Homeಮುಖಪುಟರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆ ವಿರುದ್ಧ ಅರ್ಜಿ : ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್...

ರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆ ವಿರುದ್ಧ ಅರ್ಜಿ : ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ರಾಜಕೀಯ ಪಕ್ಷಗಳು 2,000 ರೂ.ಗಿಂತ ಕಡಿಮೆ ‘ಅನಾಮಧೇಯ’ ನಗದು ದೇಣಿಗೆಗಳನ್ನು ಸ್ವೀಕರಿಸಲು ಅವಕಾಶ ನೀಡುವ ಆದಾಯ ತೆರಿಗೆ ಕಾಯ್ದೆಯ ನಿಬಂಧನೆಯ ಸಿಂಧುತ್ವವನ್ನು ಪ್ರಶ್ನಿಸಿದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ನವೆಂಬರ್ 24) ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಮತ್ತು ಇತರರಿಂದ ಪ್ರತಿಕ್ರಿಯೆ ಕೋರಿದೆ.

ಈ ಪಾರದರ್ಶಕತೆ ಕೊರತೆಯು ಚುನಾವಣಾ ಪ್ರಕ್ರಿಯೆಯ ಪರಿಶುದ್ಧತೆಯನ್ನು ಹಾಳು ಮಾಡುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಏಕೆಂದರೆ ಯಾರು ಯಾವ ರಾಜಕೀಯ ಪಕ್ಷಕ್ಕೆ ಹಣ ಕೊಟ್ಟಿದ್ದಾರೆ, ಆ ದಾನಿಗಳು ಯಾರು, ಅವರ ಉದ್ದೇಶ ಏನು ಎಂಬ ಮಾಹಿತಿಯನ್ನು ಮತದಾರರಿಗೆ ಸಂಪೂರ್ಣವಾಗಿ ಮರೆ ಮಾಚಿದಂತಾಗುತ್ತದೆ. ಇದರಿಂದ ಮತದಾರರು ತಮ್ಮ ಮತವನ್ನು ಹಾಕುವಾಗ ತರ್ಕಬದ್ಧವಾಗಿ, ಬುದ್ಧಿವಂತಿಕೆಯಿಂದ ಮತ್ತು ಸಂಪೂರ್ಣ ಮಾಹಿತಿ ಆಧರಿಸಿ ನಿರ್ಧಾರ ತೆಗೆದುಕೊಳ್ಳುವ ಅವಕಾಶವೇ ಇಲ್ಲವಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ಅರ್ಜಿಯಲ್ಲಿ ವಾದಿಸಲಾಗಿದೆ.

ಯಾವುದೇ ರಾಜಕೀಯ ಪಕ್ಷವನ್ನು ನೋಂದಣಿ ಮಾಡುವಾಗ ಮತ್ತು ಅದಕ್ಕೆ ಚಿಹ್ನೆ ಹಂಚಿಕೆ ಮಾಡುವಾಗ ನಗದು ರೂಪದಲ್ಲಿ ಯಾವುದೇ ದೇಣಿಗೆ ಪಡೆಯದಂತೆ ನಿರ್ದೇಶನ ನೀಡಲು ಚುನಾವಣಾ ಆಯೋಗಕ್ಕೆ ಸೂಚಿಸುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಅರ್ಜಿಯನ್ನು ನಾಲ್ಕು ವಾರಗಳ ನಂತರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಹೇಳಿದೆ.

ಅರ್ಜಿಯನ್ನು ಕೈಗೆತ್ತಿಕೊಂಡ ಪೀಠ, ಆರಂಭದಲ್ಲಿ ನೀವು ಹೈಕೋರ್ಟ್‌ಗೆ ಏಕೆ ಹೋಗಿಲ್ಲ ಎಂದು ಅರ್ಜಿದಾರ ಖೇಮ್ ಸಿಂಗ್ ಭಾಟಿ ಮತ್ತು ವಕೀಲೆ ಸ್ನೇಹಾ ಕಲಿತಾ ಪರ ಹಾಜರಿದ್ದ ಹಿರಿಯ ವಕೀಲ ವಿಜಯ್ ಹನ್ಸಾರಿಯಾ ಅವರನ್ನು ಕೇಳಿದೆ ಎಂದು ವರದಿಯಾಗಿದೆ.

