವಂತಿದೆ.

ಕನ್ನಡಕ್ಕೆ: ಕೆ. ಶ್ರೀನಾಥ್

ಕಿಶೋರ್ ಗೋವಿಂದ

ಕಿಶೋರ್ ಗೋವಿಂದ
ಬೆಂಗಳೂರಿನಲ್ಲಿ ನೆಲೆಸಿರುವ ಕಿಶೋರ್ ಅವರು ಗಣಿತಶಾಸ್ತ್ರಜ್ಞರು. ಜಾಗತಿಕ ರಾಜಕೀಯ ಆಗುಹೋಗುಗಳನ್ನು ನಿಕಟವಾಗಿ ಗಮನಿಸುವ ಅವರು ಪತ್ರಿಕೆಗಳಿಗೆ ಲೇಖನಗಳನ್ನು ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...