ಇದಕ್ಕೆ ಉತ್ತರಿಸಿದ ವಕೀಲ ಹನ್ಸಾರಿಯಾ, ಈ ಅರ್ಜಿಯು ದೇಶದಾದ್ಯಂತ ಇರುವ ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅವುಗಳಿಗೆ ಬರುವ ನಿಧಿಗೆ ಸಂಬಂಧಿಸಿದೆ ಎಂದು ತಿಳಿಸಿದ್ದಾರೆ.

ನಂತರ, ಅರ್ಜಿಯನ್ನು ಆಲಿಸಲು ಒಪ್ಪಿಕೊಂಡ ನ್ಯಾಯಪೀಠ, ಚುನಾವಣಾ ಆಯೋಗ, ಕೇಂದ್ರ ಸರ್ಕಾರ ಮತ್ತು ಬಿಜೆಪಿ ಕಾಂಗ್ರೆಸ್‌ ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳು ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿದೆ.

1961ರ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 13Aನ ಷರತ್ತು (ಡಿ) ಅನ್ನು ಅಸಾಂವಿಧಾನಿಕ ಎಂದು ರದ್ದುಗೊಳಿಸುವಂತೆ ಮತ್ತು ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌ನ 2024 ರ ತೀರ್ಪನ್ನು ಉಲ್ಲೇಖಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ರಾಜಕೀಯ ಪಕ್ಷಗಳು ತಮಗೆ ಯಾವುದೇ ಮೊತ್ತದ ಹಣವನ್ನು ಪಾವತಿಸುವ ವ್ಯಕ್ತಿಯ ಹೆಸರು ಮತ್ತು ಇತರ ಎಲ್ಲಾ ವಿವರಗಳನ್ನು ಬಹಿರಂಗಪಡಿಸಬೇಕು ಮತ್ತು ರಾಜಕೀಯ ನಿಧಿಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಯಾವುದೇ ಮೊತ್ತವನ್ನು ನಗದು ರೂಪದಲ್ಲಿ ಸ್ವೀಕರಿಸಲು ಸಾಧ್ಯವಿಲ್ಲ ಎಂದು ನಿರ್ದೇಶನ ನೀಡಬೇಕು ಎಂಬುವುದಾಗಿ ಅರ್ಜಿದಾರರು ಕೋರಿದ್ದಾರೆ ಎಂದು ವಕೀಲ ಜಯೇಶ್ ಕೆ ಉನ್ನಿಕೃಷ್ಣನ್ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ ತಿಳಿಸಲಾಗಿದೆ.

1961ರ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 13A ರಾಜಕೀಯ ಪಕ್ಷಗಳ ಆದಾಯಕ್ಕೆ ಸಂಬಂಧಿಸಿದ ವಿಶೇಷ ನಿಬಂಧನೆಗೆ ಸಂಬಂಧಿಸಿದೆ.

ಸೆಕ್ಷನ್ 13A ರಾಜಕೀಯ ಪಕ್ಷಗಳಿಗೆ ಸೆಕ್ಯುರಿಟಿಗಳ ಮೇಲಿನ ಬಡ್ಡಿ, ಮನೆ ಆಸ್ತಿಯಿಂದ ಬರುವ ಆದಾಯ ಅಥವಾ ಇತರ ಮೂಲಗಳಿಂದ ಬರುವ ಆದಾಯ ಮತ್ತು ಸ್ವಯಂಪ್ರೇರಿತ ಕೊಡುಗೆಗಳ ಮೂಲಕ ಪಡೆಯುವ ಯಾವುದೇ ಆದಾಯವನ್ನು ಒಟ್ಟು ಆದಾಯದ ಲೆಕ್ಕಾಚಾರದಿಂದ ವಿನಾಯಿತಿ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...